Homeಮುಖಪುಟನೆನಪಿನಿಂದ ಮಾಸದ ಡಿಸೆಂಬರ್-6

ನೆನಪಿನಿಂದ ಮಾಸದ ಡಿಸೆಂಬರ್-6

- Advertisement -
- Advertisement -

ಡಿಸೆಂಬರ್ 6 ಭಾರತದ ಇತಿಹಾಸದಲ್ಲಿ ಮಹತ್ವದ ದಿನವಾಗಿದೆ. ಬಹು ವೈವಿದ್ಯತೆಯ ಈ ದೇಶಕ್ಕೆ ಜೀವಪರ, ಸಾಮಾಜಿಕ ನ್ಯಾಯ ಮತ್ತು ಸಮ ಸಮಾಜದ ಆಶಯಗಳನ್ನು ಒಳಗೊಂಡ ಉದಾತ್ತ ಸಂವಿಧಾನ ಕೊಟ್ಟ ಮಹಾನ್ ಚೇತನ ಡಾ. ಬಿ.ಆರ್ ಅಂಬೇಡ್ಕರ್ ಅವರ ‘ಮಹಾ ಪರಿನಿರ್ವಾಣ’ ಮತ್ತು ಬಾಬರಿ ಮಸೀದಿಯ ಧ್ವಂಸ ಘಟನೆ ನಡೆದ ದಿನವಾಗಿದೆ ಇದು.

ಡಿಸೆಂಬರ್‌ 6,1956 ರಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರು ಮರಣ ಹೊಂದಿದರು. ಇದೇ ಡಿಸೆಂಬರ್ 6, 1992ರಂದು ಬಾಬರಿ ಧ್ವಂಸ ನಡೆಯಿತು. ಈ ಎರಡು ಘಟನೆಗಳು ಮತ್ತು ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗಳು ಪರಸ್ಪರ ಒಂದಕ್ಕೊಂದು ಸಂಬಂಧ ಹೊಂದಿವೆ.

ಅಂಬೇಡ್ಕರ್ ರಚಿಸಿದ ಸಂವಿಧಾನ ದೇಶವನ್ನು ಜಾತ್ಯಾತೀತ, ಪ್ರಜಾಪ್ರಭುತ್ವದ ನಾಡಾಗಿ ರೂಪಿಸಿದೆ. ದೇಶದ ಪ್ರತಿಯೊಬ್ಬರನ್ನೂ ಸಮಾನತೆಯಿಂದ ಕಾಣಬೇಕು ಎಂದು ಹೇಳಿದೆ. ಸಂವಿಧಾನ ಧಾರ್ಮಿಕ ಸ್ವಾತಂತ್ರ್ಯವನ್ನು ಮೂಲಭೂತ ಹಕ್ಕಾಗಿ ರಕ್ಷಿಸಿದೆ.

ಆದರೆ, 1992ರ ಬಾಬರಿ ಮಸೀದಿ ಧ್ವಂಸ ಮತ್ತು ಬಳಿಕ ನಡೆದ ಬೆಳವಣಿಗೆಗಳು ಸಂವಿಧಾನ ಆಶಯಗಳನ್ನು ಸಮಾಧಿ ಮಾಡಿತು. ಬಾಬಾ ಸಾಹೇಬರ ಪರಿನಿರ್ವಾಣ ದಿನವೇ ನಡೆದ ಬಾಬರಿ ಮಸೀದಿ ಧ್ವಂಸದಿಂದ ಸಂವಿಧಾನದ ಆಶಯಗಳೂ ನಿಬ್ಬಾನವಾಯಿತು.

ಸಂವಿಧಾನದ ಮೂಲ ಪ್ರತಿಯಲ್ಲಿ ಈಗಲೂ ಧಾರ್ಮಿಕ ಸ್ವಾತಂತ್ರ್ಯ, ಸಮಾನತೆ, ಧಾರ್ಮಿಕ ಆಚರಣೆ ಇತ್ಯಾದಿ ಹಕ್ಕುಗಳಿವೆ. ಆದರೆ, ಅವುಗಳು ಆಚರಣೆಯಲ್ಲಿ ಉಳಿದಿಲ್ಲ. ಪ್ರಸ್ತುತ ನಡೆಯುತ್ತಿರುವ ಕೆಲವೊಂದು ಬೆಳವಣಿಗೆಗಳು ಅದಕ್ಕೆ ಪುಷ್ಠಿ ನೀಡುತ್ತಿವೆ.

