Homeಎಕಾನಮಿನಗರ ಭಾಗದಲ್ಲಿ ಮಾರ್ಚ್ ತ್ರೈಮಾಸಿಕದಲ್ಲಿ ನಿರುದ್ಯೋಗ ಪ್ರಮಾಣ ತುಸು ಇಳಿಕೆ...

ನಗರ ಭಾಗದಲ್ಲಿ ಮಾರ್ಚ್ ತ್ರೈಮಾಸಿಕದಲ್ಲಿ ನಿರುದ್ಯೋಗ ಪ್ರಮಾಣ ತುಸು ಇಳಿಕೆ…

- Advertisement -
- Advertisement -

ಭಾರತದಲ್ಲಿ ನಗರ ನಿರುದ್ಯೋಗ ದರ ಈ ವರ್ಷದ ಜನವರಿ ಮತ್ತು ಮಾರ್ಚ್ ನಲ್ಲಿ ಶೇ. 9.3ಕ್ಕೆ ಇಳಿದಿದೆ. ಕಳೆದ ನಾಲ್ಕು ತ್ರೈಮಾಸಿಕದಲ್ಲಿ ಇದು ಅತ್ಯಂತ ಕನಿಷ್ಠ ಮಟ್ಟದ್ದಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ರಾಯಿಟರ್ಸ್ ಪರಿಶೀಲಿಸಿದ ಅಪ್ರಕಟಿತ ಸರ್ಕಾರದ ವರದಿಯ ಅಂಕಿ-ಅಂಶಗಳ ಪ್ರಕಾರ, ಸಚಿವಾಲಯದ ತ್ರೈಮಾಸಿಕ ಉದ್ಯೋಗ ವರದಿಯಲ್ಲಿ ದಾಖಲಾಗಿರುವ ಸಂಖ್ಯೆಗಳು ಪ್ರಧಾನಿ ಮೋದಿಗೆ ಸ್ವಲ್ಪ ನಿರಾಳತೆ ತಂದುಕೊಟ್ಟಿವೆ. ಏಕೆಂದರೆ ಆರ್ಥಿಕ ಸಂಕಷ್ಟದ ಕಾರಣಕ್ಕಾಗಿ ಉದ್ಯೋಗ ಸೃಷ್ಟಿಸುತ್ತಿಲ್ಲ ಎಂಬ ಬಹುದೊಡ್ಡ ಆರೋಪ ಮೋದಿಯವರ ಮೇಲಿದೆ.

ನಗರ ನಿರುದ್ಯೋಗ ದರವು ಹಿಂದಿನ ತ್ರೈಮಾಸಿಕದಲ್ಲಿ ಶೇ. 9.9 ರಷ್ಟಿತ್ತು. ಇದಕ್ಕೆ ಹೋಲಿಸಿದರೆ ಜನವರಿ-ಮಾರ್ಚ್ ತ್ರೈಮಾಸಿಕದ ದರ ಕಡಿಮೆಯಾಗಿದ್ದು 9.3ಗೆ ಇಳಿದಿದೆ. ಇನ್ನು 2018ರ ಏಪ್ರೀಲ್-ಜೂನ್ ಸಮೀಕ್ಷೆಯ ಮೊದಲ ತ್ರೈಮಾಸಿಕ ಅವಧಿಯ ಡೇಟಾ ಇನ್ನು ಲಭ್ಯವಿಲ್ಲ.

ಇದನ್ನೂ ಓದಿ: ಭಾರತದಲ್ಲಿ ಶೇ.63 ರಷ್ಟು ಗರ್ಭಿಣಿಯರು ಹೆರಿಗೆಯಾಗುವ ಕೊನೆಯ ಸಮಯದವರೆಗೂ ಕೆಲಸ ಮಾಡುತ್ತಾರೆ: ಜಚ್ಚಾ-ಬಚ್ಚಾ ಸಮೀಕ್ಷೆ

