Homeಮುಖಪುಟನೆನಪಿನಿಂದ ಮಾಸದ ಡಿಸೆಂಬರ್-6

ನೆನಪಿನಿಂದ ಮಾಸದ ಡಿಸೆಂಬರ್-6

- Advertisement -
- Advertisement -

ಡಿಸೆಂಬರ್ 6 ಭಾರತದ ಇತಿಹಾಸದಲ್ಲಿ ಮಹತ್ವದ ದಿನವಾಗಿದೆ. ಬಹು ವೈವಿದ್ಯತೆಯ ಈ ದೇಶಕ್ಕೆ ಜೀವಪರ, ಸಾಮಾಜಿಕ ನ್ಯಾಯ ಮತ್ತು ಸಮ ಸಮಾಜದ ಆಶಯಗಳನ್ನು ಒಳಗೊಂಡ ಉದಾತ್ತ ಸಂವಿಧಾನ ಕೊಟ್ಟ ಮಹಾನ್ ಚೇತನ ಡಾ. ಬಿ.ಆರ್ ಅಂಬೇಡ್ಕರ್ ಅವರ ‘ಮಹಾ ಪರಿನಿರ್ವಾಣ’ ಮತ್ತು ಬಾಬರಿ ಮಸೀದಿಯ ಧ್ವಂಸ ಘಟನೆ ನಡೆದ ದಿನವಾಗಿದೆ ಇದು.

ಡಿಸೆಂಬರ್‌ 6,1956 ರಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರು ಮರಣ ಹೊಂದಿದರು. ಇದೇ ಡಿಸೆಂಬರ್ 6, 1992ರಂದು ಬಾಬರಿ ಧ್ವಂಸ ನಡೆಯಿತು. ಈ ಎರಡು ಘಟನೆಗಳು ಮತ್ತು ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗಳು ಪರಸ್ಪರ ಒಂದಕ್ಕೊಂದು ಸಂಬಂಧ ಹೊಂದಿವೆ.

ಅಂಬೇಡ್ಕರ್ ರಚಿಸಿದ ಸಂವಿಧಾನ ದೇಶವನ್ನು ಜಾತ್ಯಾತೀತ, ಪ್ರಜಾಪ್ರಭುತ್ವದ ನಾಡಾಗಿ ರೂಪಿಸಿದೆ. ದೇಶದ ಪ್ರತಿಯೊಬ್ಬರನ್ನೂ ಸಮಾನತೆಯಿಂದ ಕಾಣಬೇಕು ಎಂದು ಹೇಳಿದೆ. ಸಂವಿಧಾನ ಧಾರ್ಮಿಕ ಸ್ವಾತಂತ್ರ್ಯವನ್ನು ಮೂಲಭೂತ ಹಕ್ಕಾಗಿ ರಕ್ಷಿಸಿದೆ.

ಆದರೆ, 1992ರ ಬಾಬರಿ ಮಸೀದಿ ಧ್ವಂಸ ಮತ್ತು ಬಳಿಕ ನಡೆದ ಬೆಳವಣಿಗೆಗಳು ಸಂವಿಧಾನ ಆಶಯಗಳನ್ನು ಸಮಾಧಿ ಮಾಡಿತು. ಬಾಬಾ ಸಾಹೇಬರ ಪರಿನಿರ್ವಾಣ ದಿನವೇ ನಡೆದ ಬಾಬರಿ ಮಸೀದಿ ಧ್ವಂಸದಿಂದ ಸಂವಿಧಾನದ ಆಶಯಗಳೂ ನಿಬ್ಬಾನವಾಯಿತು.

ಸಂವಿಧಾನದ ಮೂಲ ಪ್ರತಿಯಲ್ಲಿ ಈಗಲೂ ಧಾರ್ಮಿಕ ಸ್ವಾತಂತ್ರ್ಯ, ಸಮಾನತೆ, ಧಾರ್ಮಿಕ ಆಚರಣೆ ಇತ್ಯಾದಿ ಹಕ್ಕುಗಳಿವೆ. ಆದರೆ, ಅವುಗಳು ಆಚರಣೆಯಲ್ಲಿ ಉಳಿದಿಲ್ಲ. ಪ್ರಸ್ತುತ ನಡೆಯುತ್ತಿರುವ ಕೆಲವೊಂದು ಬೆಳವಣಿಗೆಗಳು ಅದಕ್ಕೆ ಪುಷ್ಠಿ ನೀಡುತ್ತಿವೆ.