ಬಾಬರಿ ಮಸೀದಿ ಧ್ವಂಸ ಸಂಬಂಧಿತ ಸಮಸ್ಯೆಗಳು ಸೃಷ್ಟಿಯಾದ ಬಳಿಕ ಪಿ.ವಿ ನರಸಿಂಹರಾವ್ ನೇತೃತ್ವದ ಕಾಂಗ್ರೆಸ್‌ ಸರ್ಕಾರ 1991ರಲ್ಲಿ ಆರಾಧನಾ ಸ್ಥಳಗಳ ಕಾಯ್ದೆ ಜಾರಿಗೆ ತಂದಿತು. ಅದರ ಪ್ರಕಾರ, ದೇಶಕ್ಕೆ ಸ್ವಾತಂತ್ರ್ಯ ಬರುವಾಗ ಧಾರ್ಮಿಕ ಸ್ಥಳಗಳ ಸ್ವರೂಪ ಹೇಗಿತ್ತೋ ಹಾಗೆಯೇ ಉಳಿಸಿಕೊಳ್ಳಬೇಕು, ಬದಲಾವಣೆ ಮಾಡಬಾರದು.

ಸಂವಿಧಾನ ಆಶಯಗಳನ್ನು ರಕ್ಷಿಸಲು ಜಾರಿಗೆ ಬಂದ ಈ ಕಾಯ್ದೆಯನ್ನು ನ್ಯಾಯಾಂಗವೇ ಮೂಲೆಗೆ ತಳ್ಳುವ ಮೂಲಕ ಅಧಿಕೃತವಾಗಿ ಸಂವಿಧಾನ ವಿರೋಧಿ ಅಭಿಯಾನಕ್ಕೆ ಅಡಿಗಲ್ಲು ಹಾಕಿ ಕೊಡುತ್ತಿದೆ.

ಬಾಬರಿ ಮಸೀದಿ ತೀರ್ಪು ಬಂದ ಬಳಿಕ, ಆ ರೀತಿಯ ಬೆಳವಣಿಗೆ ಮುಂದೆ ನಡೆಯಬಾರದು ಎಂಬ ಒತ್ತಾಯ ಕೇಳಿ ಬಂದಿತ್ತು. ಬಾಬರಿ ಮಸೀದಿ-ರಾಮ ಜನ್ಮಭೂಮಿ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಪೀಠ ಕೂಡ 1991ರ ಆರಾಧನಾ ಕಾಯ್ದೆ ಸಂವಿಧಾನ ಆಶಯಗಳಿಗೆ ಪೂರಕವಾಗಿದೆ ಎಂದಿತ್ತು.

ಬಾಬರಿ ಮಸೀದಿ ತೀರ್ಪಿತ್ತಿದ ನ್ಯಾಯ ಪೀಠದಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಕೂಡ ಇದ್ದರು. ಇದೇ ಚಂದ್ರಚೂಡ್ ಅವರು ಜ್ಞಾನವ್ಯಾಪಿ ಪ್ರಕರಣದಲ್ಲಿ ಆರಾಧನಾ ಸ್ಥಳಗಳ ಕಾಯ್ದೆಗೆ ಹೊಸ ವ್ಯಾಖ್ಯಾನವನ್ನು ಕೊಟ್ಟರು. ಆ ವ್ಯಾಖ್ಯಾನ ಈಗ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರುತ್ತಿದೆ.

“1991ರ ಆರಾಧನಾ ಸ್ಥಳಗಳ ಕಾಯ್ದೆಯು ಧಾರ್ಮಿಕ ಸ್ಥಳದ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದ್ದರೂ, ಕೇವಲ ಸ್ಥಳವೊಂದರ ಧಾರ್ಮಿಕ ಲಕ್ಷಣವನ್ನು ಖಚಿತಪಡಿಸಿಕೊಳ್ಳುವುದು ಕಾಯ್ದೆಯನ್ನು ಉಲ್ಲಂಘಿಸುವುದಿಲ್ಲ” ಎಂದು ಚಂದ್ರಚೂಡ್ ಅವರು 2022ರಲ್ಲಿ ಜ್ಞಾನವ್ಯಾಪಿ ಪ್ರಕರಣದಲ್ಲಿ ಮೌಖಿವಾಗಿ ಹೇಳಿದ್ದರು.

