Homeಮುಖಪುಟಅನ್ಯಾಯದ ಕ್ಷೇತ್ರ ಪುನರ್‌ವಿಂಗಡನೆ ರಾಜ್ಯಗಳನ್ನು ರಾಜಕೀಯವಾಗಿ ದುರ್ಬಲಗೊಳಿಸುತ್ತದೆ: ಎಂ.ಕೆ ಸ್ಟಾಲಿನ್

ಅನ್ಯಾಯದ ಕ್ಷೇತ್ರ ಪುನರ್‌ವಿಂಗಡನೆ ರಾಜ್ಯಗಳನ್ನು ರಾಜಕೀಯವಾಗಿ ದುರ್ಬಲಗೊಳಿಸುತ್ತದೆ: ಎಂ.ಕೆ ಸ್ಟಾಲಿನ್

- Advertisement -
- Advertisement -

ಚೆನ್ನೈನಲ್ಲಿ ಶನಿವಾರ (ಮಾ.22) ನಡೆದ ನ್ಯಾಯಯುತ ಕ್ಷೇತ್ರ ಪುನರ್‌ವಿಂಗಡನೆಗಾಗಿ ‘ಜಂಟಿ ಕ್ರಿಯಾ ಸಮಿತಿ’ (ಜೆಎಸಿ) ಸಭೆಯಲ್ಲಿ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, “ರಾಷ್ಟ್ರದ ಗಮನ ಸೆಳೆಯುವಷ್ಟು ರಾಜಕೀಯ ಶಕ್ತಿ ಇಲ್ಲದ ಕಾರಣ ನ್ಯಾಯಕ್ಕಾಗಿ ಎತ್ತಿರುವ ರಾಜ್ಯದ ಧ್ವನಿಯನ್ನು ನಿರ್ಲಕ್ಷಿಸಲಾಗಿದೆ. ಸಂಸತ್ತಿನಲ್ಲಿ ನಮ್ಮ ಪ್ರಾತಿನಿಧ್ಯ ಕಡಿಮೆಯಾಗುವುದರಿಂದ ನಮ್ಮ ರಾಜಕೀಯ ಶಕ್ತಿ ಕಡಿಮೆಯಾಗುತ್ತದೆ” ಎಂದು ಹೇಳಿದರು.

ಮಣಿಪುರದಲ್ಲಿ ಎರಡು ವರ್ಷಗಳಿಗೂ ಹೆಚ್ಚು ಸಮಯದಿಂದ ಹಿಂಸಾಚಾರ ನಡೆಯುತ್ತಿದ್ದರೂ, ಕೇಂದ್ರ ಸರ್ಕಾರ ಮೌನ ವಹಿಸಿದೆ. ರಾಜಕೀಯ ಬಲ ಇಲ್ಲದ ರಾಜ್ಯಗಳಲ್ಲಿ ಸರ್ಕಾರದ ನಿಷ್ಕ್ರಿಯತೆಗೆ ಇದು ಉದಾಹರಣೆ ಎಂದರು.

“ನಮ್ಮ ಹೋರಾಟ ಕ್ಷೇತ್ರ ಪುನರ್‌ವಿಂಗಡನೆಯ ವಿರುದ್ದವಲ್ಲ, ನ್ಯಾಯಯುತ ಕ್ಷೇತ್ರ ಪುನರ್‌ವಿಂಗಡನೆಗಾಗಿ. ಇದು ಸೀಟುಗಳ ಸಂಖ್ಯೆಯ ವಿಷಯವಲ್ಲ. ಬದಲಾಗಿ, ಇದು ನಮ್ಮ ಅಧಿಕಾರ, ನಮ್ಮ ಹಕ್ಕುಗಳು ಮತ್ತು ನಮ್ಮ ಭವಿಷ್ಯದ ವಿಷಯ” ಎಂದು ಸ್ಟಾಲಿನ್ ಸ್ಪಷ್ಟಪಡಿಸಿದರು.

ರಾಜ್ಯಗಳ ಸ್ವಾಯತ್ತತೆಯನ್ನು ಖಚಿತಪಡಿಸಿಕೊಂಡರೆ ಮಾತ್ರ ಭಾರತದಲ್ಲಿ ಒಕ್ಕೂಟ ವ್ಯವಸ್ಥೆ ಮೇಲುಗೈ ಸಾಧಿಸುತ್ತದೆ ಎಂದು ಅವರು ಒತ್ತಿ ಹೇಳಿದರು.

“ಈ ಹಿಂದೆ ಒಕ್ಕೂಟ ವ್ಯವಸ್ಥೆಗೆ ಬೆದರಿಕೆಗಳು ಬಂದಾಗಲೆಲ್ಲಾ, ವಿವಿಧ ಪ್ರಜಾಪ್ರಭುತ್ವ ಶಕ್ತಿಗಳು ಅವುಗಳನ್ನು ತಡೆಯುತ್ತಿದ್ದವು. ಈಗ, ನಾವು ಅದೇ ರೀತಿಯ ಸವಾಲುಗಳು ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದೇವೆ” ಎಂದರು.