ಬಾಬರಿ ಮಸೀದಿ ಧ್ವಂಸ ಸಂಬಂಧಿತ ಸಮಸ್ಯೆಗಳು ಸೃಷ್ಟಿಯಾದ ಬಳಿಕ ಪಿ.ವಿ ನರಸಿಂಹರಾವ್ ನೇತೃತ್ವದ ಕಾಂಗ್ರೆಸ್‌ ಸರ್ಕಾರ 1991ರಲ್ಲಿ ಆರಾಧನಾ ಸ್ಥಳಗಳ ಕಾಯ್ದೆ ಜಾರಿಗೆ ತಂದಿತು. ಅದರ ಪ್ರಕಾರ, ದೇಶಕ್ಕೆ ಸ್ವಾತಂತ್ರ್ಯ ಬರುವಾಗ ಧಾರ್ಮಿಕ ಸ್ಥಳಗಳ ಸ್ವರೂಪ ಹೇಗಿತ್ತೋ ಹಾಗೆಯೇ ಉಳಿಸಿಕೊಳ್ಳಬೇಕು, ಬದಲಾವಣೆ ಮಾಡಬಾರದು.

ಸಂವಿಧಾನ ಆಶಯಗಳನ್ನು ರಕ್ಷಿಸಲು ಜಾರಿಗೆ ಬಂದ ಈ ಕಾಯ್ದೆಯನ್ನು ನ್ಯಾಯಾಂಗವೇ ಮೂಲೆಗೆ ತಳ್ಳುವ ಮೂಲಕ ಅಧಿಕೃತವಾಗಿ ಸಂವಿಧಾನ ವಿರೋಧಿ ಅಭಿಯಾನಕ್ಕೆ ಅಡಿಗಲ್ಲು ಹಾಕಿ ಕೊಡುತ್ತಿದೆ.

ಬಾಬರಿ ಮಸೀದಿ ತೀರ್ಪು ಬಂದ ಬಳಿಕ, ಆ ರೀತಿಯ ಬೆಳವಣಿಗೆ ಮುಂದೆ ನಡೆಯಬಾರದು ಎಂಬ ಒತ್ತಾಯ ಕೇಳಿ ಬಂದಿತ್ತು. ಬಾಬರಿ ಮಸೀದಿ-ರಾಮ ಜನ್ಮಭೂಮಿ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಪೀಠ ಕೂಡ 1991ರ ಆರಾಧನಾ ಕಾಯ್ದೆ ಸಂವಿಧಾನ ಆಶಯಗಳಿಗೆ ಪೂರಕವಾಗಿದೆ ಎಂದಿತ್ತು.

ಬಾಬರಿ ಮಸೀದಿ ತೀರ್ಪಿತ್ತಿದ ನ್ಯಾಯ ಪೀಠದಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಕೂಡ ಇದ್ದರು. ಇದೇ ಚಂದ್ರಚೂಡ್ ಅವರು ಜ್ಞಾನವ್ಯಾಪಿ ಪ್ರಕರಣದಲ್ಲಿ ಆರಾಧನಾ ಸ್ಥಳಗಳ ಕಾಯ್ದೆಗೆ ಹೊಸ ವ್ಯಾಖ್ಯಾನವನ್ನು ಕೊಟ್ಟರು. ಆ ವ್ಯಾಖ್ಯಾನ ಈಗ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರುತ್ತಿದೆ.

“1991ರ ಆರಾಧನಾ ಸ್ಥಳಗಳ ಕಾಯ್ದೆಯು ಧಾರ್ಮಿಕ ಸ್ಥಳದ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದ್ದರೂ, ಕೇವಲ ಸ್ಥಳವೊಂದರ ಧಾರ್ಮಿಕ ಲಕ್ಷಣವನ್ನು ಖಚಿತಪಡಿಸಿಕೊಳ್ಳುವುದು ಕಾಯ್ದೆಯನ್ನು ಉಲ್ಲಂಘಿಸುವುದಿಲ್ಲ” ಎಂದು ಚಂದ್ರಚೂಡ್ ಅವರು 2022ರಲ್ಲಿ ಜ್ಞಾನವ್ಯಾಪಿ ಪ್ರಕರಣದಲ್ಲಿ ಮೌಖಿವಾಗಿ ಹೇಳಿದ್ದರು.

