Homeಮುಖಪುಟನೆನಪಿನಿಂದ ಮಾಸದ ಡಿಸೆಂಬರ್-6

ನೆನಪಿನಿಂದ ಮಾಸದ ಡಿಸೆಂಬರ್-6

- Advertisement -
- Advertisement -

ಡಿಸೆಂಬರ್ 6 ಭಾರತದ ಇತಿಹಾಸದಲ್ಲಿ ಮಹತ್ವದ ದಿನವಾಗಿದೆ. ಬಹು ವೈವಿದ್ಯತೆಯ ಈ ದೇಶಕ್ಕೆ ಜೀವಪರ, ಸಾಮಾಜಿಕ ನ್ಯಾಯ ಮತ್ತು ಸಮ ಸಮಾಜದ ಆಶಯಗಳನ್ನು ಒಳಗೊಂಡ ಉದಾತ್ತ ಸಂವಿಧಾನ ಕೊಟ್ಟ ಮಹಾನ್ ಚೇತನ ಡಾ. ಬಿ.ಆರ್ ಅಂಬೇಡ್ಕರ್ ಅವರ ‘ಮಹಾ ಪರಿನಿರ್ವಾಣ’ ಮತ್ತು ಬಾಬರಿ ಮಸೀದಿಯ ಧ್ವಂಸ ಘಟನೆ ನಡೆದ ದಿನವಾಗಿದೆ ಇದು.

ಡಿಸೆಂಬರ್‌ 6,1956 ರಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರು ಮರಣ ಹೊಂದಿದರು. ಇದೇ ಡಿಸೆಂಬರ್ 6, 1992ರಂದು ಬಾಬರಿ ಧ್ವಂಸ ನಡೆಯಿತು. ಈ ಎರಡು ಘಟನೆಗಳು ಮತ್ತು ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗಳು ಪರಸ್ಪರ ಒಂದಕ್ಕೊಂದು ಸಂಬಂಧ ಹೊಂದಿವೆ.

ಅಂಬೇಡ್ಕರ್ ರಚಿಸಿದ ಸಂವಿಧಾನ ದೇಶವನ್ನು ಜಾತ್ಯಾತೀತ, ಪ್ರಜಾಪ್ರಭುತ್ವದ ನಾಡಾಗಿ ರೂಪಿಸಿದೆ. ದೇಶದ ಪ್ರತಿಯೊಬ್ಬರನ್ನೂ ಸಮಾನತೆಯಿಂದ ಕಾಣಬೇಕು ಎಂದು ಹೇಳಿದೆ. ಸಂವಿಧಾನ ಧಾರ್ಮಿಕ ಸ್ವಾತಂತ್ರ್ಯವನ್ನು ಮೂಲಭೂತ ಹಕ್ಕಾಗಿ ರಕ್ಷಿಸಿದೆ.

ಆದರೆ, 1992ರ ಬಾಬರಿ ಮಸೀದಿ ಧ್ವಂಸ ಮತ್ತು ಬಳಿಕ ನಡೆದ ಬೆಳವಣಿಗೆಗಳು ಸಂವಿಧಾನ ಆಶಯಗಳನ್ನು ಸಮಾಧಿ ಮಾಡಿತು. ಬಾಬಾ ಸಾಹೇಬರ ಪರಿನಿರ್ವಾಣ ದಿನವೇ ನಡೆದ ಬಾಬರಿ ಮಸೀದಿ ಧ್ವಂಸದಿಂದ ಸಂವಿಧಾನದ ಆಶಯಗಳೂ ನಿಬ್ಬಾನವಾಯಿತು.

ಸಂವಿಧಾನದ ಮೂಲ ಪ್ರತಿಯಲ್ಲಿ ಈಗಲೂ ಧಾರ್ಮಿಕ ಸ್ವಾತಂತ್ರ್ಯ, ಸಮಾನತೆ, ಧಾರ್ಮಿಕ ಆಚರಣೆ ಇತ್ಯಾದಿ ಹಕ್ಕುಗಳಿವೆ. ಆದರೆ, ಅವುಗಳು ಆಚರಣೆಯಲ್ಲಿ ಉಳಿದಿಲ್ಲ. ಪ್ರಸ್ತುತ ನಡೆಯುತ್ತಿರುವ ಕೆಲವೊಂದು ಬೆಳವಣಿಗೆಗಳು ಅದಕ್ಕೆ ಪುಷ್ಠಿ ನೀಡುತ್ತಿವೆ.

