Homeಎಕಾನಮಿನಗರ ಭಾಗದಲ್ಲಿ ಮಾರ್ಚ್ ತ್ರೈಮಾಸಿಕದಲ್ಲಿ ನಿರುದ್ಯೋಗ ಪ್ರಮಾಣ ತುಸು ಇಳಿಕೆ...

ನಗರ ಭಾಗದಲ್ಲಿ ಮಾರ್ಚ್ ತ್ರೈಮಾಸಿಕದಲ್ಲಿ ನಿರುದ್ಯೋಗ ಪ್ರಮಾಣ ತುಸು ಇಳಿಕೆ…

- Advertisement -
- Advertisement -

ಭಾರತದಲ್ಲಿ ನಗರ ನಿರುದ್ಯೋಗ ದರ ಈ ವರ್ಷದ ಜನವರಿ ಮತ್ತು ಮಾರ್ಚ್ ನಲ್ಲಿ ಶೇ. 9.3ಕ್ಕೆ ಇಳಿದಿದೆ. ಕಳೆದ ನಾಲ್ಕು ತ್ರೈಮಾಸಿಕದಲ್ಲಿ ಇದು ಅತ್ಯಂತ ಕನಿಷ್ಠ ಮಟ್ಟದ್ದಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ರಾಯಿಟರ್ಸ್ ಪರಿಶೀಲಿಸಿದ ಅಪ್ರಕಟಿತ ಸರ್ಕಾರದ ವರದಿಯ ಅಂಕಿ-ಅಂಶಗಳ ಪ್ರಕಾರ, ಸಚಿವಾಲಯದ ತ್ರೈಮಾಸಿಕ ಉದ್ಯೋಗ ವರದಿಯಲ್ಲಿ ದಾಖಲಾಗಿರುವ ಸಂಖ್ಯೆಗಳು ಪ್ರಧಾನಿ ಮೋದಿಗೆ ಸ್ವಲ್ಪ ನಿರಾಳತೆ ತಂದುಕೊಟ್ಟಿವೆ. ಏಕೆಂದರೆ ಆರ್ಥಿಕ ಸಂಕಷ್ಟದ ಕಾರಣಕ್ಕಾಗಿ ಉದ್ಯೋಗ ಸೃಷ್ಟಿಸುತ್ತಿಲ್ಲ ಎಂಬ ಬಹುದೊಡ್ಡ ಆರೋಪ ಮೋದಿಯವರ ಮೇಲಿದೆ.

ನಗರ ನಿರುದ್ಯೋಗ ದರವು ಹಿಂದಿನ ತ್ರೈಮಾಸಿಕದಲ್ಲಿ ಶೇ. 9.9 ರಷ್ಟಿತ್ತು. ಇದಕ್ಕೆ ಹೋಲಿಸಿದರೆ ಜನವರಿ-ಮಾರ್ಚ್ ತ್ರೈಮಾಸಿಕದ ದರ ಕಡಿಮೆಯಾಗಿದ್ದು 9.3ಗೆ ಇಳಿದಿದೆ. ಇನ್ನು 2018ರ ಏಪ್ರೀಲ್-ಜೂನ್ ಸಮೀಕ್ಷೆಯ ಮೊದಲ ತ್ರೈಮಾಸಿಕ ಅವಧಿಯ ಡೇಟಾ ಇನ್ನು ಲಭ್ಯವಿಲ್ಲ.

ಇದನ್ನೂ ಓದಿ: ಭಾರತದಲ್ಲಿ ಶೇ.63 ರಷ್ಟು ಗರ್ಭಿಣಿಯರು ಹೆರಿಗೆಯಾಗುವ ಕೊನೆಯ ಸಮಯದವರೆಗೂ ಕೆಲಸ ಮಾಡುತ್ತಾರೆ: ಜಚ್ಚಾ-ಬಚ್ಚಾ ಸಮೀಕ್ಷೆ

