Homeಮುಖಪುಟನಿರುದ್ಯೋಗ: 8ನೇ ತರಗತಿ ವಿದ್ಯಾರ್ಹತೆಯ ಹುದ್ದೆಗೆ ಪದವೀಧರರಿಂದ ಅರ್ಜಿ!

ನಿರುದ್ಯೋಗ: 8ನೇ ತರಗತಿ ವಿದ್ಯಾರ್ಹತೆಯ ಹುದ್ದೆಗೆ ಪದವೀಧರರಿಂದ ಅರ್ಜಿ!

ಒಪ್ಪಂದದ ಆಧಾರದ ಮೇಲಿನ ಕೆಲಸವಾದರೂ ಸರ್ಕಾರಿ ಉದ್ಯೋಗಕ್ಕೆ ಆದ್ಯತೆ ನೀಡುತ್ತೇನೆ. ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಪ್ರಸ್ತುತ ಪರಿಸ್ಥಿತಿಯಲ್ಲಿ ಕಡಿಮೆ ವಿದ್ಯಾ ಅರ್ಹತೆಯ ಹುದ್ದೆಯಾದರೂ ಪರವಾಗಿಲ್ಲ ಎನ್ನುತ್ತಾರೆ ಪದವೀಧರರು

- Advertisement -
- Advertisement -

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು ಅದರ ಪರಿಣಾಮಗಳು ಹಲವಾರು ರೀತಿಯಲ್ಲಿ ನಮ್ಮ ಮೇಲೆ ಆಗುತ್ತಿವೆ. ಕೊರೊನಾ ಸಾಂಕ್ರಾಮಿಕದಿಂದ ಜಾರಿಗೊಳಿಸಲಾದ ಲಾಕ್‌ಡೌನ್ ಜನರ ಜೀವನವನ್ನು ಮತ್ತಷ್ಟು ಬುಡಮೇಲು ಮಾಡಿದೆ.

ಲಾಖ್‌ಡೌನ್‌ನಲ್ಲಿ ಕೆಲಸ ಕಳೆದುಕೊಂಡವರ ಸಂಖ್ಯೆ, ಉಪವಾಸದಿಂದ ನರಳಿದವರ ಸಂಖ್ಯೆ ನಿಜಕ್ಕೂ ಗಾಬರಿ ಹುಟ್ಟಿಸುವಂತಿದೆ. ಇದರ ಪರಿಣಾಮ ಕೆಲಸ ಏನೇ ಆಗಿರಲಿ ಸರ್ಕಾರಿ ಹುದ್ದೆ ಬೇಕು ಎನ್ನುವವರ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಸಾಕ್ಷಿ ಸದ್ಯಕ್ಕೆ ಪಶ್ಚಿಮ ಬಂಗಾಳದ ಘಟನೆ.

ಇದನ್ನೂ ಓದಿ: ಪ್ರಧಾನಿ ವಿರುದ್ಧ ಹೆಚ್ಚಿದ ಆಕ್ರೋಶ: ಉದ್ಯೋಗಕ್ಕಾಗಿ ತಟ್ಟೆ, ಲೋಟ ಬಡಿಯುತ್ತಿರುವ ಯುವಸಮೂಹ!

ಪಶ್ಚಿಮ ಬಂಗಾಳ ಸರ್ಕಾರವು ವನ್ಯಜೀವಿಗಳನ್ನು ರಕ್ಷಿಸಲು ಮತ್ತು ಮನುಷ್ಯ ಹಾಗೂ ಪ್ರಾಣಿಗಳ ಸಂಘರ್ಷವನ್ನು ತಡೆಗಟ್ಟಲು 2,000 ಅರಣ್ಯ ಸಹಾಯಕರನ್ನು (Bana Sahayaks) ಒಪ್ಪಂದದ ಆಧಾರದ ಮೇಲೆ ನೇಮಿಸಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಪಿಎಚ್‌.ಡಿ ಪದವೀಧರರು, ಸ್ನಾತಕೋತ್ತರ ಪದವೀಧರರು, ಎಂಜಿನಿಯರಿಂಗ್‌ ಪದವೀಧರರೂ ಅರ್ಜಿ ಸಲ್ಲಿಸಿದ್ದಾರೆ ಎಂದು ಮಾಲ್ಡಾ ಅರಣ್ಯ ವಿಭಾಗದ ವಲಯ‌ ಅಧಿಕಾರಿ ಸುಭೀರ್‌ ಕುಮಾರ್‌ ಗುಹಾ ನಿಯೋಗಿ ತಿಳಿಸಿದರು.

ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಇತಿಹಾಸದಲ್ಲಿ ಸ್ನಾತಕೋತ್ತರ ಪದವೀಧರರಾದ ಸುದೀಪ್ ಮೊಯಿತ್ರಾ ಹೇಳುವಂತೆ ’ಒಪ್ಪಂದದ ಆಧಾರದ ಮೇಲಿನ ಕೆಲಸವಾದರೂ ಸರ್ಕಾರಿ ಉದ್ಯೋಗಕ್ಕೆ ಆದ್ಯತೆ ನೀಡುತ್ತೇನೆ. ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಪ್ರಸ್ತುತ ಪರಿಸ್ಥಿತಿಯಲ್ಲಿ ಕಡಿಮೆ ವಿದ್ಯಾರ್ಹತೆಯ ಹುದ್ದೆಯಾದರೂ ಪರವಾಗಿಲ್ಲ’ ಎನ್ನುತ್ತಾರೆ.