“ನ್ಯಾಯಮೂರ್ತಿ ಚಂದ್ರಚೂಡ್ ಅವರು ತಾವೇ ಭಾಗವಾಗಿದ್ದ ಅಯೋಧ್ಯೆ ತೀರ್ಪನ್ನು ಈ ಮೂಲಕ ಉಲ್ಲಂಘಿಸಿದ್ದಾರೆ. ನ್ಯಾಯಾಂಗ ಕಾನೂನಿಗೆ ಬದ್ದವಾಗಿರಬೇಕು. ಆದರೆ, ಜ್ಞಾನವ್ಯಾಪಿ ಪ್ರಕರಣದಲ್ಲಿ ಅವರ ತೀರ್ಪು ಆಘಾತಕಾರಿ. ಚಂದ್ರಚೂಡ್ ಅವರು ಜಾತ್ಯಾತೀತತೆ ಮತ್ತು ಕಾನೂನಿನ ನಿಯಮಗಳ ಕುರಿತು ವಿಶ್ವದಾದ್ಯಂತ ಉಪನ್ಯಾಸಗಳನ್ನು ನೀಡುತ್ತಾರೆ. ಆದರೆ, ಅವರ ಜ್ಞಾನವ್ಯಾಪಿ ಕುರಿತ ತೀರ್ಪು ಇದೆಲ್ಲದಕ್ಕೂ ನೇರ ವಿರುದ್ದವಾಗಿದೆ” ಎಂದು ಇತ್ತೀಚೆಗೆ ಹಿರಿಯ ವಕೀಲ ದುಷ್ಯಂತ್ ದವೆ ಹೇಳಿದ್ದರು.

“ಚಂದ್ರಚೂಡ್ ಅವರು ಆರಾಧನಾ ಸ್ಥಳಗಳ ಕಾಯ್ದೆಗೆ ಹೊಸ ವ್ಯಾಖ್ಯಾನ ನೀಡಿ ಮಸೀದಿಗಳ ಸಮೀಕ್ಷೆಗೆ ಅನುಮತಿ ನೀಡುವ ಮೂಲಕ ಅವರು ಸಂವಿಧಾನ ಮತ್ತು ದೇಶಕ್ಕೆ ದೊಡ್ಡ ಅಪಚಾರ ಮಾಡಿದ್ದಾರೆ” ಎಂದು ದುಷ್ಯಂತ್ ದವೆ ದಿ ವೈರ್ ಸಂದರ್ಶನದಲ್ಲಿ ಕಣ್ಣೀರು ಹಾಕಿದ್ದಾರೆ.

ಚಂದ್ರಚೂಡ್ ಅವರು ಆರಾಧನಾ ಸ್ಥಳಗಳ ಕಾಯ್ದೆಗೆ ನೀಡಿರುವ ವ್ಯಾಖ್ಯಾನವೇ ಈಗ ದೇಶದಲ್ಲಿ ಮಸೀದಿ ಅಡಿ ಮಂದಿರ ಹುಡುಕುವ ಸಮಸ್ಯೆಗಳಿಗೆ ಮೂಲಕ ಕಾರಣ ಎಂದು ಕಾಂಗ್ರೆಸ್ ಕೂಡ ಆರೋಪಿಸಿದೆ.

ಬಾಬರಿ ಮಸೀದಿ ತೀರ್ಪಿನ ಬಳಿಕ, ಇನ್ನೊಂದು ಆ ರೀತಿಯ ಸಮಸ್ಯೆ ಉಂಟಾಗುವುದಿಲ್ಲ ಎಂದು ದೇಶದ ಸಂವಿಧಾನ ಪರ ಮನಸ್ಸುಗಳು ಅಂದುಕೊಂಡಿತ್ತು. ಆರಾಧನಾ ಸ್ಥಳಗಳ ಕಾಯ್ದೆ ಅದಕ್ಕೆ ಒಂದು ಗೋಡೆಯಾಗಿ ಕಂಡಿತ್ತು.

