Homeಮುಖಪುಟನೆನಪಿನಿಂದ ಮಾಸದ ಡಿಸೆಂಬರ್-6

ನೆನಪಿನಿಂದ ಮಾಸದ ಡಿಸೆಂಬರ್-6

- Advertisement -
- Advertisement -

ಡಿಸೆಂಬರ್ 6 ಭಾರತದ ಇತಿಹಾಸದಲ್ಲಿ ಮಹತ್ವದ ದಿನವಾಗಿದೆ. ಬಹು ವೈವಿದ್ಯತೆಯ ಈ ದೇಶಕ್ಕೆ ಜೀವಪರ, ಸಾಮಾಜಿಕ ನ್ಯಾಯ ಮತ್ತು ಸಮ ಸಮಾಜದ ಆಶಯಗಳನ್ನು ಒಳಗೊಂಡ ಉದಾತ್ತ ಸಂವಿಧಾನ ಕೊಟ್ಟ ಮಹಾನ್ ಚೇತನ ಡಾ. ಬಿ.ಆರ್ ಅಂಬೇಡ್ಕರ್ ಅವರ ‘ಮಹಾ ಪರಿನಿರ್ವಾಣ’ ಮತ್ತು ಬಾಬರಿ ಮಸೀದಿಯ ಧ್ವಂಸ ಘಟನೆ ನಡೆದ ದಿನವಾಗಿದೆ ಇದು.

ಡಿಸೆಂಬರ್‌ 6,1956 ರಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರು ಮರಣ ಹೊಂದಿದರು. ಇದೇ ಡಿಸೆಂಬರ್ 6, 1992ರಂದು ಬಾಬರಿ ಧ್ವಂಸ ನಡೆಯಿತು. ಈ ಎರಡು ಘಟನೆಗಳು ಮತ್ತು ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗಳು ಪರಸ್ಪರ ಒಂದಕ್ಕೊಂದು ಸಂಬಂಧ ಹೊಂದಿವೆ.

ಅಂಬೇಡ್ಕರ್ ರಚಿಸಿದ ಸಂವಿಧಾನ ದೇಶವನ್ನು ಜಾತ್ಯಾತೀತ, ಪ್ರಜಾಪ್ರಭುತ್ವದ ನಾಡಾಗಿ ರೂಪಿಸಿದೆ. ದೇಶದ ಪ್ರತಿಯೊಬ್ಬರನ್ನೂ ಸಮಾನತೆಯಿಂದ ಕಾಣಬೇಕು ಎಂದು ಹೇಳಿದೆ. ಸಂವಿಧಾನ ಧಾರ್ಮಿಕ ಸ್ವಾತಂತ್ರ್ಯವನ್ನು ಮೂಲಭೂತ ಹಕ್ಕಾಗಿ ರಕ್ಷಿಸಿದೆ.

ಆದರೆ, 1992ರ ಬಾಬರಿ ಮಸೀದಿ ಧ್ವಂಸ ಮತ್ತು ಬಳಿಕ ನಡೆದ ಬೆಳವಣಿಗೆಗಳು ಸಂವಿಧಾನ ಆಶಯಗಳನ್ನು ಸಮಾಧಿ ಮಾಡಿತು. ಬಾಬಾ ಸಾಹೇಬರ ಪರಿನಿರ್ವಾಣ ದಿನವೇ ನಡೆದ ಬಾಬರಿ ಮಸೀದಿ ಧ್ವಂಸದಿಂದ ಸಂವಿಧಾನದ ಆಶಯಗಳೂ ನಿಬ್ಬಾನವಾಯಿತು.

ಸಂವಿಧಾನದ ಮೂಲ ಪ್ರತಿಯಲ್ಲಿ ಈಗಲೂ ಧಾರ್ಮಿಕ ಸ್ವಾತಂತ್ರ್ಯ, ಸಮಾನತೆ, ಧಾರ್ಮಿಕ ಆಚರಣೆ ಇತ್ಯಾದಿ ಹಕ್ಕುಗಳಿವೆ. ಆದರೆ, ಅವುಗಳು ಆಚರಣೆಯಲ್ಲಿ ಉಳಿದಿಲ್ಲ. ಪ್ರಸ್ತುತ ನಡೆಯುತ್ತಿರುವ ಕೆಲವೊಂದು ಬೆಳವಣಿಗೆಗಳು ಅದಕ್ಕೆ ಪುಷ್ಠಿ ನೀಡುತ್ತಿವೆ.

