Homeಕರ್ನಾಟಕದೂರದಲ್ಲಿ ನಿಂತು ಸರಿತಪ್ಪುಗಳ ಕುರಿತು ತೀರ್ಪು ನೀಡುವ ’ಲಿಬರಲ್‌'ಗಳ ದುಸ್ಥಿತಿ

ದೂರದಲ್ಲಿ ನಿಂತು ಸರಿತಪ್ಪುಗಳ ಕುರಿತು ತೀರ್ಪು ನೀಡುವ ’ಲಿಬರಲ್‌’ಗಳ ದುಸ್ಥಿತಿ

- Advertisement -
- Advertisement -

ಪ್ರೊಎಂ.ಡಿ.ನಂಜುಂಡಸ್ವಾಮಿ ಯವರಿರುವ ತನಕ (ಮತ್ತು ಬಹುಶಃ ಈಗಲೂ) ರೈತಸಂಘದ ದೊಡ್ಡ ಹೋರಾಟಗಳ ಪೋಸ್ಟರ್‌ನಲ್ಲಿ ಗಾಂಧಿಯವರ ಚಿತ್ರ ಕಡ್ಡಾಯವಾಗಿ ಇರುತ್ತಿತ್ತು. ಒಂದು ವೇಳೆ ಆ ಹೋರಾಟವು ಯಾವುದೋ ಸರ್ಕಾರಿ ನಿಯಮದ ವಿರುದ್ಧವಿದ್ದರೆ, ಪೋಸ್ಟರ್‌ನಲ್ಲಿನ ಗಾಂಧಿ ಆ ನಿಯಮದ ಪ್ರತಿಯನ್ನು ಹರಿದು ಹಾಕುತ್ತಿರುವ ಚಿತ್ರ ಬರೆಸಲಾಗುತ್ತಿತ್ತು. ಒಮ್ಮೊಮ್ಮೆ ಗಾಂಧಿ ಕೋಲು ತೆಗೆದುಕೊಂಡು ಅಟ್ಟಿಸಿಕೊಂಡೂ ಹೋಗುತ್ತಿದ್ದರು. ಅದೇನೇ ಇದ್ದರೂ, ರೈತಸಂಘ ಅನುಸರಿಸುವುದು ಗಾಂಧಿಯವರ ಅಹಿಂಸಾ ಮಾರ್ಗದ ಹೋರಾಟ ಎಂದೇ ಹೇಳುತ್ತಿತ್ತು.

ಅಧಿಕಾರಿಗಳನ್ನು ಕೂಡಿ ಹಾಕುವುದು, ಊರೊಳಗೆ ಬಿಡದಂತೆ ತಡೆಯುವುದು ಇತ್ಯಾದಿಗಳು ರೈತಸಂಘದ ಹೋರಾಟದ ಭಾಗವಾಗಿತ್ತು. ಅಷ್ಟೇಕೆ ಕೆಂಟುಕಿ ಚಿಕನ್ ಅಂಗಡಿಗೆ ನುಗ್ಗಿ ಅದನ್ನು ಧ್ವಂಸಗೊಳಿಸಿದ್ದು, ಮೊನ್ಸಾಂಟೊ ಬೀಜ ಬಿತ್ತಿದ್ದ ಹೊಲಕ್ಕೆ ನುಗ್ಗಿ ನಾಶ ಮಾಡಿದ್ದು ಇತ್ಯಾದಿ ಸಾಂಕೇತಿಕ ಕ್ರಮಗಳನ್ನೂ ರೈತಸಂಘ ಕೈಗೊಂಡಿತ್ತು. ಆದರೆ, ಈ ಎಲ್ಲಾ ಕಾರ್ಯಾಚರಣೆಗಳಲ್ಲಿ ಮನುಷ್ಯರಿಗೆ ದೈಹಿಕ ಹಿಂಸೆ ಕೊಡುವ ಕೆಲಸವನ್ನು ರೈತಸಂಘ ಮಾಡುತ್ತಿರಲಿಲ್ಲ. ಆದರೆ ಆಸ್ತಿನಾಶ ಅಥವಾ ಕಾನೂನುಭಂಗವನ್ನು ಹಿಂಸೆಯೆಂದು ಬಗೆದಿರಲಿಲ್ಲ. ಹಾಗೆ ನೋಡಿದರೆ ಕಾಯ್ದೆ ಭಂಗವನ್ನು ಸ್ವತಃ ಗಾಂಧಿಯವರು ಹೋರಾಟದ ಒಂದು ವಿಧಾನವಾಗಿಯೂ ಬಳಸಿದ್ದರು.

