Homeಕರ್ನಾಟಕದೂರದಲ್ಲಿ ನಿಂತು ಸರಿತಪ್ಪುಗಳ ಕುರಿತು ತೀರ್ಪು ನೀಡುವ ’ಲಿಬರಲ್‌'ಗಳ ದುಸ್ಥಿತಿ

ದೂರದಲ್ಲಿ ನಿಂತು ಸರಿತಪ್ಪುಗಳ ಕುರಿತು ತೀರ್ಪು ನೀಡುವ ’ಲಿಬರಲ್‌’ಗಳ ದುಸ್ಥಿತಿ

- Advertisement -
- Advertisement -

ಪ್ರೊಎಂ.ಡಿ.ನಂಜುಂಡಸ್ವಾಮಿ ಯವರಿರುವ ತನಕ (ಮತ್ತು ಬಹುಶಃ ಈಗಲೂ) ರೈತಸಂಘದ ದೊಡ್ಡ ಹೋರಾಟಗಳ ಪೋಸ್ಟರ್‌ನಲ್ಲಿ ಗಾಂಧಿಯವರ ಚಿತ್ರ ಕಡ್ಡಾಯವಾಗಿ ಇರುತ್ತಿತ್ತು. ಒಂದು ವೇಳೆ ಆ ಹೋರಾಟವು ಯಾವುದೋ ಸರ್ಕಾರಿ ನಿಯಮದ ವಿರುದ್ಧವಿದ್ದರೆ, ಪೋಸ್ಟರ್‌ನಲ್ಲಿನ ಗಾಂಧಿ ಆ ನಿಯಮದ ಪ್ರತಿಯನ್ನು ಹರಿದು ಹಾಕುತ್ತಿರುವ ಚಿತ್ರ ಬರೆಸಲಾಗುತ್ತಿತ್ತು. ಒಮ್ಮೊಮ್ಮೆ ಗಾಂಧಿ ಕೋಲು ತೆಗೆದುಕೊಂಡು ಅಟ್ಟಿಸಿಕೊಂಡೂ ಹೋಗುತ್ತಿದ್ದರು. ಅದೇನೇ ಇದ್ದರೂ, ರೈತಸಂಘ ಅನುಸರಿಸುವುದು ಗಾಂಧಿಯವರ ಅಹಿಂಸಾ ಮಾರ್ಗದ ಹೋರಾಟ ಎಂದೇ ಹೇಳುತ್ತಿತ್ತು.

ಅಧಿಕಾರಿಗಳನ್ನು ಕೂಡಿ ಹಾಕುವುದು, ಊರೊಳಗೆ ಬಿಡದಂತೆ ತಡೆಯುವುದು ಇತ್ಯಾದಿಗಳು ರೈತಸಂಘದ ಹೋರಾಟದ ಭಾಗವಾಗಿತ್ತು. ಅಷ್ಟೇಕೆ ಕೆಂಟುಕಿ ಚಿಕನ್ ಅಂಗಡಿಗೆ ನುಗ್ಗಿ ಅದನ್ನು ಧ್ವಂಸಗೊಳಿಸಿದ್ದು, ಮೊನ್ಸಾಂಟೊ ಬೀಜ ಬಿತ್ತಿದ್ದ ಹೊಲಕ್ಕೆ ನುಗ್ಗಿ ನಾಶ ಮಾಡಿದ್ದು ಇತ್ಯಾದಿ ಸಾಂಕೇತಿಕ ಕ್ರಮಗಳನ್ನೂ ರೈತಸಂಘ ಕೈಗೊಂಡಿತ್ತು. ಆದರೆ, ಈ ಎಲ್ಲಾ ಕಾರ್ಯಾಚರಣೆಗಳಲ್ಲಿ ಮನುಷ್ಯರಿಗೆ ದೈಹಿಕ ಹಿಂಸೆ ಕೊಡುವ ಕೆಲಸವನ್ನು ರೈತಸಂಘ ಮಾಡುತ್ತಿರಲಿಲ್ಲ. ಆದರೆ ಆಸ್ತಿನಾಶ ಅಥವಾ ಕಾನೂನುಭಂಗವನ್ನು ಹಿಂಸೆಯೆಂದು ಬಗೆದಿರಲಿಲ್ಲ. ಹಾಗೆ ನೋಡಿದರೆ ಕಾಯ್ದೆ ಭಂಗವನ್ನು ಸ್ವತಃ ಗಾಂಧಿಯವರು ಹೋರಾಟದ ಒಂದು ವಿಧಾನವಾಗಿಯೂ ಬಳಸಿದ್ದರು.