ಬಾಬರಿ ಮಸೀದಿ ಧ್ವಂಸ ಸಂಬಂಧಿತ ಸಮಸ್ಯೆಗಳು ಸೃಷ್ಟಿಯಾದ ಬಳಿಕ ಪಿ.ವಿ ನರಸಿಂಹರಾವ್ ನೇತೃತ್ವದ ಕಾಂಗ್ರೆಸ್‌ ಸರ್ಕಾರ 1991ರಲ್ಲಿ ಆರಾಧನಾ ಸ್ಥಳಗಳ ಕಾಯ್ದೆ ಜಾರಿಗೆ ತಂದಿತು. ಅದರ ಪ್ರಕಾರ, ದೇಶಕ್ಕೆ ಸ್ವಾತಂತ್ರ್ಯ ಬರುವಾಗ ಧಾರ್ಮಿಕ ಸ್ಥಳಗಳ ಸ್ವರೂಪ ಹೇಗಿತ್ತೋ ಹಾಗೆಯೇ ಉಳಿಸಿಕೊಳ್ಳಬೇಕು, ಬದಲಾವಣೆ ಮಾಡಬಾರದು.

ಸಂವಿಧಾನ ಆಶಯಗಳನ್ನು ರಕ್ಷಿಸಲು ಜಾರಿಗೆ ಬಂದ ಈ ಕಾಯ್ದೆಯನ್ನು ನ್ಯಾಯಾಂಗವೇ ಮೂಲೆಗೆ ತಳ್ಳುವ ಮೂಲಕ ಅಧಿಕೃತವಾಗಿ ಸಂವಿಧಾನ ವಿರೋಧಿ ಅಭಿಯಾನಕ್ಕೆ ಅಡಿಗಲ್ಲು ಹಾಕಿ ಕೊಡುತ್ತಿದೆ.

ಬಾಬರಿ ಮಸೀದಿ ತೀರ್ಪು ಬಂದ ಬಳಿಕ, ಆ ರೀತಿಯ ಬೆಳವಣಿಗೆ ಮುಂದೆ ನಡೆಯಬಾರದು ಎಂಬ ಒತ್ತಾಯ ಕೇಳಿ ಬಂದಿತ್ತು. ಬಾಬರಿ ಮಸೀದಿ-ರಾಮ ಜನ್ಮಭೂಮಿ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಪೀಠ ಕೂಡ 1991ರ ಆರಾಧನಾ ಕಾಯ್ದೆ ಸಂವಿಧಾನ ಆಶಯಗಳಿಗೆ ಪೂರಕವಾಗಿದೆ ಎಂದಿತ್ತು.

ಬಾಬರಿ ಮಸೀದಿ ತೀರ್ಪಿತ್ತಿದ ನ್ಯಾಯ ಪೀಠದಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಕೂಡ ಇದ್ದರು. ಇದೇ ಚಂದ್ರಚೂಡ್ ಅವರು ಜ್ಞಾನವ್ಯಾಪಿ ಪ್ರಕರಣದಲ್ಲಿ ಆರಾಧನಾ ಸ್ಥಳಗಳ ಕಾಯ್ದೆಗೆ ಹೊಸ ವ್ಯಾಖ್ಯಾನವನ್ನು ಕೊಟ್ಟರು. ಆ ವ್ಯಾಖ್ಯಾನ ಈಗ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರುತ್ತಿದೆ.

“1991ರ ಆರಾಧನಾ ಸ್ಥಳಗಳ ಕಾಯ್ದೆಯು ಧಾರ್ಮಿಕ ಸ್ಥಳದ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದ್ದರೂ, ಕೇವಲ ಸ್ಥಳವೊಂದರ ಧಾರ್ಮಿಕ ಲಕ್ಷಣವನ್ನು ಖಚಿತಪಡಿಸಿಕೊಳ್ಳುವುದು ಕಾಯ್ದೆಯನ್ನು ಉಲ್ಲಂಘಿಸುವುದಿಲ್ಲ” ಎಂದು ಚಂದ್ರಚೂಡ್ ಅವರು 2022ರಲ್ಲಿ ಜ್ಞಾನವ್ಯಾಪಿ ಪ್ರಕರಣದಲ್ಲಿ ಮೌಖಿವಾಗಿ ಹೇಳಿದ್ದರು.

