Homeಮುಖಪುಟನಿರುದ್ಯೋಗ: 8ನೇ ತರಗತಿ ವಿದ್ಯಾರ್ಹತೆಯ ಹುದ್ದೆಗೆ ಪದವೀಧರರಿಂದ ಅರ್ಜಿ!

ನಿರುದ್ಯೋಗ: 8ನೇ ತರಗತಿ ವಿದ್ಯಾರ್ಹತೆಯ ಹುದ್ದೆಗೆ ಪದವೀಧರರಿಂದ ಅರ್ಜಿ!

ಒಪ್ಪಂದದ ಆಧಾರದ ಮೇಲಿನ ಕೆಲಸವಾದರೂ ಸರ್ಕಾರಿ ಉದ್ಯೋಗಕ್ಕೆ ಆದ್ಯತೆ ನೀಡುತ್ತೇನೆ. ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಪ್ರಸ್ತುತ ಪರಿಸ್ಥಿತಿಯಲ್ಲಿ ಕಡಿಮೆ ವಿದ್ಯಾ ಅರ್ಹತೆಯ ಹುದ್ದೆಯಾದರೂ ಪರವಾಗಿಲ್ಲ ಎನ್ನುತ್ತಾರೆ ಪದವೀಧರರು

- Advertisement -
- Advertisement -

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು ಅದರ ಪರಿಣಾಮಗಳು ಹಲವಾರು ರೀತಿಯಲ್ಲಿ ನಮ್ಮ ಮೇಲೆ ಆಗುತ್ತಿವೆ. ಕೊರೊನಾ ಸಾಂಕ್ರಾಮಿಕದಿಂದ ಜಾರಿಗೊಳಿಸಲಾದ ಲಾಕ್‌ಡೌನ್ ಜನರ ಜೀವನವನ್ನು ಮತ್ತಷ್ಟು ಬುಡಮೇಲು ಮಾಡಿದೆ.

ಲಾಖ್‌ಡೌನ್‌ನಲ್ಲಿ ಕೆಲಸ ಕಳೆದುಕೊಂಡವರ ಸಂಖ್ಯೆ, ಉಪವಾಸದಿಂದ ನರಳಿದವರ ಸಂಖ್ಯೆ ನಿಜಕ್ಕೂ ಗಾಬರಿ ಹುಟ್ಟಿಸುವಂತಿದೆ. ಇದರ ಪರಿಣಾಮ ಕೆಲಸ ಏನೇ ಆಗಿರಲಿ ಸರ್ಕಾರಿ ಹುದ್ದೆ ಬೇಕು ಎನ್ನುವವರ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಸಾಕ್ಷಿ ಸದ್ಯಕ್ಕೆ ಪಶ್ಚಿಮ ಬಂಗಾಳದ ಘಟನೆ.

ಇದನ್ನೂ ಓದಿ: ಪ್ರಧಾನಿ ವಿರುದ್ಧ ಹೆಚ್ಚಿದ ಆಕ್ರೋಶ: ಉದ್ಯೋಗಕ್ಕಾಗಿ ತಟ್ಟೆ, ಲೋಟ ಬಡಿಯುತ್ತಿರುವ ಯುವಸಮೂಹ!

ಪಶ್ಚಿಮ ಬಂಗಾಳ ಸರ್ಕಾರವು ವನ್ಯಜೀವಿಗಳನ್ನು ರಕ್ಷಿಸಲು ಮತ್ತು ಮನುಷ್ಯ ಹಾಗೂ ಪ್ರಾಣಿಗಳ ಸಂಘರ್ಷವನ್ನು ತಡೆಗಟ್ಟಲು 2,000 ಅರಣ್ಯ ಸಹಾಯಕರನ್ನು (Bana Sahayaks) ಒಪ್ಪಂದದ ಆಧಾರದ ಮೇಲೆ ನೇಮಿಸಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಪಿಎಚ್‌.ಡಿ ಪದವೀಧರರು, ಸ್ನಾತಕೋತ್ತರ ಪದವೀಧರರು, ಎಂಜಿನಿಯರಿಂಗ್‌ ಪದವೀಧರರೂ ಅರ್ಜಿ ಸಲ್ಲಿಸಿದ್ದಾರೆ ಎಂದು ಮಾಲ್ಡಾ ಅರಣ್ಯ ವಿಭಾಗದ ವಲಯ‌ ಅಧಿಕಾರಿ ಸುಭೀರ್‌ ಕುಮಾರ್‌ ಗುಹಾ ನಿಯೋಗಿ ತಿಳಿಸಿದರು.

ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಇತಿಹಾಸದಲ್ಲಿ ಸ್ನಾತಕೋತ್ತರ ಪದವೀಧರರಾದ ಸುದೀಪ್ ಮೊಯಿತ್ರಾ ಹೇಳುವಂತೆ ’ಒಪ್ಪಂದದ ಆಧಾರದ ಮೇಲಿನ ಕೆಲಸವಾದರೂ ಸರ್ಕಾರಿ ಉದ್ಯೋಗಕ್ಕೆ ಆದ್ಯತೆ ನೀಡುತ್ತೇನೆ. ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಪ್ರಸ್ತುತ ಪರಿಸ್ಥಿತಿಯಲ್ಲಿ ಕಡಿಮೆ ವಿದ್ಯಾರ್ಹತೆಯ ಹುದ್ದೆಯಾದರೂ ಪರವಾಗಿಲ್ಲ’ ಎನ್ನುತ್ತಾರೆ.

