Homeಎಕಾನಮಿನಗರ ಭಾಗದಲ್ಲಿ ಮಾರ್ಚ್ ತ್ರೈಮಾಸಿಕದಲ್ಲಿ ನಿರುದ್ಯೋಗ ಪ್ರಮಾಣ ತುಸು ಇಳಿಕೆ...

ನಗರ ಭಾಗದಲ್ಲಿ ಮಾರ್ಚ್ ತ್ರೈಮಾಸಿಕದಲ್ಲಿ ನಿರುದ್ಯೋಗ ಪ್ರಮಾಣ ತುಸು ಇಳಿಕೆ…

- Advertisement -
- Advertisement -

ಭಾರತದಲ್ಲಿ ನಗರ ನಿರುದ್ಯೋಗ ದರ ಈ ವರ್ಷದ ಜನವರಿ ಮತ್ತು ಮಾರ್ಚ್ ನಲ್ಲಿ ಶೇ. 9.3ಕ್ಕೆ ಇಳಿದಿದೆ. ಕಳೆದ ನಾಲ್ಕು ತ್ರೈಮಾಸಿಕದಲ್ಲಿ ಇದು ಅತ್ಯಂತ ಕನಿಷ್ಠ ಮಟ್ಟದ್ದಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ರಾಯಿಟರ್ಸ್ ಪರಿಶೀಲಿಸಿದ ಅಪ್ರಕಟಿತ ಸರ್ಕಾರದ ವರದಿಯ ಅಂಕಿ-ಅಂಶಗಳ ಪ್ರಕಾರ, ಸಚಿವಾಲಯದ ತ್ರೈಮಾಸಿಕ ಉದ್ಯೋಗ ವರದಿಯಲ್ಲಿ ದಾಖಲಾಗಿರುವ ಸಂಖ್ಯೆಗಳು ಪ್ರಧಾನಿ ಮೋದಿಗೆ ಸ್ವಲ್ಪ ನಿರಾಳತೆ ತಂದುಕೊಟ್ಟಿವೆ. ಏಕೆಂದರೆ ಆರ್ಥಿಕ ಸಂಕಷ್ಟದ ಕಾರಣಕ್ಕಾಗಿ ಉದ್ಯೋಗ ಸೃಷ್ಟಿಸುತ್ತಿಲ್ಲ ಎಂಬ ಬಹುದೊಡ್ಡ ಆರೋಪ ಮೋದಿಯವರ ಮೇಲಿದೆ.

ನಗರ ನಿರುದ್ಯೋಗ ದರವು ಹಿಂದಿನ ತ್ರೈಮಾಸಿಕದಲ್ಲಿ ಶೇ. 9.9 ರಷ್ಟಿತ್ತು. ಇದಕ್ಕೆ ಹೋಲಿಸಿದರೆ ಜನವರಿ-ಮಾರ್ಚ್ ತ್ರೈಮಾಸಿಕದ ದರ ಕಡಿಮೆಯಾಗಿದ್ದು 9.3ಗೆ ಇಳಿದಿದೆ. ಇನ್ನು 2018ರ ಏಪ್ರೀಲ್-ಜೂನ್ ಸಮೀಕ್ಷೆಯ ಮೊದಲ ತ್ರೈಮಾಸಿಕ ಅವಧಿಯ ಡೇಟಾ ಇನ್ನು ಲಭ್ಯವಿಲ್ಲ.

ಇದನ್ನೂ ಓದಿ: ಭಾರತದಲ್ಲಿ ಶೇ.63 ರಷ್ಟು ಗರ್ಭಿಣಿಯರು ಹೆರಿಗೆಯಾಗುವ ಕೊನೆಯ ಸಮಯದವರೆಗೂ ಕೆಲಸ ಮಾಡುತ್ತಾರೆ: ಜಚ್ಚಾ-ಬಚ್ಚಾ ಸಮೀಕ್ಷೆ

