Homeಮುಖಪುಟಕಮಲನಾಥ್ ವಿವಾದಾತ್ಮಕ ಹೇಳಿಕೆ ಟೀಕಿಸಿದ ರಾಹುಲ್ ಗಾಂಧಿ

ಕಮಲನಾಥ್ ವಿವಾದಾತ್ಮಕ ಹೇಳಿಕೆ ಟೀಕಿಸಿದ ರಾಹುಲ್ ಗಾಂಧಿ

ಕಮಲನಾಥ್ ಜಿ ನನ್ನ ಪಕ್ಷದವರು. ಆದರೆ, ಅವರು ಬಳಸಿದ ಭಾಷೆ ವೈಯಕ್ತಿಕವಾಗಿ ನನಗೆ ಹಿಡಿಸಲಿಲ್ಲ. ಅವರು ಯಾರೇ ಆಗಿರಬಹುದು, ಆದರೆ, ಇಂಥ ಭಾಷೆ ಬಳಕೆಯನ್ನು ನಾನು ಬೆಂಬಲಿಸುವುದಿಲ್ಲ. ಇದು ದುರದೃಷ್ಟಕರ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಇಮಾರ್ತಿ ದೇವಿ ಅವರ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಕಮಲನಾಥ್ ಅವರ ವಿವಾದಾತ್ಮಕ ಹೇಳಿಕೆಯನ್ನು ಪಕ್ಷದ ಮುಖಂಡ ರಾಹುಲ್ ಗಾಂಧಿ ಬಹಿರಂಗವಾಗಿ ಟೀಕಿಸಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಹಿರಿಯ ನಾಯಕರನ್ನು ಟೀಕಿಸಿದ ಪಕ್ಷದ ಮೊದಲ ನಾಯಕರಾಗಿದ್ದಾರೆ.

ಹಿರಿಯ ನಾಯಕ ಕಮಲನಾಥ್​, ಬಿಜೆಪಿ ಸಚಿವೆ ಇಮಾರ್ತಿ ದೇವಿಯವರನ್ನ ‘ಐಟಂ’ ಎಂದು ಕರೆದು ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಈ ಹೇಳಿಕೆಯು ಉಪಚುನಾವಣೆಗೆ ಮುನ್ನ ದೊಡ್ಡ ವಿವಾದವನ್ನು ಹುಟ್ಟುಹಾಕಿದೆ, ರಾಜ್ಯದ ಆಡಳಿತಾರೂಢ ಬಿಜೆಪಿ ಮತ್ತು ಆ ಮಹಿಳಾ ಅಭ್ಯರ್ಥಿಯು ಕಮಲನಾಥ್‌ರನ್ನು ಉಚ್ಚಾಟಿಸುವಂತೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಮನವಿ ಮಾಡಿದ್ದಾರೆ.

ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ “ಕಮಲನಾಥ್ ಜಿ ನನ್ನ ಪಕ್ಷದವರು. ಆದರೆ, ಅವರು ಬಳಸಿದ ಭಾಷೆ ವೈಯಕ್ತಿಕವಾಗಿ ನನಗೆ ಹಿಡಿಸಲಿಲ್ಲ. ಅವರು ಯಾರೇ ಆಗಿರಬಹುದು, ಆದರೆ, ಇಂಥ ಭಾಷೆ ಬಳಕೆಯನ್ನು ನಾನು ಬೆಂಬಲಿಸುವುದಿಲ್ಲ. ಇದು ದುರದೃಷ್ಟಕರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಕಮಲನಾಥ್ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ಆಕ್ರೋಶ

ಇನ್ನು ಪ್ರಕರಣ ಕುರಿತು ಪ್ರಶ್ನೆಗಳನ್ನು ಕೇಳುತ್ತಿದ್ದ ಸುದ್ದಿಗಾರರಿಗೆ ’ನನಗೆ ಪ್ರಶ್ನೆ ಮಾಡುವಂತೆ ನೀವು ಪ್ರಧಾನಿಯವರಿಗೆ ಯಾಕೆ ಪ್ರಶ್ನಿಸುವುದಿಲ್ಲ. ಹತ್ರಾಸ್ ಪ್ರಕರಣದ ಕುರಿತು ಅವರೇಕೆ ಒಂದು ಮಾತು ಆಡಿಲ್ಲ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು ಕಮಲ್‌ನಾಥ್‌ ಕುರಿತ ರಾಹುಲ್‌ ಗಾಂಧಿಯವರ ಟೀಕೆಯನ್ನು ಸ್ವಾಗತಿಸಿದ್ದಾರೆ. “ಬಿಜೆಪಿ ಮುಖಂಡರು ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ. ಆದರೆ ಆ ಕುರಿತು ಬಿಜೆಪಿಯ ಮೋದಿಯವರಾಗಲಿ, ಹಿರಿಯ ಮುಖಂಡರಾಗಲಿ ಮಾತನಾಡುವುದಿಲ್ಲ. ಇದೇ ಅವರಿಗೂ ನಮಗೂ ಇರುವ ವ್ಯತ್ಯಾಸ” ಎಂದಿದ್ದಾರೆ.

ಈ ಹಿಂದೆ ಕೂಡ “ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ. ಸ್ವತಂತ್ರ ಸಂಸ್ಥೆಗಳನ್ನು ನೀಡಿ. ಮರುಕ್ಷಣ ಈ ಕೇಂದ್ರ ಸರ್ಕಾರ ಆಡಳಿತದಲ್ಲಿರುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದರು.

ಮಧ್ಯಪ್ರದೇಶ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್​​ ಅಭ್ಯರ್ಥಿ ಸುರೇಶ್​​ ರಾಜೆ ಪರವಾಗಿ ಮಾಜಿ ಮುಖ್ಯಮಂತ್ರಿ ಕಮಲನಾಥ್​​ ದಾಬ್ರಾ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದರು. ಭಾಷಣದಲ್ಲಿ ಸುರೇಶ್ ರಾಜೆ​​ ಅವರ ಪ್ರತಿಸ್ಪರ್ಧಿ ಹಾಗೂ ಬಿಜೆಪಿ ನಾಯಕಿ ಇಮಾರ್ತಿ ದೇವಿ ಅವರನ್ನು ಐಟಂ​ ಎಂದು ಕರೆದಿದ್ದರು.

ಕಮಲನಾಥ್ ಸರ್ಕಾರವನ್ನು ಬೀಳಿಸುವಲ್ಲಿ ಪ್ರಮುಖಪಾತ್ರ ವಹಿಸಿದ್ದ ಜೋತಿರಾಧಿತ್ಯ ಸಿಂಧಿಯಾಗೆ ನಿಷ್ಠೆಯಿಂದಿದ್ದ ಇಮಾರ್ತಿ ದೇವಿ ಮತ್ತು ಇತರ 21 ಶಾಸಕರು ಕಾಂಗ್ರೆಸ್ ಮತ್ತು ರಾಜ್ಯ ವಿಧಾನಸಭೆಗೆ ರಾಜೀನಾಮೆ ನೀಡಿ ಈ ವರ್ಷದ ಮಾರ್ಚ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.


ಇದನ್ನೂ ಓದಿ: ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಮರುಕ್ಷಣ ಈ ಸರ್ಕಾರ ಅಧಿಕಾರದಲ್ಲಿರುವುದಿಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...