Homeಮುಖಪುಟನೆನಪಿನಿಂದ ಮಾಸದ ಡಿಸೆಂಬರ್-6

ನೆನಪಿನಿಂದ ಮಾಸದ ಡಿಸೆಂಬರ್-6

- Advertisement -
- Advertisement -

ಡಿಸೆಂಬರ್ 6 ಭಾರತದ ಇತಿಹಾಸದಲ್ಲಿ ಮಹತ್ವದ ದಿನವಾಗಿದೆ. ಬಹು ವೈವಿದ್ಯತೆಯ ಈ ದೇಶಕ್ಕೆ ಜೀವಪರ, ಸಾಮಾಜಿಕ ನ್ಯಾಯ ಮತ್ತು ಸಮ ಸಮಾಜದ ಆಶಯಗಳನ್ನು ಒಳಗೊಂಡ ಉದಾತ್ತ ಸಂವಿಧಾನ ಕೊಟ್ಟ ಮಹಾನ್ ಚೇತನ ಡಾ. ಬಿ.ಆರ್ ಅಂಬೇಡ್ಕರ್ ಅವರ ‘ಮಹಾ ಪರಿನಿರ್ವಾಣ’ ಮತ್ತು ಬಾಬರಿ ಮಸೀದಿಯ ಧ್ವಂಸ ಘಟನೆ ನಡೆದ ದಿನವಾಗಿದೆ ಇದು.

ಡಿಸೆಂಬರ್‌ 6,1956 ರಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರು ಮರಣ ಹೊಂದಿದರು. ಇದೇ ಡಿಸೆಂಬರ್ 6, 1992ರಂದು ಬಾಬರಿ ಧ್ವಂಸ ನಡೆಯಿತು. ಈ ಎರಡು ಘಟನೆಗಳು ಮತ್ತು ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗಳು ಪರಸ್ಪರ ಒಂದಕ್ಕೊಂದು ಸಂಬಂಧ ಹೊಂದಿವೆ.

ಅಂಬೇಡ್ಕರ್ ರಚಿಸಿದ ಸಂವಿಧಾನ ದೇಶವನ್ನು ಜಾತ್ಯಾತೀತ, ಪ್ರಜಾಪ್ರಭುತ್ವದ ನಾಡಾಗಿ ರೂಪಿಸಿದೆ. ದೇಶದ ಪ್ರತಿಯೊಬ್ಬರನ್ನೂ ಸಮಾನತೆಯಿಂದ ಕಾಣಬೇಕು ಎಂದು ಹೇಳಿದೆ. ಸಂವಿಧಾನ ಧಾರ್ಮಿಕ ಸ್ವಾತಂತ್ರ್ಯವನ್ನು ಮೂಲಭೂತ ಹಕ್ಕಾಗಿ ರಕ್ಷಿಸಿದೆ.

ಆದರೆ, 1992ರ ಬಾಬರಿ ಮಸೀದಿ ಧ್ವಂಸ ಮತ್ತು ಬಳಿಕ ನಡೆದ ಬೆಳವಣಿಗೆಗಳು ಸಂವಿಧಾನ ಆಶಯಗಳನ್ನು ಸಮಾಧಿ ಮಾಡಿತು. ಬಾಬಾ ಸಾಹೇಬರ ಪರಿನಿರ್ವಾಣ ದಿನವೇ ನಡೆದ ಬಾಬರಿ ಮಸೀದಿ ಧ್ವಂಸದಿಂದ ಸಂವಿಧಾನದ ಆಶಯಗಳೂ ನಿಬ್ಬಾನವಾಯಿತು.

ಸಂವಿಧಾನದ ಮೂಲ ಪ್ರತಿಯಲ್ಲಿ ಈಗಲೂ ಧಾರ್ಮಿಕ ಸ್ವಾತಂತ್ರ್ಯ, ಸಮಾನತೆ, ಧಾರ್ಮಿಕ ಆಚರಣೆ ಇತ್ಯಾದಿ ಹಕ್ಕುಗಳಿವೆ. ಆದರೆ, ಅವುಗಳು ಆಚರಣೆಯಲ್ಲಿ ಉಳಿದಿಲ್ಲ. ಪ್ರಸ್ತುತ ನಡೆಯುತ್ತಿರುವ ಕೆಲವೊಂದು ಬೆಳವಣಿಗೆಗಳು ಅದಕ್ಕೆ ಪುಷ್ಠಿ ನೀಡುತ್ತಿವೆ.