ಇದರಲ್ಲಿ ಗ್ರಾಮೀಣ ನಿರುದ್ಯೋಗವನ್ನು ಅಂದಾಜು ಮಾಡಿಲ್ಲ. ಈ ಕುರಿತ ವರದಿಯನ್ನು ಸೇರಿಸಿಲ್ಲ. ಸದ್ಯದಲ್ಲೇ ಗ್ರಾಮೀಣ ನಿರುದ್ಯೋಗ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಇನ್ನು ಸಮೀಕ್ಷೆಯ ಅವಧಿಗೆ ಮೊದಲ ಏಳು ದಿನಗಳ ಅಲ್ಪಾವಧಿಯಲ್ಲಿ ನಿರುದ್ಯೋಗದ ಸರಾಸರಿ ಚಿತ್ರಣವನ್ನು ನೀಡುವ ಪ್ರಸ್ತುತ ಸಾಪ್ತಾಹಿಕ ಸ್ಥಿತಿ ವಿಧಾನ ಬಳಸಿಕೊಂಡು ಅಂದಾಜು ಮಾಡಲಾಗಿದೆ. ಒಬ್ಬ ವ್ಯಕ್ತಿಯು ವಾರದಲ್ಲಿ 1 ಗಂಟೆಯೂ ಸಹ ಕೆಲಸ ಮಾಡದಿದ್ದರೆ ಆತನನ್ನು ನಿರುದ್ಯೋಗಿ ಎಂದು ಪರಿಗಣಿಸಲಾಗುತ್ತದೆ ಎಂದು ವರದಿ ತಿಳಿಸಿದೆ.

ನಿರುದ್ಯೋಗ ಯುವ ಜನತೆ ಅಂದರೆ 15-29 ವರ್ಷ ವಯಸ್ಸಿನವರು ಭಾರತದ 1.3 ಬಿಲಿಯನ್ ಜನರಲ್ಲಿ ಸರಿಸುಮಾರು ಮೂರನೇ ಒಂದು ಭಾಗದಷ್ಟು ಇದ್ದಾರೆ ಎನ್ನಲಾಗುತ್ತಿದೆ. ಹಿಂದಿನ ತ್ರೈಮಾಸಿಕದಲ್ಲಿ ಶೇ. 23.7ರಷ್ಟು ನಿರುದ್ಯೋಗ ಪ್ರಮಾಣವಿದ್ದರೆ, ಮಾರ್ಚ್ 2019 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಶೇ. 22.5 ರಷ್ಟಕ್ಕೆ ಇಳಿದಿದೆ.

ಆದರೂ ಉದ್ಯೋಗಕ್ಕೆ ಸಂಬಂಧಿಸಿದ ಸಮರ್ಪಕ ಡೇಟಾವನ್ನು ನಿಯಮಿತವಾಗಿ ಬಿಡುಗಡೆ ಮಾಡದಿರುವ ಕಾರಣಕ್ಕೆ ಸರ್ಕಾರ ಇತ್ತೀಚಿನ ವರ್ಷಗಳಲ್ಲಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಫೆಬ್ರವರಿಯಲ್ಲಿ ಬಿಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆ ಜುಲೈ 2017-ಜೂನ್ 2018 ರ ಮೊದಲ ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ 45 ವರ್ಷಗಳಲ್ಲಿ ನಿರುದ್ಯೋಗ ದರ ಅತಿಹೆಚ್ಚು ಎಂದು ವರದಿ ಹೇಳಿತ್ತು. ಇದು ವ್ಯಾಪಕ ಚರ್ಚೆಗೀಡಾಗಿತ್ತು. ಇದಾದ ನಂತರ ಮೋದಿ ಸರ್ಕಾರ ಮೇ ತಿಂಗಳಲ್ಲಿ ಅಧಿಕೃತ ವರದಿ ಬಿಡುಗಡೆ ಮಾಡಿತು.

ಈಗ ರಾಯಿಟರ್ಸ್ ಪರಿಶೀಲಿಸಿದ ಇತ್ತೀಚಿನ ವರದಿಯಲ್ಲಿ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಆಗಿರುವ ಉದ್ಯೋಗಗಳ ಮೌಲ್ಯಮಾಪನವೂ ಇದೆ. ಸಾಪ್ತಾಹಿಕ ಸ್ಥಿತಿ ಆಧರಿಸಿ ನಿರುದ್ಯೋಗ ದರ ಕುಸಿತ ಸಾಮಾನ್ಯ ವೇತನ ನೌಕರರಲ್ಲಿ ಉದ್ಯೋಗ ಮತ್ತು ಸ್ವಯಂ ಉದ್ಯೋಗಿಗಳ ಒಂದು ಭಾಗವು ಇದೇ ಅವಧಿಯಲ್ಲಿ ಹೆಚ್ಚಿದೆ ಎಂಬುದನ್ನು ವರದಿ ಬಹಿರಂಗಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...