Homeಕರ್ನಾಟಕಅನೈತಿಕ ಪೊಲೀಸ್‌ಗಿರಿ: ಮುಸ್ಲಿಂ ಎಂದು ಭಾವಿಸಿ ಪೊಲೀಸ್ ಸಿಬ್ಬಂದಿ-ಪತ್ನಿ ಮೇಲೆ ಸಂಘಪರಿವಾರದ ಕಾರ್ಯಕರ್ತರಿಂದ ಹಲ್ಲೆ

ಅನೈತಿಕ ಪೊಲೀಸ್‌ಗಿರಿ: ಮುಸ್ಲಿಂ ಎಂದು ಭಾವಿಸಿ ಪೊಲೀಸ್ ಸಿಬ್ಬಂದಿ-ಪತ್ನಿ ಮೇಲೆ ಸಂಘಪರಿವಾರದ ಕಾರ್ಯಕರ್ತರಿಂದ ಹಲ್ಲೆ

- Advertisement -
- Advertisement -

ಮುಸ್ಲಿಂ ಎಂದು ಭಾವಿಸಿ ಪೊಲೀಸ್ ಸಿಬ್ಬಂದಿ ಹಾಗೂ ಅವರ ಪತ್ನಿಯ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ಬಂಟ್ವಾಳದ ಬಿ.ಸಿ.ರೋಡ್ ನಲ್ಲಿ ನಡೆದಿದೆ. ಅನೈತಿಕ ಪೊಲೀಸ್ ಗಿರಿ ನಡೆಸಿದ ಸಂಘಪರಿವಾರದ ಇಬ್ಬರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್ ಆಚಾರ್ಯ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.

ಬಂಟ್ವಾಳ ಸಂಚಾರ ಠಾಣೆಯ ಪೊಲೀಸ್ ಸಿಬ್ಬಂದಿ, ಪ್ರಸಕ್ತ ಒಒಡಿ ನೆಲೆಯಲ್ಲಿ ಎನ್‌ಐವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕುಮಾರ್ ಹನಮಂತಪ್ಪ ಅವರ ಕುಟುಂಬದ ಮೇಲೆ ಈ ದಾಳಿ ನಡೆದಿದೆ. ಈ ಬಗ್ಗೆ ಕುಮಾರ್ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಮಾರ್ ಅವರ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 504, 035(ಡಿ), 354(ಎ) ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಘಟನೆಯ ವಿವರ:

ಜು.27ರಂದು ರಾತ್ರಿ ಪತ್ನಿ ಹಾಗೂ ನಾದಿನಿ ಜೊತೆ ಬಿ.ಸಿ.ರೋಡಿನ ಹೊಟೇಲ್ ಒಂದರಲ್ಲಿ ಊಟ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಬಿ.ಸಿ.ರೋಡ್-ಕೈಕುಂಜೆ ರಸ್ತೆಯಲ್ಲಿ ಕುಟುಂಬದೊಟ್ಟಿಗೆ ಕುಮಾರ್ ನಡೆದುಬರುತ್ತಿರುವಾಗ, ಬಾರ್ ಒಂದರ ಮುಂಭಾಗದಲ್ಲಿ ನಿಂತುಕೊಂಡಿದ್ದ ಆರೋಪಿಗಳು ಬೈಕ್‌ನಲ್ಲಿ ಹಿಂಬಾಲಿಸಿದ್ದಾರೆ. ಆಬಳಿಕ ಕುಮಾರ್ ಪತ್ನಿ ಮತ್ತು ನಾದಿನಿಯನ್ನು ವಸತಿಗೃಹದ ಬಳಿ ಬಿಟ್ಟು ಕರ್ತವ್ಯಕ್ಕೆ ಹಿಂತಿರುಗುತ್ತಿದ್ದಂತೆ ಬೈಕ್‌ನಲ್ಲಿ ಬಂದ ಆರೋಪಿಗಳು ಅಡ್ಡಗಟ್ಟಿದ್ದಾರೆ. ಆಗ ಕುಮಾರ್ ಅವರು ತಾನು ಪೊಲೀಸ್ ಎಂದು ಹೇಳಿದರೂ ಕೇಳದ ಆರೋಪಿಗಳು, ”ನೀನು ಪೊಲೀಸ್ ಅಲ್ಲ, ನೀನು ಬ್ಯಾರಿ. ಈಕೆಯನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತೀಯಾ?” ಎಂದು ಅಸಭ್ಯವಾಗಿ ವರ್ತಿಸಿದ್ದಾರೆ. ಇಲ್ಲಿನ ವಿಚಾರ ನಿನಗೆ ಗೊತ್ತಿಲ್ಲ ಎಂದು ಬೆದರಿಕೆ ಹಾಕಿ, ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪತ್ನಿ ಅಲ್ಲಿಗೆ ಓಡಿಬಂದಾಗ ಆಕೆಯ ಮೇಲೂ ಹಲ್ಲೆ ನಡೆಸಲಾಗಿದೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಗಲಾಟೆಯು ಜೋರಾಗುತ್ತಿದ್ದಂತೆ ಪೊಲೀಸ್  ವಸತಿ ಗೃಹದಲ್ಲಿದ್ದ ಸಹೋದ್ಯೋಗಿಗಳು ಹೊರಬಂದು ಆರೋಪಿಗಳನ್ನು ಸೆರೆಹಿಡಿದಿದ್ದಾರೆ.

ಈ ವೇಳೆ ಕುಮಾರ್ ಅವರ ಪತ್ನಿಯ ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪಿಗಳು ಅವರ ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ದೂರು ದಾಖಲಾಗಿದೆ.

ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನಿಸಿದಲ್ಲದೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ಹರಿದ್ವಾರ: ಮುಸ್ಲಿಂ ವ್ಯಕ್ತಿಯೆಂದು ಭಾವಿಸಿ RSS-ಬಿಜೆಪಿ ಸದಸ್ಯನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...