“ನ್ಯಾಯಮೂರ್ತಿ ಚಂದ್ರಚೂಡ್ ಅವರು ತಾವೇ ಭಾಗವಾಗಿದ್ದ ಅಯೋಧ್ಯೆ ತೀರ್ಪನ್ನು ಈ ಮೂಲಕ ಉಲ್ಲಂಘಿಸಿದ್ದಾರೆ. ನ್ಯಾಯಾಂಗ ಕಾನೂನಿಗೆ ಬದ್ದವಾಗಿರಬೇಕು. ಆದರೆ, ಜ್ಞಾನವ್ಯಾಪಿ ಪ್ರಕರಣದಲ್ಲಿ ಅವರ ತೀರ್ಪು ಆಘಾತಕಾರಿ. ಚಂದ್ರಚೂಡ್ ಅವರು ಜಾತ್ಯಾತೀತತೆ ಮತ್ತು ಕಾನೂನಿನ ನಿಯಮಗಳ ಕುರಿತು ವಿಶ್ವದಾದ್ಯಂತ ಉಪನ್ಯಾಸಗಳನ್ನು ನೀಡುತ್ತಾರೆ. ಆದರೆ, ಅವರ ಜ್ಞಾನವ್ಯಾಪಿ ಕುರಿತ ತೀರ್ಪು ಇದೆಲ್ಲದಕ್ಕೂ ನೇರ ವಿರುದ್ದವಾಗಿದೆ” ಎಂದು ಇತ್ತೀಚೆಗೆ ಹಿರಿಯ ವಕೀಲ ದುಷ್ಯಂತ್ ದವೆ ಹೇಳಿದ್ದರು.

“ಚಂದ್ರಚೂಡ್ ಅವರು ಆರಾಧನಾ ಸ್ಥಳಗಳ ಕಾಯ್ದೆಗೆ ಹೊಸ ವ್ಯಾಖ್ಯಾನ ನೀಡಿ ಮಸೀದಿಗಳ ಸಮೀಕ್ಷೆಗೆ ಅನುಮತಿ ನೀಡುವ ಮೂಲಕ ಅವರು ಸಂವಿಧಾನ ಮತ್ತು ದೇಶಕ್ಕೆ ದೊಡ್ಡ ಅಪಚಾರ ಮಾಡಿದ್ದಾರೆ” ಎಂದು ದುಷ್ಯಂತ್ ದವೆ ದಿ ವೈರ್ ಸಂದರ್ಶನದಲ್ಲಿ ಕಣ್ಣೀರು ಹಾಕಿದ್ದಾರೆ.

ಚಂದ್ರಚೂಡ್ ಅವರು ಆರಾಧನಾ ಸ್ಥಳಗಳ ಕಾಯ್ದೆಗೆ ನೀಡಿರುವ ವ್ಯಾಖ್ಯಾನವೇ ಈಗ ದೇಶದಲ್ಲಿ ಮಸೀದಿ ಅಡಿ ಮಂದಿರ ಹುಡುಕುವ ಸಮಸ್ಯೆಗಳಿಗೆ ಮೂಲಕ ಕಾರಣ ಎಂದು ಕಾಂಗ್ರೆಸ್ ಕೂಡ ಆರೋಪಿಸಿದೆ.

ಬಾಬರಿ ಮಸೀದಿ ತೀರ್ಪಿನ ಬಳಿಕ, ಇನ್ನೊಂದು ಆ ರೀತಿಯ ಸಮಸ್ಯೆ ಉಂಟಾಗುವುದಿಲ್ಲ ಎಂದು ದೇಶದ ಸಂವಿಧಾನ ಪರ ಮನಸ್ಸುಗಳು ಅಂದುಕೊಂಡಿತ್ತು. ಆರಾಧನಾ ಸ್ಥಳಗಳ ಕಾಯ್ದೆ ಅದಕ್ಕೆ ಒಂದು ಗೋಡೆಯಾಗಿ ಕಂಡಿತ್ತು.

