Homeಮುಖಪುಟಮುಗಿಯದ ಹಿಮಾಚಲ ಬಿಕ್ಕಟ್ಟು: ಕನಿಷ್ಠ 9 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಅನರ್ಹ ಶಾಸಕ

ಮುಗಿಯದ ಹಿಮಾಚಲ ಬಿಕ್ಕಟ್ಟು: ಕನಿಷ್ಠ 9 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಅನರ್ಹ ಶಾಸಕ

- Advertisement -
- Advertisement -

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ನಂತರ ವಿಧಾನಸಭೆಯಿಂದ ಅನರ್ಹಗೊಂಡ ಹಿಮಾಚಲ ಪ್ರದೇಶದ ಆರು ಕಾಂಗ್ರೆಸ್ ಶಾಸಕರಲ್ಲಿ ಒಬ್ಬರಾದ ರಾಜಿಂದರ್ ರಾಣಾ, ಕೆಲವು ಬಂಡಾಯ ಶಾಸಕರು ಹಿಂತಿರುಗಲು ಬಯಸುತ್ತಾರೆ ಎಂಬ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಹೇಳಿಕೆಯನ್ನು ಇಂದು ತಳ್ಳಿಹಾಕಿದ್ದಾರೆ. ಪಕ್ಷದ ಒಂಬತ್ತು ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ; ಸುಖು ಅವರು ತಮ್ಮ ಹೇಳಿಕೆಗಳಿಂದ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

‘ಯಾರೂ ಹಿಂತಿರುಗಲು ಬಯಸುವುದಿಲ್ಲ. ಮತ್ತೊಂದೆಡೆ, ಕನಿಷ್ಠ ಒಂಬತ್ತು ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ’ ಎಂದು ರಾಣಾ ಮಾಧ್ಯಮಗಳಿಗೆ ತಿಳಿಸಿದರು.

‘ಕಾಂಗ್ರೆಸ್‌ನ ಶೇಕಡಾ 80 ರಷ್ಟು ಒಟ್ಟಿಗೆ ಇದ್ದಾರೆ’ ಎಂದು ಮುಖ್ಯಮಂತ್ರಿ ಸುಖು ಅವರು ಹೇಳಿದ್ದಾರೆ. ಕೆಲವರು “ಕ್ಷುಲ್ಲಕ ವಿಷಯಗಳ” ಬಗ್ಗೆ ಅತೃಪ್ತರಾಗಿದ್ದಾರೆ. ಅನರ್ಹಗೊಂಡಿರುವ ಆರು ಶಾಸಕರ ಜತೆ ಮಾತುಕತೆ ನಡೆಸಿದ್ದು, ಸಮನ್ವಯ ಸಮಿತಿ ರಚನೆಯಾದ ಬಳಿಕ ಪರಿಸ್ಥಿತಿ ಸುಧಾರಿಸಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿನ ಏಕೈಕ ಸ್ಥಾನಕ್ಕೆ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನದ ಕುರಿತು ಮಾತನಾಡಿದ ರಾಣಾ, “ಹಿಮಾಚಲ ಪ್ರದೇಶ ಮತ್ತು ಅದರ ಜನರ ಗೌರವವನ್ನು ಎತ್ತಿಹಿಡಿಯಲು ನಾವು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ರಾಜ್ಯಸಭೆಯಲ್ಲಿ ಹಿಮಾಚಲ ಪ್ರದೇಶವನ್ನು ಪ್ರತಿನಿಧಿಸುವ ರಾಜ್ಯದ ಪಕ್ಷದ ಕಾರ್ಯಕರ್ತರಿಂದ ಕಾಂಗ್ರೆಸ್‌ಗೆ ಯಾವುದೇ ಅಭ್ಯರ್ಥಿ ಇರಲಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಸೋನಿಯಾ ಗಾಂಧಿ ಅವರು ಅಭಿಷೇಕ್ ಮನು ಸಿಂಘ್ವಿ ಅವರ ಬದಲಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಅಡ್ಡ ಮತದಾನದ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ, ‘ಅವರು ದೇಶಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ ಮತ್ತು ಕಾಂಗ್ರೆಸ್ ಅಧ್ಯಕ್ಷರಾಗಿದ್ದರು, ಅವರು ಇಲ್ಲಿಂದ ಹೋರಾಡಿದ್ದರೆ ಅದು ಸಾಧ್ಯವಾಗುತ್ತಿತ್ತು. ಬೇರೆ ವಿಷಯವೆ ಬೇರೆ  ಆಗುತ್ತಿತ್ತು’ ಎಂದರು.

