Homeಮುಖಪುಟಹಿಂದೂ ಮಹಾಸಾಗರದಲ್ಲಿ ಸಂಕಷ್ಟಕ್ಕೆ ಸಿಲುಕಿದ 185 ರೋಹಿಂಗ್ಯಾಗಳು: ರಕ್ಷಣೆಗೆ ವಿಶ್ವಸಂಸ್ಥೆ ಮನವಿ

ಹಿಂದೂ ಮಹಾಸಾಗರದಲ್ಲಿ ಸಂಕಷ್ಟಕ್ಕೆ ಸಿಲುಕಿದ 185 ರೋಹಿಂಗ್ಯಾಗಳು: ರಕ್ಷಣೆಗೆ ವಿಶ್ವಸಂಸ್ಥೆ ಮನವಿ

- Advertisement -
- Advertisement -

ಬಾಂಗ್ಲಾದೇಶದಿಂದ ಹೊರಟ ರೋಹಿಂಗ್ಯಾ ನಿರಾಶ್ರಿತರನ್ನು ಹೊತ್ತ ದೋಣಿ ಇಂಜಿನ್‌ ವೈಫಲ್ಯದಿಂದ ಹಿಂದೂ ಮಹಾಸಾಗರದಲ್ಲಿ ಸಿಲುಕಿಕೊಂಡಿದ್ದು, ಬಡಪಾಯಿ ಜನರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಅಲ್‌-ಜಝೀರಾ ವರದಿ ತಿಳಿಸಿದೆ.

ಹೆಚ್ಚಾಗಿ ಮಹಿಳೆಯರು, ಮಕ್ಕಳು ಇರುವ ಸುಮಾರು 185 ರೊಹಿಂಗ್ಯಾಗಳನ್ನು ಹೊತ್ತ ದೋಣಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಬಳಿ ಸಂಕಷ್ಟಕ್ಕೆ ಸಿಲುಕಿದೆ. ದೋಣಿಯಲ್ಲಿರುವ ಜನರ ರಕ್ಷಣೆಯ ತುರ್ತು ಅವಶ್ಯಕತೆಯಿದೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಹೈ ಕಮಿಷನರ್ (ಯುಎನ್‌ಹೆಚ್‌ಸಿಆರ್‌)ಕಳವಳ ವ್ಯಕ್ತಪಡಿಸಿದೆ.

ತಮ್ಮ ತಾಯ್ನಾಡಿನಿಂದ ಹೊರದಬ್ಬಲ್ಪಟ್ಟ ಸಾವಿರಾರು ರೋಹಿಂಗ್ಯಾಗಳು ಬಾಂಗ್ಲಾದೇಶದ ಜನನಿಬಿಡ ನಿರಾಶ್ರಿತರ ಶಿಬಿರಗಳಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಇಂತಹ ಶಿಬಿರಗಳಿಂದ ಇವರು ಆಗಾಗ ಇಂಡೋನೇಶ್ಯಾ ಅಥವಾ ಮಲೇಶ್ಯಾಗೆ ಅಪಾಯಕಾರಿ ಮಾರ್ಗದ ಮೂಲಕ ತೆರಳುತ್ತಿರುತ್ತಾರೆ. ಹೀಗೆ ತೆರಳುತ್ತಿದ್ದವರು ಸಾಗರದಲ್ಲಿ ಸಮಸ್ಯೆಗೆ ಸಿಲುಕಿದ್ದಾರೆ ಎಂದು ಯುಎನ್‌ಹೆಚ್‌ಸಿಆರ್‌ ತಿಳಿಸಿದೆ.

