Homeಮುಖಪುಟಏಪ್ರಿಲ್‌ನಲ್ಲಿ ನಿರುದ್ಯೋಗ ದರ 27.1% ರಷ್ಟು ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯೆಂದ CMIE

ಏಪ್ರಿಲ್‌ನಲ್ಲಿ ನಿರುದ್ಯೋಗ ದರ 27.1% ರಷ್ಟು ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯೆಂದ CMIE

- Advertisement -
- Advertisement -

ಏಪ್ರಿಲ್‌ನಲ್ಲಿ ನಿರುದ್ಯೋಗ ದರ 27.1% ರಷ್ಟು ಏರಿಕೆಯಾಗಿದೆ ಎಂದು ಮುಂಬೈ ಮೂಲದ ವೇದಿಕೆಯಾದ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಮ್‌ಐಇ) ತಿಳಿಸಿದೆ.

2020ರ ಏಪ್ರಿಲ್‌ನಲ್ಲಿ ದೇಶದ ನಿರುದ್ಯೋಗ ದರ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿದೆ ಎಂದು ಇದು ಹೇಳಿದೆ. ಕೊರೊನಾ ಸೋಂಕಿನ ತಡೆಗೋಸ್ಕರ ದೇಶವೂ 3.0 ಲಾಕ್‌ಡೌನ್ ನ ಎರಡನೇ ದಿನ ಪ್ರವೇಶಿಸುತ್ತಿದ್ದಂತೆ ಆರ್ಥಿಕತೆಯಲ್ಲಿ ಉದ್ಯೋಗದ ಕೊರತೆಯಿಂದಾಗಿ ನಿರುದ್ಯೋಗ ದರ ಅಥವಾ ಆರ್ಥಿಕತೆಯಲ್ಲಿ ನಿರುದ್ಯೋಗಿಗಳ ಪಾಲು  ಶೇಕಡಾ 27.1 ಆಗಿದೆ. ಜಿಡಿಪಿ ಇಳಿಕೆಯಾಗುತ್ತಿರುವ ಸಮಯದಲ್ಲಿ ಸಿಎಂಐಇ ವರದಿಯು ಕೊರೊನಾದಿಂದಲೂ ಆರ್ಥಿಕ ಕುಸಿತವಾಗಿದೆ ಎಂದು ಹೇಳುತ್ತಿದೆ.

ಸಿಎಂಐಇ ನಿರುದ್ಯೋಗ ಸಮೀಕ್ಷೆಯನ್ನು 2016 ರಿಂದಲೂ ಮಾಡುತ್ತಿದ್ದು. ಅಂದಿನಿಂದ ಇದು ದೇಶದ ಕಾರ್ಮಿಕ ಮಾರುಕಟ್ಟೆಯ ಸ್ಥಿತಿಯನ್ನು ಮೌಲ್ಯಮಾಪನ ಮಾಡುತ್ತಿದೆ. ಇದು ತನ್ನ ಸಮೀಕ್ಷೆಯಲ್ಲಿ ತಿಂಗಳಿಗೆ 43,600 ಮನೆಗಳನ್ನು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಮೀಕ್ಷೆ ನಡೆಸುತ್ತಿದೆ.

ಸಿಎಂಐಇ ಪ್ರಕಾರ, ಕೊರೊನಾ ಲಾಕ್‌ಡೌನ್ ಅನ್ನು ಹಿಂತೆಗೆದುಕೊಳ್ಳುವುದರಿಂದ ಜೀವನೋಪಾಯದ ವಿಷಯದಲ್ಲಿ ತ್ವರಿತ ಫಲಿತಾಂಶವನ್ನು ನೀಡುವ ನಿರೀಕ್ಷೆಯಿದೆ.


ಇದನ್ನೂ ಓದಿ: ಯೋಜನೆಯೇ ಇಲ್ಲದ ಮೋದಿ ಲಾಕ್‌ಡೌನ್ : ವೈರಸ್ ಕೊಲ್ಲದಿದ್ದರೂ, ಆರ್ಥಿಕತೆಯ ಮರಣ ನಿಶ್ಚಿತ!