ಗಾಂಧಿಯವರ ಹಿಂಸೆ ಅಥವಾ ಅಹಿಂಸೆಯ ಮಾನದಂಡಗಳೇ ಸರಿಯೆಂದೋ, ಅವನ್ನೇ ಸಾರ್ವತ್ರಿಕವಾಗಿ ಮತ್ತು ಸಾರ್ವಕಾಲಿಕವಾಗಿ ಅವುಗಳನ್ನು ಮಾನದಂಡಗಳನ್ನಾಗಿಟ್ಟುಕೊಳ್ಳಬೇಕೆಂದೋ ಅಲ್ಲ. ಆದರೆ ಹಿಂಸೆ ಅಥವಾ ಅಹಿಂಸೆಯ ಚರ್ಚೆ ಬಂದಾಗ ಈ ದೇಶದಲ್ಲಿ ಗಾಂಧಿಯವರ ಮಾರ್ಗವನ್ನು ಒಂದು ಮಾನದಂಡವಾಗಿ ಬಳಸಿರುವುದರಿಂದ ಇವನ್ನು ಉಲ್ಲೇಖಿಸಲಾಗಿದೆ.

ಬಹಳ ಮುಖ್ಯವಾಗಿ ಗಾಂಧಿಯವರ ಹಿಂಸೆ-ಅಹಿಂಸೆ ಚರ್ಚೆಯಲ್ಲಿ ಹಿಂಸೆಯ ವ್ಯಾಖ್ಯಾನವನ್ನು ಸೀಮಿತಗೊಳಿಸುವುದನ್ನು ಕೆಲವರು ವಿರೋಧಿಸುತ್ತಾರೆ. ಶ್ರೀಮಂತಿಕೆ-ಅಧಿಕಾರದ ಅಡಿಯಲ್ಲಿ ನಲುಗುವ ದುಡಿಯುವ ಸಮುದಾಯ, ಜಾತಿ ಶೋಷಣೆಯಿಂದ ನಲುಗುವ ಶೋಷಿತ ಜಾತಿಗಳು, ಗಂಡಾಳ್ವಿಕೆಯಲ್ಲಿ ಹಿಂಡಲ್ಪಡುವ ಮಹಿಳೆ ಇವರೆಲ್ಲರೂ ಸ್ಟ್ರಕ್ಚರಲ್ ಹಿಂಸೆಯಿಂದಲೇ ನೋವುಣ್ಣುವುದಿಲ್ಲವೇ? ಕೆಲವೊಮ್ಮೆ ಇಂತಹವರಿಗೆ ತಕ್ಷಣದಲ್ಲೇ ತಿರುಗೇಟು ನೀಡಬೇಕಾಗಿ ಬರುವ ಅನಿವಾರ್ಯತೆ ಇರುವುದಿಲ್ಲವೇ? ಅಂತಹ ಹೊತ್ತಿನಲ್ಲಿ ನೀವು ಅವರಿಗೆ ಅಹಿಂಸೆಯನ್ನು ಬೋಧಿಸುವುದೇ ಹಿಂಸೆಯಾಗುತ್ತದೆ ಎಂಬುದು ಹಿಂಸೆ-ಅಹಿಂಸೆಯ ಕುರಿತು ಗಾಂಧಿ ವಿಚಾರಧಾರೆಗಿರುವ ಪ್ರಮುಖ ತಕರಾರು.