ಜನಸಂಖ್ಯೆ ಆಧಾರಿತ ಕ್ಷೇತ್ರ ಪುನರ್‌ವಿಂಗಡನೆಯಿಂದಾಗುವ ಹಾನಿಗಳನ್ನು ಪಟ್ಟಿ ಮಾಡಿದ ಸ್ಟಾಲಿನ್ “ಪ್ರಾತಿನಿಧ್ಯ ಕಡಿಮೆಯಾಗುವುದರಿಂದ ರಾಜ್ಯಗಳು ಕೇಂದ್ರದಿಂದ ತಮ್ಮ ಹಣವನ್ನು ಪಡೆಯಲು ಹೆಣಗಾಡುತ್ತವೆ. ಕೇಂದ್ರ ಅನಗತ್ಯ ಕಾನೂನುಗಳನ್ನು ಜಾರಿಗೆ ತರುತ್ತದೆ. ನಮ್ಮ ಜನರ ಮೇಲೆ ಪರಿಣಾಮ ಬೀರುವ ನಿರ್ಧಾರಗಳನ್ನು ನಮ್ಮನ್ನು ಅರ್ಥಮಾಡಿಕೊಳ್ಳದವರು ತೆಗೆದುಕೊಳ್ಳುತ್ತಾರೆ. ಮಹಿಳಾ ಸಬಲೀಕರಣವು ಹಿನ್ನಡೆ ಅನುಭವಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಅವಕಾಶಗಳನ್ನು ಕಳೆದುಕೊಳ್ಳುತ್ತಾರೆ. ರೈತರು ತಮ್ಮ ಬೆಂಬಲವನ್ನು ಕಳೆದುಕೊಳ್ಳುತ್ತಾರೆ. ನಮ್ಮ ಸಂಸ್ಕೃತಿ, ಗುರುತು, ಪ್ರಗತಿಗೆ ಧಕ್ಕೆಯಾಗುತ್ತದೆ. ಸಾಮಾಜಿಕ ನ್ಯಾಯವು ದುರ್ಬಲಗೊಳ್ಳುತ್ತದೆ. ಎಸ್‌ಸಿ/ಎಸ್‌ಟಿ ಸಮುದಾಯಗಳ ಮೇಲೆ ಪರಿಣಾಮ ಬೀರುತ್ತದೆ” ಎಂದು ವಿವರಿಸಿದರು. “ನಮ್ಮ ದೇಶದಲ್ಲಿಯೇ ನಾವು ರಾಜಕೀಯವಾಗಿ ದುರ್ಬಲರಾಗುತ್ತೇವೆ” ಎಂದರು.

ಭಾರತದ ಒಕ್ಕೂಟ ವ್ಯವಸ್ಥೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಇಂದಿನ ದಿನ ಮಹತ್ವದ ದಿನವಾಗಿ ಇತಿಹಾಸದ ಪುಟ ಸೇರಲಿದೆ ಎಂದು ಸಿಎಂ ಸ್ಟಾಲಿನ್ ಪುನರುಚ್ಚರಿಸಿದರು.

ಜಾತಿ ಆಧಾರಿತ ಜನಗಣತಿ ಮತ್ತು ಆ ಆಧಾರದ ಮೇಲೆ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಬೇಕೆಂದು ಕಾಂಗ್ರೆಸ್ ಒತ್ತಾಯಿಸಿದಾಗ, ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರ ಪುನರ್‌ವಿಂಗಡನೆ ನಡೆದರೆ ದಕ್ಷಿಣ ರಾಜ್ಯಗಳು ಸುಮಾರು 100 ಸ್ಥಾನಗಳನ್ನು ಕಳೆದುಕೊಳ್ಳುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ 2023ರಲ್ಲಿ ತೆಲಂಗಾಣದಲ್ಲಿ ಮಾತನಾಡುತ್ತಾ ಹೇಳಿದ್ದಾರೆ. ‘ದಕ್ಷಿಣದ ರಾಜ್ಯಗಳು ಅದನ್ನು ಸ್ವೀಕರಿಸುತ್ತವೆಯೇ?” ಸ್ಟಾಲಿನ್ ಪ್ರಶ್ನಿಸಿದರು.