ಬಾಬರಿ ಮಸೀದಿ ಧ್ವಂಸ ಸಂಬಂಧಿತ ಸಮಸ್ಯೆಗಳು ಸೃಷ್ಟಿಯಾದ ಬಳಿಕ ಪಿ.ವಿ ನರಸಿಂಹರಾವ್ ನೇತೃತ್ವದ ಕಾಂಗ್ರೆಸ್‌ ಸರ್ಕಾರ 1991ರಲ್ಲಿ ಆರಾಧನಾ ಸ್ಥಳಗಳ ಕಾಯ್ದೆ ಜಾರಿಗೆ ತಂದಿತು. ಅದರ ಪ್ರಕಾರ, ದೇಶಕ್ಕೆ ಸ್ವಾತಂತ್ರ್ಯ ಬರುವಾಗ ಧಾರ್ಮಿಕ ಸ್ಥಳಗಳ ಸ್ವರೂಪ ಹೇಗಿತ್ತೋ ಹಾಗೆಯೇ ಉಳಿಸಿಕೊಳ್ಳಬೇಕು, ಬದಲಾವಣೆ ಮಾಡಬಾರದು.

ಸಂವಿಧಾನ ಆಶಯಗಳನ್ನು ರಕ್ಷಿಸಲು ಜಾರಿಗೆ ಬಂದ ಈ ಕಾಯ್ದೆಯನ್ನು ನ್ಯಾಯಾಂಗವೇ ಮೂಲೆಗೆ ತಳ್ಳುವ ಮೂಲಕ ಅಧಿಕೃತವಾಗಿ ಸಂವಿಧಾನ ವಿರೋಧಿ ಅಭಿಯಾನಕ್ಕೆ ಅಡಿಗಲ್ಲು ಹಾಕಿ ಕೊಡುತ್ತಿದೆ.

ಬಾಬರಿ ಮಸೀದಿ ತೀರ್ಪು ಬಂದ ಬಳಿಕ, ಆ ರೀತಿಯ ಬೆಳವಣಿಗೆ ಮುಂದೆ ನಡೆಯಬಾರದು ಎಂಬ ಒತ್ತಾಯ ಕೇಳಿ ಬಂದಿತ್ತು. ಬಾಬರಿ ಮಸೀದಿ-ರಾಮ ಜನ್ಮಭೂಮಿ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಪೀಠ ಕೂಡ 1991ರ ಆರಾಧನಾ ಕಾಯ್ದೆ ಸಂವಿಧಾನ ಆಶಯಗಳಿಗೆ ಪೂರಕವಾಗಿದೆ ಎಂದಿತ್ತು.

ಬಾಬರಿ ಮಸೀದಿ ತೀರ್ಪಿತ್ತಿದ ನ್ಯಾಯ ಪೀಠದಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಕೂಡ ಇದ್ದರು. ಇದೇ ಚಂದ್ರಚೂಡ್ ಅವರು ಜ್ಞಾನವ್ಯಾಪಿ ಪ್ರಕರಣದಲ್ಲಿ ಆರಾಧನಾ ಸ್ಥಳಗಳ ಕಾಯ್ದೆಗೆ ಹೊಸ ವ್ಯಾಖ್ಯಾನವನ್ನು ಕೊಟ್ಟರು. ಆ ವ್ಯಾಖ್ಯಾನ ಈಗ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರುತ್ತಿದೆ.

“1991ರ ಆರಾಧನಾ ಸ್ಥಳಗಳ ಕಾಯ್ದೆಯು ಧಾರ್ಮಿಕ ಸ್ಥಳದ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದ್ದರೂ, ಕೇವಲ ಸ್ಥಳವೊಂದರ ಧಾರ್ಮಿಕ ಲಕ್ಷಣವನ್ನು ಖಚಿತಪಡಿಸಿಕೊಳ್ಳುವುದು ಕಾಯ್ದೆಯನ್ನು ಉಲ್ಲಂಘಿಸುವುದಿಲ್ಲ” ಎಂದು ಚಂದ್ರಚೂಡ್ ಅವರು 2022ರಲ್ಲಿ ಜ್ಞಾನವ್ಯಾಪಿ ಪ್ರಕರಣದಲ್ಲಿ ಮೌಖಿವಾಗಿ ಹೇಳಿದ್ದರು.

