Homeಮುಖಪುಟಏಪ್ರಿಲ್‌ನಲ್ಲಿ ನಿರುದ್ಯೋಗ ದರ 27.1% ರಷ್ಟು ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯೆಂದ CMIE

ಏಪ್ರಿಲ್‌ನಲ್ಲಿ ನಿರುದ್ಯೋಗ ದರ 27.1% ರಷ್ಟು ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯೆಂದ CMIE

- Advertisement -
- Advertisement -

ಏಪ್ರಿಲ್‌ನಲ್ಲಿ ನಿರುದ್ಯೋಗ ದರ 27.1% ರಷ್ಟು ಏರಿಕೆಯಾಗಿದೆ ಎಂದು ಮುಂಬೈ ಮೂಲದ ವೇದಿಕೆಯಾದ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಮ್‌ಐಇ) ತಿಳಿಸಿದೆ.

2020ರ ಏಪ್ರಿಲ್‌ನಲ್ಲಿ ದೇಶದ ನಿರುದ್ಯೋಗ ದರ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿದೆ ಎಂದು ಇದು ಹೇಳಿದೆ. ಕೊರೊನಾ ಸೋಂಕಿನ ತಡೆಗೋಸ್ಕರ ದೇಶವೂ 3.0 ಲಾಕ್‌ಡೌನ್ ನ ಎರಡನೇ ದಿನ ಪ್ರವೇಶಿಸುತ್ತಿದ್ದಂತೆ ಆರ್ಥಿಕತೆಯಲ್ಲಿ ಉದ್ಯೋಗದ ಕೊರತೆಯಿಂದಾಗಿ ನಿರುದ್ಯೋಗ ದರ ಅಥವಾ ಆರ್ಥಿಕತೆಯಲ್ಲಿ ನಿರುದ್ಯೋಗಿಗಳ ಪಾಲು  ಶೇಕಡಾ 27.1 ಆಗಿದೆ. ಜಿಡಿಪಿ ಇಳಿಕೆಯಾಗುತ್ತಿರುವ ಸಮಯದಲ್ಲಿ ಸಿಎಂಐಇ ವರದಿಯು ಕೊರೊನಾದಿಂದಲೂ ಆರ್ಥಿಕ ಕುಸಿತವಾಗಿದೆ ಎಂದು ಹೇಳುತ್ತಿದೆ.

ಸಿಎಂಐಇ ನಿರುದ್ಯೋಗ ಸಮೀಕ್ಷೆಯನ್ನು 2016 ರಿಂದಲೂ ಮಾಡುತ್ತಿದ್ದು. ಅಂದಿನಿಂದ ಇದು ದೇಶದ ಕಾರ್ಮಿಕ ಮಾರುಕಟ್ಟೆಯ ಸ್ಥಿತಿಯನ್ನು ಮೌಲ್ಯಮಾಪನ ಮಾಡುತ್ತಿದೆ. ಇದು ತನ್ನ ಸಮೀಕ್ಷೆಯಲ್ಲಿ ತಿಂಗಳಿಗೆ 43,600 ಮನೆಗಳನ್ನು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಮೀಕ್ಷೆ ನಡೆಸುತ್ತಿದೆ.

ಸಿಎಂಐಇ ಪ್ರಕಾರ, ಕೊರೊನಾ ಲಾಕ್‌ಡೌನ್ ಅನ್ನು ಹಿಂತೆಗೆದುಕೊಳ್ಳುವುದರಿಂದ ಜೀವನೋಪಾಯದ ವಿಷಯದಲ್ಲಿ ತ್ವರಿತ ಫಲಿತಾಂಶವನ್ನು ನೀಡುವ ನಿರೀಕ್ಷೆಯಿದೆ.


ಇದನ್ನೂ ಓದಿ: ಯೋಜನೆಯೇ ಇಲ್ಲದ ಮೋದಿ ಲಾಕ್‌ಡೌನ್ : ವೈರಸ್ ಕೊಲ್ಲದಿದ್ದರೂ, ಆರ್ಥಿಕತೆಯ ಮರಣ ನಿಶ್ಚಿತ!


