Homeಮುಖಪುಟನೆನಪಿನಿಂದ ಮಾಸದ ಡಿಸೆಂಬರ್-6

ನೆನಪಿನಿಂದ ಮಾಸದ ಡಿಸೆಂಬರ್-6

- Advertisement -
- Advertisement -

ಡಿಸೆಂಬರ್ 6 ಭಾರತದ ಇತಿಹಾಸದಲ್ಲಿ ಮಹತ್ವದ ದಿನವಾಗಿದೆ. ಬಹು ವೈವಿದ್ಯತೆಯ ಈ ದೇಶಕ್ಕೆ ಜೀವಪರ, ಸಾಮಾಜಿಕ ನ್ಯಾಯ ಮತ್ತು ಸಮ ಸಮಾಜದ ಆಶಯಗಳನ್ನು ಒಳಗೊಂಡ ಉದಾತ್ತ ಸಂವಿಧಾನ ಕೊಟ್ಟ ಮಹಾನ್ ಚೇತನ ಡಾ. ಬಿ.ಆರ್ ಅಂಬೇಡ್ಕರ್ ಅವರ ‘ಮಹಾ ಪರಿನಿರ್ವಾಣ’ ಮತ್ತು ಬಾಬರಿ ಮಸೀದಿಯ ಧ್ವಂಸ ಘಟನೆ ನಡೆದ ದಿನವಾಗಿದೆ ಇದು.

ಡಿಸೆಂಬರ್‌ 6,1956 ರಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರು ಮರಣ ಹೊಂದಿದರು. ಇದೇ ಡಿಸೆಂಬರ್ 6, 1992ರಂದು ಬಾಬರಿ ಧ್ವಂಸ ನಡೆಯಿತು. ಈ ಎರಡು ಘಟನೆಗಳು ಮತ್ತು ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗಳು ಪರಸ್ಪರ ಒಂದಕ್ಕೊಂದು ಸಂಬಂಧ ಹೊಂದಿವೆ.

ಅಂಬೇಡ್ಕರ್ ರಚಿಸಿದ ಸಂವಿಧಾನ ದೇಶವನ್ನು ಜಾತ್ಯಾತೀತ, ಪ್ರಜಾಪ್ರಭುತ್ವದ ನಾಡಾಗಿ ರೂಪಿಸಿದೆ. ದೇಶದ ಪ್ರತಿಯೊಬ್ಬರನ್ನೂ ಸಮಾನತೆಯಿಂದ ಕಾಣಬೇಕು ಎಂದು ಹೇಳಿದೆ. ಸಂವಿಧಾನ ಧಾರ್ಮಿಕ ಸ್ವಾತಂತ್ರ್ಯವನ್ನು ಮೂಲಭೂತ ಹಕ್ಕಾಗಿ ರಕ್ಷಿಸಿದೆ.

ಆದರೆ, 1992ರ ಬಾಬರಿ ಮಸೀದಿ ಧ್ವಂಸ ಮತ್ತು ಬಳಿಕ ನಡೆದ ಬೆಳವಣಿಗೆಗಳು ಸಂವಿಧಾನ ಆಶಯಗಳನ್ನು ಸಮಾಧಿ ಮಾಡಿತು. ಬಾಬಾ ಸಾಹೇಬರ ಪರಿನಿರ್ವಾಣ ದಿನವೇ ನಡೆದ ಬಾಬರಿ ಮಸೀದಿ ಧ್ವಂಸದಿಂದ ಸಂವಿಧಾನದ ಆಶಯಗಳೂ ನಿಬ್ಬಾನವಾಯಿತು.

ಸಂವಿಧಾನದ ಮೂಲ ಪ್ರತಿಯಲ್ಲಿ ಈಗಲೂ ಧಾರ್ಮಿಕ ಸ್ವಾತಂತ್ರ್ಯ, ಸಮಾನತೆ, ಧಾರ್ಮಿಕ ಆಚರಣೆ ಇತ್ಯಾದಿ ಹಕ್ಕುಗಳಿವೆ. ಆದರೆ, ಅವುಗಳು ಆಚರಣೆಯಲ್ಲಿ ಉಳಿದಿಲ್ಲ. ಪ್ರಸ್ತುತ ನಡೆಯುತ್ತಿರುವ ಕೆಲವೊಂದು ಬೆಳವಣಿಗೆಗಳು ಅದಕ್ಕೆ ಪುಷ್ಠಿ ನೀಡುತ್ತಿವೆ.

