Homeಮುಖಪುಟನಿರುದ್ಯೋಗ ದೇಶದ ಜಲ್ವಂತ ಸಮಸ್ಯೆ: ಮಲ್ಲಿಕಾರ್ಜುನ ಖರ್ಗೆ

ನಿರುದ್ಯೋಗ ದೇಶದ ಜಲ್ವಂತ ಸಮಸ್ಯೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ನಿರುದ್ಯೋಗ ಎನ್ನುವುದು ದೇಶದ ಜಲ್ವಂತ ಸಮಸ್ಯೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದು, ಬಿಜೆಪಿ ಮತ್ತು ಕೇಂದ್ರ ಸರಕಾರದ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಮಲ್ಲಿಕಾರ್ಜುನ ಖರ್ಗೆ, ವರ್ಷದಲ್ಲಿ 2 ಕೋಟಿ ಉದ್ಯೋಗದ ಸೃಷ್ಟಿ ಎಲ್ಲಿದೆ? ಉದ್ಯೋಗ ನೇಮಕಾತಿ ಪರೀಕ್ಷೆಗಳು ಮತ್ತು ಉದ್ಯೋಗವನ್ನು ಖಾತ್ರಿಪಡಿಸುವ ನಡುವಿನ ಪ್ರಕ್ರಿಯೆ ಏಕೆ ಸಂಕೀರ್ಣವಾಗಿದೆ? ನಿರುದ್ಯೋಗವು ದೇಶದ ಅತ್ಯಂತ ಜ್ವಲಂತ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.

ಜು.2022 ಮತ್ತು ಜೂ.2023ರ ನಡುವಿನ PLFS(periodic labour force survey) ಅಂಕಿ-ಅಂಶಗಳನ್ನು ಉಲ್ಲೇಖಿಸಿದ ಮಲ್ಲಿಕಾರ್ಜುನ ಖರ್ಗೆ 15-29 ವರ್ಷ ವಯಸ್ಸಿನ ಯುವ ಜನರಲ್ಲಿ ನಿರುದ್ಯೋಗ ದರವು 10 ಪ್ರತಿಶತ ಇದೆ. PLFS ಅಂಕಿ ಅಂಶದ ಪ್ರಕಾರ ಜುಲೈ 2022ರಿಂದ ಜೂನ್ 2023ರ ಅವಧಿಯಲ್ಲಿ ದೇಶದ ಗ್ರಾಮೀಣ ಜನರ ನಿರುದ್ಯೋಗವು ಶೇಕಡಾ 8.3ರಷ್ಟಿತ್ತು. ಇದೇ ವೇಳೆ ನಗರ ಪ್ರದೇಶದಲ್ಲಿನ ನಿರುದ್ಯೋಗ ದರವು 13.8ಶೇ.ರಷ್ಟು ಹೆಚ್ಚಿದೆ ಎಂದು ಹೇಳಿದ್ದಾರೆ.

ಎಂಎಸ್‌ಎಂಇ ವಲಯವನ್ನು ಏಕೆ ನಾಶಪಡಿಸಲಾಯಿತು, ಕೋಟಿಗಟ್ಟಲೆ ಯುವಕರ ಉದ್ಯೋಗಗಳನ್ನು ಏಕೆ ಕಿತ್ತುಕೊಳ್ಳಲಾಯಿತು ಮತ್ತು ಅವರ ಭವಿಷ್ಯವನ್ನು ಏಕೆ ಹಾಳು ಮಾಡಲಾಯಿತು? ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಇತ್ತೀಚೆಗೆ ಸಂಸತ್ತಿನಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಸಾಂವಿಧಾನಿಕ ಪೀಠದಲ್ಲಿ ಕುಳಿತುಕೊಂಡು ತನ್ನ ಜಾತಿ ಬಗ್ಗೆ ಉಲ್ಲೇಖಿಸಿ ಕೊಟ್ಟ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರವಾದಂತಹ ವಿರೋಧವನ್ನು ವ್ಯಕ್ತಪಡಿಸಿದ್ದರು. ಇತರ ಸದಸ್ಯರಿಗೆ ರಕ್ಷಣೆ ನೀಡುವುದು ಸಭಾಪತಿಗಳ ಕೆಲಸವಾಗಿದೆ. ಆದರೆ ಅವರು ಸ್ವಯಂ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಹಲವು ಬಾರಿ ರಾಜ್ಯಸಭೆಯಲ್ಲಿ ಮಾತನಾಡಲು ನನಗೆ ಅವಕಾಶ ನೀಡಿಲ್ಲ. ನಾನು ದಲಿತನಾಗಿರುವುದು ಇದಕ್ಕೆ ಕಾರಣ ಎಂದು ನಾನು ಹೇಳಬೇಕೇ? ಅವರು ಸಂಸತ್ತಿನೊಳಗೆ ಜಾತಿಯ ಕುರಿತು ಮಾತನಾಡಿ ಅದರ ಹೆಸರಿನಲ್ಲಿ ಹೊರಗಿರುವ ಜನರನ್ನು ಪ್ರಚೋದಿಸಬಾರದು ಎಂದು ಖರ್ಗೆ ಹೇಳಿದ್ದಾರೆ.

ಇದಲ್ಲದೆ ಸಂಸತ್ತಿನಲ್ಲಿ ಉಂಟಾದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್‌ ಶಾ ಅವರು ಹೇಳಿಕೆ ನೀಡಬೇಕೆಂದು ಒತ್ತಾಯಿಸಿದ್ದರಿಂದ 141 ಸಂಸದರನ್ನು ಅಮಾನತು ಮಾಡಲಾಗಿದೆ. ಆದರೆ ಆರೋಪಿಗೆ ಪಾಸ್‌ ನೀಡಿದ್ದ ತಮ್ಮದೇ ಪಕ್ಷದ ಸಂಸದರ ಬಗ್ಗೆ ಬಿಜೆಪಿಯವರು ಪ್ರಶ್ನಿಸುತ್ತಿಲ್ಲ. ಕೃತ್ಯಕ್ಕೆ ತಿಂಗಳುಗಳಿಂದ ಯೋಜನೆ ರೂಪಿಸುತ್ತಿದ್ದ ಆರೋಪಿಗಳ ಬಗ್ಗೆ ಅಧಿಕಾರಿಗಳು ಯಾಕೆ ಗಮನಹರಿಸಿಲ್ಲ? ಇದು ಗುಪ್ತಚರ ಇಲಾಖೆಯ ಬಹು ದೊಡ್ಡ ವೈಫಲ್ಯ. ಭದ್ರತಾ ಲೋಪಕ್ಕೆ ಹಿರಿಯ ಅಧಿಕಾರಿಗಳನ್ನು ಹೊಣೆಯನ್ನಾಗಿ ಯಾಕೆ ಮಾಡಲಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಪ್ರಶ್ನಿಸಿದ್ದರು.

ಇದನ್ನು ಓದಿ: ಶಾಲೆಗಳಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಜಾತಿ ದೌರ್ಜನ್ಯ: ಅಧ್ಯಯನದಿಂದ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...