ಹಿಮಾಚಲ ಪ್ರದೇಶದಲ್ಲಿ ಆಡಳಿತಾರೂಢ ಕಾಂಗ್ರೆಸ್‌ಗೆ ದಿಗ್ಭ್ರಮೆಯುಂಟುಮಾಡಿರುವ ಬಿಜೆಪಿಯು ಮಂಗಳವಾರ ರಾಜ್ಯದ ಏಕೈಕ ರಾಜ್ಯಸಭಾ ಸ್ಥಾನವನ್ನು ತನ್ನ ಅಭ್ಯರ್ಥಿ ಹರ್ಷ್ ಮಹಾಜನ್ ಅವರು ಕಾಂಗ್ರೆಸ್ ವರಿಷ್ಠ ಸಿಂಘ್ವಿ ಅವರನ್ನು ಸೋಲಿಸುವುದರೊಂದಿಗೆ ವಿಧಾನಸಭೆಯಲ್ಲಿ ಅವಿಶ್ವಾಸ ನಿರ್ಣಯಕ್ಕೆ ವೇದಿಕೆ ಸಿದ್ಧಪಡಿಸಿದರು.

ಅನರ್ಹಗೊಂಡ ಮತ್ತೊಬ್ಬ ಕಾಂಗ್ರೆಸ್ ಶಾಸಕ ಇಂದರ್ ದತ್ ಲಖನ್‌ಪಾಲ್ ಮಾತನಾಡಿ, ‘ಕೆಲವರು ನಮ್ಮನ್ನು ಬಂಡುಕೋರರು ಅಥವಾ ದೇಶದ್ರೋಹಿಗಳು ಎಂದು ಕರೆಯುತ್ತಾರೆ’ ಆದರೆ ನಾವು ಅದಲ್ಲ. ನಾವು ನಮ್ಮ ಆತ್ಮಸಾಕ್ಷಿಯನ್ನು ಕೇಳಿದ್ದೇವೆ. ಇದು ನಮ್ಮ ವೈಯಕ್ತಿಕ ನಿರ್ಧಾರ’ ಎಂದು ಹೇಳಿದರು.

‘ಕಾಂಗ್ರೆಸ್‌ನ ಶೇಕಡಾ 80 ರಷ್ಟು ಒಟ್ಟಿಗೆ ಇದ್ದಾರೆ ಮತ್ತು ಉಳಿದವರು ಸಣ್ಣ ವಿಷಯಗಳಿಗೆ ನಮ್ಮೊಂದಿಗೆ ಅಸಮಾಧಾನಗೊಂಡಿದ್ದಾರೆ. ವಿಷಯಗಳನ್ನು ತೆರವುಗೊಳಿಸುವುದು ನನ್ನ ಜವಾಬ್ದಾರಿಯಾಗಿದೆ, ಹಾಗಾಗಿ ನಾನು ಅವರೊಂದಿಗೆ (ಆರು ಅನರ್ಹ ಕಾಂಗ್ರೆಸ್ ಶಾಸಕರು) ಚರ್ಚೆ ನಡೆಸಿದ್ದೇನೆ’ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಹಿಮಾಚಲ ಪ್ರದೇಶ ಸರ್ಕಾರ ಪತನವಾಗಬಹುದು ಎಂಬ ಬಿಜೆಪಿಯ ಹೇಳಿಕೆಯ ಬಗ್ಗೆ ಮಾತನಾಡಿ, ‘ಕ್ರಾಸ್ ವೋಟಿಂಗ್ ನಂತರ ಬಿಜೆಪಿಯ ಉತ್ಸಾಹ ಹೆಚ್ಚಾಗಿದೆ. ಆದರೆ ಈ ರೀತಿಯ ಪರಿಸ್ಥಿತಿ ಮತ್ತೆ ಉದ್ಭವಿಸುವುದಿಲ್ಲ’ ಎಂದು ಹೇಳಿದರು.

