Homeಮುಖಪುಟಏಪ್ರಿಲ್‌ನಲ್ಲಿ ನಿರುದ್ಯೋಗ ದರ 27.1% ರಷ್ಟು ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯೆಂದ CMIE

ಏಪ್ರಿಲ್‌ನಲ್ಲಿ ನಿರುದ್ಯೋಗ ದರ 27.1% ರಷ್ಟು ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯೆಂದ CMIE

- Advertisement -
- Advertisement -

ಏಪ್ರಿಲ್‌ನಲ್ಲಿ ನಿರುದ್ಯೋಗ ದರ 27.1% ರಷ್ಟು ಏರಿಕೆಯಾಗಿದೆ ಎಂದು ಮುಂಬೈ ಮೂಲದ ವೇದಿಕೆಯಾದ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಮ್‌ಐಇ) ತಿಳಿಸಿದೆ.

2020ರ ಏಪ್ರಿಲ್‌ನಲ್ಲಿ ದೇಶದ ನಿರುದ್ಯೋಗ ದರ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿದೆ ಎಂದು ಇದು ಹೇಳಿದೆ. ಕೊರೊನಾ ಸೋಂಕಿನ ತಡೆಗೋಸ್ಕರ ದೇಶವೂ 3.0 ಲಾಕ್‌ಡೌನ್ ನ ಎರಡನೇ ದಿನ ಪ್ರವೇಶಿಸುತ್ತಿದ್ದಂತೆ ಆರ್ಥಿಕತೆಯಲ್ಲಿ ಉದ್ಯೋಗದ ಕೊರತೆಯಿಂದಾಗಿ ನಿರುದ್ಯೋಗ ದರ ಅಥವಾ ಆರ್ಥಿಕತೆಯಲ್ಲಿ ನಿರುದ್ಯೋಗಿಗಳ ಪಾಲು  ಶೇಕಡಾ 27.1 ಆಗಿದೆ. ಜಿಡಿಪಿ ಇಳಿಕೆಯಾಗುತ್ತಿರುವ ಸಮಯದಲ್ಲಿ ಸಿಎಂಐಇ ವರದಿಯು ಕೊರೊನಾದಿಂದಲೂ ಆರ್ಥಿಕ ಕುಸಿತವಾಗಿದೆ ಎಂದು ಹೇಳುತ್ತಿದೆ.

ಸಿಎಂಐಇ ನಿರುದ್ಯೋಗ ಸಮೀಕ್ಷೆಯನ್ನು 2016 ರಿಂದಲೂ ಮಾಡುತ್ತಿದ್ದು. ಅಂದಿನಿಂದ ಇದು ದೇಶದ ಕಾರ್ಮಿಕ ಮಾರುಕಟ್ಟೆಯ ಸ್ಥಿತಿಯನ್ನು ಮೌಲ್ಯಮಾಪನ ಮಾಡುತ್ತಿದೆ. ಇದು ತನ್ನ ಸಮೀಕ್ಷೆಯಲ್ಲಿ ತಿಂಗಳಿಗೆ 43,600 ಮನೆಗಳನ್ನು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಮೀಕ್ಷೆ ನಡೆಸುತ್ತಿದೆ.

ಸಿಎಂಐಇ ಪ್ರಕಾರ, ಕೊರೊನಾ ಲಾಕ್‌ಡೌನ್ ಅನ್ನು ಹಿಂತೆಗೆದುಕೊಳ್ಳುವುದರಿಂದ ಜೀವನೋಪಾಯದ ವಿಷಯದಲ್ಲಿ ತ್ವರಿತ ಫಲಿತಾಂಶವನ್ನು ನೀಡುವ ನಿರೀಕ್ಷೆಯಿದೆ.


ಇದನ್ನೂ ಓದಿ: ಯೋಜನೆಯೇ ಇಲ್ಲದ ಮೋದಿ ಲಾಕ್‌ಡೌನ್ : ವೈರಸ್ ಕೊಲ್ಲದಿದ್ದರೂ, ಆರ್ಥಿಕತೆಯ ಮರಣ ನಿಶ್ಚಿತ!