ಬಾಬರಿ ಮಸೀದಿ ಧ್ವಂಸ ಸಂಬಂಧಿತ ಸಮಸ್ಯೆಗಳು ಸೃಷ್ಟಿಯಾದ ಬಳಿಕ ಪಿ.ವಿ ನರಸಿಂಹರಾವ್ ನೇತೃತ್ವದ ಕಾಂಗ್ರೆಸ್‌ ಸರ್ಕಾರ 1991ರಲ್ಲಿ ಆರಾಧನಾ ಸ್ಥಳಗಳ ಕಾಯ್ದೆ ಜಾರಿಗೆ ತಂದಿತು. ಅದರ ಪ್ರಕಾರ, ದೇಶಕ್ಕೆ ಸ್ವಾತಂತ್ರ್ಯ ಬರುವಾಗ ಧಾರ್ಮಿಕ ಸ್ಥಳಗಳ ಸ್ವರೂಪ ಹೇಗಿತ್ತೋ ಹಾಗೆಯೇ ಉಳಿಸಿಕೊಳ್ಳಬೇಕು, ಬದಲಾವಣೆ ಮಾಡಬಾರದು.

ಸಂವಿಧಾನ ಆಶಯಗಳನ್ನು ರಕ್ಷಿಸಲು ಜಾರಿಗೆ ಬಂದ ಈ ಕಾಯ್ದೆಯನ್ನು ನ್ಯಾಯಾಂಗವೇ ಮೂಲೆಗೆ ತಳ್ಳುವ ಮೂಲಕ ಅಧಿಕೃತವಾಗಿ ಸಂವಿಧಾನ ವಿರೋಧಿ ಅಭಿಯಾನಕ್ಕೆ ಅಡಿಗಲ್ಲು ಹಾಕಿ ಕೊಡುತ್ತಿದೆ.

ಬಾಬರಿ ಮಸೀದಿ ತೀರ್ಪು ಬಂದ ಬಳಿಕ, ಆ ರೀತಿಯ ಬೆಳವಣಿಗೆ ಮುಂದೆ ನಡೆಯಬಾರದು ಎಂಬ ಒತ್ತಾಯ ಕೇಳಿ ಬಂದಿತ್ತು. ಬಾಬರಿ ಮಸೀದಿ-ರಾಮ ಜನ್ಮಭೂಮಿ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಪೀಠ ಕೂಡ 1991ರ ಆರಾಧನಾ ಕಾಯ್ದೆ ಸಂವಿಧಾನ ಆಶಯಗಳಿಗೆ ಪೂರಕವಾಗಿದೆ ಎಂದಿತ್ತು.

ಬಾಬರಿ ಮಸೀದಿ ತೀರ್ಪಿತ್ತಿದ ನ್ಯಾಯ ಪೀಠದಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಕೂಡ ಇದ್ದರು. ಇದೇ ಚಂದ್ರಚೂಡ್ ಅವರು ಜ್ಞಾನವ್ಯಾಪಿ ಪ್ರಕರಣದಲ್ಲಿ ಆರಾಧನಾ ಸ್ಥಳಗಳ ಕಾಯ್ದೆಗೆ ಹೊಸ ವ್ಯಾಖ್ಯಾನವನ್ನು ಕೊಟ್ಟರು. ಆ ವ್ಯಾಖ್ಯಾನ ಈಗ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರುತ್ತಿದೆ.

“1991ರ ಆರಾಧನಾ ಸ್ಥಳಗಳ ಕಾಯ್ದೆಯು ಧಾರ್ಮಿಕ ಸ್ಥಳದ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದ್ದರೂ, ಕೇವಲ ಸ್ಥಳವೊಂದರ ಧಾರ್ಮಿಕ ಲಕ್ಷಣವನ್ನು ಖಚಿತಪಡಿಸಿಕೊಳ್ಳುವುದು ಕಾಯ್ದೆಯನ್ನು ಉಲ್ಲಂಘಿಸುವುದಿಲ್ಲ” ಎಂದು ಚಂದ್ರಚೂಡ್ ಅವರು 2022ರಲ್ಲಿ ಜ್ಞಾನವ್ಯಾಪಿ ಪ್ರಕರಣದಲ್ಲಿ ಮೌಖಿವಾಗಿ ಹೇಳಿದ್ದರು.

