Homeಎಕಾನಮಿನಗರ ಭಾಗದಲ್ಲಿ ಮಾರ್ಚ್ ತ್ರೈಮಾಸಿಕದಲ್ಲಿ ನಿರುದ್ಯೋಗ ಪ್ರಮಾಣ ತುಸು ಇಳಿಕೆ...

ನಗರ ಭಾಗದಲ್ಲಿ ಮಾರ್ಚ್ ತ್ರೈಮಾಸಿಕದಲ್ಲಿ ನಿರುದ್ಯೋಗ ಪ್ರಮಾಣ ತುಸು ಇಳಿಕೆ…

- Advertisement -
- Advertisement -

ಭಾರತದಲ್ಲಿ ನಗರ ನಿರುದ್ಯೋಗ ದರ ಈ ವರ್ಷದ ಜನವರಿ ಮತ್ತು ಮಾರ್ಚ್ ನಲ್ಲಿ ಶೇ. 9.3ಕ್ಕೆ ಇಳಿದಿದೆ. ಕಳೆದ ನಾಲ್ಕು ತ್ರೈಮಾಸಿಕದಲ್ಲಿ ಇದು ಅತ್ಯಂತ ಕನಿಷ್ಠ ಮಟ್ಟದ್ದಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ರಾಯಿಟರ್ಸ್ ಪರಿಶೀಲಿಸಿದ ಅಪ್ರಕಟಿತ ಸರ್ಕಾರದ ವರದಿಯ ಅಂಕಿ-ಅಂಶಗಳ ಪ್ರಕಾರ, ಸಚಿವಾಲಯದ ತ್ರೈಮಾಸಿಕ ಉದ್ಯೋಗ ವರದಿಯಲ್ಲಿ ದಾಖಲಾಗಿರುವ ಸಂಖ್ಯೆಗಳು ಪ್ರಧಾನಿ ಮೋದಿಗೆ ಸ್ವಲ್ಪ ನಿರಾಳತೆ ತಂದುಕೊಟ್ಟಿವೆ. ಏಕೆಂದರೆ ಆರ್ಥಿಕ ಸಂಕಷ್ಟದ ಕಾರಣಕ್ಕಾಗಿ ಉದ್ಯೋಗ ಸೃಷ್ಟಿಸುತ್ತಿಲ್ಲ ಎಂಬ ಬಹುದೊಡ್ಡ ಆರೋಪ ಮೋದಿಯವರ ಮೇಲಿದೆ.

ನಗರ ನಿರುದ್ಯೋಗ ದರವು ಹಿಂದಿನ ತ್ರೈಮಾಸಿಕದಲ್ಲಿ ಶೇ. 9.9 ರಷ್ಟಿತ್ತು. ಇದಕ್ಕೆ ಹೋಲಿಸಿದರೆ ಜನವರಿ-ಮಾರ್ಚ್ ತ್ರೈಮಾಸಿಕದ ದರ ಕಡಿಮೆಯಾಗಿದ್ದು 9.3ಗೆ ಇಳಿದಿದೆ. ಇನ್ನು 2018ರ ಏಪ್ರೀಲ್-ಜೂನ್ ಸಮೀಕ್ಷೆಯ ಮೊದಲ ತ್ರೈಮಾಸಿಕ ಅವಧಿಯ ಡೇಟಾ ಇನ್ನು ಲಭ್ಯವಿಲ್ಲ.

ಇದನ್ನೂ ಓದಿ: ಭಾರತದಲ್ಲಿ ಶೇ.63 ರಷ್ಟು ಗರ್ಭಿಣಿಯರು ಹೆರಿಗೆಯಾಗುವ ಕೊನೆಯ ಸಮಯದವರೆಗೂ ಕೆಲಸ ಮಾಡುತ್ತಾರೆ: ಜಚ್ಚಾ-ಬಚ್ಚಾ ಸಮೀಕ್ಷೆ

