Homeಮುಖಪುಟಮುಗಿಯದ ಹಿಮಾಚಲ ಬಿಕ್ಕಟ್ಟು: ಕನಿಷ್ಠ 9 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಅನರ್ಹ ಶಾಸಕ

ಮುಗಿಯದ ಹಿಮಾಚಲ ಬಿಕ್ಕಟ್ಟು: ಕನಿಷ್ಠ 9 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಅನರ್ಹ ಶಾಸಕ

- Advertisement -
- Advertisement -

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ನಂತರ ವಿಧಾನಸಭೆಯಿಂದ ಅನರ್ಹಗೊಂಡ ಹಿಮಾಚಲ ಪ್ರದೇಶದ ಆರು ಕಾಂಗ್ರೆಸ್ ಶಾಸಕರಲ್ಲಿ ಒಬ್ಬರಾದ ರಾಜಿಂದರ್ ರಾಣಾ, ಕೆಲವು ಬಂಡಾಯ ಶಾಸಕರು ಹಿಂತಿರುಗಲು ಬಯಸುತ್ತಾರೆ ಎಂಬ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಹೇಳಿಕೆಯನ್ನು ಇಂದು ತಳ್ಳಿಹಾಕಿದ್ದಾರೆ. ಪಕ್ಷದ ಒಂಬತ್ತು ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ; ಸುಖು ಅವರು ತಮ್ಮ ಹೇಳಿಕೆಗಳಿಂದ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

‘ಯಾರೂ ಹಿಂತಿರುಗಲು ಬಯಸುವುದಿಲ್ಲ. ಮತ್ತೊಂದೆಡೆ, ಕನಿಷ್ಠ ಒಂಬತ್ತು ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ’ ಎಂದು ರಾಣಾ ಮಾಧ್ಯಮಗಳಿಗೆ ತಿಳಿಸಿದರು.

‘ಕಾಂಗ್ರೆಸ್‌ನ ಶೇಕಡಾ 80 ರಷ್ಟು ಒಟ್ಟಿಗೆ ಇದ್ದಾರೆ’ ಎಂದು ಮುಖ್ಯಮಂತ್ರಿ ಸುಖು ಅವರು ಹೇಳಿದ್ದಾರೆ. ಕೆಲವರು “ಕ್ಷುಲ್ಲಕ ವಿಷಯಗಳ” ಬಗ್ಗೆ ಅತೃಪ್ತರಾಗಿದ್ದಾರೆ. ಅನರ್ಹಗೊಂಡಿರುವ ಆರು ಶಾಸಕರ ಜತೆ ಮಾತುಕತೆ ನಡೆಸಿದ್ದು, ಸಮನ್ವಯ ಸಮಿತಿ ರಚನೆಯಾದ ಬಳಿಕ ಪರಿಸ್ಥಿತಿ ಸುಧಾರಿಸಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿನ ಏಕೈಕ ಸ್ಥಾನಕ್ಕೆ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನದ ಕುರಿತು ಮಾತನಾಡಿದ ರಾಣಾ, “ಹಿಮಾಚಲ ಪ್ರದೇಶ ಮತ್ತು ಅದರ ಜನರ ಗೌರವವನ್ನು ಎತ್ತಿಹಿಡಿಯಲು ನಾವು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ರಾಜ್ಯಸಭೆಯಲ್ಲಿ ಹಿಮಾಚಲ ಪ್ರದೇಶವನ್ನು ಪ್ರತಿನಿಧಿಸುವ ರಾಜ್ಯದ ಪಕ್ಷದ ಕಾರ್ಯಕರ್ತರಿಂದ ಕಾಂಗ್ರೆಸ್‌ಗೆ ಯಾವುದೇ ಅಭ್ಯರ್ಥಿ ಇರಲಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಸೋನಿಯಾ ಗಾಂಧಿ ಅವರು ಅಭಿಷೇಕ್ ಮನು ಸಿಂಘ್ವಿ ಅವರ ಬದಲಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಅಡ್ಡ ಮತದಾನದ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ, ‘ಅವರು ದೇಶಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ ಮತ್ತು ಕಾಂಗ್ರೆಸ್ ಅಧ್ಯಕ್ಷರಾಗಿದ್ದರು, ಅವರು ಇಲ್ಲಿಂದ ಹೋರಾಡಿದ್ದರೆ ಅದು ಸಾಧ್ಯವಾಗುತ್ತಿತ್ತು. ಬೇರೆ ವಿಷಯವೆ ಬೇರೆ  ಆಗುತ್ತಿತ್ತು’ ಎಂದರು.