ವಾಸ್ತವದಲ್ಲಿ ಅಂತಹ ಯಾವ ಹಿಂಸೆಯನ್ನೂ ಮಾಡದೇ 60 ದಿನಗಳಿಂದ ಅತ್ಯಂತ ಶುದ್ಧ ಗಾಂಧಿ ಮಾರ್ಗದಲ್ಲಿ ದೆಹಲಿಯ ಹೊರಗೆ ಸತ್ಯಾಗ್ರಹವನ್ನು ನಡೆಸಿದ ಧೀಮಂತ ರೈತ ಸಮುದಾಯದ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಇಂದು ಮಾಡಲಾಯಿತು. ಲಕ್ಷಾಂತರ ಜನರು ನಾವು ಊಹಿಸಿಕೊಳ್ಳಲಾಗದ ಚಳಿಯಲ್ಲಿ, ಮನೆಯಿಂದ ದೂರ ಉಳಿದು, ಸಂಪಾದನೆಯಿಂದ ದೂರ ಉಳಿದು ಎರಡು ತಿಂಗಳು ಬೀದಿಯಲ್ಲಿ ಕಳೆದಿದ್ದು ಸತ್ಯಾಗ್ರಹದ ಭಾಗವಾಗಿ. ’ಸ್ವತಂತ್ರ ಭಾರತದಲ್ಲಿ ಪ್ರಜೆಗಳು ಹೀಗೆ ಮಾಡಬೇಕಾಗಿ ಬಂದಿದ್ದು ಪ್ರಭುತ್ವದ ಕ್ರೌರ್ಯದಿಂದಲ್ಲದೇ ಮತ್ತೇನು? ಇದರ ಬಗ್ಗೆ ದನಿಯೆತ್ತಿದ ಮಾತ್ರಕ್ಕೆ ರಾಜ್‌ದೀಪ್ ಸರದೇಸಾಯಿ, ಬರ್ಖಾದತ್‌ಗಳಿಗೆ ’ಆಕ್ರೋಶ ಭರಿತ’ ರೈತರು ಬ್ಯಾರಿಕೇಡ್‌ಗಳನ್ನು ಕಿತ್ತು ದೆಹಲಿಯ ಕಡೆಗೆ ಹೊರಟಿದ್ದು ಅಂತಹ ದೊಡ್ಡ ಸಮಸ್ಯೆಯಾಗಿ ಏಕೆ ಕಂಡಿತು? ತಮ್ಮ ತಮ್ಮ ಸುಖಾಸೀನ ಬದುಕಿನಿಂದ ಇದರ ಕುರಿತು ಸಲೀಸು ಕಾಮೆಂಟ್ ಮಾಡುವ ಧಾರ್ಷ್ಟ್ಯ ಎಲ್ಲಿಂದ ಬಂದಿತು ಎಂಬ ಪ್ರಶ್ನೆ ಸಹಜವಾಗಿಯೇ ಏಳುತ್ತದೆ.

PC : India Today

ಅರ್ನಾಬ್ ಗೋಸ್ವಾಮಿಯಂತಹ ಮನುಷ್ಯರೇ ಅಲ್ಲದ ಪತ್ರಕರ್ತ ವೇಷಧಾರಿಗಳು ಒಂದು ವೇಳೆ ಈ ವಿಚಾರದಲ್ಲಿ ಕೂಗಾಡಬಹುದು ಎಂಬ ಭಯ ಇರುವುದೇ ಆದಲ್ಲಿ, ಅದಕ್ಕೆ ಪ್ರತಿಯಾಗಿ ಆಡಬಹುದಾದ ಮಾತುಗಳು ಮೇಲೆ ಹೆಸರಿಸಿದ ಪತ್ರಕರ್ತರಲ್ಲಿ ಇರುವುದಿಲ್ಲ. ಏಕೆಂದರೆ ರೈತ ಕಾರ್ಮಿಕರೇ ಮೊದಲಾದ ಶೋಷಿತರು ದೀನರಾಗಿ ಪ್ರಭುತ್ವದ ಗುಂಡಿಗೆ ಎದೆಯೊಡ್ಡಿ ಮನಕರಗಿಸಬೇಕೇ ಹೊರತು, ಹಕ್ಕನ್ನು ಕೇಳುವುದು ಇವರಿಗೂ ಸಹನೆಯ ಸಂಗತಿಯಲ್ಲ.