“ನ್ಯಾಯಮೂರ್ತಿ ಚಂದ್ರಚೂಡ್ ಅವರು ತಾವೇ ಭಾಗವಾಗಿದ್ದ ಅಯೋಧ್ಯೆ ತೀರ್ಪನ್ನು ಈ ಮೂಲಕ ಉಲ್ಲಂಘಿಸಿದ್ದಾರೆ. ನ್ಯಾಯಾಂಗ ಕಾನೂನಿಗೆ ಬದ್ದವಾಗಿರಬೇಕು. ಆದರೆ, ಜ್ಞಾನವ್ಯಾಪಿ ಪ್ರಕರಣದಲ್ಲಿ ಅವರ ತೀರ್ಪು ಆಘಾತಕಾರಿ. ಚಂದ್ರಚೂಡ್ ಅವರು ಜಾತ್ಯಾತೀತತೆ ಮತ್ತು ಕಾನೂನಿನ ನಿಯಮಗಳ ಕುರಿತು ವಿಶ್ವದಾದ್ಯಂತ ಉಪನ್ಯಾಸಗಳನ್ನು ನೀಡುತ್ತಾರೆ. ಆದರೆ, ಅವರ ಜ್ಞಾನವ್ಯಾಪಿ ಕುರಿತ ತೀರ್ಪು ಇದೆಲ್ಲದಕ್ಕೂ ನೇರ ವಿರುದ್ದವಾಗಿದೆ” ಎಂದು ಇತ್ತೀಚೆಗೆ ಹಿರಿಯ ವಕೀಲ ದುಷ್ಯಂತ್ ದವೆ ಹೇಳಿದ್ದರು.

“ಚಂದ್ರಚೂಡ್ ಅವರು ಆರಾಧನಾ ಸ್ಥಳಗಳ ಕಾಯ್ದೆಗೆ ಹೊಸ ವ್ಯಾಖ್ಯಾನ ನೀಡಿ ಮಸೀದಿಗಳ ಸಮೀಕ್ಷೆಗೆ ಅನುಮತಿ ನೀಡುವ ಮೂಲಕ ಅವರು ಸಂವಿಧಾನ ಮತ್ತು ದೇಶಕ್ಕೆ ದೊಡ್ಡ ಅಪಚಾರ ಮಾಡಿದ್ದಾರೆ” ಎಂದು ದುಷ್ಯಂತ್ ದವೆ ದಿ ವೈರ್ ಸಂದರ್ಶನದಲ್ಲಿ ಕಣ್ಣೀರು ಹಾಕಿದ್ದಾರೆ.

ಚಂದ್ರಚೂಡ್ ಅವರು ಆರಾಧನಾ ಸ್ಥಳಗಳ ಕಾಯ್ದೆಗೆ ನೀಡಿರುವ ವ್ಯಾಖ್ಯಾನವೇ ಈಗ ದೇಶದಲ್ಲಿ ಮಸೀದಿ ಅಡಿ ಮಂದಿರ ಹುಡುಕುವ ಸಮಸ್ಯೆಗಳಿಗೆ ಮೂಲಕ ಕಾರಣ ಎಂದು ಕಾಂಗ್ರೆಸ್ ಕೂಡ ಆರೋಪಿಸಿದೆ.

ಬಾಬರಿ ಮಸೀದಿ ತೀರ್ಪಿನ ಬಳಿಕ, ಇನ್ನೊಂದು ಆ ರೀತಿಯ ಸಮಸ್ಯೆ ಉಂಟಾಗುವುದಿಲ್ಲ ಎಂದು ದೇಶದ ಸಂವಿಧಾನ ಪರ ಮನಸ್ಸುಗಳು ಅಂದುಕೊಂಡಿತ್ತು. ಆರಾಧನಾ ಸ್ಥಳಗಳ ಕಾಯ್ದೆ ಅದಕ್ಕೆ ಒಂದು ಗೋಡೆಯಾಗಿ ಕಂಡಿತ್ತು.

