Homeಮುಖಪುಟ2 ಕೋಟಿ ಉದ್ಯೋಗ ಎಲ್ಲಿ: "ಉತ್ತರ ಕೊಡಿ ಮೋದಿ" ಎಂದು 25 ಲಕ್ಷಕ್ಕೂ ಹೆಚ್ಚು ಟ್ವೀಟ್!

2 ಕೋಟಿ ಉದ್ಯೋಗ ಎಲ್ಲಿ: “ಉತ್ತರ ಕೊಡಿ ಮೋದಿ” ಎಂದು 25 ಲಕ್ಷಕ್ಕೂ ಹೆಚ್ಚು ಟ್ವೀಟ್!

ಬುಧವಾರ ಬೆಳಗ್ಗೆಯಿಂದ ಆರಂಭವಾಗಿರುವ #modi_jawab_do ಅಭಿಯಾನದಲ್ಲಿ ಈ ವರದಿ ಬರೆಯುವ ವೇಳೆ 2.47 ಮಿಲಿಯನ್ ಟ್ವೀಟ್‌ಗಳು ದಾಖಲಾಗಿದ್ದವು.

- Advertisement -
- Advertisement -

ದೇಶದಲ್ಲಿ ಹೆಚ್ಚಾಗುತ್ತಿರುವ ನಿರುದ್ಯೋಗದ ವಿರುದ್ದ ಎಚ್ಚೆತ್ತಿರುವ ಯುವಜನತೆ ಸಾಲು ಸಾಲು ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಯಾವುದೇ ಉತ್ತಮ ಪ್ರತಿಕ್ರಿಯೆ ಸಿಗದ ಕಾರಣ ಬುಧವಾರ (ಮಾರ್ಚ್ 3) ಸಾಮಾಜಿಕ ಮಾಧ್ಯಮ ಟ್ವಿಟರ್‌ನಲ್ಲಿ ‘ಮೋದಿ ಉತ್ತರ ಕೊಡಿ’ (ಮೋದಿ ಜವಾಬ್ ದೋ) ಅಭಿಯಾನ ಆರಂಭಿಸಿದ್ದಾರೆ.

ಬುಧವಾರ ಬೆಳಗ್ಗೆಯಿಂದ ಆರಂಭವಾಗಿರುವ #modi_jawab_do ಅಭಿಯಾನದಲ್ಲಿ ಈ ವರದಿ ಬರೆಯುವ ವೇಳೆ 2.47 ಮಿಲಿಯನ್ ಟ್ವೀಟ್‌ಗಳು ದಾಖಲಾಗಿದ್ದವು. ವಿದ್ಯಾರ್ಥಿಗಳು, ಯುವಜನತೆ, ವಿರೋಧಪಕ್ಷಗಳು ಸೇರಿದಂತೆ ದೇಶದ ಜನರು ಪ್ರಧಾನಿಯವರನ್ನು ಉತ್ತರ ಕೇಳಿದ್ದಾರೆ.

ಟ್ವಿಟರ್‌ನಲ್ಲಿ ಉತ್ತರ ಕೇಳಿರುವ ಯುವಜನತೆ ತಮ್ಮದೆ ಕೆಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದರೆ, ವಿದ್ಯಾರ್ಥಿಗಳು ಕೂಡ ತಮ್ಮ ಬೇಡಿಕೆಗಳನ್ನು ಟ್ವಿಟರ್‌ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಮುಂದಿಟ್ಟಿದ್ದಾರೆ.

ಇದನ್ನೂ ಓದಿ: ಅಸ್ಸಾಂನಲ್ಲಿ ಅಧಿಕಾರಕ್ಕೆ ಬಂದರೆ ಗೃಹಿಣಿಯರಿಗೆ ತಿಂಗಳಿಗೆ ₹ 2,000 ಸಹಾಯ ಧನ- ಪ್ರಿಯಾಂಕ ಗಾಂಧಿ

ಪ್ರಧಾನಿಯವರೇ ನಾವು ಈ ಸಮಸ್ಯೆಗಳಿಗೆ ಮಾತ್ರ ಪರಿಹಾರ ಕೇಳುತ್ತಿದ್ದೇವೆ ಉತ್ತರ ನೀಡಿ ಎಂದು ಬೇಡಿಕೆಗಳ ಪಟ್ಟಿಯನ್ನು ಯುವಜನತೆ ಮುಂದಿಟ್ಟಿದ್ದಾರೆ.
(1) ಸಮಯೋಚಿತ ಅಧಿಸೂಚನೆ
(2) ಸಮಯೋಚಿತ ಪರೀಕ್ಷೆ
(3) ಸಮಯೋಚಿತ ಫಲಿತಾಂಶ
(4) ವೇಯ್ಟಿಂಗ್ ಲಿಸ್ಟ್
(5) ಹುದ್ದೆಗಳನ್ನು ಹೆಚ್ಚಿಸಿ
(6) ನಿಯಮಿತ ನೇಮಕಾತಿ
(7) ಪರೀಕ್ಷಾ ಪ್ರಕ್ರಿಯೆಯಲ್ಲಿ ಸುಧಾರಣೆ

ಇವುಗಳ ಬಗ್ಗೆ ದಯವಿಟ್ಟು ಉತ್ತರ ನೀಡಿ ಪ್ರಧಾನಿಯವರೇ ಎಂದಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

ವಿದ್ಯಾರ್ಥಿಗಳು ತಮ್ಮ ಬೇಡಿಕೆ ಪಟ್ಟಿಯನ್ನು ಇಟ್ಟು ಉತ್ತರಿಸುವಂತೆ ಕೇಳಿದ್ದಾರೆ.

