Homeಮುಖಪುಟಅನ್ಯಾಯದ ಕ್ಷೇತ್ರ ಪುನರ್‌ವಿಂಗಡನೆ ರಾಜ್ಯಗಳನ್ನು ರಾಜಕೀಯವಾಗಿ ದುರ್ಬಲಗೊಳಿಸುತ್ತದೆ: ಎಂ.ಕೆ ಸ್ಟಾಲಿನ್

ಅನ್ಯಾಯದ ಕ್ಷೇತ್ರ ಪುನರ್‌ವಿಂಗಡನೆ ರಾಜ್ಯಗಳನ್ನು ರಾಜಕೀಯವಾಗಿ ದುರ್ಬಲಗೊಳಿಸುತ್ತದೆ: ಎಂ.ಕೆ ಸ್ಟಾಲಿನ್

- Advertisement -
- Advertisement -

ಚೆನ್ನೈನಲ್ಲಿ ಶನಿವಾರ (ಮಾ.22) ನಡೆದ ನ್ಯಾಯಯುತ ಕ್ಷೇತ್ರ ಪುನರ್‌ವಿಂಗಡನೆಗಾಗಿ ‘ಜಂಟಿ ಕ್ರಿಯಾ ಸಮಿತಿ’ (ಜೆಎಸಿ) ಸಭೆಯಲ್ಲಿ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, “ರಾಷ್ಟ್ರದ ಗಮನ ಸೆಳೆಯುವಷ್ಟು ರಾಜಕೀಯ ಶಕ್ತಿ ಇಲ್ಲದ ಕಾರಣ ನ್ಯಾಯಕ್ಕಾಗಿ ಎತ್ತಿರುವ ರಾಜ್ಯದ ಧ್ವನಿಯನ್ನು ನಿರ್ಲಕ್ಷಿಸಲಾಗಿದೆ. ಸಂಸತ್ತಿನಲ್ಲಿ ನಮ್ಮ ಪ್ರಾತಿನಿಧ್ಯ ಕಡಿಮೆಯಾಗುವುದರಿಂದ ನಮ್ಮ ರಾಜಕೀಯ ಶಕ್ತಿ ಕಡಿಮೆಯಾಗುತ್ತದೆ” ಎಂದು ಹೇಳಿದರು.

ಮಣಿಪುರದಲ್ಲಿ ಎರಡು ವರ್ಷಗಳಿಗೂ ಹೆಚ್ಚು ಸಮಯದಿಂದ ಹಿಂಸಾಚಾರ ನಡೆಯುತ್ತಿದ್ದರೂ, ಕೇಂದ್ರ ಸರ್ಕಾರ ಮೌನ ವಹಿಸಿದೆ. ರಾಜಕೀಯ ಬಲ ಇಲ್ಲದ ರಾಜ್ಯಗಳಲ್ಲಿ ಸರ್ಕಾರದ ನಿಷ್ಕ್ರಿಯತೆಗೆ ಇದು ಉದಾಹರಣೆ ಎಂದರು.

“ನಮ್ಮ ಹೋರಾಟ ಕ್ಷೇತ್ರ ಪುನರ್‌ವಿಂಗಡನೆಯ ವಿರುದ್ದವಲ್ಲ, ನ್ಯಾಯಯುತ ಕ್ಷೇತ್ರ ಪುನರ್‌ವಿಂಗಡನೆಗಾಗಿ. ಇದು ಸೀಟುಗಳ ಸಂಖ್ಯೆಯ ವಿಷಯವಲ್ಲ. ಬದಲಾಗಿ, ಇದು ನಮ್ಮ ಅಧಿಕಾರ, ನಮ್ಮ ಹಕ್ಕುಗಳು ಮತ್ತು ನಮ್ಮ ಭವಿಷ್ಯದ ವಿಷಯ” ಎಂದು ಸ್ಟಾಲಿನ್ ಸ್ಪಷ್ಟಪಡಿಸಿದರು.

ರಾಜ್ಯಗಳ ಸ್ವಾಯತ್ತತೆಯನ್ನು ಖಚಿತಪಡಿಸಿಕೊಂಡರೆ ಮಾತ್ರ ಭಾರತದಲ್ಲಿ ಒಕ್ಕೂಟ ವ್ಯವಸ್ಥೆ ಮೇಲುಗೈ ಸಾಧಿಸುತ್ತದೆ ಎಂದು ಅವರು ಒತ್ತಿ ಹೇಳಿದರು.

“ಈ ಹಿಂದೆ ಒಕ್ಕೂಟ ವ್ಯವಸ್ಥೆಗೆ ಬೆದರಿಕೆಗಳು ಬಂದಾಗಲೆಲ್ಲಾ, ವಿವಿಧ ಪ್ರಜಾಪ್ರಭುತ್ವ ಶಕ್ತಿಗಳು ಅವುಗಳನ್ನು ತಡೆಯುತ್ತಿದ್ದವು. ಈಗ, ನಾವು ಅದೇ ರೀತಿಯ ಸವಾಲುಗಳು ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದೇವೆ” ಎಂದರು.