“ನ್ಯಾಯಮೂರ್ತಿ ಚಂದ್ರಚೂಡ್ ಅವರು ತಾವೇ ಭಾಗವಾಗಿದ್ದ ಅಯೋಧ್ಯೆ ತೀರ್ಪನ್ನು ಈ ಮೂಲಕ ಉಲ್ಲಂಘಿಸಿದ್ದಾರೆ. ನ್ಯಾಯಾಂಗ ಕಾನೂನಿಗೆ ಬದ್ದವಾಗಿರಬೇಕು. ಆದರೆ, ಜ್ಞಾನವ್ಯಾಪಿ ಪ್ರಕರಣದಲ್ಲಿ ಅವರ ತೀರ್ಪು ಆಘಾತಕಾರಿ. ಚಂದ್ರಚೂಡ್ ಅವರು ಜಾತ್ಯಾತೀತತೆ ಮತ್ತು ಕಾನೂನಿನ ನಿಯಮಗಳ ಕುರಿತು ವಿಶ್ವದಾದ್ಯಂತ ಉಪನ್ಯಾಸಗಳನ್ನು ನೀಡುತ್ತಾರೆ. ಆದರೆ, ಅವರ ಜ್ಞಾನವ್ಯಾಪಿ ಕುರಿತ ತೀರ್ಪು ಇದೆಲ್ಲದಕ್ಕೂ ನೇರ ವಿರುದ್ದವಾಗಿದೆ” ಎಂದು ಇತ್ತೀಚೆಗೆ ಹಿರಿಯ ವಕೀಲ ದುಷ್ಯಂತ್ ದವೆ ಹೇಳಿದ್ದರು.

“ಚಂದ್ರಚೂಡ್ ಅವರು ಆರಾಧನಾ ಸ್ಥಳಗಳ ಕಾಯ್ದೆಗೆ ಹೊಸ ವ್ಯಾಖ್ಯಾನ ನೀಡಿ ಮಸೀದಿಗಳ ಸಮೀಕ್ಷೆಗೆ ಅನುಮತಿ ನೀಡುವ ಮೂಲಕ ಅವರು ಸಂವಿಧಾನ ಮತ್ತು ದೇಶಕ್ಕೆ ದೊಡ್ಡ ಅಪಚಾರ ಮಾಡಿದ್ದಾರೆ” ಎಂದು ದುಷ್ಯಂತ್ ದವೆ ದಿ ವೈರ್ ಸಂದರ್ಶನದಲ್ಲಿ ಕಣ್ಣೀರು ಹಾಕಿದ್ದಾರೆ.

ಚಂದ್ರಚೂಡ್ ಅವರು ಆರಾಧನಾ ಸ್ಥಳಗಳ ಕಾಯ್ದೆಗೆ ನೀಡಿರುವ ವ್ಯಾಖ್ಯಾನವೇ ಈಗ ದೇಶದಲ್ಲಿ ಮಸೀದಿ ಅಡಿ ಮಂದಿರ ಹುಡುಕುವ ಸಮಸ್ಯೆಗಳಿಗೆ ಮೂಲಕ ಕಾರಣ ಎಂದು ಕಾಂಗ್ರೆಸ್ ಕೂಡ ಆರೋಪಿಸಿದೆ.

ಬಾಬರಿ ಮಸೀದಿ ತೀರ್ಪಿನ ಬಳಿಕ, ಇನ್ನೊಂದು ಆ ರೀತಿಯ ಸಮಸ್ಯೆ ಉಂಟಾಗುವುದಿಲ್ಲ ಎಂದು ದೇಶದ ಸಂವಿಧಾನ ಪರ ಮನಸ್ಸುಗಳು ಅಂದುಕೊಂಡಿತ್ತು. ಆರಾಧನಾ ಸ್ಥಳಗಳ ಕಾಯ್ದೆ ಅದಕ್ಕೆ ಒಂದು ಗೋಡೆಯಾಗಿ ಕಂಡಿತ್ತು.

