Homeಮುಖಪುಟನಿರುದ್ಯೋಗ: 8ನೇ ತರಗತಿ ವಿದ್ಯಾರ್ಹತೆಯ ಹುದ್ದೆಗೆ ಪದವೀಧರರಿಂದ ಅರ್ಜಿ!

ನಿರುದ್ಯೋಗ: 8ನೇ ತರಗತಿ ವಿದ್ಯಾರ್ಹತೆಯ ಹುದ್ದೆಗೆ ಪದವೀಧರರಿಂದ ಅರ್ಜಿ!

ಒಪ್ಪಂದದ ಆಧಾರದ ಮೇಲಿನ ಕೆಲಸವಾದರೂ ಸರ್ಕಾರಿ ಉದ್ಯೋಗಕ್ಕೆ ಆದ್ಯತೆ ನೀಡುತ್ತೇನೆ. ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಪ್ರಸ್ತುತ ಪರಿಸ್ಥಿತಿಯಲ್ಲಿ ಕಡಿಮೆ ವಿದ್ಯಾ ಅರ್ಹತೆಯ ಹುದ್ದೆಯಾದರೂ ಪರವಾಗಿಲ್ಲ ಎನ್ನುತ್ತಾರೆ ಪದವೀಧರರು

- Advertisement -
- Advertisement -

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು ಅದರ ಪರಿಣಾಮಗಳು ಹಲವಾರು ರೀತಿಯಲ್ಲಿ ನಮ್ಮ ಮೇಲೆ ಆಗುತ್ತಿವೆ. ಕೊರೊನಾ ಸಾಂಕ್ರಾಮಿಕದಿಂದ ಜಾರಿಗೊಳಿಸಲಾದ ಲಾಕ್‌ಡೌನ್ ಜನರ ಜೀವನವನ್ನು ಮತ್ತಷ್ಟು ಬುಡಮೇಲು ಮಾಡಿದೆ.

ಲಾಖ್‌ಡೌನ್‌ನಲ್ಲಿ ಕೆಲಸ ಕಳೆದುಕೊಂಡವರ ಸಂಖ್ಯೆ, ಉಪವಾಸದಿಂದ ನರಳಿದವರ ಸಂಖ್ಯೆ ನಿಜಕ್ಕೂ ಗಾಬರಿ ಹುಟ್ಟಿಸುವಂತಿದೆ. ಇದರ ಪರಿಣಾಮ ಕೆಲಸ ಏನೇ ಆಗಿರಲಿ ಸರ್ಕಾರಿ ಹುದ್ದೆ ಬೇಕು ಎನ್ನುವವರ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಸಾಕ್ಷಿ ಸದ್ಯಕ್ಕೆ ಪಶ್ಚಿಮ ಬಂಗಾಳದ ಘಟನೆ.

ಇದನ್ನೂ ಓದಿ: ಪ್ರಧಾನಿ ವಿರುದ್ಧ ಹೆಚ್ಚಿದ ಆಕ್ರೋಶ: ಉದ್ಯೋಗಕ್ಕಾಗಿ ತಟ್ಟೆ, ಲೋಟ ಬಡಿಯುತ್ತಿರುವ ಯುವಸಮೂಹ!

ಪಶ್ಚಿಮ ಬಂಗಾಳ ಸರ್ಕಾರವು ವನ್ಯಜೀವಿಗಳನ್ನು ರಕ್ಷಿಸಲು ಮತ್ತು ಮನುಷ್ಯ ಹಾಗೂ ಪ್ರಾಣಿಗಳ ಸಂಘರ್ಷವನ್ನು ತಡೆಗಟ್ಟಲು 2,000 ಅರಣ್ಯ ಸಹಾಯಕರನ್ನು (Bana Sahayaks) ಒಪ್ಪಂದದ ಆಧಾರದ ಮೇಲೆ ನೇಮಿಸಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಪಿಎಚ್‌.ಡಿ ಪದವೀಧರರು, ಸ್ನಾತಕೋತ್ತರ ಪದವೀಧರರು, ಎಂಜಿನಿಯರಿಂಗ್‌ ಪದವೀಧರರೂ ಅರ್ಜಿ ಸಲ್ಲಿಸಿದ್ದಾರೆ ಎಂದು ಮಾಲ್ಡಾ ಅರಣ್ಯ ವಿಭಾಗದ ವಲಯ‌ ಅಧಿಕಾರಿ ಸುಭೀರ್‌ ಕುಮಾರ್‌ ಗುಹಾ ನಿಯೋಗಿ ತಿಳಿಸಿದರು.

ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಇತಿಹಾಸದಲ್ಲಿ ಸ್ನಾತಕೋತ್ತರ ಪದವೀಧರರಾದ ಸುದೀಪ್ ಮೊಯಿತ್ರಾ ಹೇಳುವಂತೆ ’ಒಪ್ಪಂದದ ಆಧಾರದ ಮೇಲಿನ ಕೆಲಸವಾದರೂ ಸರ್ಕಾರಿ ಉದ್ಯೋಗಕ್ಕೆ ಆದ್ಯತೆ ನೀಡುತ್ತೇನೆ. ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಪ್ರಸ್ತುತ ಪರಿಸ್ಥಿತಿಯಲ್ಲಿ ಕಡಿಮೆ ವಿದ್ಯಾರ್ಹತೆಯ ಹುದ್ದೆಯಾದರೂ ಪರವಾಗಿಲ್ಲ’ ಎನ್ನುತ್ತಾರೆ.