ಗಾಂಧಿಯವರ ಹಿಂಸೆ ಅಥವಾ ಅಹಿಂಸೆಯ ಮಾನದಂಡಗಳೇ ಸರಿಯೆಂದೋ, ಅವನ್ನೇ ಸಾರ್ವತ್ರಿಕವಾಗಿ ಮತ್ತು ಸಾರ್ವಕಾಲಿಕವಾಗಿ ಅವುಗಳನ್ನು ಮಾನದಂಡಗಳನ್ನಾಗಿಟ್ಟುಕೊಳ್ಳಬೇಕೆಂದೋ ಅಲ್ಲ. ಆದರೆ ಹಿಂಸೆ ಅಥವಾ ಅಹಿಂಸೆಯ ಚರ್ಚೆ ಬಂದಾಗ ಈ ದೇಶದಲ್ಲಿ ಗಾಂಧಿಯವರ ಮಾರ್ಗವನ್ನು ಒಂದು ಮಾನದಂಡವಾಗಿ ಬಳಸಿರುವುದರಿಂದ ಇವನ್ನು ಉಲ್ಲೇಖಿಸಲಾಗಿದೆ.

ಬಹಳ ಮುಖ್ಯವಾಗಿ ಗಾಂಧಿಯವರ ಹಿಂಸೆ-ಅಹಿಂಸೆ ಚರ್ಚೆಯಲ್ಲಿ ಹಿಂಸೆಯ ವ್ಯಾಖ್ಯಾನವನ್ನು ಸೀಮಿತಗೊಳಿಸುವುದನ್ನು ಕೆಲವರು ವಿರೋಧಿಸುತ್ತಾರೆ. ಶ್ರೀಮಂತಿಕೆ-ಅಧಿಕಾರದ ಅಡಿಯಲ್ಲಿ ನಲುಗುವ ದುಡಿಯುವ ಸಮುದಾಯ, ಜಾತಿ ಶೋಷಣೆಯಿಂದ ನಲುಗುವ ಶೋಷಿತ ಜಾತಿಗಳು, ಗಂಡಾಳ್ವಿಕೆಯಲ್ಲಿ ಹಿಂಡಲ್ಪಡುವ ಮಹಿಳೆ ಇವರೆಲ್ಲರೂ ಸ್ಟ್ರಕ್ಚರಲ್ ಹಿಂಸೆಯಿಂದಲೇ ನೋವುಣ್ಣುವುದಿಲ್ಲವೇ? ಕೆಲವೊಮ್ಮೆ ಇಂತಹವರಿಗೆ ತಕ್ಷಣದಲ್ಲೇ ತಿರುಗೇಟು ನೀಡಬೇಕಾಗಿ ಬರುವ ಅನಿವಾರ್ಯತೆ ಇರುವುದಿಲ್ಲವೇ? ಅಂತಹ ಹೊತ್ತಿನಲ್ಲಿ ನೀವು ಅವರಿಗೆ ಅಹಿಂಸೆಯನ್ನು ಬೋಧಿಸುವುದೇ ಹಿಂಸೆಯಾಗುತ್ತದೆ ಎಂಬುದು ಹಿಂಸೆ-ಅಹಿಂಸೆಯ ಕುರಿತು ಗಾಂಧಿ ವಿಚಾರಧಾರೆಗಿರುವ ಪ್ರಮುಖ ತಕರಾರು.