ದಕ್ಷಿಣ ರಾಜ್ಯಗಳಲ್ಲಿ ಸ್ಥಾನಗಳ ಸಂಖ್ಯೆ ಕಡಿಮೆಯಾಗಲಿದೆ ಎಂದು ಮೋದಿ ಒಪ್ಪಿಕೊಂಡಿದ್ದಾರೆ. ಆದರೂ, ಕ್ಷೇತ್ರ ಪುನರ್‌ವಿಂಗಡನೆಗೆ ಒತ್ತಾಯಿಸುತ್ತಲೇ ಇದ್ದಾರೆ ಎಂದು ಹೇಳಿದರು. ಬಿಜೆಪಿ ಯಾವಾಗಲೂ ರಾಜ್ಯಗಳ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಈಗಲೂ ತಮ್ಮ ಉದ್ದೇಶಗಳನ್ನು ಪೂರೈಸಲು ಕ್ಷೇತ್ರ ಪುನರ್‌ವಿಂಗಡನೆ ತರುತ್ತಿದ್ದಾರೆ ಎಂದು ಆರೋಪಿಸಿದರು.

ಈ ಬೆದರಿಕೆಯನ್ನು ಅರ್ಥಮಾಡಿಕೊಂಡು, ತಮಿಳುನಾಡು ದೊಡ್ಡ ಒಗ್ಗಟ್ಟಿನಿಂದ ಅದರ ವಿರುದ್ಧ ನಿಂತಿದೆ. ದೇಶದ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ರಕ್ಷಿಸುವಲ್ಲಿ ಇದೇ ರೀತಿಯ ಒಗ್ಗಟ್ಟಿಗಾಗಿ ಜೆಎಸಿ ಸಭೆಯಲ್ಲಿ ನಾಯಕರಿಗೆ ನಾನು ಮನವಿ ಮಾಡಿತ್ತಿದ್ದೇನೆ” ಎಂದರು.

ಕ್ಷೇತ್ರ ಪುನರ್‌ವಿಂಗಡನೆಯ ರಾಜಕೀಯ ವಿರೋಧಗಳನ್ನು ಕಾನೂನು ವೇದಿಕೆಗೆ ವಿಸ್ತರಿಸಲು ನಾಯಕರ ಸಲಹೆಗಳನ್ನು ಸ್ಟಾಲಿನ್ ಆಹ್ವಾನಿಸಿದ್ದು, ರಾಜಕೀಯ ಮತ್ತು ಕಾನೂನು ಕ್ರಮಗಳನ್ನು ಕೈಗೊಳ್ಳಲು ‘ತಜ್ಞರ ಸಮಿತಿ’ಯನ್ನು ಪ್ರಸ್ತಾಪಿಸಿದರು.

“ಜನಸಂಖ್ಯೆ ಆಧಾರಿತ ಕ್ಷೇತ್ರ ಪುನರ್‌ವಿಂಗಡನೆ ಅನುಮತಿಸಬಾರದು ಎಂದು ನಾವೆಲ್ಲರೂ ದೃಢಸಂಕಲ್ಪ ಮಾಡಬೇಕು. ಜನಸಂಖ್ಯೆಯನ್ನು ನಿಯಂತ್ರಣದಲ್ಲಿಟ್ಟುಕೊಂಡ ರಾಜ್ಯಗಳನ್ನು ಶಿಕ್ಷಿಸಲು ನಾವು ಬಿಡಬಾರದು” ಎಂದು ಹೇಳಿದರು. ನ್ಯಾಯಯುತವಾದ ಕ್ಷೇತ್ರ ಪುನರ್‌ವಿಂಗಡನೆ ಸಾಧಿಸುವವರೆಗೆ ಹೋರಾಟವನ್ನು ಮುಂದುವರೆಸುವುದಾಗಿ ಸ್ಟಾಲಿನ್ ಒತ್ತಿ ಹೇಳಿದರು.

“ಯಾವುದೇ ಬೆಲೆ ತೆತ್ತಾದರೂ, ಈ ಸಭೆಯಲ್ಲಿ ಉಪಸ್ಥಿತರಿರುವ ರಾಜ್ಯಗಳು ನಮ್ಮ ಸಂಸದೀಯ ಪ್ರಾತಿನಿಧ್ಯ ಕಡಿಮೆಯಾಗಲು ಬಿಡಬಾರದು” ಎಂದು ಅವರು ಮನವಿ ಮಾಡಿದರು.

ಕ್ಷೇತ್ರ ಪುನರ್‌ವಿಂಗಡನೆಯಿಂದ ಪರಿಣಾಮ ಬೀರುವ ಸಾಧ್ಯತೆ ಇರುವ ರಾಜ್ಯಗಳ ರಾಜಕೀಯ ನಾಯಕರಾದ ಕೇರಳ ಸಿಎಂ ಪಿಣರಾಯಿ ವಿಜಯನ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಪಂಜಾಬ್ ಸಿಎಂ ಭಗವಂತ್ ಮಾನ್, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೆಎಸಿ ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಚೋದನಕಾರಿ & ನಿಂದನಾತ್ಮಕ ಹೇಳಿಕೆ | ಯತಿ ನರಸಿಂಹಾನಂದ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...