Homeಮುಖಪುಟಭಾರತದ ನಿರುದ್ಯೋಗ ದರವು ಅಕ್ಟೋಬರ್‌ನಲ್ಲಿ ಕಳೆದ ಎರಡು ವರ್ಷಗಳಲ್ಲೇ ಅತ್ಯಧಿಕ: ವರದಿ

ಭಾರತದ ನಿರುದ್ಯೋಗ ದರವು ಅಕ್ಟೋಬರ್‌ನಲ್ಲಿ ಕಳೆದ ಎರಡು ವರ್ಷಗಳಲ್ಲೇ ಅತ್ಯಧಿಕ: ವರದಿ

- Advertisement -
- Advertisement -

ಭಾರತದ ನಿರುದ್ಯೋಗ ದರವು ಅಕ್ಟೋಬರ್‌ನಲ್ಲಿ ಎರಡು ವರ್ಷಗಳಲ್ಲೇ ಗರಿಷ್ಠ 10.09%ಕ್ಕೆ ಏರಿಕೆಯಾಗಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (CMIE) ಡೇಟಾ ಉಲ್ಲೇಖಿಸಿ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಅಕ್ಟೋಬರ್‌ನಲ್ಲಿ ನಿರುದ್ಯೋಗದ ದರವು 7.09% ರಷ್ಟಿತ್ತು. ಹೊಸ ಅಂಕಿಅಂಶವು ಸೆಪ್ಟೆಂಬರ್‌ಗೆ ಹೋಲಿಕೆ ಮಾಡಿದರೆ ನಿರುದ್ಯೋಗದಲ್ಲಿ ಸುಮಾರು ಮೂರು ಶೇಕಡಾವಾರು ಹೆಚ್ಚಳವನ್ನು ಸೂಚಿಸುತ್ತದೆ. ಬ್ಲೂಮ್‌ಬರ್ಗ್ ವರದಿಯ ಪ್ರಕಾರ, ಗ್ರಾಮೀಣ ಪ್ರದೇಶದಲ್ಲಿನ ನಿರುದ್ಯೋಗವು 6.2% ರಿಂದ 10.82%ಕ್ಕೆ ಏರಿಕೆಯಾಗಿದೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ, 2022-2023ರ ನಿರುದ್ಯೋಗ ದರವು 3.2% ರಷ್ಟಿದೆ. ಆದರೆ ಆರ್ಥಿಕ ತಜ್ಞರು ಉತ್ತಮ ಮೌಲ್ಯಮಾಪನಕ್ಕಾಗಿ CMIE ಡೇಟಾವನ್ನು ಅವಲಂಬಿಸಿದ್ದಾರೆ. ಏಕೆಂದರೆ ಅದರ ಅಂಕಿಅಂಶಗಳು ಮಾಸಿಕ ಸಮೀಕ್ಷೆಗಳನ್ನು ಆಧರಿಸಿರುತ್ತವೆ. ಇದು ಸರ್ಕಾರಿ ದತ್ತಾಂಶಕ್ಕೆ ವಿರುದ್ಧವಾಗಿದೆ ಎಂದು ಬ್ಲೂಮ್‌ಬರ್ಗ್ ವರದಿ ಹೇಳಿದೆ.

ಈ ವರ್ಷ ಭಾರತದ ಆರ್ಥಿಕತೆಯು 6% ದಿಂದ 6.5%ರಷ್ಟು ಏರಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಭಾರತದಲ್ಲಿ ಜನಸಂಖ್ಯೆಯು ಹೆಚ್ಚುತ್ತಿದೆ ಮತ್ತು ಏಪ್ರಿಲ್‌ನಲ್ಲಿ ಭಾರತವು ಚೀನಾವನ್ನು ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶದ ಸ್ಥಾನದಿಂದ ಹಿಂದಿಕ್ಕಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಈ ಬೆಳವಣಿಗೆಯ ಹೊರತಾಗಿಯೂ, ಕಳೆದ ಐದು ವರ್ಷಗಳಿಂದ ಭಾರತದ ಉದ್ಯೋಗಿಗಳ ಸಂಖ್ಯೆಯು  ನಿಶ್ಚಲವಾಗಿದೆ ಎಂದು CMIE ಮುಖ್ಯ ಕಾರ್ಯನಿರ್ವಾಹಕ ಮಹೇಶ್ ವ್ಯಾಸ್ ತಿಳಿಸಿದ್ದಾರೆ.

ಅಕ್ಟೋಬರ್‌ನಲ್ಲಿ ಸುಮಾರು 10 ಮಿಲಿಯನ್ ಭಾರತೀಯರು ಕೆಲಸ ಹುಡುಕುವ ಭರವಸೆಯಲ್ಲಿ ಉದ್ಯೋಗದ ಮಾರುಕಟ್ಟೆಗೆ  ಪ್ರವೇಶಿಸಿದ್ದಾರೆ ಎಂದು ಬ್ಲೂಮ್‌ಬರ್ಗ್ CMIE ಡೇಟಾವನ್ನು ಉಲ್ಲೇಖಿಸಿದೆ.

ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟಿ ನಡೆಸಿದ ಸಮೀಕ್ಷೆಯ ಪ್ರಕಾರ, ಈ ವರ್ಷದ ಆರಂಭದಲ್ಲಿ 15 ರಿಂದ 34 ವರ್ಷ ವಯಸ್ಸಿನ 36% ಭಾರತೀಯರು ನಿರುದ್ಯೋಗ ದೇಶ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದು ಭಾವಿಸಿದ್ದಾರೆ. 2016ರಲ್ಲಿ ನಡೆಸಿದ ಸಮೀಕ್ಷೆಗೆ ಹೋಲಿಸಿದರೆ, ನಿರುದ್ಯೋಗವನ್ನು ಅತಿದೊಡ್ಡ ಸಮಸ್ಯೆ ಎಂದು ಹೇಳುವ ಭಾರತೀಯರ ಪ್ರಮಾಣವು 18 ಶೇಕಡಾ ಹೆಚ್ಚಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. 40% ದಷ್ಟು ವಿದ್ಯಾವಂತರು ಅಂದರೆ ಪದವೀಧರರು ಮತ್ತು ಅದಕ್ಕಿಂತ ಮೇಲ್ಪಟ್ಟವರು  ನಿರುದ್ಯೋಗವನ್ನು ದೊಡ್ಡ ಸವಾಲು ಎಂದು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನು ಓದಿ: ಪ್ಯಾಲೆಸ್ತೀನ್ ನಾಗರಿಕರ ನರಮೇಧ: ಇಸ್ರೇಲ್‌ ಜೊತೆಗೆ ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಿದ ಬೊಲಿವಿಯಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...