ಬಾಬರಿ ಮಸೀದಿ ಧ್ವಂಸ ಸಂಬಂಧಿತ ಸಮಸ್ಯೆಗಳು ಸೃಷ್ಟಿಯಾದ ಬಳಿಕ ಪಿ.ವಿ ನರಸಿಂಹರಾವ್ ನೇತೃತ್ವದ ಕಾಂಗ್ರೆಸ್‌ ಸರ್ಕಾರ 1991ರಲ್ಲಿ ಆರಾಧನಾ ಸ್ಥಳಗಳ ಕಾಯ್ದೆ ಜಾರಿಗೆ ತಂದಿತು. ಅದರ ಪ್ರಕಾರ, ದೇಶಕ್ಕೆ ಸ್ವಾತಂತ್ರ್ಯ ಬರುವಾಗ ಧಾರ್ಮಿಕ ಸ್ಥಳಗಳ ಸ್ವರೂಪ ಹೇಗಿತ್ತೋ ಹಾಗೆಯೇ ಉಳಿಸಿಕೊಳ್ಳಬೇಕು, ಬದಲಾವಣೆ ಮಾಡಬಾರದು.

ಸಂವಿಧಾನ ಆಶಯಗಳನ್ನು ರಕ್ಷಿಸಲು ಜಾರಿಗೆ ಬಂದ ಈ ಕಾಯ್ದೆಯನ್ನು ನ್ಯಾಯಾಂಗವೇ ಮೂಲೆಗೆ ತಳ್ಳುವ ಮೂಲಕ ಅಧಿಕೃತವಾಗಿ ಸಂವಿಧಾನ ವಿರೋಧಿ ಅಭಿಯಾನಕ್ಕೆ ಅಡಿಗಲ್ಲು ಹಾಕಿ ಕೊಡುತ್ತಿದೆ.

ಬಾಬರಿ ಮಸೀದಿ ತೀರ್ಪು ಬಂದ ಬಳಿಕ, ಆ ರೀತಿಯ ಬೆಳವಣಿಗೆ ಮುಂದೆ ನಡೆಯಬಾರದು ಎಂಬ ಒತ್ತಾಯ ಕೇಳಿ ಬಂದಿತ್ತು. ಬಾಬರಿ ಮಸೀದಿ-ರಾಮ ಜನ್ಮಭೂಮಿ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಪೀಠ ಕೂಡ 1991ರ ಆರಾಧನಾ ಕಾಯ್ದೆ ಸಂವಿಧಾನ ಆಶಯಗಳಿಗೆ ಪೂರಕವಾಗಿದೆ ಎಂದಿತ್ತು.

ಬಾಬರಿ ಮಸೀದಿ ತೀರ್ಪಿತ್ತಿದ ನ್ಯಾಯ ಪೀಠದಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಕೂಡ ಇದ್ದರು. ಇದೇ ಚಂದ್ರಚೂಡ್ ಅವರು ಜ್ಞಾನವ್ಯಾಪಿ ಪ್ರಕರಣದಲ್ಲಿ ಆರಾಧನಾ ಸ್ಥಳಗಳ ಕಾಯ್ದೆಗೆ ಹೊಸ ವ್ಯಾಖ್ಯಾನವನ್ನು ಕೊಟ್ಟರು. ಆ ವ್ಯಾಖ್ಯಾನ ಈಗ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರುತ್ತಿದೆ.

“1991ರ ಆರಾಧನಾ ಸ್ಥಳಗಳ ಕಾಯ್ದೆಯು ಧಾರ್ಮಿಕ ಸ್ಥಳದ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದ್ದರೂ, ಕೇವಲ ಸ್ಥಳವೊಂದರ ಧಾರ್ಮಿಕ ಲಕ್ಷಣವನ್ನು ಖಚಿತಪಡಿಸಿಕೊಳ್ಳುವುದು ಕಾಯ್ದೆಯನ್ನು ಉಲ್ಲಂಘಿಸುವುದಿಲ್ಲ” ಎಂದು ಚಂದ್ರಚೂಡ್ ಅವರು 2022ರಲ್ಲಿ ಜ್ಞಾನವ್ಯಾಪಿ ಪ್ರಕರಣದಲ್ಲಿ ಮೌಖಿವಾಗಿ ಹೇಳಿದ್ದರು.

