Homeಮುಖಪುಟಹಿಂದೂ ಮಹಾಸಾಗರದಲ್ಲಿ ಸಂಕಷ್ಟಕ್ಕೆ ಸಿಲುಕಿದ 185 ರೋಹಿಂಗ್ಯಾಗಳು: ರಕ್ಷಣೆಗೆ ವಿಶ್ವಸಂಸ್ಥೆ ಮನವಿ

ಹಿಂದೂ ಮಹಾಸಾಗರದಲ್ಲಿ ಸಂಕಷ್ಟಕ್ಕೆ ಸಿಲುಕಿದ 185 ರೋಹಿಂಗ್ಯಾಗಳು: ರಕ್ಷಣೆಗೆ ವಿಶ್ವಸಂಸ್ಥೆ ಮನವಿ

- Advertisement -
- Advertisement -

ಬಾಂಗ್ಲಾದೇಶದಿಂದ ಹೊರಟ ರೋಹಿಂಗ್ಯಾ ನಿರಾಶ್ರಿತರನ್ನು ಹೊತ್ತ ದೋಣಿ ಇಂಜಿನ್‌ ವೈಫಲ್ಯದಿಂದ ಹಿಂದೂ ಮಹಾಸಾಗರದಲ್ಲಿ ಸಿಲುಕಿಕೊಂಡಿದ್ದು, ಬಡಪಾಯಿ ಜನರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಅಲ್‌-ಜಝೀರಾ ವರದಿ ತಿಳಿಸಿದೆ.

ಹೆಚ್ಚಾಗಿ ಮಹಿಳೆಯರು, ಮಕ್ಕಳು ಇರುವ ಸುಮಾರು 185 ರೊಹಿಂಗ್ಯಾಗಳನ್ನು ಹೊತ್ತ ದೋಣಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಬಳಿ ಸಂಕಷ್ಟಕ್ಕೆ ಸಿಲುಕಿದೆ. ದೋಣಿಯಲ್ಲಿರುವ ಜನರ ರಕ್ಷಣೆಯ ತುರ್ತು ಅವಶ್ಯಕತೆಯಿದೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಹೈ ಕಮಿಷನರ್ (ಯುಎನ್‌ಹೆಚ್‌ಸಿಆರ್‌)ಕಳವಳ ವ್ಯಕ್ತಪಡಿಸಿದೆ.

ತಮ್ಮ ತಾಯ್ನಾಡಿನಿಂದ ಹೊರದಬ್ಬಲ್ಪಟ್ಟ ಸಾವಿರಾರು ರೋಹಿಂಗ್ಯಾಗಳು ಬಾಂಗ್ಲಾದೇಶದ ಜನನಿಬಿಡ ನಿರಾಶ್ರಿತರ ಶಿಬಿರಗಳಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಇಂತಹ ಶಿಬಿರಗಳಿಂದ ಇವರು ಆಗಾಗ ಇಂಡೋನೇಶ್ಯಾ ಅಥವಾ ಮಲೇಶ್ಯಾಗೆ ಅಪಾಯಕಾರಿ ಮಾರ್ಗದ ಮೂಲಕ ತೆರಳುತ್ತಿರುತ್ತಾರೆ. ಹೀಗೆ ತೆರಳುತ್ತಿದ್ದವರು ಸಾಗರದಲ್ಲಿ ಸಮಸ್ಯೆಗೆ ಸಿಲುಕಿದ್ದಾರೆ ಎಂದು ಯುಎನ್‌ಹೆಚ್‌ಸಿಆರ್‌ ತಿಳಿಸಿದೆ.