ಹಾಗೆಯೇ ಶಶಿತರೂರ್‌ನಂತಹ ಒಬ್ಬ ’ಲಿಬರಲ್ ವ್ಯಕ್ತಿಗೆ, ಕೆಂಪು ಕೋಟೆಯ ಮುಂದಿನ ಧ್ವಜಸ್ತಂಭವೊಂದರಲ್ಲಿ ಬೇರೊಂದು ಧ್ವಜ ಹಾರಿದಾಕ್ಷಣ (ಅದನ್ನು ಹಾರಿಸಲು ಕಾರಣರಾದವರು ರೈತ ಚಳವಳಿಯ ಶೇ.99ರಷ್ಟು ಜನರನ್ನು ಪ್ರತಿನಿಧಿಸುವುದಿಲ್ಲ; ಅವರು ಸಂಚುಕೋರರೂ ಆಗಿರಬಹುದೆಂಬ ಅನುಮಾನಗಳು ಎದ್ದಿವೆ) ಕೂಡಲೇ ಖಂಡಿಸಬೇಕೆನಿಸುತ್ತದೆ. ದೆಹಲಿಯ ಸುತ್ತಮುತ್ತ ಎಂದೂ ಹಾರದಷ್ಟು ಸಂಖ್ಯೆಯ ಭಾರತದ ತ್ರಿವರ್ಣಧ್ವಜಗಳನ್ನು ಈ ರೈತರು ಕಟ್ಟಿಕೊಂಡು ಪರೇಡ್ ಹೊರಟಿದ್ದರು. ಇದನ್ನು ಬಿಟ್ಟರೆ ಆ ರೀತಿ ರಾಷ್ಟ್ರಧ್ವಜಗಳು ಕಂಡಿದ್ದು ಸಿಎಎ/ಎನ್‌ಆರ್‌ಸಿ ವಿರುದ್ಧದ ಆಂದೋಲನದಲ್ಲಿ! ಹೀಗಿರುವಾಗ ಇದ್ದಕ್ಕಿದ್ದಂತೆ ರಾಷ್ಟ್ರಧ್ವಜದ ಕುರಿತು ರೈತರಿಗೆ ತಿಳಿಸಿಕೊಡಲು ಹೋಗುವ ಆತುರ ಅವರದ್ದು. ಇಷ್ಟಕ್ಕೂ ದೇಶದ ಮರ್ಯಾದೆಯು ಬಾವುಟದಲ್ಲಿ ಇಲ್ಲ ಎಂಬುದು ಅರ್ಥವಾಗದಷ್ಟು ಮತಿಹೀನರೇ ಇವರು?

ಚಳವಳಿಯೊಂದನ್ನು ಕಟ್ಟುವುದು, ಸರ್ಕಾರದ ವಿರುದ್ಧ ನಿಲ್ಲುವುದು ಸುಲಭದ ಸಂಗತಿಯಲ್ಲ. ಅದರಲ್ಲೂ ಬಿಜೆಪಿಯಂತಹ ಪಕ್ಷದ ನೇತೃತ್ವದ, ಮೋದಿ-ಶಾರಂತಹ ಸರ್ವಾಧಿಕಾರಿಗಳ ನಾಯಕತ್ವದ ಎದುರು ಹೋರಾಟ ಕಟ್ಟುವುದು ಇನ್ನೂ ಕಷ್ಟ. ಮಾಧ್ಯಮಗಳು ಜನರ ದನಿಯಾಗದೇ ಆಳುವವರ ಬೇಟೆ ನಾಯಿಗಳಾದಾಗಂತೂ ಅಸಾಧ್ಯ. ಒಂದು ವೇಳೆ ಏನೋ ಒಂದು ದಿನದ ಹೋರಾಟ ಹೇಗೋ ಕಷ್ಟಪಟ್ಟು ಮಾಡಿ ಹೋಗಿಯೂ ಬಿಡಬಹುದು. ಆದರೆ ಲಕ್ಷಾಂತರ ಜನರನ್ನು ತಿಂಗಳುಗಟ್ಟಲೆ ಒಂದು ಕಡೆ ಇಟ್ಟುಕೊಂಡು ಚಳವಳಿ ಕಟ್ಟುವುದರ ಹಿಂದಿನ ಪರಿಶ್ರಮ ಮತ್ತು ಪ್ರಬುದ್ಧತೆಯನ್ನು ಕೇವಲ ವಿಶ್ಲೇಷಣೆಯ ಮುಖಾಂತರ ಅರಿತುಕೊಳ್ಳುವುದು ಅಸಾಧ್ಯ. ಅದು ಪ್ರತಿನಿತ್ಯ ಹೊಂದಿಸಬೇಕಾದ ರೊಟ್ಟಿ ಮತ್ತು ಇತರ ವ್ಯವಸ್ಥೆಗಳ ವಿಚಾರವಷ್ಟೇ ಅಲ್ಲ; ನೂರೆಂಟು ಬಗೆಯ ವ್ಯಕ್ತಿಗಳು ಮತ್ತು ವ್ಯಕ್ತಿತ್ವಗಳನ್ನು ನಿಭಾಯಿಸಬೇಕಾದ ಸವಾಲು. ಅದರಲ್ಲೂ ಇಲ್ಲಿ ಒಂದೇ ಸಂಘಟನೆಯಿಲ್ಲ; ಇರುವ ಇಡೀ ಜನಸಮೂಹವು ರೆಜಿಮೆಂಟೇಷನ್‌ಗೆ ಒಳಪಟ್ಟ ಸೈನಿಕರಲ್ಲ. ಅದರ ನೈತಿಕ ಶಕ್ತಿ ಕುಗ್ಗದಂತೆ, ವಿವಿಧ ಬಣ ಹಾಗೂ ಬಣ್ಣಗಳ ನಾಯಕರನ್ನೂ ಸಂಭಾಳಿಸಿಕೊಂಡು ಹೋಗುವುದು ಏನೋ ಒಂದು ಮಟ್ಟಿಗೆ ಸಾಧ್ಯವಾದರೆ ಅದೊಂದು ಪವಾಡ.