“ನ್ಯಾಯಮೂರ್ತಿ ಚಂದ್ರಚೂಡ್ ಅವರು ತಾವೇ ಭಾಗವಾಗಿದ್ದ ಅಯೋಧ್ಯೆ ತೀರ್ಪನ್ನು ಈ ಮೂಲಕ ಉಲ್ಲಂಘಿಸಿದ್ದಾರೆ. ನ್ಯಾಯಾಂಗ ಕಾನೂನಿಗೆ ಬದ್ದವಾಗಿರಬೇಕು. ಆದರೆ, ಜ್ಞಾನವ್ಯಾಪಿ ಪ್ರಕರಣದಲ್ಲಿ ಅವರ ತೀರ್ಪು ಆಘಾತಕಾರಿ. ಚಂದ್ರಚೂಡ್ ಅವರು ಜಾತ್ಯಾತೀತತೆ ಮತ್ತು ಕಾನೂನಿನ ನಿಯಮಗಳ ಕುರಿತು ವಿಶ್ವದಾದ್ಯಂತ ಉಪನ್ಯಾಸಗಳನ್ನು ನೀಡುತ್ತಾರೆ. ಆದರೆ, ಅವರ ಜ್ಞಾನವ್ಯಾಪಿ ಕುರಿತ ತೀರ್ಪು ಇದೆಲ್ಲದಕ್ಕೂ ನೇರ ವಿರುದ್ದವಾಗಿದೆ” ಎಂದು ಇತ್ತೀಚೆಗೆ ಹಿರಿಯ ವಕೀಲ ದುಷ್ಯಂತ್ ದವೆ ಹೇಳಿದ್ದರು.

“ಚಂದ್ರಚೂಡ್ ಅವರು ಆರಾಧನಾ ಸ್ಥಳಗಳ ಕಾಯ್ದೆಗೆ ಹೊಸ ವ್ಯಾಖ್ಯಾನ ನೀಡಿ ಮಸೀದಿಗಳ ಸಮೀಕ್ಷೆಗೆ ಅನುಮತಿ ನೀಡುವ ಮೂಲಕ ಅವರು ಸಂವಿಧಾನ ಮತ್ತು ದೇಶಕ್ಕೆ ದೊಡ್ಡ ಅಪಚಾರ ಮಾಡಿದ್ದಾರೆ” ಎಂದು ದುಷ್ಯಂತ್ ದವೆ ದಿ ವೈರ್ ಸಂದರ್ಶನದಲ್ಲಿ ಕಣ್ಣೀರು ಹಾಕಿದ್ದಾರೆ.

ಚಂದ್ರಚೂಡ್ ಅವರು ಆರಾಧನಾ ಸ್ಥಳಗಳ ಕಾಯ್ದೆಗೆ ನೀಡಿರುವ ವ್ಯಾಖ್ಯಾನವೇ ಈಗ ದೇಶದಲ್ಲಿ ಮಸೀದಿ ಅಡಿ ಮಂದಿರ ಹುಡುಕುವ ಸಮಸ್ಯೆಗಳಿಗೆ ಮೂಲಕ ಕಾರಣ ಎಂದು ಕಾಂಗ್ರೆಸ್ ಕೂಡ ಆರೋಪಿಸಿದೆ.

ಬಾಬರಿ ಮಸೀದಿ ತೀರ್ಪಿನ ಬಳಿಕ, ಇನ್ನೊಂದು ಆ ರೀತಿಯ ಸಮಸ್ಯೆ ಉಂಟಾಗುವುದಿಲ್ಲ ಎಂದು ದೇಶದ ಸಂವಿಧಾನ ಪರ ಮನಸ್ಸುಗಳು ಅಂದುಕೊಂಡಿತ್ತು. ಆರಾಧನಾ ಸ್ಥಳಗಳ ಕಾಯ್ದೆ ಅದಕ್ಕೆ ಒಂದು ಗೋಡೆಯಾಗಿ ಕಂಡಿತ್ತು.