ವಾಸ್ತವದಲ್ಲಿ ಅಂತಹ ಯಾವ ಹಿಂಸೆಯನ್ನೂ ಮಾಡದೇ 60 ದಿನಗಳಿಂದ ಅತ್ಯಂತ ಶುದ್ಧ ಗಾಂಧಿ ಮಾರ್ಗದಲ್ಲಿ ದೆಹಲಿಯ ಹೊರಗೆ ಸತ್ಯಾಗ್ರಹವನ್ನು ನಡೆಸಿದ ಧೀಮಂತ ರೈತ ಸಮುದಾಯದ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಇಂದು ಮಾಡಲಾಯಿತು. ಲಕ್ಷಾಂತರ ಜನರು ನಾವು ಊಹಿಸಿಕೊಳ್ಳಲಾಗದ ಚಳಿಯಲ್ಲಿ, ಮನೆಯಿಂದ ದೂರ ಉಳಿದು, ಸಂಪಾದನೆಯಿಂದ ದೂರ ಉಳಿದು ಎರಡು ತಿಂಗಳು ಬೀದಿಯಲ್ಲಿ ಕಳೆದಿದ್ದು ಸತ್ಯಾಗ್ರಹದ ಭಾಗವಾಗಿ. ’ಸ್ವತಂತ್ರ ಭಾರತದಲ್ಲಿ ಪ್ರಜೆಗಳು ಹೀಗೆ ಮಾಡಬೇಕಾಗಿ ಬಂದಿದ್ದು ಪ್ರಭುತ್ವದ ಕ್ರೌರ್ಯದಿಂದಲ್ಲದೇ ಮತ್ತೇನು? ಇದರ ಬಗ್ಗೆ ದನಿಯೆತ್ತಿದ ಮಾತ್ರಕ್ಕೆ ರಾಜ್‌ದೀಪ್ ಸರದೇಸಾಯಿ, ಬರ್ಖಾದತ್‌ಗಳಿಗೆ ’ಆಕ್ರೋಶ ಭರಿತ’ ರೈತರು ಬ್ಯಾರಿಕೇಡ್‌ಗಳನ್ನು ಕಿತ್ತು ದೆಹಲಿಯ ಕಡೆಗೆ ಹೊರಟಿದ್ದು ಅಂತಹ ದೊಡ್ಡ ಸಮಸ್ಯೆಯಾಗಿ ಏಕೆ ಕಂಡಿತು? ತಮ್ಮ ತಮ್ಮ ಸುಖಾಸೀನ ಬದುಕಿನಿಂದ ಇದರ ಕುರಿತು ಸಲೀಸು ಕಾಮೆಂಟ್ ಮಾಡುವ ಧಾರ್ಷ್ಟ್ಯ ಎಲ್ಲಿಂದ ಬಂದಿತು ಎಂಬ ಪ್ರಶ್ನೆ ಸಹಜವಾಗಿಯೇ ಏಳುತ್ತದೆ.

PC : India Today

ಅರ್ನಾಬ್ ಗೋಸ್ವಾಮಿಯಂತಹ ಮನುಷ್ಯರೇ ಅಲ್ಲದ ಪತ್ರಕರ್ತ ವೇಷಧಾರಿಗಳು ಒಂದು ವೇಳೆ ಈ ವಿಚಾರದಲ್ಲಿ ಕೂಗಾಡಬಹುದು ಎಂಬ ಭಯ ಇರುವುದೇ ಆದಲ್ಲಿ, ಅದಕ್ಕೆ ಪ್ರತಿಯಾಗಿ ಆಡಬಹುದಾದ ಮಾತುಗಳು ಮೇಲೆ ಹೆಸರಿಸಿದ ಪತ್ರಕರ್ತರಲ್ಲಿ ಇರುವುದಿಲ್ಲ. ಏಕೆಂದರೆ ರೈತ ಕಾರ್ಮಿಕರೇ ಮೊದಲಾದ ಶೋಷಿತರು ದೀನರಾಗಿ ಪ್ರಭುತ್ವದ ಗುಂಡಿಗೆ ಎದೆಯೊಡ್ಡಿ ಮನಕರಗಿಸಬೇಕೇ ಹೊರತು, ಹಕ್ಕನ್ನು ಕೇಳುವುದು ಇವರಿಗೂ ಸಹನೆಯ ಸಂಗತಿಯಲ್ಲ.