2017ರಲ್ಲಿ ಮ್ಯಾನ್ಮಾರ್‌ ಸೇನೆ ಅಲ್ಲಿನ ಮುಸ್ಲಿಂ ಸಮುದಾಯದ ಜನರಾದ ರೋಹಿಂಗ್ಯಾಗಳ ಮೇಲೆ ದಬ್ಬಾಳಿಕೆ ನಡೆಸಿ, ಅವರ ಮನೆ-ಆಸ್ತಿ ಪಾಸ್ತಿಗಳನ್ನು ಸುಟ್ಟು ಹಾಕಿತ್ತು. ಆ ಬಳಿಕ ಬದುಕಲು ಬೇರೆ ವಿಧಿಯಿಲ್ಲದೆ 750,000ಕ್ಕೂ ಹೆಚ್ಚು ರೋಹಿಂಗ್ಯಾಗಳು ತಮ್ಮ ತಾಯ್ನಾಡು ಬಿಟ್ಟು ಪಲಾಯನ ಮಾಡಿದ್ದಾರೆ. ಅವರು, ಭಾರತ, ಬಾಂಗ್ಲಾ ದೇಶದಂತಹ ಸಮೀಪದ ದೇಶಗಳಲ್ಲಿ ನೆಲೆಸಿದ್ದಾರೆ.

ಮ್ಯಾನ್ಮಾರ್ ಸೇನೆ ನಡೆಸಿದ ರೋಹಿಂಗ್ಯಾಗಳ ನರಮೇಧ ಪ್ರಕರಣ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿದೆ. ಆದರೆ, ಇದರಿಂದ ನೆಲೆ ಕಳೆದುಕೊಂಡ ಜನರಿಗೆ ಜೀವನ ನಡೆಸಲು ದಾರಿ ಸಿಗಲಿದೆ ಎಂಬ ಖಾತ್ರಿಯಿಲ್ಲ.

ಪ್ರಸ್ತುತ, ಹಿಂದೂ ಮಹಾಸಾಗರದಲ್ಲಿ ಸಿಲುಕಿರುವ ರೋಹಿಂಗ್ಯಾಗಳನ್ನು ರಕ್ಷಿಸುವಂತೆ ಸಮೀಪದ ರಾಷ್ಟ್ರಗಳಿಗೆ ವಿಶ್ವಸಂಸ್ಥೆ ಮನವಿ ಮಾಡಿದೆ. ದೋಣಿಯಲ್ಲಿದ್ದ ಜನರ ಪೈಕಿ ಒಬ್ಬರು ಈಗಾಗಲೇ ಸಾವನ್ನಪ್ಪಿದ್ದಾರೆ. ಇನ್ನಷ್ಟು ಜನರು ಪ್ರಾಣ ಕಳೆದುಕೊಳ್ಳುವ ಮುನ್ನ ಕಾಪಾಡಿ ಎಂದು ವಿಶ್ವ ಸಂಸ್ಥೆಯ ನಿರಾಶ್ರಿತರ ಹೈ ಕಮಿಷನರ್ ಕೋರಿದೆ.

ಯುಎನ್‌ಹೆಚ್‌ಸಿಆರ್‌ ಪ್ರಕಾರ, 2022ರಲ್ಲಿ 2,000 ಕ್ಕೂ ಹೆಚ್ಚು ರೋಹಿಂಗ್ಯಾಗಳು ಆಗ್ನೇಯ ಏಷ್ಯಾದ ದೇಶಗಳಿಗೆ ಅಪಾಯಕಾರಿ ಪ್ರಯಾಣ ಮಾಡುವ ಪ್ರಯತ್ನ ನಡೆಸಿದ್ದಾರೆ. ಈ ಪೈಕಿ ಎಷ್ಟೋ ಜನರು ಸಮುದ್ರ ದಾರಿಯಲ್ಲಿ ಜಲ ಸಮಾಧಿಯಾಗಿದ್ದಾರೆ. ಎಷ್ಟು ಜನರು ಸಾವನ್ನಪ್ಪಿದ್ದಾರೆ ಎಂಬುವುದು ಬಗ್ಗೆ ನಿಖರವಾದ ಮಾಹಿತಿಯಿಲ್ಲ. ಏಕೆಂದರೆ, ಇವರ ಬಗ್ಗೆ ಕಾಳಜಿ ವಹಿಸುವವರೇ ಇಲ್ಲ.

ತಂಬ್‌ನೈಲ್‌ ಚಿತ್ರ ಸಾಂಧರ್ಬಿಕ 

ಇದನ್ನೂ ಓದಿ : ಡ್ರೋನ್‌ ದಾಳಿ: ಅಮೆರಿಕದ ಆರೋಪವನ್ನು ‘ಆಧಾರ ರಹಿತ’ ಎಂದ ಇರಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...