Homeಮುಖಪುಟ2 ಕೋಟಿ ಉದ್ಯೋಗ ಎಲ್ಲಿ: "ಉತ್ತರ ಕೊಡಿ ಮೋದಿ" ಎಂದು 25 ಲಕ್ಷಕ್ಕೂ ಹೆಚ್ಚು ಟ್ವೀಟ್!

2 ಕೋಟಿ ಉದ್ಯೋಗ ಎಲ್ಲಿ: “ಉತ್ತರ ಕೊಡಿ ಮೋದಿ” ಎಂದು 25 ಲಕ್ಷಕ್ಕೂ ಹೆಚ್ಚು ಟ್ವೀಟ್!

ಬುಧವಾರ ಬೆಳಗ್ಗೆಯಿಂದ ಆರಂಭವಾಗಿರುವ #modi_jawab_do ಅಭಿಯಾನದಲ್ಲಿ ಈ ವರದಿ ಬರೆಯುವ ವೇಳೆ 2.47 ಮಿಲಿಯನ್ ಟ್ವೀಟ್‌ಗಳು ದಾಖಲಾಗಿದ್ದವು.

- Advertisement -
- Advertisement -

ದೇಶದಲ್ಲಿ ಹೆಚ್ಚಾಗುತ್ತಿರುವ ನಿರುದ್ಯೋಗದ ವಿರುದ್ದ ಎಚ್ಚೆತ್ತಿರುವ ಯುವಜನತೆ ಸಾಲು ಸಾಲು ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಯಾವುದೇ ಉತ್ತಮ ಪ್ರತಿಕ್ರಿಯೆ ಸಿಗದ ಕಾರಣ ಬುಧವಾರ (ಮಾರ್ಚ್ 3) ಸಾಮಾಜಿಕ ಮಾಧ್ಯಮ ಟ್ವಿಟರ್‌ನಲ್ಲಿ ‘ಮೋದಿ ಉತ್ತರ ಕೊಡಿ’ (ಮೋದಿ ಜವಾಬ್ ದೋ) ಅಭಿಯಾನ ಆರಂಭಿಸಿದ್ದಾರೆ.

ಬುಧವಾರ ಬೆಳಗ್ಗೆಯಿಂದ ಆರಂಭವಾಗಿರುವ #modi_jawab_do ಅಭಿಯಾನದಲ್ಲಿ ಈ ವರದಿ ಬರೆಯುವ ವೇಳೆ 2.47 ಮಿಲಿಯನ್ ಟ್ವೀಟ್‌ಗಳು ದಾಖಲಾಗಿದ್ದವು. ವಿದ್ಯಾರ್ಥಿಗಳು, ಯುವಜನತೆ, ವಿರೋಧಪಕ್ಷಗಳು ಸೇರಿದಂತೆ ದೇಶದ ಜನರು ಪ್ರಧಾನಿಯವರನ್ನು ಉತ್ತರ ಕೇಳಿದ್ದಾರೆ.

ಟ್ವಿಟರ್‌ನಲ್ಲಿ ಉತ್ತರ ಕೇಳಿರುವ ಯುವಜನತೆ ತಮ್ಮದೆ ಕೆಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದರೆ, ವಿದ್ಯಾರ್ಥಿಗಳು ಕೂಡ ತಮ್ಮ ಬೇಡಿಕೆಗಳನ್ನು ಟ್ವಿಟರ್‌ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಮುಂದಿಟ್ಟಿದ್ದಾರೆ.

ಇದನ್ನೂ ಓದಿ: ಅಸ್ಸಾಂನಲ್ಲಿ ಅಧಿಕಾರಕ್ಕೆ ಬಂದರೆ ಗೃಹಿಣಿಯರಿಗೆ ತಿಂಗಳಿಗೆ ₹ 2,000 ಸಹಾಯ ಧನ- ಪ್ರಿಯಾಂಕ ಗಾಂಧಿ

ಪ್ರಧಾನಿಯವರೇ ನಾವು ಈ ಸಮಸ್ಯೆಗಳಿಗೆ ಮಾತ್ರ ಪರಿಹಾರ ಕೇಳುತ್ತಿದ್ದೇವೆ ಉತ್ತರ ನೀಡಿ ಎಂದು ಬೇಡಿಕೆಗಳ ಪಟ್ಟಿಯನ್ನು ಯುವಜನತೆ ಮುಂದಿಟ್ಟಿದ್ದಾರೆ.
(1) ಸಮಯೋಚಿತ ಅಧಿಸೂಚನೆ
(2) ಸಮಯೋಚಿತ ಪರೀಕ್ಷೆ
(3) ಸಮಯೋಚಿತ ಫಲಿತಾಂಶ
(4) ವೇಯ್ಟಿಂಗ್ ಲಿಸ್ಟ್
(5) ಹುದ್ದೆಗಳನ್ನು ಹೆಚ್ಚಿಸಿ
(6) ನಿಯಮಿತ ನೇಮಕಾತಿ
(7) ಪರೀಕ್ಷಾ ಪ್ರಕ್ರಿಯೆಯಲ್ಲಿ ಸುಧಾರಣೆ

ಇವುಗಳ ಬಗ್ಗೆ ದಯವಿಟ್ಟು ಉತ್ತರ ನೀಡಿ ಪ್ರಧಾನಿಯವರೇ ಎಂದಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

ವಿದ್ಯಾರ್ಥಿಗಳು ತಮ್ಮ ಬೇಡಿಕೆ ಪಟ್ಟಿಯನ್ನು ಇಟ್ಟು ಉತ್ತರಿಸುವಂತೆ ಕೇಳಿದ್ದಾರೆ.