ಆದರೆ, ವಾರಣಾಸಿಯ ಜ್ಞಾನವ್ಯಾಪಿ, ಮಥುರಾದ ಶಾಹಿ ಈದ್ಗಾ, ಸಂಭಾಲ್ ಶಾಹಿ ಜಾಮಾ ಮಸೀದಿ, ಅಜ್ಮೀರ್ ದರ್ಗಾ ಪ್ರಕರಣಗಳು ಮತ್ತೆ ಆತಂಕವನ್ನು ಸೃಷ್ಟಿಸಿದೆ. ಈ ಪ್ರಕರಣಗಳಲ್ಲಿ ಆರಂಭದಲ್ಲೇ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ಆರಾಧನಾ ಸ್ಥಳಗಳ ಕಾಯ್ದೆಯನ್ನು ಎತ್ತಿ ಹಿಡಿಯಬೇಕಿದ್ದ ನ್ಯಾಯಾಂಗ, ಅರ್ಜಿಗಳನ್ನು ಪುರಸ್ಕರಿಸಿ, ಸಮೀಕ್ಷೆಗೆ ಆದೇಶಿಸುವ ಮೂಲಕ ಆತಂಕವನ್ನು ಹೆಚ್ಚಿಸಿದೆ. ಈ ಮೂಲಕ ನ್ಯಾಯಾಂಗವೇ ಸಂವಿಧಾನ ವಿರೋಧಿ ಅಭಿಯಾನಕ್ಕೆ ಅಡಿಗಲ್ಲು ಹಾಕಿ ಕೊಡುತ್ತಿದೆ.

ಮಸೀದಿಗಳ ಸ್ವರೂಪ ಬದಲಾವಣೆಯಲ್ಲ ಸಮೀಕ್ಷೆ ಮಾತ್ರ ಎಂದು ಸಮರ್ಥಿಸಲಾಗುತ್ತಿದೆ. ಸ್ವರೂಪ ಬದಲಾವಣೆಗೆ ಅವಕಾಶ ಇಲ್ಲದಿರುವಾಗ ಸಮೀಕ್ಷೆಯ ಅಗತ್ಯವೇನಿದೆ? ಎಂದು ವಕೀಲ ದುಷ್ಯಂತ್ ದವೆ ದಿ ವೈರ್ ಸಂದರ್ಶನದಲ್ಲಿ ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ದೇಶದಲ್ಲಿ ಸಂವಿಧಾನದ ಆಶಯಗಳಿಗೆ ವಿರುದ್ದವಾದ ಆಡಳಿತ ವ್ಯವಸ್ಥೆ ಇರುವಾಗ, ಸಂವಿಧಾನ ಆಶಯಗಳನ್ನು ಎತ್ತಿ ಹಿಡಿಯಬೇಕಾದ ನ್ಯಾಯಾಂಗ ಕೂಡ, ನಿರ್ಧಿಷ್ಟ ಸಮುದಾಯಗಳು ಆತಂಕಪಡುವಂತಹ ಆದೇಶಗಳನ್ನು ಕೊಡುತ್ತಿರುವುದು ದೇಶ ಎಂತಹ ಶೋಚನೀಯ ಪರಸ್ಥಿತಿಯೆಡೆಗೆ ಸಾಗುತ್ತಿದೆ ಎಂಬುವುದನ್ನು ತೋರಿಸುತ್ತದೆ.

ಸರ್ವರ ಹಕ್ಕುಗಳನ್ನು ಎತ್ತಿ ಹಿಡಿದ ಸಂವಿಧಾನದ ರೂವಾರಿ ಬಾಬಾ ಸಾಹೇಬರ ಪರಿ ನಿರ್ವಾಣ ಮತ್ತು ಬಾಬರಿಯ ನಿರ್ಣಾಮದ ಈ ದಿನ ಸಂವಿಧಾನದ ಆಶಯಗಳನ್ನು ಆಶಯಗಳನ್ನು ರಕ್ಷಿಸುವ ಕಾರ್ಯಕ್ಕೆ ಧುಮುಕಬೇಕಿದೆ. ಇತಿಹಾಸವನ್ನು ಮೆಲುಕು ಹಾಕುವ ಮೂಲಕ ಭವಿಷ್ಯವನ್ನು ರೂಪಿಸಬೇಕಿದೆ.

ಇದನ್ನೂ ಓದಿ : “ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ ‘ಸಂವಿಧಾನಕ್ಕೆ ಅಪಚಾರ’ವೆಸಗಿದ ನ್ಯಾ. ಚಂದ್ರಚೂಡ್‌” : ದುಷ್ಯಂತ್ ದವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...