ಹಾಗೆಯೇ ಶಶಿತರೂರ್‌ನಂತಹ ಒಬ್ಬ ’ಲಿಬರಲ್ ವ್ಯಕ್ತಿಗೆ, ಕೆಂಪು ಕೋಟೆಯ ಮುಂದಿನ ಧ್ವಜಸ್ತಂಭವೊಂದರಲ್ಲಿ ಬೇರೊಂದು ಧ್ವಜ ಹಾರಿದಾಕ್ಷಣ (ಅದನ್ನು ಹಾರಿಸಲು ಕಾರಣರಾದವರು ರೈತ ಚಳವಳಿಯ ಶೇ.99ರಷ್ಟು ಜನರನ್ನು ಪ್ರತಿನಿಧಿಸುವುದಿಲ್ಲ; ಅವರು ಸಂಚುಕೋರರೂ ಆಗಿರಬಹುದೆಂಬ ಅನುಮಾನಗಳು ಎದ್ದಿವೆ) ಕೂಡಲೇ ಖಂಡಿಸಬೇಕೆನಿಸುತ್ತದೆ. ದೆಹಲಿಯ ಸುತ್ತಮುತ್ತ ಎಂದೂ ಹಾರದಷ್ಟು ಸಂಖ್ಯೆಯ ಭಾರತದ ತ್ರಿವರ್ಣಧ್ವಜಗಳನ್ನು ಈ ರೈತರು ಕಟ್ಟಿಕೊಂಡು ಪರೇಡ್ ಹೊರಟಿದ್ದರು. ಇದನ್ನು ಬಿಟ್ಟರೆ ಆ ರೀತಿ ರಾಷ್ಟ್ರಧ್ವಜಗಳು ಕಂಡಿದ್ದು ಸಿಎಎ/ಎನ್‌ಆರ್‌ಸಿ ವಿರುದ್ಧದ ಆಂದೋಲನದಲ್ಲಿ! ಹೀಗಿರುವಾಗ ಇದ್ದಕ್ಕಿದ್ದಂತೆ ರಾಷ್ಟ್ರಧ್ವಜದ ಕುರಿತು ರೈತರಿಗೆ ತಿಳಿಸಿಕೊಡಲು ಹೋಗುವ ಆತುರ ಅವರದ್ದು. ಇಷ್ಟಕ್ಕೂ ದೇಶದ ಮರ್ಯಾದೆಯು ಬಾವುಟದಲ್ಲಿ ಇಲ್ಲ ಎಂಬುದು ಅರ್ಥವಾಗದಷ್ಟು ಮತಿಹೀನರೇ ಇವರು?

ಚಳವಳಿಯೊಂದನ್ನು ಕಟ್ಟುವುದು, ಸರ್ಕಾರದ ವಿರುದ್ಧ ನಿಲ್ಲುವುದು ಸುಲಭದ ಸಂಗತಿಯಲ್ಲ. ಅದರಲ್ಲೂ ಬಿಜೆಪಿಯಂತಹ ಪಕ್ಷದ ನೇತೃತ್ವದ, ಮೋದಿ-ಶಾರಂತಹ ಸರ್ವಾಧಿಕಾರಿಗಳ ನಾಯಕತ್ವದ ಎದುರು ಹೋರಾಟ ಕಟ್ಟುವುದು ಇನ್ನೂ ಕಷ್ಟ. ಮಾಧ್ಯಮಗಳು ಜನರ ದನಿಯಾಗದೇ ಆಳುವವರ ಬೇಟೆ ನಾಯಿಗಳಾದಾಗಂತೂ ಅಸಾಧ್ಯ. ಒಂದು ವೇಳೆ ಏನೋ ಒಂದು ದಿನದ ಹೋರಾಟ ಹೇಗೋ ಕಷ್ಟಪಟ್ಟು ಮಾಡಿ ಹೋಗಿಯೂ ಬಿಡಬಹುದು. ಆದರೆ ಲಕ್ಷಾಂತರ ಜನರನ್ನು ತಿಂಗಳುಗಟ್ಟಲೆ ಒಂದು ಕಡೆ ಇಟ್ಟುಕೊಂಡು ಚಳವಳಿ ಕಟ್ಟುವುದರ ಹಿಂದಿನ ಪರಿಶ್ರಮ ಮತ್ತು ಪ್ರಬುದ್ಧತೆಯನ್ನು ಕೇವಲ ವಿಶ್ಲೇಷಣೆಯ ಮುಖಾಂತರ ಅರಿತುಕೊಳ್ಳುವುದು ಅಸಾಧ್ಯ. ಅದು ಪ್ರತಿನಿತ್ಯ ಹೊಂದಿಸಬೇಕಾದ ರೊಟ್ಟಿ ಮತ್ತು ಇತರ ವ್ಯವಸ್ಥೆಗಳ ವಿಚಾರವಷ್ಟೇ ಅಲ್ಲ; ನೂರೆಂಟು ಬಗೆಯ ವ್ಯಕ್ತಿಗಳು ಮತ್ತು ವ್ಯಕ್ತಿತ್ವಗಳನ್ನು ನಿಭಾಯಿಸಬೇಕಾದ ಸವಾಲು. ಅದರಲ್ಲೂ ಇಲ್ಲಿ ಒಂದೇ ಸಂಘಟನೆಯಿಲ್ಲ; ಇರುವ ಇಡೀ ಜನಸಮೂಹವು ರೆಜಿಮೆಂಟೇಷನ್‌ಗೆ ಒಳಪಟ್ಟ ಸೈನಿಕರಲ್ಲ. ಅದರ ನೈತಿಕ ಶಕ್ತಿ ಕುಗ್ಗದಂತೆ, ವಿವಿಧ ಬಣ ಹಾಗೂ ಬಣ್ಣಗಳ ನಾಯಕರನ್ನೂ ಸಂಭಾಳಿಸಿಕೊಂಡು ಹೋಗುವುದು ಏನೋ ಒಂದು ಮಟ್ಟಿಗೆ ಸಾಧ್ಯವಾದರೆ ಅದೊಂದು ಪವಾಡ.