ಆದರೆ, ವಾರಣಾಸಿಯ ಜ್ಞಾನವ್ಯಾಪಿ, ಮಥುರಾದ ಶಾಹಿ ಈದ್ಗಾ, ಸಂಭಾಲ್ ಶಾಹಿ ಜಾಮಾ ಮಸೀದಿ, ಅಜ್ಮೀರ್ ದರ್ಗಾ ಪ್ರಕರಣಗಳು ಮತ್ತೆ ಆತಂಕವನ್ನು ಸೃಷ್ಟಿಸಿದೆ. ಈ ಪ್ರಕರಣಗಳಲ್ಲಿ ಆರಂಭದಲ್ಲೇ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ಆರಾಧನಾ ಸ್ಥಳಗಳ ಕಾಯ್ದೆಯನ್ನು ಎತ್ತಿ ಹಿಡಿಯಬೇಕಿದ್ದ ನ್ಯಾಯಾಂಗ, ಅರ್ಜಿಗಳನ್ನು ಪುರಸ್ಕರಿಸಿ, ಸಮೀಕ್ಷೆಗೆ ಆದೇಶಿಸುವ ಮೂಲಕ ಆತಂಕವನ್ನು ಹೆಚ್ಚಿಸಿದೆ. ಈ ಮೂಲಕ ನ್ಯಾಯಾಂಗವೇ ಸಂವಿಧಾನ ವಿರೋಧಿ ಅಭಿಯಾನಕ್ಕೆ ಅಡಿಗಲ್ಲು ಹಾಕಿ ಕೊಡುತ್ತಿದೆ.

ಮಸೀದಿಗಳ ಸ್ವರೂಪ ಬದಲಾವಣೆಯಲ್ಲ ಸಮೀಕ್ಷೆ ಮಾತ್ರ ಎಂದು ಸಮರ್ಥಿಸಲಾಗುತ್ತಿದೆ. ಸ್ವರೂಪ ಬದಲಾವಣೆಗೆ ಅವಕಾಶ ಇಲ್ಲದಿರುವಾಗ ಸಮೀಕ್ಷೆಯ ಅಗತ್ಯವೇನಿದೆ? ಎಂದು ವಕೀಲ ದುಷ್ಯಂತ್ ದವೆ ದಿ ವೈರ್ ಸಂದರ್ಶನದಲ್ಲಿ ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ದೇಶದಲ್ಲಿ ಸಂವಿಧಾನದ ಆಶಯಗಳಿಗೆ ವಿರುದ್ದವಾದ ಆಡಳಿತ ವ್ಯವಸ್ಥೆ ಇರುವಾಗ, ಸಂವಿಧಾನ ಆಶಯಗಳನ್ನು ಎತ್ತಿ ಹಿಡಿಯಬೇಕಾದ ನ್ಯಾಯಾಂಗ ಕೂಡ, ನಿರ್ಧಿಷ್ಟ ಸಮುದಾಯಗಳು ಆತಂಕಪಡುವಂತಹ ಆದೇಶಗಳನ್ನು ಕೊಡುತ್ತಿರುವುದು ದೇಶ ಎಂತಹ ಶೋಚನೀಯ ಪರಸ್ಥಿತಿಯೆಡೆಗೆ ಸಾಗುತ್ತಿದೆ ಎಂಬುವುದನ್ನು ತೋರಿಸುತ್ತದೆ.

ಸರ್ವರ ಹಕ್ಕುಗಳನ್ನು ಎತ್ತಿ ಹಿಡಿದ ಸಂವಿಧಾನದ ರೂವಾರಿ ಬಾಬಾ ಸಾಹೇಬರ ಪರಿ ನಿರ್ವಾಣ ಮತ್ತು ಬಾಬರಿಯ ನಿರ್ಣಾಮದ ಈ ದಿನ ಸಂವಿಧಾನದ ಆಶಯಗಳನ್ನು ಆಶಯಗಳನ್ನು ರಕ್ಷಿಸುವ ಕಾರ್ಯಕ್ಕೆ ಧುಮುಕಬೇಕಿದೆ. ಇತಿಹಾಸವನ್ನು ಮೆಲುಕು ಹಾಕುವ ಮೂಲಕ ಭವಿಷ್ಯವನ್ನು ರೂಪಿಸಬೇಕಿದೆ.

ಇದನ್ನೂ ಓದಿ : “ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ ‘ಸಂವಿಧಾನಕ್ಕೆ ಅಪಚಾರ’ವೆಸಗಿದ ನ್ಯಾ. ಚಂದ್ರಚೂಡ್‌” : ದುಷ್ಯಂತ್ ದವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...