ಆದರೆ, ವಾರಣಾಸಿಯ ಜ್ಞಾನವ್ಯಾಪಿ, ಮಥುರಾದ ಶಾಹಿ ಈದ್ಗಾ, ಸಂಭಾಲ್ ಶಾಹಿ ಜಾಮಾ ಮಸೀದಿ, ಅಜ್ಮೀರ್ ದರ್ಗಾ ಪ್ರಕರಣಗಳು ಮತ್ತೆ ಆತಂಕವನ್ನು ಸೃಷ್ಟಿಸಿದೆ. ಈ ಪ್ರಕರಣಗಳಲ್ಲಿ ಆರಂಭದಲ್ಲೇ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ಆರಾಧನಾ ಸ್ಥಳಗಳ ಕಾಯ್ದೆಯನ್ನು ಎತ್ತಿ ಹಿಡಿಯಬೇಕಿದ್ದ ನ್ಯಾಯಾಂಗ, ಅರ್ಜಿಗಳನ್ನು ಪುರಸ್ಕರಿಸಿ, ಸಮೀಕ್ಷೆಗೆ ಆದೇಶಿಸುವ ಮೂಲಕ ಆತಂಕವನ್ನು ಹೆಚ್ಚಿಸಿದೆ. ಈ ಮೂಲಕ ನ್ಯಾಯಾಂಗವೇ ಸಂವಿಧಾನ ವಿರೋಧಿ ಅಭಿಯಾನಕ್ಕೆ ಅಡಿಗಲ್ಲು ಹಾಕಿ ಕೊಡುತ್ತಿದೆ.

ಮಸೀದಿಗಳ ಸ್ವರೂಪ ಬದಲಾವಣೆಯಲ್ಲ ಸಮೀಕ್ಷೆ ಮಾತ್ರ ಎಂದು ಸಮರ್ಥಿಸಲಾಗುತ್ತಿದೆ. ಸ್ವರೂಪ ಬದಲಾವಣೆಗೆ ಅವಕಾಶ ಇಲ್ಲದಿರುವಾಗ ಸಮೀಕ್ಷೆಯ ಅಗತ್ಯವೇನಿದೆ? ಎಂದು ವಕೀಲ ದುಷ್ಯಂತ್ ದವೆ ದಿ ವೈರ್ ಸಂದರ್ಶನದಲ್ಲಿ ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ದೇಶದಲ್ಲಿ ಸಂವಿಧಾನದ ಆಶಯಗಳಿಗೆ ವಿರುದ್ದವಾದ ಆಡಳಿತ ವ್ಯವಸ್ಥೆ ಇರುವಾಗ, ಸಂವಿಧಾನ ಆಶಯಗಳನ್ನು ಎತ್ತಿ ಹಿಡಿಯಬೇಕಾದ ನ್ಯಾಯಾಂಗ ಕೂಡ, ನಿರ್ಧಿಷ್ಟ ಸಮುದಾಯಗಳು ಆತಂಕಪಡುವಂತಹ ಆದೇಶಗಳನ್ನು ಕೊಡುತ್ತಿರುವುದು ದೇಶ ಎಂತಹ ಶೋಚನೀಯ ಪರಸ್ಥಿತಿಯೆಡೆಗೆ ಸಾಗುತ್ತಿದೆ ಎಂಬುವುದನ್ನು ತೋರಿಸುತ್ತದೆ.

ಸರ್ವರ ಹಕ್ಕುಗಳನ್ನು ಎತ್ತಿ ಹಿಡಿದ ಸಂವಿಧಾನದ ರೂವಾರಿ ಬಾಬಾ ಸಾಹೇಬರ ಪರಿ ನಿರ್ವಾಣ ಮತ್ತು ಬಾಬರಿಯ ನಿರ್ಣಾಮದ ಈ ದಿನ ಸಂವಿಧಾನದ ಆಶಯಗಳನ್ನು ಆಶಯಗಳನ್ನು ರಕ್ಷಿಸುವ ಕಾರ್ಯಕ್ಕೆ ಧುಮುಕಬೇಕಿದೆ. ಇತಿಹಾಸವನ್ನು ಮೆಲುಕು ಹಾಕುವ ಮೂಲಕ ಭವಿಷ್ಯವನ್ನು ರೂಪಿಸಬೇಕಿದೆ.

ಇದನ್ನೂ ಓದಿ : “ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ ‘ಸಂವಿಧಾನಕ್ಕೆ ಅಪಚಾರ’ವೆಸಗಿದ ನ್ಯಾ. ಚಂದ್ರಚೂಡ್‌” : ದುಷ್ಯಂತ್ ದವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...