ಅಂತಹ ಪವಾಡವನ್ನು ಸಂಯುಕ್ತ ಕಿಸಾನ್ ಮೋರ್ಚಾದವರು ಮಾಡಿದ್ದಾರೆ. ಅದರ ಪ್ರಮುಖ ನೇತಾರರೊಬ್ಬರು ಹೇಳಿದಂತೆ, ’ವಿಚಾರಗಳ ಕುರಿತು ದಿನವಿಡೀ ಕಿತ್ತಾಡುತ್ತೇವೆ, ಅಂತಿಮವಾಗಿ ಸರ್ವಸಮ್ಮತ ತೀರ್ಮಾನಕ್ಕೆ ಬರುತ್ತೇವೆ’. ಇಂತಹ ಪವಾಡವನ್ನು ಸಾಧ್ಯವಾಗಿಸಿದ್ದು ನಾಯಕರು ಮಾತ್ರವಲ್ಲಾ, ಲಕ್ಷ ಲಕ್ಷ ಸಂಖ್ಯೆಯ ಸಾಮಾನ್ಯ ಜನರೂ ಸಹಾ. ಇಂತಹದೊಂದು ಅಪೂರ್ವ, ಧೀಮಂತ ಚಳವಳಿಯ ಕುರಿತು ’ಹೀಗೆ ಮಾಡಬೇಕಿತ್ತು, ಹಾಗೆ ಮಾಡಬೇಕಿತ್ತು’ ಎಂಬ ತೀರ್ಪುಗಳನ್ನು ವಿವಿಧ ಬಣ್ಣ, ಶ್ರೇಣಿಯ ಜನರು ನೀಡುವುದು ರೇಜಿಗೆ ಹುಟ್ಟಿಸುತ್ತದೆ. ಮಲದಲ್ಲೇ ಮುಳುಗೇಳುವ ತುತ್ತೂರಿ ಮಾಧ್ಯಮಗಳು ಮತ್ತು ಗುಲಾಮೀ ಮನಸ್ಥಿತಿಯ ಭಕ್ತರಿಂದ ಅಂತಹ ನಿರೀಕ್ಷೆಯಿಲ್ಲವೇ ಇಲ್ಲ. ಆದರೆ ಚಳವಳಿಯ ಕುರಿತಂತೆ ಕಾಳಜಿ ಮತ್ತು ಸದಾಶಯವುಳ್ಳವರೂ ಈ ಪರಿ ಜಡ್ಜ್‌ಮೆಂಟಲ್ ಆಗಿರುವುದು ಒಳ್ಳೆಯ ಲಕ್ಷಣವಲ್ಲ.