ಹಿಮಾಚಲ ಪ್ರದೇಶದಲ್ಲಿ ಆಡಳಿತಾರೂಢ ಕಾಂಗ್ರೆಸ್‌ಗೆ ದಿಗ್ಭ್ರಮೆಯುಂಟುಮಾಡಿರುವ ಬಿಜೆಪಿಯು ಮಂಗಳವಾರ ರಾಜ್ಯದ ಏಕೈಕ ರಾಜ್ಯಸಭಾ ಸ್ಥಾನವನ್ನು ತನ್ನ ಅಭ್ಯರ್ಥಿ ಹರ್ಷ್ ಮಹಾಜನ್ ಅವರು ಕಾಂಗ್ರೆಸ್ ವರಿಷ್ಠ ಸಿಂಘ್ವಿ ಅವರನ್ನು ಸೋಲಿಸುವುದರೊಂದಿಗೆ ವಿಧಾನಸಭೆಯಲ್ಲಿ ಅವಿಶ್ವಾಸ ನಿರ್ಣಯಕ್ಕೆ ವೇದಿಕೆ ಸಿದ್ಧಪಡಿಸಿದರು.

ಅನರ್ಹಗೊಂಡ ಮತ್ತೊಬ್ಬ ಕಾಂಗ್ರೆಸ್ ಶಾಸಕ ಇಂದರ್ ದತ್ ಲಖನ್‌ಪಾಲ್ ಮಾತನಾಡಿ, ‘ಕೆಲವರು ನಮ್ಮನ್ನು ಬಂಡುಕೋರರು ಅಥವಾ ದೇಶದ್ರೋಹಿಗಳು ಎಂದು ಕರೆಯುತ್ತಾರೆ’ ಆದರೆ ನಾವು ಅದಲ್ಲ. ನಾವು ನಮ್ಮ ಆತ್ಮಸಾಕ್ಷಿಯನ್ನು ಕೇಳಿದ್ದೇವೆ. ಇದು ನಮ್ಮ ವೈಯಕ್ತಿಕ ನಿರ್ಧಾರ’ ಎಂದು ಹೇಳಿದರು.

‘ಕಾಂಗ್ರೆಸ್‌ನ ಶೇಕಡಾ 80 ರಷ್ಟು ಒಟ್ಟಿಗೆ ಇದ್ದಾರೆ ಮತ್ತು ಉಳಿದವರು ಸಣ್ಣ ವಿಷಯಗಳಿಗೆ ನಮ್ಮೊಂದಿಗೆ ಅಸಮಾಧಾನಗೊಂಡಿದ್ದಾರೆ. ವಿಷಯಗಳನ್ನು ತೆರವುಗೊಳಿಸುವುದು ನನ್ನ ಜವಾಬ್ದಾರಿಯಾಗಿದೆ, ಹಾಗಾಗಿ ನಾನು ಅವರೊಂದಿಗೆ (ಆರು ಅನರ್ಹ ಕಾಂಗ್ರೆಸ್ ಶಾಸಕರು) ಚರ್ಚೆ ನಡೆಸಿದ್ದೇನೆ’ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಹಿಮಾಚಲ ಪ್ರದೇಶ ಸರ್ಕಾರ ಪತನವಾಗಬಹುದು ಎಂಬ ಬಿಜೆಪಿಯ ಹೇಳಿಕೆಯ ಬಗ್ಗೆ ಮಾತನಾಡಿ, ‘ಕ್ರಾಸ್ ವೋಟಿಂಗ್ ನಂತರ ಬಿಜೆಪಿಯ ಉತ್ಸಾಹ ಹೆಚ್ಚಾಗಿದೆ. ಆದರೆ ಈ ರೀತಿಯ ಪರಿಸ್ಥಿತಿ ಮತ್ತೆ ಉದ್ಭವಿಸುವುದಿಲ್ಲ’ ಎಂದು ಹೇಳಿದರು.