ಜನಸಂಖ್ಯೆ ಆಧಾರಿತ ಕ್ಷೇತ್ರ ಪುನರ್‌ವಿಂಗಡನೆಯಿಂದಾಗುವ ಹಾನಿಗಳನ್ನು ಪಟ್ಟಿ ಮಾಡಿದ ಸ್ಟಾಲಿನ್ “ಪ್ರಾತಿನಿಧ್ಯ ಕಡಿಮೆಯಾಗುವುದರಿಂದ ರಾಜ್ಯಗಳು ಕೇಂದ್ರದಿಂದ ತಮ್ಮ ಹಣವನ್ನು ಪಡೆಯಲು ಹೆಣಗಾಡುತ್ತವೆ. ಕೇಂದ್ರ ಅನಗತ್ಯ ಕಾನೂನುಗಳನ್ನು ಜಾರಿಗೆ ತರುತ್ತದೆ. ನಮ್ಮ ಜನರ ಮೇಲೆ ಪರಿಣಾಮ ಬೀರುವ ನಿರ್ಧಾರಗಳನ್ನು ನಮ್ಮನ್ನು ಅರ್ಥಮಾಡಿಕೊಳ್ಳದವರು ತೆಗೆದುಕೊಳ್ಳುತ್ತಾರೆ. ಮಹಿಳಾ ಸಬಲೀಕರಣವು ಹಿನ್ನಡೆ ಅನುಭವಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಅವಕಾಶಗಳನ್ನು ಕಳೆದುಕೊಳ್ಳುತ್ತಾರೆ. ರೈತರು ತಮ್ಮ ಬೆಂಬಲವನ್ನು ಕಳೆದುಕೊಳ್ಳುತ್ತಾರೆ. ನಮ್ಮ ಸಂಸ್ಕೃತಿ, ಗುರುತು, ಪ್ರಗತಿಗೆ ಧಕ್ಕೆಯಾಗುತ್ತದೆ. ಸಾಮಾಜಿಕ ನ್ಯಾಯವು ದುರ್ಬಲಗೊಳ್ಳುತ್ತದೆ. ಎಸ್‌ಸಿ/ಎಸ್‌ಟಿ ಸಮುದಾಯಗಳ ಮೇಲೆ ಪರಿಣಾಮ ಬೀರುತ್ತದೆ” ಎಂದು ವಿವರಿಸಿದರು. “ನಮ್ಮ ದೇಶದಲ್ಲಿಯೇ ನಾವು ರಾಜಕೀಯವಾಗಿ ದುರ್ಬಲರಾಗುತ್ತೇವೆ” ಎಂದರು.

ಭಾರತದ ಒಕ್ಕೂಟ ವ್ಯವಸ್ಥೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಇಂದಿನ ದಿನ ಮಹತ್ವದ ದಿನವಾಗಿ ಇತಿಹಾಸದ ಪುಟ ಸೇರಲಿದೆ ಎಂದು ಸಿಎಂ ಸ್ಟಾಲಿನ್ ಪುನರುಚ್ಚರಿಸಿದರು.

ಜಾತಿ ಆಧಾರಿತ ಜನಗಣತಿ ಮತ್ತು ಆ ಆಧಾರದ ಮೇಲೆ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಬೇಕೆಂದು ಕಾಂಗ್ರೆಸ್ ಒತ್ತಾಯಿಸಿದಾಗ, ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರ ಪುನರ್‌ವಿಂಗಡನೆ ನಡೆದರೆ ದಕ್ಷಿಣ ರಾಜ್ಯಗಳು ಸುಮಾರು 100 ಸ್ಥಾನಗಳನ್ನು ಕಳೆದುಕೊಳ್ಳುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ 2023ರಲ್ಲಿ ತೆಲಂಗಾಣದಲ್ಲಿ ಮಾತನಾಡುತ್ತಾ ಹೇಳಿದ್ದಾರೆ. ‘ದಕ್ಷಿಣದ ರಾಜ್ಯಗಳು ಅದನ್ನು ಸ್ವೀಕರಿಸುತ್ತವೆಯೇ?” ಸ್ಟಾಲಿನ್ ಪ್ರಶ್ನಿಸಿದರು.