ಆದರೆ, ವಾರಣಾಸಿಯ ಜ್ಞಾನವ್ಯಾಪಿ, ಮಥುರಾದ ಶಾಹಿ ಈದ್ಗಾ, ಸಂಭಾಲ್ ಶಾಹಿ ಜಾಮಾ ಮಸೀದಿ, ಅಜ್ಮೀರ್ ದರ್ಗಾ ಪ್ರಕರಣಗಳು ಮತ್ತೆ ಆತಂಕವನ್ನು ಸೃಷ್ಟಿಸಿದೆ. ಈ ಪ್ರಕರಣಗಳಲ್ಲಿ ಆರಂಭದಲ್ಲೇ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ಆರಾಧನಾ ಸ್ಥಳಗಳ ಕಾಯ್ದೆಯನ್ನು ಎತ್ತಿ ಹಿಡಿಯಬೇಕಿದ್ದ ನ್ಯಾಯಾಂಗ, ಅರ್ಜಿಗಳನ್ನು ಪುರಸ್ಕರಿಸಿ, ಸಮೀಕ್ಷೆಗೆ ಆದೇಶಿಸುವ ಮೂಲಕ ಆತಂಕವನ್ನು ಹೆಚ್ಚಿಸಿದೆ. ಈ ಮೂಲಕ ನ್ಯಾಯಾಂಗವೇ ಸಂವಿಧಾನ ವಿರೋಧಿ ಅಭಿಯಾನಕ್ಕೆ ಅಡಿಗಲ್ಲು ಹಾಕಿ ಕೊಡುತ್ತಿದೆ.

ಮಸೀದಿಗಳ ಸ್ವರೂಪ ಬದಲಾವಣೆಯಲ್ಲ ಸಮೀಕ್ಷೆ ಮಾತ್ರ ಎಂದು ಸಮರ್ಥಿಸಲಾಗುತ್ತಿದೆ. ಸ್ವರೂಪ ಬದಲಾವಣೆಗೆ ಅವಕಾಶ ಇಲ್ಲದಿರುವಾಗ ಸಮೀಕ್ಷೆಯ ಅಗತ್ಯವೇನಿದೆ? ಎಂದು ವಕೀಲ ದುಷ್ಯಂತ್ ದವೆ ದಿ ವೈರ್ ಸಂದರ್ಶನದಲ್ಲಿ ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ದೇಶದಲ್ಲಿ ಸಂವಿಧಾನದ ಆಶಯಗಳಿಗೆ ವಿರುದ್ದವಾದ ಆಡಳಿತ ವ್ಯವಸ್ಥೆ ಇರುವಾಗ, ಸಂವಿಧಾನ ಆಶಯಗಳನ್ನು ಎತ್ತಿ ಹಿಡಿಯಬೇಕಾದ ನ್ಯಾಯಾಂಗ ಕೂಡ, ನಿರ್ಧಿಷ್ಟ ಸಮುದಾಯಗಳು ಆತಂಕಪಡುವಂತಹ ಆದೇಶಗಳನ್ನು ಕೊಡುತ್ತಿರುವುದು ದೇಶ ಎಂತಹ ಶೋಚನೀಯ ಪರಸ್ಥಿತಿಯೆಡೆಗೆ ಸಾಗುತ್ತಿದೆ ಎಂಬುವುದನ್ನು ತೋರಿಸುತ್ತದೆ.

ಸರ್ವರ ಹಕ್ಕುಗಳನ್ನು ಎತ್ತಿ ಹಿಡಿದ ಸಂವಿಧಾನದ ರೂವಾರಿ ಬಾಬಾ ಸಾಹೇಬರ ಪರಿ ನಿರ್ವಾಣ ಮತ್ತು ಬಾಬರಿಯ ನಿರ್ಣಾಮದ ಈ ದಿನ ಸಂವಿಧಾನದ ಆಶಯಗಳನ್ನು ಆಶಯಗಳನ್ನು ರಕ್ಷಿಸುವ ಕಾರ್ಯಕ್ಕೆ ಧುಮುಕಬೇಕಿದೆ. ಇತಿಹಾಸವನ್ನು ಮೆಲುಕು ಹಾಕುವ ಮೂಲಕ ಭವಿಷ್ಯವನ್ನು ರೂಪಿಸಬೇಕಿದೆ.

ಇದನ್ನೂ ಓದಿ : “ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ ‘ಸಂವಿಧಾನಕ್ಕೆ ಅಪಚಾರ’ವೆಸಗಿದ ನ್ಯಾ. ಚಂದ್ರಚೂಡ್‌” : ದುಷ್ಯಂತ್ ದವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...