’ಸದ್ಯ ಮಾರುಕಟ್ಟೆಯಲ್ಲಿ ಉದ್ಯೋಗ ಸಿಗುವುದು ಕಷ್ಟವಾಗಿದೆ. ಸಾಂಕ್ರಾಮಿಕದಿಂದ ಅನೇಕ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಖಾಸಗಿ ಸಂಸ್ಥೆಗಳು ಹೊಸ ನೇಮಕಾತಿಗಳನ್ನು ಮಾಡುತ್ತಿಲ್ಲ. ಹೀಗಾಗಿ ಎಂತಹ ಸರ್ಕಾರಿ ಹುದ್ದೆಯಾದರೂ ನಾನು ಸ್ವೀಕರಿಸುತ್ತೇನೆ’ ಎನ್ನುತ್ತಾರೆ.

ಇದನ್ನೂ ಓದಿ: ಹೆಚ್ಚಿದ ನಿರುದ್ಯೋಗ: ಗುಜರಾತ್‌ನಲ್ಲಿ ಜವಾನ ಹುದ್ದೆಗೆ ಆಯ್ಕೆಯಾದ ವೈದ್ಯಕೀಯ, ಇಂಜಿನಿಯರಿಂಗ್‌, ಸ್ನಾತಕೋತ್ತರ ಪದವೀಧರರು.!

“ಪ್ರಸ್ತುತ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಏನನ್ನೂ ಮಾಡದೆ ಮನೆಯಲ್ಲಿ ಇರುವುದಕ್ಕಿಂತ ಕೆಲವು ಸಾವಿರ ರೂಪಾಯಿಗಳಿಗೆ ಸಂಬಳದೊಂದಿಗೆ ಉದ್ಯೋಗದಲ್ಲಿರುವುದು ಉತ್ತಮ” ಎಂದು ಅರ್ಥಶಾಸ್ತ್ರದಲ್ಲಿ ಎಂಎಸ್ಸಿ ಮಾಡಿರುವ ರಕ್ತೀಮ್ ಚಂದಾ ತಿಳಿಸುತ್ತಾರೆ.

“ಸಂಶೋಧಕರಂತಹ ಉನ್ನತ ವ್ಯಾಸಂಗ ಮಾಡಿದ ಅರ್ಹ ಅಭ್ಯರ್ಥಿಗಳು ಈ ಕೆಲಸಕ್ಕೆ ಅರ್ಜಿ ಸಲ್ಲಿಸಿದರೆ ನಾವು ಏನು ಮಾಡಲು ಸಾಧ್ಯ..? ಈ ಸ್ಥಿತಿಯಲ್ಲಿ ನಾವು ಅವರನ್ನು ತಡೆಯಲು ಸಾಧ್ಯವಿಲ್ಲ” ಎಂದು ಕೋಲ್ಕತ್ತಾದ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಜರಾತ್ ಹೈಕೋರ್ಟ್ ಸೇರಿದಂತೆ ಅಧೀನ ನ್ಯಾಯಾಲಯದಲ್ಲಿ ಖಾಲಿ ಇದ್ದ 1,149 ಪಿಯುನ್ (ಜವಾನ) ಬೆಲೀಫ್ ಹಾಗೂ ಬಿಯರರ್ಸ್ ಹುದ್ದೆಗಳಿಗಾಗಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನೇಮಕಗೊಂಡವರ ಪೈಕಿ 7 ಜನ ವೈದ್ಯಕೀಯ ಪದವೀಧರರು, 450 ಎಂಜಿನಿಯರ್‌ಗಳು, 543 ಸ್ನಾತಕೋತ್ತರ ಪದವೀಧರರಿದ್ದಾರೆ.

ಈ ವರ್ಷ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವನ್ನು “ರಾಷ್ಟ್ರೀಯ ನಿರುದ್ಯೋಗ ದಿನ”ವನ್ನಾಗಿ ಯುವಜನತೆ ಆಚರಿಸಿತ್ತು. ನಿರೀಕ್ಷೆಗೂ ಮೀರಿ ನೆಟ್ಟಿಗರು ಈ ಅಭಿಯಾನದಲ್ಲಿ ಪಾಲ್ಗೊಂಡು #NationalUnemploymentDay ಎಂಬ ಹ್ಯಾಶ್‌ಟ್ಯಾಗ್ ಬಳಸಿ ಲಕ್ಷಾಂತರ ಟ್ವೀಟ್‌ಗಳನ್ನು ಮಾಡಿದ್ದರು.


ಇದನ್ನೂ ಓದಿ: ಪ್ರಧಾನಿ ಮೋದಿಯವರ ಜನ್ಮದಿನ: “ರಾಷ್ಟ್ರೀಯ ನಿರುದ್ಯೋಗ ದಿನ” ಎಂದು ಟ್ವಿಟರ್‌ನಲ್ಲಿ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...