’ಸದ್ಯ ಮಾರುಕಟ್ಟೆಯಲ್ಲಿ ಉದ್ಯೋಗ ಸಿಗುವುದು ಕಷ್ಟವಾಗಿದೆ. ಸಾಂಕ್ರಾಮಿಕದಿಂದ ಅನೇಕ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಖಾಸಗಿ ಸಂಸ್ಥೆಗಳು ಹೊಸ ನೇಮಕಾತಿಗಳನ್ನು ಮಾಡುತ್ತಿಲ್ಲ. ಹೀಗಾಗಿ ಎಂತಹ ಸರ್ಕಾರಿ ಹುದ್ದೆಯಾದರೂ ನಾನು ಸ್ವೀಕರಿಸುತ್ತೇನೆ’ ಎನ್ನುತ್ತಾರೆ.

ಇದನ್ನೂ ಓದಿ: ಹೆಚ್ಚಿದ ನಿರುದ್ಯೋಗ: ಗುಜರಾತ್‌ನಲ್ಲಿ ಜವಾನ ಹುದ್ದೆಗೆ ಆಯ್ಕೆಯಾದ ವೈದ್ಯಕೀಯ, ಇಂಜಿನಿಯರಿಂಗ್‌, ಸ್ನಾತಕೋತ್ತರ ಪದವೀಧರರು.!

“ಪ್ರಸ್ತುತ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಏನನ್ನೂ ಮಾಡದೆ ಮನೆಯಲ್ಲಿ ಇರುವುದಕ್ಕಿಂತ ಕೆಲವು ಸಾವಿರ ರೂಪಾಯಿಗಳಿಗೆ ಸಂಬಳದೊಂದಿಗೆ ಉದ್ಯೋಗದಲ್ಲಿರುವುದು ಉತ್ತಮ” ಎಂದು ಅರ್ಥಶಾಸ್ತ್ರದಲ್ಲಿ ಎಂಎಸ್ಸಿ ಮಾಡಿರುವ ರಕ್ತೀಮ್ ಚಂದಾ ತಿಳಿಸುತ್ತಾರೆ.

“ಸಂಶೋಧಕರಂತಹ ಉನ್ನತ ವ್ಯಾಸಂಗ ಮಾಡಿದ ಅರ್ಹ ಅಭ್ಯರ್ಥಿಗಳು ಈ ಕೆಲಸಕ್ಕೆ ಅರ್ಜಿ ಸಲ್ಲಿಸಿದರೆ ನಾವು ಏನು ಮಾಡಲು ಸಾಧ್ಯ..? ಈ ಸ್ಥಿತಿಯಲ್ಲಿ ನಾವು ಅವರನ್ನು ತಡೆಯಲು ಸಾಧ್ಯವಿಲ್ಲ” ಎಂದು ಕೋಲ್ಕತ್ತಾದ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಜರಾತ್ ಹೈಕೋರ್ಟ್ ಸೇರಿದಂತೆ ಅಧೀನ ನ್ಯಾಯಾಲಯದಲ್ಲಿ ಖಾಲಿ ಇದ್ದ 1,149 ಪಿಯುನ್ (ಜವಾನ) ಬೆಲೀಫ್ ಹಾಗೂ ಬಿಯರರ್ಸ್ ಹುದ್ದೆಗಳಿಗಾಗಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನೇಮಕಗೊಂಡವರ ಪೈಕಿ 7 ಜನ ವೈದ್ಯಕೀಯ ಪದವೀಧರರು, 450 ಎಂಜಿನಿಯರ್‌ಗಳು, 543 ಸ್ನಾತಕೋತ್ತರ ಪದವೀಧರರಿದ್ದಾರೆ.

ಈ ವರ್ಷ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವನ್ನು “ರಾಷ್ಟ್ರೀಯ ನಿರುದ್ಯೋಗ ದಿನ”ವನ್ನಾಗಿ ಯುವಜನತೆ ಆಚರಿಸಿತ್ತು. ನಿರೀಕ್ಷೆಗೂ ಮೀರಿ ನೆಟ್ಟಿಗರು ಈ ಅಭಿಯಾನದಲ್ಲಿ ಪಾಲ್ಗೊಂಡು #NationalUnemploymentDay ಎಂಬ ಹ್ಯಾಶ್‌ಟ್ಯಾಗ್ ಬಳಸಿ ಲಕ್ಷಾಂತರ ಟ್ವೀಟ್‌ಗಳನ್ನು ಮಾಡಿದ್ದರು.


ಇದನ್ನೂ ಓದಿ: ಪ್ರಧಾನಿ ಮೋದಿಯವರ ಜನ್ಮದಿನ: “ರಾಷ್ಟ್ರೀಯ ನಿರುದ್ಯೋಗ ದಿನ” ಎಂದು ಟ್ವಿಟರ್‌ನಲ್ಲಿ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...