’ಸದ್ಯ ಮಾರುಕಟ್ಟೆಯಲ್ಲಿ ಉದ್ಯೋಗ ಸಿಗುವುದು ಕಷ್ಟವಾಗಿದೆ. ಸಾಂಕ್ರಾಮಿಕದಿಂದ ಅನೇಕ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಖಾಸಗಿ ಸಂಸ್ಥೆಗಳು ಹೊಸ ನೇಮಕಾತಿಗಳನ್ನು ಮಾಡುತ್ತಿಲ್ಲ. ಹೀಗಾಗಿ ಎಂತಹ ಸರ್ಕಾರಿ ಹುದ್ದೆಯಾದರೂ ನಾನು ಸ್ವೀಕರಿಸುತ್ತೇನೆ’ ಎನ್ನುತ್ತಾರೆ.

ಇದನ್ನೂ ಓದಿ: ಹೆಚ್ಚಿದ ನಿರುದ್ಯೋಗ: ಗುಜರಾತ್‌ನಲ್ಲಿ ಜವಾನ ಹುದ್ದೆಗೆ ಆಯ್ಕೆಯಾದ ವೈದ್ಯಕೀಯ, ಇಂಜಿನಿಯರಿಂಗ್‌, ಸ್ನಾತಕೋತ್ತರ ಪದವೀಧರರು.!

“ಪ್ರಸ್ತುತ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಏನನ್ನೂ ಮಾಡದೆ ಮನೆಯಲ್ಲಿ ಇರುವುದಕ್ಕಿಂತ ಕೆಲವು ಸಾವಿರ ರೂಪಾಯಿಗಳಿಗೆ ಸಂಬಳದೊಂದಿಗೆ ಉದ್ಯೋಗದಲ್ಲಿರುವುದು ಉತ್ತಮ” ಎಂದು ಅರ್ಥಶಾಸ್ತ್ರದಲ್ಲಿ ಎಂಎಸ್ಸಿ ಮಾಡಿರುವ ರಕ್ತೀಮ್ ಚಂದಾ ತಿಳಿಸುತ್ತಾರೆ.

“ಸಂಶೋಧಕರಂತಹ ಉನ್ನತ ವ್ಯಾಸಂಗ ಮಾಡಿದ ಅರ್ಹ ಅಭ್ಯರ್ಥಿಗಳು ಈ ಕೆಲಸಕ್ಕೆ ಅರ್ಜಿ ಸಲ್ಲಿಸಿದರೆ ನಾವು ಏನು ಮಾಡಲು ಸಾಧ್ಯ..? ಈ ಸ್ಥಿತಿಯಲ್ಲಿ ನಾವು ಅವರನ್ನು ತಡೆಯಲು ಸಾಧ್ಯವಿಲ್ಲ” ಎಂದು ಕೋಲ್ಕತ್ತಾದ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಜರಾತ್ ಹೈಕೋರ್ಟ್ ಸೇರಿದಂತೆ ಅಧೀನ ನ್ಯಾಯಾಲಯದಲ್ಲಿ ಖಾಲಿ ಇದ್ದ 1,149 ಪಿಯುನ್ (ಜವಾನ) ಬೆಲೀಫ್ ಹಾಗೂ ಬಿಯರರ್ಸ್ ಹುದ್ದೆಗಳಿಗಾಗಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನೇಮಕಗೊಂಡವರ ಪೈಕಿ 7 ಜನ ವೈದ್ಯಕೀಯ ಪದವೀಧರರು, 450 ಎಂಜಿನಿಯರ್‌ಗಳು, 543 ಸ್ನಾತಕೋತ್ತರ ಪದವೀಧರರಿದ್ದಾರೆ.

ಈ ವರ್ಷ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವನ್ನು “ರಾಷ್ಟ್ರೀಯ ನಿರುದ್ಯೋಗ ದಿನ”ವನ್ನಾಗಿ ಯುವಜನತೆ ಆಚರಿಸಿತ್ತು. ನಿರೀಕ್ಷೆಗೂ ಮೀರಿ ನೆಟ್ಟಿಗರು ಈ ಅಭಿಯಾನದಲ್ಲಿ ಪಾಲ್ಗೊಂಡು #NationalUnemploymentDay ಎಂಬ ಹ್ಯಾಶ್‌ಟ್ಯಾಗ್ ಬಳಸಿ ಲಕ್ಷಾಂತರ ಟ್ವೀಟ್‌ಗಳನ್ನು ಮಾಡಿದ್ದರು.


ಇದನ್ನೂ ಓದಿ: ಪ್ರಧಾನಿ ಮೋದಿಯವರ ಜನ್ಮದಿನ: “ರಾಷ್ಟ್ರೀಯ ನಿರುದ್ಯೋಗ ದಿನ” ಎಂದು ಟ್ವಿಟರ್‌ನಲ್ಲಿ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...