ದಕ್ಷಿಣ ರಾಜ್ಯಗಳಲ್ಲಿ ಸ್ಥಾನಗಳ ಸಂಖ್ಯೆ ಕಡಿಮೆಯಾಗಲಿದೆ ಎಂದು ಮೋದಿ ಒಪ್ಪಿಕೊಂಡಿದ್ದಾರೆ. ಆದರೂ, ಕ್ಷೇತ್ರ ಪುನರ್‌ವಿಂಗಡನೆಗೆ ಒತ್ತಾಯಿಸುತ್ತಲೇ ಇದ್ದಾರೆ ಎಂದು ಹೇಳಿದರು. ಬಿಜೆಪಿ ಯಾವಾಗಲೂ ರಾಜ್ಯಗಳ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಈಗಲೂ ತಮ್ಮ ಉದ್ದೇಶಗಳನ್ನು ಪೂರೈಸಲು ಕ್ಷೇತ್ರ ಪುನರ್‌ವಿಂಗಡನೆ ತರುತ್ತಿದ್ದಾರೆ ಎಂದು ಆರೋಪಿಸಿದರು.

ಈ ಬೆದರಿಕೆಯನ್ನು ಅರ್ಥಮಾಡಿಕೊಂಡು, ತಮಿಳುನಾಡು ದೊಡ್ಡ ಒಗ್ಗಟ್ಟಿನಿಂದ ಅದರ ವಿರುದ್ಧ ನಿಂತಿದೆ. ದೇಶದ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ರಕ್ಷಿಸುವಲ್ಲಿ ಇದೇ ರೀತಿಯ ಒಗ್ಗಟ್ಟಿಗಾಗಿ ಜೆಎಸಿ ಸಭೆಯಲ್ಲಿ ನಾಯಕರಿಗೆ ನಾನು ಮನವಿ ಮಾಡಿತ್ತಿದ್ದೇನೆ” ಎಂದರು.

ಕ್ಷೇತ್ರ ಪುನರ್‌ವಿಂಗಡನೆಯ ರಾಜಕೀಯ ವಿರೋಧಗಳನ್ನು ಕಾನೂನು ವೇದಿಕೆಗೆ ವಿಸ್ತರಿಸಲು ನಾಯಕರ ಸಲಹೆಗಳನ್ನು ಸ್ಟಾಲಿನ್ ಆಹ್ವಾನಿಸಿದ್ದು, ರಾಜಕೀಯ ಮತ್ತು ಕಾನೂನು ಕ್ರಮಗಳನ್ನು ಕೈಗೊಳ್ಳಲು ‘ತಜ್ಞರ ಸಮಿತಿ’ಯನ್ನು ಪ್ರಸ್ತಾಪಿಸಿದರು.

“ಜನಸಂಖ್ಯೆ ಆಧಾರಿತ ಕ್ಷೇತ್ರ ಪುನರ್‌ವಿಂಗಡನೆ ಅನುಮತಿಸಬಾರದು ಎಂದು ನಾವೆಲ್ಲರೂ ದೃಢಸಂಕಲ್ಪ ಮಾಡಬೇಕು. ಜನಸಂಖ್ಯೆಯನ್ನು ನಿಯಂತ್ರಣದಲ್ಲಿಟ್ಟುಕೊಂಡ ರಾಜ್ಯಗಳನ್ನು ಶಿಕ್ಷಿಸಲು ನಾವು ಬಿಡಬಾರದು” ಎಂದು ಹೇಳಿದರು. ನ್ಯಾಯಯುತವಾದ ಕ್ಷೇತ್ರ ಪುನರ್‌ವಿಂಗಡನೆ ಸಾಧಿಸುವವರೆಗೆ ಹೋರಾಟವನ್ನು ಮುಂದುವರೆಸುವುದಾಗಿ ಸ್ಟಾಲಿನ್ ಒತ್ತಿ ಹೇಳಿದರು.

“ಯಾವುದೇ ಬೆಲೆ ತೆತ್ತಾದರೂ, ಈ ಸಭೆಯಲ್ಲಿ ಉಪಸ್ಥಿತರಿರುವ ರಾಜ್ಯಗಳು ನಮ್ಮ ಸಂಸದೀಯ ಪ್ರಾತಿನಿಧ್ಯ ಕಡಿಮೆಯಾಗಲು ಬಿಡಬಾರದು” ಎಂದು ಅವರು ಮನವಿ ಮಾಡಿದರು.

ಕ್ಷೇತ್ರ ಪುನರ್‌ವಿಂಗಡನೆಯಿಂದ ಪರಿಣಾಮ ಬೀರುವ ಸಾಧ್ಯತೆ ಇರುವ ರಾಜ್ಯಗಳ ರಾಜಕೀಯ ನಾಯಕರಾದ ಕೇರಳ ಸಿಎಂ ಪಿಣರಾಯಿ ವಿಜಯನ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಪಂಜಾಬ್ ಸಿಎಂ ಭಗವಂತ್ ಮಾನ್, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೆಎಸಿ ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಚೋದನಕಾರಿ & ನಿಂದನಾತ್ಮಕ ಹೇಳಿಕೆ | ಯತಿ ನರಸಿಂಹಾನಂದ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...