ಮುಂಬರುವ ಲೋಕಸಭೆ ಚುನಾವಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸುಖು, ಸಮನ್ವಯ ಸಮಿತಿ ರಚನೆಯ ನಂತರ ಪರಿಸ್ಥಿತಿ ಉತ್ತಮಗೊಳ್ಳಲಿದೆ. ಲೋಕಸಭೆ ಚುನಾವಣೆಯನ್ನು ಪೂರ್ಣ ಶಕ್ತಿಯಿಂದ ಎದುರಿಸುತ್ತೇವೆ. ಕಳೆದ 14 ತಿಂಗಳುಗಳಲ್ಲಿ ರಾಜ್ಯ ಕಾಂಗ್ರೆಸ್ ಪ್ರಾಮಾಣಿಕ ಮತ್ತು ಪಾರದರ್ಶಕ ಆಡಳಿತ ನೀಡಿದೆ.. ಎಂದರು.

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಕಾಂಗ್ರೆಸ್ ಶಾಸಕರನ್ನು ಹಿಮಾಚಲ ಪ್ರದೇಶ ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಗುರುವಾರ ವಿಧಾನಸಭೆಯಲ್ಲಿ ಬಜೆಟ್‌ ಅಂಗೀಕರಿಸುವ ಮತದಾನದಿಂದ ದೂರವಿಟ್ಟಿದ್ದಕ್ಕಾಗಿ ಅನರ್ಹಗೊಳಿಸಿದ್ದಾರೆ.

ಸ್ಪೀಕರ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಅನರ್ಹ ಶಾಸಕರೊಬ್ಬರು ತಿಳಿಸಿದ್ದಾರೆ. ಆರು ಬಂಡಾಯ ಕಾಂಗ್ರೆಸ್ ಶಾಸಕರು ಸರ್ಕಾರದ ಪರವಾಗಿ ಮತ ಹಾಕಲು ಪಕ್ಷದ ವಿಪ್ ಅನ್ನು ಧಿಕ್ಕರಿಸಿ ವಿಧಾನಸಭೆಯಲ್ಲಿ ಕಟ್ ಮೋಷನ್ ಮತ್ತು ಹಣಕಾಸು ಮಸೂದೆ (ಬಜೆಟ್) ಮೇಲೆ ಮತದಾನದಿಂದ ದೂರ ಉಳಿದಿದ್ದರು. ಈ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಅವರನ್ನು ಅನರ್ಹಗೊಳಿಸುವಂತೆ ಕೋರಿತ್ತು.

ಅನರ್ಹಗೊಂಡ ಶಾಸಕರು ಸುಧೀರ್ ಶರ್ಮಾ, ರವಿ ಠಾಕೂರ್, ರಾಜಿಂದರ್ ರಾಣಾ, ಇಂದರ್ ದತ್ ಲಖನ್‌ಪಾಲ್, ಚೆತನ್ಯ ಶರ್ಮಾ ಮತ್ತು ದೇವಿಂದರ್ ಕುಮಾರ್ ಭುಟ್ಟೊ.

ಇದನ್ನೂ ಓದಿ; ಹಿಮಾಚಲ ಸಿಎಂ ವಿರುದ್ಧ ಬಂಡಾಯ ಶಾಸಕ ವಾಗ್ದಾಳಿ; ದೆಹಲಿಗೆ ತೆರಳುವ ಮುನ್ನ ವಿಕ್ರಮಾದಿತ್ಯ ಸಿಂಗ್ ಭೇಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...