ಆದರೆ, ವಾರಣಾಸಿಯ ಜ್ಞಾನವ್ಯಾಪಿ, ಮಥುರಾದ ಶಾಹಿ ಈದ್ಗಾ, ಸಂಭಾಲ್ ಶಾಹಿ ಜಾಮಾ ಮಸೀದಿ, ಅಜ್ಮೀರ್ ದರ್ಗಾ ಪ್ರಕರಣಗಳು ಮತ್ತೆ ಆತಂಕವನ್ನು ಸೃಷ್ಟಿಸಿದೆ. ಈ ಪ್ರಕರಣಗಳಲ್ಲಿ ಆರಂಭದಲ್ಲೇ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ಆರಾಧನಾ ಸ್ಥಳಗಳ ಕಾಯ್ದೆಯನ್ನು ಎತ್ತಿ ಹಿಡಿಯಬೇಕಿದ್ದ ನ್ಯಾಯಾಂಗ, ಅರ್ಜಿಗಳನ್ನು ಪುರಸ್ಕರಿಸಿ, ಸಮೀಕ್ಷೆಗೆ ಆದೇಶಿಸುವ ಮೂಲಕ ಆತಂಕವನ್ನು ಹೆಚ್ಚಿಸಿದೆ. ಈ ಮೂಲಕ ನ್ಯಾಯಾಂಗವೇ ಸಂವಿಧಾನ ವಿರೋಧಿ ಅಭಿಯಾನಕ್ಕೆ ಅಡಿಗಲ್ಲು ಹಾಕಿ ಕೊಡುತ್ತಿದೆ.

ಮಸೀದಿಗಳ ಸ್ವರೂಪ ಬದಲಾವಣೆಯಲ್ಲ ಸಮೀಕ್ಷೆ ಮಾತ್ರ ಎಂದು ಸಮರ್ಥಿಸಲಾಗುತ್ತಿದೆ. ಸ್ವರೂಪ ಬದಲಾವಣೆಗೆ ಅವಕಾಶ ಇಲ್ಲದಿರುವಾಗ ಸಮೀಕ್ಷೆಯ ಅಗತ್ಯವೇನಿದೆ? ಎಂದು ವಕೀಲ ದುಷ್ಯಂತ್ ದವೆ ದಿ ವೈರ್ ಸಂದರ್ಶನದಲ್ಲಿ ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ದೇಶದಲ್ಲಿ ಸಂವಿಧಾನದ ಆಶಯಗಳಿಗೆ ವಿರುದ್ದವಾದ ಆಡಳಿತ ವ್ಯವಸ್ಥೆ ಇರುವಾಗ, ಸಂವಿಧಾನ ಆಶಯಗಳನ್ನು ಎತ್ತಿ ಹಿಡಿಯಬೇಕಾದ ನ್ಯಾಯಾಂಗ ಕೂಡ, ನಿರ್ಧಿಷ್ಟ ಸಮುದಾಯಗಳು ಆತಂಕಪಡುವಂತಹ ಆದೇಶಗಳನ್ನು ಕೊಡುತ್ತಿರುವುದು ದೇಶ ಎಂತಹ ಶೋಚನೀಯ ಪರಸ್ಥಿತಿಯೆಡೆಗೆ ಸಾಗುತ್ತಿದೆ ಎಂಬುವುದನ್ನು ತೋರಿಸುತ್ತದೆ.

ಸರ್ವರ ಹಕ್ಕುಗಳನ್ನು ಎತ್ತಿ ಹಿಡಿದ ಸಂವಿಧಾನದ ರೂವಾರಿ ಬಾಬಾ ಸಾಹೇಬರ ಪರಿ ನಿರ್ವಾಣ ಮತ್ತು ಬಾಬರಿಯ ನಿರ್ಣಾಮದ ಈ ದಿನ ಸಂವಿಧಾನದ ಆಶಯಗಳನ್ನು ಆಶಯಗಳನ್ನು ರಕ್ಷಿಸುವ ಕಾರ್ಯಕ್ಕೆ ಧುಮುಕಬೇಕಿದೆ. ಇತಿಹಾಸವನ್ನು ಮೆಲುಕು ಹಾಕುವ ಮೂಲಕ ಭವಿಷ್ಯವನ್ನು ರೂಪಿಸಬೇಕಿದೆ.

ಇದನ್ನೂ ಓದಿ : “ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ ‘ಸಂವಿಧಾನಕ್ಕೆ ಅಪಚಾರ’ವೆಸಗಿದ ನ್ಯಾ. ಚಂದ್ರಚೂಡ್‌” : ದುಷ್ಯಂತ್ ದವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...