ಅಂತಹ ಪವಾಡವನ್ನು ಸಂಯುಕ್ತ ಕಿಸಾನ್ ಮೋರ್ಚಾದವರು ಮಾಡಿದ್ದಾರೆ. ಅದರ ಪ್ರಮುಖ ನೇತಾರರೊಬ್ಬರು ಹೇಳಿದಂತೆ, ’ವಿಚಾರಗಳ ಕುರಿತು ದಿನವಿಡೀ ಕಿತ್ತಾಡುತ್ತೇವೆ, ಅಂತಿಮವಾಗಿ ಸರ್ವಸಮ್ಮತ ತೀರ್ಮಾನಕ್ಕೆ ಬರುತ್ತೇವೆ’. ಇಂತಹ ಪವಾಡವನ್ನು ಸಾಧ್ಯವಾಗಿಸಿದ್ದು ನಾಯಕರು ಮಾತ್ರವಲ್ಲಾ, ಲಕ್ಷ ಲಕ್ಷ ಸಂಖ್ಯೆಯ ಸಾಮಾನ್ಯ ಜನರೂ ಸಹಾ. ಇಂತಹದೊಂದು ಅಪೂರ್ವ, ಧೀಮಂತ ಚಳವಳಿಯ ಕುರಿತು ’ಹೀಗೆ ಮಾಡಬೇಕಿತ್ತು, ಹಾಗೆ ಮಾಡಬೇಕಿತ್ತು’ ಎಂಬ ತೀರ್ಪುಗಳನ್ನು ವಿವಿಧ ಬಣ್ಣ, ಶ್ರೇಣಿಯ ಜನರು ನೀಡುವುದು ರೇಜಿಗೆ ಹುಟ್ಟಿಸುತ್ತದೆ. ಮಲದಲ್ಲೇ ಮುಳುಗೇಳುವ ತುತ್ತೂರಿ ಮಾಧ್ಯಮಗಳು ಮತ್ತು ಗುಲಾಮೀ ಮನಸ್ಥಿತಿಯ ಭಕ್ತರಿಂದ ಅಂತಹ ನಿರೀಕ್ಷೆಯಿಲ್ಲವೇ ಇಲ್ಲ. ಆದರೆ ಚಳವಳಿಯ ಕುರಿತಂತೆ ಕಾಳಜಿ ಮತ್ತು ಸದಾಶಯವುಳ್ಳವರೂ ಈ ಪರಿ ಜಡ್ಜ್‌ಮೆಂಟಲ್ ಆಗಿರುವುದು ಒಳ್ಳೆಯ ಲಕ್ಷಣವಲ್ಲ.