ಅನೇಕ ಅರ್ಥಶಾಸ್ತ್ರಜ್ಞರು ಈಗಾಗಲೇ ತಮ್ಮ ಯೋಜನೆಗಳನ್ನು ಮಂದಿಟ್ಟಿದ್ದಾರೆ, ಕೆಲವರು ಕೊರೊನಾ ಲಾಕ್‌ಡೌನ್‌ನಿಂದಾಗಿ ಆರ್ಥಿಕ ಹಿಂಜರಿತದ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಮಾರ್ಚ್ 25 ರಂದು ಪ್ರಾರಂಭವಾದ ಲಾಕ್‌ಡೌನ್‌ಗೆ ಮುಂಚೆಯೇ ದೇಶದ ಆರ್ಥಿಕತೆಯು ದೀರ್ಘಕಾಲದ ನಿಧಾನಗತಿಯ ಬೆಳವಣಿಗೆಯಿಂದ ಬಳಲುತ್ತಿದೆ ಎಂದು ಸಿಎಂಐಇ ಬೊಟ್ಟು ಮಾಡಿದೆ.

ಕೊರೊನಾ ವೈರಸ್ ಪರಿಣಾಮದಿಂದಾಗಿ ಅನೇಕ ಸಮೀಕ್ಷಾ ಗುಂಪುಗಳು ಆರ್ಥಿಕತೆಗೆ ಹೆಚ್ಚು ಕೆಟ್ಟ ಪರಿಸ್ಥಿತಿಯನ್ನು ಅಂದಾಜು ಮಾಡಿವೆ. ಫಿಚ್ ರೇಟಿಂಗ್ಸ್ 2021 ರ ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿ ಶೇಕಡಾ 2 ರಷ್ಟು ವಿಸ್ತರಿಸಬಹುದು ಎಂದು ಹೇಳಿದೆ. ಇದು ಕಳೆದ ಮೂವತ್ತು ವರ್ಷಗಳಲ್ಲೇ ನಿಧಾನಗತಿಯ ಆರ್ಥಿಕ ವೇಗವಾಗಿದೆ.

ಮ್ಯೂಚುವಲ್ ಫಂಡ್ ಸೇರಿದಂತೆ ಸಾಲಗಾರರು, ಸಾಲದಾತರು ಹಾಗೂ ಇತರ ಸಂಸ್ಥೆಗಳು ಎದುರಿಸುತ್ತಿರುವ ಒತ್ತಡವನ್ನು ಕಡಿಮೆ ಮಾಡಲು ರಿಸರ್ವ್ ಬ್ಯಾಂಕ್ ಹಲವಾರು ಕ್ರಮಗಳನ್ನು ಪ್ರಕಟಿಸಿದೆ. ಕೊರೊನಾ ಲಾಕ್‌ಡೌನ್‌ನಿಂದ ಉಂಟಾಗುವ ದ್ರವ್ಯತೆ ಪರಿಸ್ಥಿತಿಯನ್ನು ನಿಭಾಯಿಸುವ ಸಲುವಾಗಿ ಫೆಬ್ರವರಿ 2020 ರ ಹಣಕಾಸು ನೀತಿ ಸಭೆಯು ಜಿಡಿಪಿಯ ಶೇಕಡಾ 3.2 ರಷ್ಟು ಹಣವನ್ನು ಆರ್ಥಿಕತೆಗೆ ಸೇರಿಸಿದೆ.


ಇದನ್ನೂ ಓದಿ: ಕೊರೊನಾದಿಂದ ಉಂಟಾದ ಮಹಾನ್‌ ನಿರುದ್ಯೋಗ: ಅಮೇರಿಕದ ಜನರು ತಮ್ಮ ಅಹಂ ಬದಿಗಿಟ್ಟು ನೆರವು ಕೇಳುತ್ತಿದ್ದಾರೆ.


ನಮ್ಮ ಯೂ ಟ್ಯೂಬ್ ಚಾನೆಲ್‌ಗೆ  Subscribe ಆಗಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...