Homeಮುಖಪುಟರೈತರನ್ನು 'ದೇಶವಿರೋಧಿ' ಎಂದು ಕರೆಯುತ್ತಿರುವುದು ದುರದೃಷ್ಟಕರ: ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ

ರೈತರನ್ನು ‘ದೇಶವಿರೋಧಿ’ ಎಂದು ಕರೆಯುತ್ತಿರುವುದು ದುರದೃಷ್ಟಕರ: ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ

- Advertisement -
- Advertisement -

ಈ ದೇಶದ ರೈತರನ್ನು ‘ದೇಶವಿರೋಧಿ’ ಎಂದು ಕರೆಯುತ್ತಿರುವುದು ದುರದೃಷ್ಟಕರ ಎಂದು ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವಣ್ ಸಿಂಗ್ ಪಂಧೇರ್ ಹೇಳಿದ್ದಾರೆ.

ದೇಶಾದ್ಯಂತ ಕೋಟ್ಯಂತರ ರೈತರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಳೆ ರಾಷ್ಟ್ರ ರಾಜಧಾನಿಗೆ ಪಾದಯಾತ್ರೆ ನಡೆಸಲಿದ್ದಾರೆ. ಮೆರವಣಿಗೆಗೆ ಮುಂಚಿತವಾಗಿ, ದೆಹಲಿ ಪೊಲೀಸರು ಗಾಜಿಪುರ, ಟಿಕ್ರಿ ಮತ್ತು ಸಿಂಘ್‌ ಗಡಿಗಳಲ್ಲಿ ಸೆಕ್ಷನ್ 144ರಡಿಯಲ್ಲಿ ನಿಷೇಧಾಜ್ಞೆ ಹೊರಡಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಘಾಜಿಪುರ ಗಡಿ ಪ್ರದೇಶದ ಬಳಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಹರ್ಯಾಣದ ಅಧಿಕಾರಿಗಳು ಫೆಬ್ರವರಿ 13ರವರೆಗೆ ಹರಿಯಾಣದ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಸೇರಿ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಳಿಸಿದ್ದಾರೆ ಮತ್ತು SMS ಸೇವೆಗಳಿಗೆ ನಿರ್ಬಂಧ ವಿಧಿಸಿದ್ದಾರೆ.

ರೈತರು ನಾಳೆ ಮಧ್ಯಪ್ರದೇಶ, ಕೇರಳ, ಬಿಹಾರ, ಹರ್ಯಾಣ, ಪಂಜಾಬ್ ಮತ್ತು ರಾಜಸ್ಥಾನದಿಂದ ರಾಷ್ಟ್ರ ರಾಜಧಾನಿಗೆ ತಮ್ಮ ಬೇಡಿಕೆಗಳಿಗಾಗಿ ಒತ್ತಾಯಿಸಲು ಕರೆ ನೀಡಲಾದ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಂಧೇರ್ ಅಮೃತಸರದಲ್ಲಿ ‘ದೆಹಲಿ ಚಲೋ’ಗೆ ಮುಂಚಿತವಾಗಿ ತಿಳಿಸಿದ್ದಾರೆ.

ನಾವು ಇಂದು ಪಂಜಾಬ್‌ನ ಬಿಯಾಸ್ ಪಟ್ಟಣದಿಂದ ಹೊರಟು ಫತೇಘರ್ ಸಾಹಿಬ್‌ನಲ್ಲಿ ಉಳಿಯುತ್ತೇವೆ. ಈ ದೇಶದ ರೈತರನ್ನು ದೇಶವಿರೋಧಿ ಎಂದು ಕರೆಯುತ್ತಿರುವುದು ದುರದೃಷ್ಟಕರ, ಇದನ್ನು ಒಪ್ಪಲಾಗದು. ನಾವು ಈ ದೇಶದ ಪ್ರಜೆಗಳು, ನಾವು ನಮ್ಮ ಬೇಡಿಕೆಗಳನ್ನು ಮುಂದಿಡಲಿದ್ದೇವೆ. ಕಳೆದ ಹಲವು ವರ್ಷಗಳಿಂದ ನಮ್ಮ ಬೇಡಿಕೆಗಳನ್ನು ಈಡೇರಿಸಲಾಗಿಲ್ಲ ಎಂದು ಹೇಳಿದ್ದಾರೆ.

ಪ್ರತಿಭಟನಾನಿರತ ರೈತರು 2021ರಲ್ಲಿ ಈಗ ರದ್ದಾದ ಕೃಷಿ ಕಾನೂನುಗಳ ವಿರುದ್ಧ ತಮ್ಮ ಆಂದೋಲನವನ್ನು ಹಿಂತೆಗೆದುಕೊಳ್ಳುವಾಗ MSP ಬಗ್ಗೆ ಭರವಸೆ ನೀಡಲಾಗಿತ್ತು, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ, ಕೃಷಿ ಸಾಲ ಮನ್ನಾ, ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು ಮತ್ತು ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ “ನ್ಯಾಯ” ಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ. ರೈತರು ಶಾಂತಿಯುತವಾಗಿ ಮೆರವಣಿಗೆ ನಡೆಸುತ್ತಾರೆ, ನಾವು ನಮ್ಮ ಬೇಡಿಕೆಗಳಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲಿದ್ದೇವೆ ಎಂದು ಹೇಳಿದ್ದಾರೆ.

‘ದೆಹಲಿ ಚಲೋ’ ಮೆರವಣಿಗೆಗೆ ಮುಂಚಿತವಾಗಿ ಅಂಬಾಲಾ, ಜಿಂದ್ ಮತ್ತು ಫತೇಹಾಬಾದ್ ಜಿಲ್ಲೆಗಳಲ್ಲಿ ಪಂಜಾಬ್-ಹರಿಯಾಣ ಗಡಿಗಳನ್ನು ಮುಚ್ಚಲು  ವ್ಯವಸ್ಥೆಗಳು ನಡೆಯುತ್ತಿವೆ. ದೆಹಲಿಯ ಮೂರು ಗಡಿ ಪ್ರದೇಶಗಳಲ್ಲಿ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿದೆ. ದೆಹಲಿ ಪೊಲೀಸರು ಈಶಾನ್ಯ ದೆಹಲಿಯಲ್ಲಿ ಮತ್ತು ನೆರೆಯ ಉತ್ತರಪ್ರದೇಶದ ಗಡಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಪ್ಪಿಸಲು ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು 144ಸೆಕ್ಸನ್‌ನ್ನು ವಿಧಿಸಿದ್ದಾರೆ.

ಇದನ್ನು ಓದಿ: ರೈತರ ‘ದಿಲ್ಲಿ ಚಲೋ’: 2 ಕ್ರೀಡಾಂಗಣಗಳನ್ನು ಜೈಲನ್ನಾಗಿ ಸಿದ್ಧಪಡಿಸಿದ ಬಿಜೆಪಿ ಸರಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...