“ನ್ಯಾಯಮೂರ್ತಿ ಚಂದ್ರಚೂಡ್ ಅವರು ತಾವೇ ಭಾಗವಾಗಿದ್ದ ಅಯೋಧ್ಯೆ ತೀರ್ಪನ್ನು ಈ ಮೂಲಕ ಉಲ್ಲಂಘಿಸಿದ್ದಾರೆ. ನ್ಯಾಯಾಂಗ ಕಾನೂನಿಗೆ ಬದ್ದವಾಗಿರಬೇಕು. ಆದರೆ, ಜ್ಞಾನವ್ಯಾಪಿ ಪ್ರಕರಣದಲ್ಲಿ ಅವರ ತೀರ್ಪು ಆಘಾತಕಾರಿ. ಚಂದ್ರಚೂಡ್ ಅವರು ಜಾತ್ಯಾತೀತತೆ ಮತ್ತು ಕಾನೂನಿನ ನಿಯಮಗಳ ಕುರಿತು ವಿಶ್ವದಾದ್ಯಂತ ಉಪನ್ಯಾಸಗಳನ್ನು ನೀಡುತ್ತಾರೆ. ಆದರೆ, ಅವರ ಜ್ಞಾನವ್ಯಾಪಿ ಕುರಿತ ತೀರ್ಪು ಇದೆಲ್ಲದಕ್ಕೂ ನೇರ ವಿರುದ್ದವಾಗಿದೆ” ಎಂದು ಇತ್ತೀಚೆಗೆ ಹಿರಿಯ ವಕೀಲ ದುಷ್ಯಂತ್ ದವೆ ಹೇಳಿದ್ದರು.

“ಚಂದ್ರಚೂಡ್ ಅವರು ಆರಾಧನಾ ಸ್ಥಳಗಳ ಕಾಯ್ದೆಗೆ ಹೊಸ ವ್ಯಾಖ್ಯಾನ ನೀಡಿ ಮಸೀದಿಗಳ ಸಮೀಕ್ಷೆಗೆ ಅನುಮತಿ ನೀಡುವ ಮೂಲಕ ಅವರು ಸಂವಿಧಾನ ಮತ್ತು ದೇಶಕ್ಕೆ ದೊಡ್ಡ ಅಪಚಾರ ಮಾಡಿದ್ದಾರೆ” ಎಂದು ದುಷ್ಯಂತ್ ದವೆ ದಿ ವೈರ್ ಸಂದರ್ಶನದಲ್ಲಿ ಕಣ್ಣೀರು ಹಾಕಿದ್ದಾರೆ.

ಚಂದ್ರಚೂಡ್ ಅವರು ಆರಾಧನಾ ಸ್ಥಳಗಳ ಕಾಯ್ದೆಗೆ ನೀಡಿರುವ ವ್ಯಾಖ್ಯಾನವೇ ಈಗ ದೇಶದಲ್ಲಿ ಮಸೀದಿ ಅಡಿ ಮಂದಿರ ಹುಡುಕುವ ಸಮಸ್ಯೆಗಳಿಗೆ ಮೂಲಕ ಕಾರಣ ಎಂದು ಕಾಂಗ್ರೆಸ್ ಕೂಡ ಆರೋಪಿಸಿದೆ.

ಬಾಬರಿ ಮಸೀದಿ ತೀರ್ಪಿನ ಬಳಿಕ, ಇನ್ನೊಂದು ಆ ರೀತಿಯ ಸಮಸ್ಯೆ ಉಂಟಾಗುವುದಿಲ್ಲ ಎಂದು ದೇಶದ ಸಂವಿಧಾನ ಪರ ಮನಸ್ಸುಗಳು ಅಂದುಕೊಂಡಿತ್ತು. ಆರಾಧನಾ ಸ್ಥಳಗಳ ಕಾಯ್ದೆ ಅದಕ್ಕೆ ಒಂದು ಗೋಡೆಯಾಗಿ ಕಂಡಿತ್ತು.