2017ರಲ್ಲಿ ಮ್ಯಾನ್ಮಾರ್‌ ಸೇನೆ ಅಲ್ಲಿನ ಮುಸ್ಲಿಂ ಸಮುದಾಯದ ಜನರಾದ ರೋಹಿಂಗ್ಯಾಗಳ ಮೇಲೆ ದಬ್ಬಾಳಿಕೆ ನಡೆಸಿ, ಅವರ ಮನೆ-ಆಸ್ತಿ ಪಾಸ್ತಿಗಳನ್ನು ಸುಟ್ಟು ಹಾಕಿತ್ತು. ಆ ಬಳಿಕ ಬದುಕಲು ಬೇರೆ ವಿಧಿಯಿಲ್ಲದೆ 750,000ಕ್ಕೂ ಹೆಚ್ಚು ರೋಹಿಂಗ್ಯಾಗಳು ತಮ್ಮ ತಾಯ್ನಾಡು ಬಿಟ್ಟು ಪಲಾಯನ ಮಾಡಿದ್ದಾರೆ. ಅವರು, ಭಾರತ, ಬಾಂಗ್ಲಾ ದೇಶದಂತಹ ಸಮೀಪದ ದೇಶಗಳಲ್ಲಿ ನೆಲೆಸಿದ್ದಾರೆ.

ಮ್ಯಾನ್ಮಾರ್ ಸೇನೆ ನಡೆಸಿದ ರೋಹಿಂಗ್ಯಾಗಳ ನರಮೇಧ ಪ್ರಕರಣ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿದೆ. ಆದರೆ, ಇದರಿಂದ ನೆಲೆ ಕಳೆದುಕೊಂಡ ಜನರಿಗೆ ಜೀವನ ನಡೆಸಲು ದಾರಿ ಸಿಗಲಿದೆ ಎಂಬ ಖಾತ್ರಿಯಿಲ್ಲ.

ಪ್ರಸ್ತುತ, ಹಿಂದೂ ಮಹಾಸಾಗರದಲ್ಲಿ ಸಿಲುಕಿರುವ ರೋಹಿಂಗ್ಯಾಗಳನ್ನು ರಕ್ಷಿಸುವಂತೆ ಸಮೀಪದ ರಾಷ್ಟ್ರಗಳಿಗೆ ವಿಶ್ವಸಂಸ್ಥೆ ಮನವಿ ಮಾಡಿದೆ. ದೋಣಿಯಲ್ಲಿದ್ದ ಜನರ ಪೈಕಿ ಒಬ್ಬರು ಈಗಾಗಲೇ ಸಾವನ್ನಪ್ಪಿದ್ದಾರೆ. ಇನ್ನಷ್ಟು ಜನರು ಪ್ರಾಣ ಕಳೆದುಕೊಳ್ಳುವ ಮುನ್ನ ಕಾಪಾಡಿ ಎಂದು ವಿಶ್ವ ಸಂಸ್ಥೆಯ ನಿರಾಶ್ರಿತರ ಹೈ ಕಮಿಷನರ್ ಕೋರಿದೆ.

ಯುಎನ್‌ಹೆಚ್‌ಸಿಆರ್‌ ಪ್ರಕಾರ, 2022ರಲ್ಲಿ 2,000 ಕ್ಕೂ ಹೆಚ್ಚು ರೋಹಿಂಗ್ಯಾಗಳು ಆಗ್ನೇಯ ಏಷ್ಯಾದ ದೇಶಗಳಿಗೆ ಅಪಾಯಕಾರಿ ಪ್ರಯಾಣ ಮಾಡುವ ಪ್ರಯತ್ನ ನಡೆಸಿದ್ದಾರೆ. ಈ ಪೈಕಿ ಎಷ್ಟೋ ಜನರು ಸಮುದ್ರ ದಾರಿಯಲ್ಲಿ ಜಲ ಸಮಾಧಿಯಾಗಿದ್ದಾರೆ. ಎಷ್ಟು ಜನರು ಸಾವನ್ನಪ್ಪಿದ್ದಾರೆ ಎಂಬುವುದು ಬಗ್ಗೆ ನಿಖರವಾದ ಮಾಹಿತಿಯಿಲ್ಲ. ಏಕೆಂದರೆ, ಇವರ ಬಗ್ಗೆ ಕಾಳಜಿ ವಹಿಸುವವರೇ ಇಲ್ಲ.

ತಂಬ್‌ನೈಲ್‌ ಚಿತ್ರ ಸಾಂಧರ್ಬಿಕ 

ಇದನ್ನೂ ಓದಿ : ಡ್ರೋನ್‌ ದಾಳಿ: ಅಮೆರಿಕದ ಆರೋಪವನ್ನು ‘ಆಧಾರ ರಹಿತ’ ಎಂದ ಇರಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...