1. ಖಾಲಿ ಹುದ್ದೆಗಳನ್ನು ಹೆಚ್ಚಿಸಿ

2. ಸಮಯೋಚಿತ ಪರೀಕ್ಷೆ
3. ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ
4. ಸಮಯೋಚಿತ ಫಲಿತಾಂಶಗಳು
5. ವೇಗವಾದ ನೇಮಕಾತಿ

ಇವುಗಳ ಬಗ್ಗೆ ಏನಾದರೂ ಮಾತನಾಡಿ ಎಂದು ಆಗ್ರಹಿಸಿದ್ದಾರೆ.

ಯುವಜನತೆಯ ಅಭಿಯಾನವನ್ನು ಬೆಂಬಲಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ, ವಿದ್ಯಾರ್ಥಿಗಳ, ನಿರುದ್ಯೋಗದ ಕುರಿತ ಪ್ರಶ್ನೆಗಳಿಗೆ ಉತ್ತರಿಸಿ ಎಂದು #modi_jawab_do ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ

ಈ ದೇಶದ ನಿರುದ್ಯೋಗಿಗಳು, ಕಾರ್ಮಿಕರು, ರೈತರು, ದಲಿತರು, ಬುಡಕಟ್ಟು ಸಮುದಾಯಗಳು ನಿಮ್ಮಿಂದ ಉತ್ತರವನ್ನು ಬಯಸಿದ್ದಾರೆ ಎಂದು ಟ್ವಿಟರ್‌ ಬಳಕೆದಾರರೊಬ್ಬರು ಟ್ವೀಟ್ ಮಾಡಿದ್ದಾರೆ.

ಮೋದಿಯವರ ದಾಡಿ ಬೆಳೆದಂತೆ ಉದ್ಯೋಗದ ಗ್ರಾಫ್‌ ಕೂಡ ಕೆಳಗಿಳಿಯುತ್ತಿದೆ ಎಂದು ಪ್ರಧಾನಿಯವರ ದಾಡಿಯ ಚಿತ್ರವನ್ನು ಹಂಚಿಕೊಂಡು ಯೋಗೇಂದ್ರ ಸಿಂಗ್ ಎನ್ನುವವರು ವ್ಯಂಗ್ಯವಾಡಿದ್ದಾರೆ.

ಯುವಜನತೆ ಇಷ್ಟು ಕೇಳಿಕೊಂಡರು ಮಾತನಾಡದ ಪ್ರಧಾನಿ ಎಂದು ನಿದ್ದೆ ಮಾಡುತ್ತಿರುವ ಕುಂಬಕರ್ಣನಿಗೆ ಹೋಲಿಸಿ ಹಲವಾರು ಟ್ವೀಟ್‌ಗಳನ್ನು ಮಾಡಲಾಗಿದೆ.

ನಿರುದ್ಯೋಗದ ಬಗ್ಗೆ ಮಾತನಾಡದ, ಪ್ರಧಾನ ಮಂತ್ರಿಯವರಲ್ಲಿ ಒಂದು ಪ್ರಶ್ನೆ ಕೇಳದ ಸುದ್ದಿ ಮಾಧ್ಯಮಗಳನ್ನು ಬಾಯ್ಕಾಟ್ ಮಾಡಿ ಎಂದು ಯುವಜನತೆ ಕೇಳುತ್ತಿದ್ದಾರೆ.

ಈಗಾಗಲೇ ಹಲವಾರು ಬಾರಿ ದೇಶದಲ್ಲಿ ಯುವಜನತೆ ಉದ್ಯೋಗಕ್ಕಾಗಿ ಬೀದಿಗಿಳಿದಿದೆ. ಆದರೂ ಕೂಡ ಯಾವುದೇ ಉಪಯೋಗವಾಗಿಲ್ಲ. ದಿನಕಳೆದಂತೆ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಲೇ ಇದೆ.


ಇದನ್ನೂ ಓದಿ: ಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದ್ದ ಊದ್ಯೋಗಗಳನ್ನ ನುಂಗಿ ,ಸಕಾ೯ರಿ ವಲಯಗಳನ್ನ ಖಾಸಗಿಕರಣ ಗೊಳಿಸುವ ಇವರು ಊದ್ಯೋಗಗಳನ್ನ ಭವಿಷ್ಯ ಸ್ವಗ೯ದಲ್ಲಿ ಸೃಷ್ಟಿಸಬಹುದು

  2. ಅಂಬಾನಿ ಗಾಗಿ ಪ್ರಧಾನಿ ಯಾದವರು…
    ಭಾರತೀಯರ ಗಾಗಿ ಅಲ್ಲ….
    ಉತ್ತರವೇಕೆ ಕೊಡಬೇಕು…..

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...