1. ಖಾಲಿ ಹುದ್ದೆಗಳನ್ನು ಹೆಚ್ಚಿಸಿ

2. ಸಮಯೋಚಿತ ಪರೀಕ್ಷೆ
3. ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ
4. ಸಮಯೋಚಿತ ಫಲಿತಾಂಶಗಳು
5. ವೇಗವಾದ ನೇಮಕಾತಿ

ಇವುಗಳ ಬಗ್ಗೆ ಏನಾದರೂ ಮಾತನಾಡಿ ಎಂದು ಆಗ್ರಹಿಸಿದ್ದಾರೆ.

ಯುವಜನತೆಯ ಅಭಿಯಾನವನ್ನು ಬೆಂಬಲಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ, ವಿದ್ಯಾರ್ಥಿಗಳ, ನಿರುದ್ಯೋಗದ ಕುರಿತ ಪ್ರಶ್ನೆಗಳಿಗೆ ಉತ್ತರಿಸಿ ಎಂದು #modi_jawab_do ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ

ಈ ದೇಶದ ನಿರುದ್ಯೋಗಿಗಳು, ಕಾರ್ಮಿಕರು, ರೈತರು, ದಲಿತರು, ಬುಡಕಟ್ಟು ಸಮುದಾಯಗಳು ನಿಮ್ಮಿಂದ ಉತ್ತರವನ್ನು ಬಯಸಿದ್ದಾರೆ ಎಂದು ಟ್ವಿಟರ್‌ ಬಳಕೆದಾರರೊಬ್ಬರು ಟ್ವೀಟ್ ಮಾಡಿದ್ದಾರೆ.

ಮೋದಿಯವರ ದಾಡಿ ಬೆಳೆದಂತೆ ಉದ್ಯೋಗದ ಗ್ರಾಫ್‌ ಕೂಡ ಕೆಳಗಿಳಿಯುತ್ತಿದೆ ಎಂದು ಪ್ರಧಾನಿಯವರ ದಾಡಿಯ ಚಿತ್ರವನ್ನು ಹಂಚಿಕೊಂಡು ಯೋಗೇಂದ್ರ ಸಿಂಗ್ ಎನ್ನುವವರು ವ್ಯಂಗ್ಯವಾಡಿದ್ದಾರೆ.

ಯುವಜನತೆ ಇಷ್ಟು ಕೇಳಿಕೊಂಡರು ಮಾತನಾಡದ ಪ್ರಧಾನಿ ಎಂದು ನಿದ್ದೆ ಮಾಡುತ್ತಿರುವ ಕುಂಬಕರ್ಣನಿಗೆ ಹೋಲಿಸಿ ಹಲವಾರು ಟ್ವೀಟ್‌ಗಳನ್ನು ಮಾಡಲಾಗಿದೆ.

ನಿರುದ್ಯೋಗದ ಬಗ್ಗೆ ಮಾತನಾಡದ, ಪ್ರಧಾನ ಮಂತ್ರಿಯವರಲ್ಲಿ ಒಂದು ಪ್ರಶ್ನೆ ಕೇಳದ ಸುದ್ದಿ ಮಾಧ್ಯಮಗಳನ್ನು ಬಾಯ್ಕಾಟ್ ಮಾಡಿ ಎಂದು ಯುವಜನತೆ ಕೇಳುತ್ತಿದ್ದಾರೆ.

ಈಗಾಗಲೇ ಹಲವಾರು ಬಾರಿ ದೇಶದಲ್ಲಿ ಯುವಜನತೆ ಉದ್ಯೋಗಕ್ಕಾಗಿ ಬೀದಿಗಿಳಿದಿದೆ. ಆದರೂ ಕೂಡ ಯಾವುದೇ ಉಪಯೋಗವಾಗಿಲ್ಲ. ದಿನಕಳೆದಂತೆ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಲೇ ಇದೆ.


ಇದನ್ನೂ ಓದಿ: ಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದ್ದ ಊದ್ಯೋಗಗಳನ್ನ ನುಂಗಿ ,ಸಕಾ೯ರಿ ವಲಯಗಳನ್ನ ಖಾಸಗಿಕರಣ ಗೊಳಿಸುವ ಇವರು ಊದ್ಯೋಗಗಳನ್ನ ಭವಿಷ್ಯ ಸ್ವಗ೯ದಲ್ಲಿ ಸೃಷ್ಟಿಸಬಹುದು

  2. ಅಂಬಾನಿ ಗಾಗಿ ಪ್ರಧಾನಿ ಯಾದವರು…
    ಭಾರತೀಯರ ಗಾಗಿ ಅಲ್ಲ….
    ಉತ್ತರವೇಕೆ ಕೊಡಬೇಕು…..

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...