ಅನೇಕ ಅರ್ಥಶಾಸ್ತ್ರಜ್ಞರು ಈಗಾಗಲೇ ತಮ್ಮ ಯೋಜನೆಗಳನ್ನು ಮಂದಿಟ್ಟಿದ್ದಾರೆ, ಕೆಲವರು ಕೊರೊನಾ ಲಾಕ್‌ಡೌನ್‌ನಿಂದಾಗಿ ಆರ್ಥಿಕ ಹಿಂಜರಿತದ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಮಾರ್ಚ್ 25 ರಂದು ಪ್ರಾರಂಭವಾದ ಲಾಕ್‌ಡೌನ್‌ಗೆ ಮುಂಚೆಯೇ ದೇಶದ ಆರ್ಥಿಕತೆಯು ದೀರ್ಘಕಾಲದ ನಿಧಾನಗತಿಯ ಬೆಳವಣಿಗೆಯಿಂದ ಬಳಲುತ್ತಿದೆ ಎಂದು ಸಿಎಂಐಇ ಬೊಟ್ಟು ಮಾಡಿದೆ.

ಕೊರೊನಾ ವೈರಸ್ ಪರಿಣಾಮದಿಂದಾಗಿ ಅನೇಕ ಸಮೀಕ್ಷಾ ಗುಂಪುಗಳು ಆರ್ಥಿಕತೆಗೆ ಹೆಚ್ಚು ಕೆಟ್ಟ ಪರಿಸ್ಥಿತಿಯನ್ನು ಅಂದಾಜು ಮಾಡಿವೆ. ಫಿಚ್ ರೇಟಿಂಗ್ಸ್ 2021 ರ ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿ ಶೇಕಡಾ 2 ರಷ್ಟು ವಿಸ್ತರಿಸಬಹುದು ಎಂದು ಹೇಳಿದೆ. ಇದು ಕಳೆದ ಮೂವತ್ತು ವರ್ಷಗಳಲ್ಲೇ ನಿಧಾನಗತಿಯ ಆರ್ಥಿಕ ವೇಗವಾಗಿದೆ.

ಮ್ಯೂಚುವಲ್ ಫಂಡ್ ಸೇರಿದಂತೆ ಸಾಲಗಾರರು, ಸಾಲದಾತರು ಹಾಗೂ ಇತರ ಸಂಸ್ಥೆಗಳು ಎದುರಿಸುತ್ತಿರುವ ಒತ್ತಡವನ್ನು ಕಡಿಮೆ ಮಾಡಲು ರಿಸರ್ವ್ ಬ್ಯಾಂಕ್ ಹಲವಾರು ಕ್ರಮಗಳನ್ನು ಪ್ರಕಟಿಸಿದೆ. ಕೊರೊನಾ ಲಾಕ್‌ಡೌನ್‌ನಿಂದ ಉಂಟಾಗುವ ದ್ರವ್ಯತೆ ಪರಿಸ್ಥಿತಿಯನ್ನು ನಿಭಾಯಿಸುವ ಸಲುವಾಗಿ ಫೆಬ್ರವರಿ 2020 ರ ಹಣಕಾಸು ನೀತಿ ಸಭೆಯು ಜಿಡಿಪಿಯ ಶೇಕಡಾ 3.2 ರಷ್ಟು ಹಣವನ್ನು ಆರ್ಥಿಕತೆಗೆ ಸೇರಿಸಿದೆ.


ಇದನ್ನೂ ಓದಿ: ಕೊರೊನಾದಿಂದ ಉಂಟಾದ ಮಹಾನ್‌ ನಿರುದ್ಯೋಗ: ಅಮೇರಿಕದ ಜನರು ತಮ್ಮ ಅಹಂ ಬದಿಗಿಟ್ಟು ನೆರವು ಕೇಳುತ್ತಿದ್ದಾರೆ.


ನಮ್ಮ ಯೂ ಟ್ಯೂಬ್ ಚಾನೆಲ್‌ಗೆ  Subscribe ಆಗಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...