ಅನೇಕ ಅರ್ಥಶಾಸ್ತ್ರಜ್ಞರು ಈಗಾಗಲೇ ತಮ್ಮ ಯೋಜನೆಗಳನ್ನು ಮಂದಿಟ್ಟಿದ್ದಾರೆ, ಕೆಲವರು ಕೊರೊನಾ ಲಾಕ್‌ಡೌನ್‌ನಿಂದಾಗಿ ಆರ್ಥಿಕ ಹಿಂಜರಿತದ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಮಾರ್ಚ್ 25 ರಂದು ಪ್ರಾರಂಭವಾದ ಲಾಕ್‌ಡೌನ್‌ಗೆ ಮುಂಚೆಯೇ ದೇಶದ ಆರ್ಥಿಕತೆಯು ದೀರ್ಘಕಾಲದ ನಿಧಾನಗತಿಯ ಬೆಳವಣಿಗೆಯಿಂದ ಬಳಲುತ್ತಿದೆ ಎಂದು ಸಿಎಂಐಇ ಬೊಟ್ಟು ಮಾಡಿದೆ.

ಕೊರೊನಾ ವೈರಸ್ ಪರಿಣಾಮದಿಂದಾಗಿ ಅನೇಕ ಸಮೀಕ್ಷಾ ಗುಂಪುಗಳು ಆರ್ಥಿಕತೆಗೆ ಹೆಚ್ಚು ಕೆಟ್ಟ ಪರಿಸ್ಥಿತಿಯನ್ನು ಅಂದಾಜು ಮಾಡಿವೆ. ಫಿಚ್ ರೇಟಿಂಗ್ಸ್ 2021 ರ ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿ ಶೇಕಡಾ 2 ರಷ್ಟು ವಿಸ್ತರಿಸಬಹುದು ಎಂದು ಹೇಳಿದೆ. ಇದು ಕಳೆದ ಮೂವತ್ತು ವರ್ಷಗಳಲ್ಲೇ ನಿಧಾನಗತಿಯ ಆರ್ಥಿಕ ವೇಗವಾಗಿದೆ.

ಮ್ಯೂಚುವಲ್ ಫಂಡ್ ಸೇರಿದಂತೆ ಸಾಲಗಾರರು, ಸಾಲದಾತರು ಹಾಗೂ ಇತರ ಸಂಸ್ಥೆಗಳು ಎದುರಿಸುತ್ತಿರುವ ಒತ್ತಡವನ್ನು ಕಡಿಮೆ ಮಾಡಲು ರಿಸರ್ವ್ ಬ್ಯಾಂಕ್ ಹಲವಾರು ಕ್ರಮಗಳನ್ನು ಪ್ರಕಟಿಸಿದೆ. ಕೊರೊನಾ ಲಾಕ್‌ಡೌನ್‌ನಿಂದ ಉಂಟಾಗುವ ದ್ರವ್ಯತೆ ಪರಿಸ್ಥಿತಿಯನ್ನು ನಿಭಾಯಿಸುವ ಸಲುವಾಗಿ ಫೆಬ್ರವರಿ 2020 ರ ಹಣಕಾಸು ನೀತಿ ಸಭೆಯು ಜಿಡಿಪಿಯ ಶೇಕಡಾ 3.2 ರಷ್ಟು ಹಣವನ್ನು ಆರ್ಥಿಕತೆಗೆ ಸೇರಿಸಿದೆ.


ಇದನ್ನೂ ಓದಿ: ಕೊರೊನಾದಿಂದ ಉಂಟಾದ ಮಹಾನ್‌ ನಿರುದ್ಯೋಗ: ಅಮೇರಿಕದ ಜನರು ತಮ್ಮ ಅಹಂ ಬದಿಗಿಟ್ಟು ನೆರವು ಕೇಳುತ್ತಿದ್ದಾರೆ.


ನಮ್ಮ ಯೂ ಟ್ಯೂಬ್ ಚಾನೆಲ್‌ಗೆ  Subscribe ಆಗಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...