ಇದರಲ್ಲಿ ಗ್ರಾಮೀಣ ನಿರುದ್ಯೋಗವನ್ನು ಅಂದಾಜು ಮಾಡಿಲ್ಲ. ಈ ಕುರಿತ ವರದಿಯನ್ನು ಸೇರಿಸಿಲ್ಲ. ಸದ್ಯದಲ್ಲೇ ಗ್ರಾಮೀಣ ನಿರುದ್ಯೋಗ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಇನ್ನು ಸಮೀಕ್ಷೆಯ ಅವಧಿಗೆ ಮೊದಲ ಏಳು ದಿನಗಳ ಅಲ್ಪಾವಧಿಯಲ್ಲಿ ನಿರುದ್ಯೋಗದ ಸರಾಸರಿ ಚಿತ್ರಣವನ್ನು ನೀಡುವ ಪ್ರಸ್ತುತ ಸಾಪ್ತಾಹಿಕ ಸ್ಥಿತಿ ವಿಧಾನ ಬಳಸಿಕೊಂಡು ಅಂದಾಜು ಮಾಡಲಾಗಿದೆ. ಒಬ್ಬ ವ್ಯಕ್ತಿಯು ವಾರದಲ್ಲಿ 1 ಗಂಟೆಯೂ ಸಹ ಕೆಲಸ ಮಾಡದಿದ್ದರೆ ಆತನನ್ನು ನಿರುದ್ಯೋಗಿ ಎಂದು ಪರಿಗಣಿಸಲಾಗುತ್ತದೆ ಎಂದು ವರದಿ ತಿಳಿಸಿದೆ.

ನಿರುದ್ಯೋಗ ಯುವ ಜನತೆ ಅಂದರೆ 15-29 ವರ್ಷ ವಯಸ್ಸಿನವರು ಭಾರತದ 1.3 ಬಿಲಿಯನ್ ಜನರಲ್ಲಿ ಸರಿಸುಮಾರು ಮೂರನೇ ಒಂದು ಭಾಗದಷ್ಟು ಇದ್ದಾರೆ ಎನ್ನಲಾಗುತ್ತಿದೆ. ಹಿಂದಿನ ತ್ರೈಮಾಸಿಕದಲ್ಲಿ ಶೇ. 23.7ರಷ್ಟು ನಿರುದ್ಯೋಗ ಪ್ರಮಾಣವಿದ್ದರೆ, ಮಾರ್ಚ್ 2019 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಶೇ. 22.5 ರಷ್ಟಕ್ಕೆ ಇಳಿದಿದೆ.

ಆದರೂ ಉದ್ಯೋಗಕ್ಕೆ ಸಂಬಂಧಿಸಿದ ಸಮರ್ಪಕ ಡೇಟಾವನ್ನು ನಿಯಮಿತವಾಗಿ ಬಿಡುಗಡೆ ಮಾಡದಿರುವ ಕಾರಣಕ್ಕೆ ಸರ್ಕಾರ ಇತ್ತೀಚಿನ ವರ್ಷಗಳಲ್ಲಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಫೆಬ್ರವರಿಯಲ್ಲಿ ಬಿಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆ ಜುಲೈ 2017-ಜೂನ್ 2018 ರ ಮೊದಲ ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ 45 ವರ್ಷಗಳಲ್ಲಿ ನಿರುದ್ಯೋಗ ದರ ಅತಿಹೆಚ್ಚು ಎಂದು ವರದಿ ಹೇಳಿತ್ತು. ಇದು ವ್ಯಾಪಕ ಚರ್ಚೆಗೀಡಾಗಿತ್ತು. ಇದಾದ ನಂತರ ಮೋದಿ ಸರ್ಕಾರ ಮೇ ತಿಂಗಳಲ್ಲಿ ಅಧಿಕೃತ ವರದಿ ಬಿಡುಗಡೆ ಮಾಡಿತು.

ಈಗ ರಾಯಿಟರ್ಸ್ ಪರಿಶೀಲಿಸಿದ ಇತ್ತೀಚಿನ ವರದಿಯಲ್ಲಿ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಆಗಿರುವ ಉದ್ಯೋಗಗಳ ಮೌಲ್ಯಮಾಪನವೂ ಇದೆ. ಸಾಪ್ತಾಹಿಕ ಸ್ಥಿತಿ ಆಧರಿಸಿ ನಿರುದ್ಯೋಗ ದರ ಕುಸಿತ ಸಾಮಾನ್ಯ ವೇತನ ನೌಕರರಲ್ಲಿ ಉದ್ಯೋಗ ಮತ್ತು ಸ್ವಯಂ ಉದ್ಯೋಗಿಗಳ ಒಂದು ಭಾಗವು ಇದೇ ಅವಧಿಯಲ್ಲಿ ಹೆಚ್ಚಿದೆ ಎಂಬುದನ್ನು ವರದಿ ಬಹಿರಂಗಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...