ಇದರಲ್ಲಿ ಗ್ರಾಮೀಣ ನಿರುದ್ಯೋಗವನ್ನು ಅಂದಾಜು ಮಾಡಿಲ್ಲ. ಈ ಕುರಿತ ವರದಿಯನ್ನು ಸೇರಿಸಿಲ್ಲ. ಸದ್ಯದಲ್ಲೇ ಗ್ರಾಮೀಣ ನಿರುದ್ಯೋಗ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಇನ್ನು ಸಮೀಕ್ಷೆಯ ಅವಧಿಗೆ ಮೊದಲ ಏಳು ದಿನಗಳ ಅಲ್ಪಾವಧಿಯಲ್ಲಿ ನಿರುದ್ಯೋಗದ ಸರಾಸರಿ ಚಿತ್ರಣವನ್ನು ನೀಡುವ ಪ್ರಸ್ತುತ ಸಾಪ್ತಾಹಿಕ ಸ್ಥಿತಿ ವಿಧಾನ ಬಳಸಿಕೊಂಡು ಅಂದಾಜು ಮಾಡಲಾಗಿದೆ. ಒಬ್ಬ ವ್ಯಕ್ತಿಯು ವಾರದಲ್ಲಿ 1 ಗಂಟೆಯೂ ಸಹ ಕೆಲಸ ಮಾಡದಿದ್ದರೆ ಆತನನ್ನು ನಿರುದ್ಯೋಗಿ ಎಂದು ಪರಿಗಣಿಸಲಾಗುತ್ತದೆ ಎಂದು ವರದಿ ತಿಳಿಸಿದೆ.

ನಿರುದ್ಯೋಗ ಯುವ ಜನತೆ ಅಂದರೆ 15-29 ವರ್ಷ ವಯಸ್ಸಿನವರು ಭಾರತದ 1.3 ಬಿಲಿಯನ್ ಜನರಲ್ಲಿ ಸರಿಸುಮಾರು ಮೂರನೇ ಒಂದು ಭಾಗದಷ್ಟು ಇದ್ದಾರೆ ಎನ್ನಲಾಗುತ್ತಿದೆ. ಹಿಂದಿನ ತ್ರೈಮಾಸಿಕದಲ್ಲಿ ಶೇ. 23.7ರಷ್ಟು ನಿರುದ್ಯೋಗ ಪ್ರಮಾಣವಿದ್ದರೆ, ಮಾರ್ಚ್ 2019 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಶೇ. 22.5 ರಷ್ಟಕ್ಕೆ ಇಳಿದಿದೆ.

ಆದರೂ ಉದ್ಯೋಗಕ್ಕೆ ಸಂಬಂಧಿಸಿದ ಸಮರ್ಪಕ ಡೇಟಾವನ್ನು ನಿಯಮಿತವಾಗಿ ಬಿಡುಗಡೆ ಮಾಡದಿರುವ ಕಾರಣಕ್ಕೆ ಸರ್ಕಾರ ಇತ್ತೀಚಿನ ವರ್ಷಗಳಲ್ಲಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಫೆಬ್ರವರಿಯಲ್ಲಿ ಬಿಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆ ಜುಲೈ 2017-ಜೂನ್ 2018 ರ ಮೊದಲ ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ 45 ವರ್ಷಗಳಲ್ಲಿ ನಿರುದ್ಯೋಗ ದರ ಅತಿಹೆಚ್ಚು ಎಂದು ವರದಿ ಹೇಳಿತ್ತು. ಇದು ವ್ಯಾಪಕ ಚರ್ಚೆಗೀಡಾಗಿತ್ತು. ಇದಾದ ನಂತರ ಮೋದಿ ಸರ್ಕಾರ ಮೇ ತಿಂಗಳಲ್ಲಿ ಅಧಿಕೃತ ವರದಿ ಬಿಡುಗಡೆ ಮಾಡಿತು.

ಈಗ ರಾಯಿಟರ್ಸ್ ಪರಿಶೀಲಿಸಿದ ಇತ್ತೀಚಿನ ವರದಿಯಲ್ಲಿ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಆಗಿರುವ ಉದ್ಯೋಗಗಳ ಮೌಲ್ಯಮಾಪನವೂ ಇದೆ. ಸಾಪ್ತಾಹಿಕ ಸ್ಥಿತಿ ಆಧರಿಸಿ ನಿರುದ್ಯೋಗ ದರ ಕುಸಿತ ಸಾಮಾನ್ಯ ವೇತನ ನೌಕರರಲ್ಲಿ ಉದ್ಯೋಗ ಮತ್ತು ಸ್ವಯಂ ಉದ್ಯೋಗಿಗಳ ಒಂದು ಭಾಗವು ಇದೇ ಅವಧಿಯಲ್ಲಿ ಹೆಚ್ಚಿದೆ ಎಂಬುದನ್ನು ವರದಿ ಬಹಿರಂಗಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...