Homeಮುಖಪುಟನೈತಿಕ ಸಮಿತಿ ಸಭೆಯಲ್ಲಿ ಅನೈತಿಕ, ವೈಯಕ್ತಿಕ ಪ್ರಶ್ನೆ ಕೇಳಿದರು: ಮಹುವಾ ಮೊಯಿತ್ರಾ

ನೈತಿಕ ಸಮಿತಿ ಸಭೆಯಲ್ಲಿ ಅನೈತಿಕ, ವೈಯಕ್ತಿಕ ಪ್ರಶ್ನೆ ಕೇಳಿದರು: ಮಹುವಾ ಮೊಯಿತ್ರಾ

- Advertisement -
- Advertisement -

ಸಮಿತಿಯ ಮುಖ್ಯಸ್ಥರು ತಮ್ಮ ವೈಯಕ್ತಿಕ ಮತ್ತು ಅನೈತಿಕ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಆರೋಪಿಸಿ ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಅವರು ಲೋಕಸಭೆಯ ನೈತಿಕ ಸಮಿತಿ ಸಭೆಯಿಂದ ಗುರುವಾರ ಹೊರಬಂದಿದ್ದಾರೆ.

ಲೋಕಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಮೊಯಿತ್ರಾ ಲಂಚ ಪಡೆದಿದ್ದಾರೆ ಎಂಬ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರ ಆರೋಪವನ್ನು ಸದನ ಸಮಿತಿಯು ತನಿಖೆ ನಡೆಸುತ್ತಿದೆ.

ಆ ಎಲ್ಲ ಆರೋಪಗಳನ್ನು ತಿರಸ್ಕರಿಸಿದ ಮಹುವಾ – ಆಪಾದಿತ ‘ಲಂಚ ನೀಡುವವರು’ ಹಿರಾನಂದಾನಿ ಮತ್ತು ದೂರುದಾರರಾದ ವಕೀಲ ಜೈ ದೇಹದ್ರಾಯಿ ಅವರನ್ನು ಅಡ್ಡ ಪರೀಕ್ಷೆ ಮಾಡಲು ಅನುಮತಿ ನೀಡಬೇಕು ಎಂದು ನೈತಿಕ ಸಮಿತಿಗೆ ಪತ್ರ ಬರೆದಿದ್ದರು.

ಮೊಯಿತ್ರಾ ಅವರಿಗೆ ಸಮಿತಿಯ ಅಧ್ಯಕ್ಷರು ಕೇಳಿದ ಪ್ರಶ್ನೆಗಳು “ಅಗೌರವ ಮತ್ತು ಅನೈತಿಕ” ಎಂದು ಕಾಂಗ್ರೆಸ್ ಸಂಸದ ಮತ್ತು ಸಮಿತಿ ಸದಸ್ಯ ಎನ್ ಉತ್ತಮ್ ಕುಮಾರ್ ರೆಡ್ಡಿ ಆರೋಪಿಸಿದರು.

ಅಕ್ಟೋಬರ್ 19 ರಂದು ಎಥಿಕ್ಸ್ ಕಮಿಟಿಗೆ ಅಫಿಡವಿಟ್‌ನಲ್ಲಿ, ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಅನ್ನು ಒದಗಿಸಿದ್ದಾರೆ ಎಂದು ಹಿರಾನಂದಾನಿ ಹೇಳಿಕೊಂಡಿದ್ದರು.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅಕ್ಟೋಬರ್ 15 ರಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದು ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರು “ಉದ್ಯಮಿ ಗುಂಪಿನ ಹಿತಾಸಕ್ತಿಗಳನ್ನು ರಕ್ಷಿಸಲು” ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಎತ್ತುವುದಕ್ಕಾಗಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದರು.

ಈ ಆರೋಪಗಳ ಕುರಿತು ತನಿಖೆ ನಡೆಸಲು ಸಮಿತಿಯನ್ನು ರಚಿಸುವಂತೆ ಸ್ಪೀಕರ್ ಅವರನ್ನು ಒತ್ತಾಯಿಸಿದ ನಿಶಿಕಾಂತ್ ದುಬೆ ಅವರು ಸಮಿತಿಯು ವರದಿ ಸಲ್ಲಿಸುವವರೆಗೆ ಅವರನ್ನು ಸದನದಿಂದ ಅಮಾನತುಗೊಳಿಸುವಂತೆ ಕೋರಿದರು.

ಈ ಮಧ್ಯೆ, ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗಿನ್ ಮತ್ತು ಪಾಸ್‌ವರ್ಡ್ ವಿವರಗಳನ್ನು ತಮ್ಮ ಸ್ನೇಹಿತ ಮತ್ತು ಉದ್ಯಮಿ ದರ್ಶನ್ ಹಿರಾನಂದನಿಗೆ ನೀಡಿದ್ದರು ಆದರೆ ಅವರಿಂದ ಯಾವುದೇ ಹಣವನ್ನು ತೆಗೆದುಕೊಳ್ಳಲಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ವಕೀಲ ಜೈ ಅನಂತ್ ದೇಹದ್ರಾಯ್ ಅವರು ಕೇಂದ್ರ ತನಿಖಾ ದಳಕ್ಕೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಅಫಿಡವಿಟ್‌ ಸೋರಿಕೆ ವಿಚಾರ: ಕೇಂದ್ರ ಸರ್ಕಾರಕ್ಕೆ ಮಹುವಾ ಮೊಯಿತ್ರಾ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...