ಎಲ್ಲಕ್ಕಿಂತ ಮುಖ್ಯವಾಗಿ ಒಂದು ವೇಳೆ ಚಳವಳಿನಿರತ ರೈತರೇ ಅರಾಜಕವಾಗಿ ಬೀದಿಗಿಳಿದಿದ್ದರೂ, ಈ ಸಂದರ್ಭದ ಹಿನ್ನೆಲೆಯನ್ನರಿತುಕೊಂಡು ಅದಕ್ಕೆ ಕಾರಣವಾದ ಸರ್ಕಾರವನ್ನು ಗುರಿ ಮಾಡಬೇಕಾದ್ದು ಸರಿಯಾದದ್ದು. ಸಿಎಎ ವಿರೋಧಿ ಹೋರಾಟದಲ್ಲಿ ಹೇಗೋ ಹಾಗೆ, ಇಲ್ಲೂ ಸಹಾ ಅಪಾರವಾದ ತಾಳ್ಮೆ, ಸಹನೆ ಹಾಗೂ ಪ್ರಬುದ್ಧತೆಯನ್ನು ರೈತ ಚಳವಳಿಯು ಪ್ರದರ್ಶಿಸಿದೆ. ಮಿಲಿಟೆಂಟ್ ಚಳವಳಿಯ ಹಿನ್ನೆಲೆಯುಳ್ಳ ಪಂಜಾಬಿನ ಜನರು ಈ ವಿಚಾರದಲ್ಲಿ ತೋರಿರುವ ಸಂಯಮವೇ ಅನನ್ಯವಾದದ್ದು. ಅಂತೆಯೇ ಸರ್ಕಾರದ ಮನುಷ್ಯ ವಿರೋಧಿತನವೂ ಎದ್ದು ತೋರುವಂಥಾದ್ದೇ ಆಗಿತ್ತು.

ಒಂದೇ ಮಾತಲ್ಲಿ ಹೇಳುವುದಾದರೆ ಸರ್ಕಾರವು ಕೃಷಿ ಕಾಯ್ದೆಗಳನ್ನು ತರುವುದರ ಮುಖಾಂತರವೇ ಹಿಂಸೆ ಮತ್ತು ಅರಾಜಕತೆಯನ್ನು ಹುಟ್ಟಿಹಾಕಿತ್ತು. ರೈತರು ಅದನ್ನು ತಾಳ್ಮೆ ಮತ್ತು ವಿವೇಕದಿಂದ ಎದುರಿಸಿದರು. ಹೆಜ್ಜೆ ಹೆಜ್ಜೆಗೂ ಸರ್ಕಾರವು ಹಿಂಸೆಯನ್ನು ಹೆಚ್ಚಿಸುತ್ತಾ ಹೋಗಿತ್ತು. ರೈತರು ತಮ್ಮ ವಿಶಿಷ್ಟ ಪ್ರಬುದ್ಧತೆಯಿಂದ ಅದನ್ನು ಎದುರುಗೊಂಡರು. ಉಳಿದಂತೆ ಆಗಬಹುದಾದ ಸಣ್ಣ ಪುಟ್ಟ ಅವಘಡಗಳೆಲ್ಲಾ ಕೇವಲ ಕೊಲ್ಯಾಟರೆಲ್ ಡ್ಯಾಮೇಜ್. ಅದನ್ನೇ ಧ್ಯಾನಿಸದೇ, ಒಟ್ಟಾರೆ ಒಳಿತಿನ ಕಡೆಗೆ ನಡೆಯುವುದಾದರೆ, ನಮ್ಮ ಕೈಲಾದಷ್ಟು ಜೊತೆಗೂಡುವ ಕೆಲಸ ಮಾಡುವುದೇ ಇಂದು ಎಲ್ಲಾ ಪ್ರಜಾತಂತ್ರವಾದಿಗಳ ಕರ್ತವ್ಯವಾಗಿದೆ.


ಇದನ್ನೂ ಓದಿ: ಸಿಖ್ ಧ್ವಜ ಹಾರಿಸಿದ ಗುಂಪನ್ನು ಕೆಂಪುಕೋಟೆಯವರೆಗೆ ಹೋಗಲು ಪೊಲೀಸರು ಬಿಟ್ಟಿದ್ದೇಕೆ? – ರೈತ ಮುಖಂಡರ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...