ಎಲ್ಲಕ್ಕಿಂತ ಮುಖ್ಯವಾಗಿ ಒಂದು ವೇಳೆ ಚಳವಳಿನಿರತ ರೈತರೇ ಅರಾಜಕವಾಗಿ ಬೀದಿಗಿಳಿದಿದ್ದರೂ, ಈ ಸಂದರ್ಭದ ಹಿನ್ನೆಲೆಯನ್ನರಿತುಕೊಂಡು ಅದಕ್ಕೆ ಕಾರಣವಾದ ಸರ್ಕಾರವನ್ನು ಗುರಿ ಮಾಡಬೇಕಾದ್ದು ಸರಿಯಾದದ್ದು. ಸಿಎಎ ವಿರೋಧಿ ಹೋರಾಟದಲ್ಲಿ ಹೇಗೋ ಹಾಗೆ, ಇಲ್ಲೂ ಸಹಾ ಅಪಾರವಾದ ತಾಳ್ಮೆ, ಸಹನೆ ಹಾಗೂ ಪ್ರಬುದ್ಧತೆಯನ್ನು ರೈತ ಚಳವಳಿಯು ಪ್ರದರ್ಶಿಸಿದೆ. ಮಿಲಿಟೆಂಟ್ ಚಳವಳಿಯ ಹಿನ್ನೆಲೆಯುಳ್ಳ ಪಂಜಾಬಿನ ಜನರು ಈ ವಿಚಾರದಲ್ಲಿ ತೋರಿರುವ ಸಂಯಮವೇ ಅನನ್ಯವಾದದ್ದು. ಅಂತೆಯೇ ಸರ್ಕಾರದ ಮನುಷ್ಯ ವಿರೋಧಿತನವೂ ಎದ್ದು ತೋರುವಂಥಾದ್ದೇ ಆಗಿತ್ತು.

ಒಂದೇ ಮಾತಲ್ಲಿ ಹೇಳುವುದಾದರೆ ಸರ್ಕಾರವು ಕೃಷಿ ಕಾಯ್ದೆಗಳನ್ನು ತರುವುದರ ಮುಖಾಂತರವೇ ಹಿಂಸೆ ಮತ್ತು ಅರಾಜಕತೆಯನ್ನು ಹುಟ್ಟಿಹಾಕಿತ್ತು. ರೈತರು ಅದನ್ನು ತಾಳ್ಮೆ ಮತ್ತು ವಿವೇಕದಿಂದ ಎದುರಿಸಿದರು. ಹೆಜ್ಜೆ ಹೆಜ್ಜೆಗೂ ಸರ್ಕಾರವು ಹಿಂಸೆಯನ್ನು ಹೆಚ್ಚಿಸುತ್ತಾ ಹೋಗಿತ್ತು. ರೈತರು ತಮ್ಮ ವಿಶಿಷ್ಟ ಪ್ರಬುದ್ಧತೆಯಿಂದ ಅದನ್ನು ಎದುರುಗೊಂಡರು. ಉಳಿದಂತೆ ಆಗಬಹುದಾದ ಸಣ್ಣ ಪುಟ್ಟ ಅವಘಡಗಳೆಲ್ಲಾ ಕೇವಲ ಕೊಲ್ಯಾಟರೆಲ್ ಡ್ಯಾಮೇಜ್. ಅದನ್ನೇ ಧ್ಯಾನಿಸದೇ, ಒಟ್ಟಾರೆ ಒಳಿತಿನ ಕಡೆಗೆ ನಡೆಯುವುದಾದರೆ, ನಮ್ಮ ಕೈಲಾದಷ್ಟು ಜೊತೆಗೂಡುವ ಕೆಲಸ ಮಾಡುವುದೇ ಇಂದು ಎಲ್ಲಾ ಪ್ರಜಾತಂತ್ರವಾದಿಗಳ ಕರ್ತವ್ಯವಾಗಿದೆ.


ಇದನ್ನೂ ಓದಿ: ಸಿಖ್ ಧ್ವಜ ಹಾರಿಸಿದ ಗುಂಪನ್ನು ಕೆಂಪುಕೋಟೆಯವರೆಗೆ ಹೋಗಲು ಪೊಲೀಸರು ಬಿಟ್ಟಿದ್ದೇಕೆ? – ರೈತ ಮುಖಂಡರ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...