ಮುಂಬರುವ ಲೋಕಸಭೆ ಚುನಾವಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸುಖು, ಸಮನ್ವಯ ಸಮಿತಿ ರಚನೆಯ ನಂತರ ಪರಿಸ್ಥಿತಿ ಉತ್ತಮಗೊಳ್ಳಲಿದೆ. ಲೋಕಸಭೆ ಚುನಾವಣೆಯನ್ನು ಪೂರ್ಣ ಶಕ್ತಿಯಿಂದ ಎದುರಿಸುತ್ತೇವೆ. ಕಳೆದ 14 ತಿಂಗಳುಗಳಲ್ಲಿ ರಾಜ್ಯ ಕಾಂಗ್ರೆಸ್ ಪ್ರಾಮಾಣಿಕ ಮತ್ತು ಪಾರದರ್ಶಕ ಆಡಳಿತ ನೀಡಿದೆ.. ಎಂದರು.

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಕಾಂಗ್ರೆಸ್ ಶಾಸಕರನ್ನು ಹಿಮಾಚಲ ಪ್ರದೇಶ ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಗುರುವಾರ ವಿಧಾನಸಭೆಯಲ್ಲಿ ಬಜೆಟ್‌ ಅಂಗೀಕರಿಸುವ ಮತದಾನದಿಂದ ದೂರವಿಟ್ಟಿದ್ದಕ್ಕಾಗಿ ಅನರ್ಹಗೊಳಿಸಿದ್ದಾರೆ.

ಸ್ಪೀಕರ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಅನರ್ಹ ಶಾಸಕರೊಬ್ಬರು ತಿಳಿಸಿದ್ದಾರೆ. ಆರು ಬಂಡಾಯ ಕಾಂಗ್ರೆಸ್ ಶಾಸಕರು ಸರ್ಕಾರದ ಪರವಾಗಿ ಮತ ಹಾಕಲು ಪಕ್ಷದ ವಿಪ್ ಅನ್ನು ಧಿಕ್ಕರಿಸಿ ವಿಧಾನಸಭೆಯಲ್ಲಿ ಕಟ್ ಮೋಷನ್ ಮತ್ತು ಹಣಕಾಸು ಮಸೂದೆ (ಬಜೆಟ್) ಮೇಲೆ ಮತದಾನದಿಂದ ದೂರ ಉಳಿದಿದ್ದರು. ಈ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಅವರನ್ನು ಅನರ್ಹಗೊಳಿಸುವಂತೆ ಕೋರಿತ್ತು.

ಅನರ್ಹಗೊಂಡ ಶಾಸಕರು ಸುಧೀರ್ ಶರ್ಮಾ, ರವಿ ಠಾಕೂರ್, ರಾಜಿಂದರ್ ರಾಣಾ, ಇಂದರ್ ದತ್ ಲಖನ್‌ಪಾಲ್, ಚೆತನ್ಯ ಶರ್ಮಾ ಮತ್ತು ದೇವಿಂದರ್ ಕುಮಾರ್ ಭುಟ್ಟೊ.

ಇದನ್ನೂ ಓದಿ; ಹಿಮಾಚಲ ಸಿಎಂ ವಿರುದ್ಧ ಬಂಡಾಯ ಶಾಸಕ ವಾಗ್ದಾಳಿ; ದೆಹಲಿಗೆ ತೆರಳುವ ಮುನ್ನ ವಿಕ್ರಮಾದಿತ್ಯ ಸಿಂಗ್ ಭೇಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...