ಇದರಲ್ಲಿ ಗ್ರಾಮೀಣ ನಿರುದ್ಯೋಗವನ್ನು ಅಂದಾಜು ಮಾಡಿಲ್ಲ. ಈ ಕುರಿತ ವರದಿಯನ್ನು ಸೇರಿಸಿಲ್ಲ. ಸದ್ಯದಲ್ಲೇ ಗ್ರಾಮೀಣ ನಿರುದ್ಯೋಗ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಇನ್ನು ಸಮೀಕ್ಷೆಯ ಅವಧಿಗೆ ಮೊದಲ ಏಳು ದಿನಗಳ ಅಲ್ಪಾವಧಿಯಲ್ಲಿ ನಿರುದ್ಯೋಗದ ಸರಾಸರಿ ಚಿತ್ರಣವನ್ನು ನೀಡುವ ಪ್ರಸ್ತುತ ಸಾಪ್ತಾಹಿಕ ಸ್ಥಿತಿ ವಿಧಾನ ಬಳಸಿಕೊಂಡು ಅಂದಾಜು ಮಾಡಲಾಗಿದೆ. ಒಬ್ಬ ವ್ಯಕ್ತಿಯು ವಾರದಲ್ಲಿ 1 ಗಂಟೆಯೂ ಸಹ ಕೆಲಸ ಮಾಡದಿದ್ದರೆ ಆತನನ್ನು ನಿರುದ್ಯೋಗಿ ಎಂದು ಪರಿಗಣಿಸಲಾಗುತ್ತದೆ ಎಂದು ವರದಿ ತಿಳಿಸಿದೆ.

ನಿರುದ್ಯೋಗ ಯುವ ಜನತೆ ಅಂದರೆ 15-29 ವರ್ಷ ವಯಸ್ಸಿನವರು ಭಾರತದ 1.3 ಬಿಲಿಯನ್ ಜನರಲ್ಲಿ ಸರಿಸುಮಾರು ಮೂರನೇ ಒಂದು ಭಾಗದಷ್ಟು ಇದ್ದಾರೆ ಎನ್ನಲಾಗುತ್ತಿದೆ. ಹಿಂದಿನ ತ್ರೈಮಾಸಿಕದಲ್ಲಿ ಶೇ. 23.7ರಷ್ಟು ನಿರುದ್ಯೋಗ ಪ್ರಮಾಣವಿದ್ದರೆ, ಮಾರ್ಚ್ 2019 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಶೇ. 22.5 ರಷ್ಟಕ್ಕೆ ಇಳಿದಿದೆ.

ಆದರೂ ಉದ್ಯೋಗಕ್ಕೆ ಸಂಬಂಧಿಸಿದ ಸಮರ್ಪಕ ಡೇಟಾವನ್ನು ನಿಯಮಿತವಾಗಿ ಬಿಡುಗಡೆ ಮಾಡದಿರುವ ಕಾರಣಕ್ಕೆ ಸರ್ಕಾರ ಇತ್ತೀಚಿನ ವರ್ಷಗಳಲ್ಲಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಫೆಬ್ರವರಿಯಲ್ಲಿ ಬಿಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆ ಜುಲೈ 2017-ಜೂನ್ 2018 ರ ಮೊದಲ ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ 45 ವರ್ಷಗಳಲ್ಲಿ ನಿರುದ್ಯೋಗ ದರ ಅತಿಹೆಚ್ಚು ಎಂದು ವರದಿ ಹೇಳಿತ್ತು. ಇದು ವ್ಯಾಪಕ ಚರ್ಚೆಗೀಡಾಗಿತ್ತು. ಇದಾದ ನಂತರ ಮೋದಿ ಸರ್ಕಾರ ಮೇ ತಿಂಗಳಲ್ಲಿ ಅಧಿಕೃತ ವರದಿ ಬಿಡುಗಡೆ ಮಾಡಿತು.

ಈಗ ರಾಯಿಟರ್ಸ್ ಪರಿಶೀಲಿಸಿದ ಇತ್ತೀಚಿನ ವರದಿಯಲ್ಲಿ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಆಗಿರುವ ಉದ್ಯೋಗಗಳ ಮೌಲ್ಯಮಾಪನವೂ ಇದೆ. ಸಾಪ್ತಾಹಿಕ ಸ್ಥಿತಿ ಆಧರಿಸಿ ನಿರುದ್ಯೋಗ ದರ ಕುಸಿತ ಸಾಮಾನ್ಯ ವೇತನ ನೌಕರರಲ್ಲಿ ಉದ್ಯೋಗ ಮತ್ತು ಸ್ವಯಂ ಉದ್ಯೋಗಿಗಳ ಒಂದು ಭಾಗವು ಇದೇ ಅವಧಿಯಲ್ಲಿ ಹೆಚ್ಚಿದೆ ಎಂಬುದನ್ನು ವರದಿ ಬಹಿರಂಗಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...