ಆದರೆ, ವಾರಣಾಸಿಯ ಜ್ಞಾನವ್ಯಾಪಿ, ಮಥುರಾದ ಶಾಹಿ ಈದ್ಗಾ, ಸಂಭಾಲ್ ಶಾಹಿ ಜಾಮಾ ಮಸೀದಿ, ಅಜ್ಮೀರ್ ದರ್ಗಾ ಪ್ರಕರಣಗಳು ಮತ್ತೆ ಆತಂಕವನ್ನು ಸೃಷ್ಟಿಸಿದೆ. ಈ ಪ್ರಕರಣಗಳಲ್ಲಿ ಆರಂಭದಲ್ಲೇ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ಆರಾಧನಾ ಸ್ಥಳಗಳ ಕಾಯ್ದೆಯನ್ನು ಎತ್ತಿ ಹಿಡಿಯಬೇಕಿದ್ದ ನ್ಯಾಯಾಂಗ, ಅರ್ಜಿಗಳನ್ನು ಪುರಸ್ಕರಿಸಿ, ಸಮೀಕ್ಷೆಗೆ ಆದೇಶಿಸುವ ಮೂಲಕ ಆತಂಕವನ್ನು ಹೆಚ್ಚಿಸಿದೆ. ಈ ಮೂಲಕ ನ್ಯಾಯಾಂಗವೇ ಸಂವಿಧಾನ ವಿರೋಧಿ ಅಭಿಯಾನಕ್ಕೆ ಅಡಿಗಲ್ಲು ಹಾಕಿ ಕೊಡುತ್ತಿದೆ.

ಮಸೀದಿಗಳ ಸ್ವರೂಪ ಬದಲಾವಣೆಯಲ್ಲ ಸಮೀಕ್ಷೆ ಮಾತ್ರ ಎಂದು ಸಮರ್ಥಿಸಲಾಗುತ್ತಿದೆ. ಸ್ವರೂಪ ಬದಲಾವಣೆಗೆ ಅವಕಾಶ ಇಲ್ಲದಿರುವಾಗ ಸಮೀಕ್ಷೆಯ ಅಗತ್ಯವೇನಿದೆ? ಎಂದು ವಕೀಲ ದುಷ್ಯಂತ್ ದವೆ ದಿ ವೈರ್ ಸಂದರ್ಶನದಲ್ಲಿ ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ದೇಶದಲ್ಲಿ ಸಂವಿಧಾನದ ಆಶಯಗಳಿಗೆ ವಿರುದ್ದವಾದ ಆಡಳಿತ ವ್ಯವಸ್ಥೆ ಇರುವಾಗ, ಸಂವಿಧಾನ ಆಶಯಗಳನ್ನು ಎತ್ತಿ ಹಿಡಿಯಬೇಕಾದ ನ್ಯಾಯಾಂಗ ಕೂಡ, ನಿರ್ಧಿಷ್ಟ ಸಮುದಾಯಗಳು ಆತಂಕಪಡುವಂತಹ ಆದೇಶಗಳನ್ನು ಕೊಡುತ್ತಿರುವುದು ದೇಶ ಎಂತಹ ಶೋಚನೀಯ ಪರಸ್ಥಿತಿಯೆಡೆಗೆ ಸಾಗುತ್ತಿದೆ ಎಂಬುವುದನ್ನು ತೋರಿಸುತ್ತದೆ.

ಸರ್ವರ ಹಕ್ಕುಗಳನ್ನು ಎತ್ತಿ ಹಿಡಿದ ಸಂವಿಧಾನದ ರೂವಾರಿ ಬಾಬಾ ಸಾಹೇಬರ ಪರಿ ನಿರ್ವಾಣ ಮತ್ತು ಬಾಬರಿಯ ನಿರ್ಣಾಮದ ಈ ದಿನ ಸಂವಿಧಾನದ ಆಶಯಗಳನ್ನು ಆಶಯಗಳನ್ನು ರಕ್ಷಿಸುವ ಕಾರ್ಯಕ್ಕೆ ಧುಮುಕಬೇಕಿದೆ. ಇತಿಹಾಸವನ್ನು ಮೆಲುಕು ಹಾಕುವ ಮೂಲಕ ಭವಿಷ್ಯವನ್ನು ರೂಪಿಸಬೇಕಿದೆ.

ಇದನ್ನೂ ಓದಿ : “ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ ‘ಸಂವಿಧಾನಕ್ಕೆ ಅಪಚಾರ’ವೆಸಗಿದ ನ್ಯಾ. ಚಂದ್ರಚೂಡ್‌” : ದುಷ್ಯಂತ್ ದವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...