Homeಮುಖಪುಟಹಿಂದೂ ಮಹಾಸಾಗರದಲ್ಲಿ ಸಂಕಷ್ಟಕ್ಕೆ ಸಿಲುಕಿದ 185 ರೋಹಿಂಗ್ಯಾಗಳು: ರಕ್ಷಣೆಗೆ ವಿಶ್ವಸಂಸ್ಥೆ ಮನವಿ

ಹಿಂದೂ ಮಹಾಸಾಗರದಲ್ಲಿ ಸಂಕಷ್ಟಕ್ಕೆ ಸಿಲುಕಿದ 185 ರೋಹಿಂಗ್ಯಾಗಳು: ರಕ್ಷಣೆಗೆ ವಿಶ್ವಸಂಸ್ಥೆ ಮನವಿ

- Advertisement -
- Advertisement -

ಬಾಂಗ್ಲಾದೇಶದಿಂದ ಹೊರಟ ರೋಹಿಂಗ್ಯಾ ನಿರಾಶ್ರಿತರನ್ನು ಹೊತ್ತ ದೋಣಿ ಇಂಜಿನ್‌ ವೈಫಲ್ಯದಿಂದ ಹಿಂದೂ ಮಹಾಸಾಗರದಲ್ಲಿ ಸಿಲುಕಿಕೊಂಡಿದ್ದು, ಬಡಪಾಯಿ ಜನರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಅಲ್‌-ಜಝೀರಾ ವರದಿ ತಿಳಿಸಿದೆ.

ಹೆಚ್ಚಾಗಿ ಮಹಿಳೆಯರು, ಮಕ್ಕಳು ಇರುವ ಸುಮಾರು 185 ರೊಹಿಂಗ್ಯಾಗಳನ್ನು ಹೊತ್ತ ದೋಣಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಬಳಿ ಸಂಕಷ್ಟಕ್ಕೆ ಸಿಲುಕಿದೆ. ದೋಣಿಯಲ್ಲಿರುವ ಜನರ ರಕ್ಷಣೆಯ ತುರ್ತು ಅವಶ್ಯಕತೆಯಿದೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಹೈ ಕಮಿಷನರ್ (ಯುಎನ್‌ಹೆಚ್‌ಸಿಆರ್‌)ಕಳವಳ ವ್ಯಕ್ತಪಡಿಸಿದೆ.

ತಮ್ಮ ತಾಯ್ನಾಡಿನಿಂದ ಹೊರದಬ್ಬಲ್ಪಟ್ಟ ಸಾವಿರಾರು ರೋಹಿಂಗ್ಯಾಗಳು ಬಾಂಗ್ಲಾದೇಶದ ಜನನಿಬಿಡ ನಿರಾಶ್ರಿತರ ಶಿಬಿರಗಳಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಇಂತಹ ಶಿಬಿರಗಳಿಂದ ಇವರು ಆಗಾಗ ಇಂಡೋನೇಶ್ಯಾ ಅಥವಾ ಮಲೇಶ್ಯಾಗೆ ಅಪಾಯಕಾರಿ ಮಾರ್ಗದ ಮೂಲಕ ತೆರಳುತ್ತಿರುತ್ತಾರೆ. ಹೀಗೆ ತೆರಳುತ್ತಿದ್ದವರು ಸಾಗರದಲ್ಲಿ ಸಮಸ್ಯೆಗೆ ಸಿಲುಕಿದ್ದಾರೆ ಎಂದು ಯುಎನ್‌ಹೆಚ್‌ಸಿಆರ್‌ ತಿಳಿಸಿದೆ.

2017ರಲ್ಲಿ ಮ್ಯಾನ್ಮಾರ್‌ ಸೇನೆ ಅಲ್ಲಿನ ಮುಸ್ಲಿಂ ಸಮುದಾಯದ ಜನರಾದ ರೋಹಿಂಗ್ಯಾಗಳ ಮೇಲೆ ದಬ್ಬಾಳಿಕೆ ನಡೆಸಿ, ಅವರ ಮನೆ-ಆಸ್ತಿ ಪಾಸ್ತಿಗಳನ್ನು ಸುಟ್ಟು ಹಾಕಿತ್ತು. ಆ ಬಳಿಕ ಬದುಕಲು ಬೇರೆ ವಿಧಿಯಿಲ್ಲದೆ 750,000ಕ್ಕೂ ಹೆಚ್ಚು ರೋಹಿಂಗ್ಯಾಗಳು ತಮ್ಮ ತಾಯ್ನಾಡು ಬಿಟ್ಟು ಪಲಾಯನ ಮಾಡಿದ್ದಾರೆ. ಅವರು, ಭಾರತ, ಬಾಂಗ್ಲಾ ದೇಶದಂತಹ ಸಮೀಪದ ದೇಶಗಳಲ್ಲಿ ನೆಲೆಸಿದ್ದಾರೆ.

ಮ್ಯಾನ್ಮಾರ್ ಸೇನೆ ನಡೆಸಿದ ರೋಹಿಂಗ್ಯಾಗಳ ನರಮೇಧ ಪ್ರಕರಣ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿದೆ. ಆದರೆ, ಇದರಿಂದ ನೆಲೆ ಕಳೆದುಕೊಂಡ ಜನರಿಗೆ ಜೀವನ ನಡೆಸಲು ದಾರಿ ಸಿಗಲಿದೆ ಎಂಬ ಖಾತ್ರಿಯಿಲ್ಲ.

ಪ್ರಸ್ತುತ, ಹಿಂದೂ ಮಹಾಸಾಗರದಲ್ಲಿ ಸಿಲುಕಿರುವ ರೋಹಿಂಗ್ಯಾಗಳನ್ನು ರಕ್ಷಿಸುವಂತೆ ಸಮೀಪದ ರಾಷ್ಟ್ರಗಳಿಗೆ ವಿಶ್ವಸಂಸ್ಥೆ ಮನವಿ ಮಾಡಿದೆ. ದೋಣಿಯಲ್ಲಿದ್ದ ಜನರ ಪೈಕಿ ಒಬ್ಬರು ಈಗಾಗಲೇ ಸಾವನ್ನಪ್ಪಿದ್ದಾರೆ. ಇನ್ನಷ್ಟು ಜನರು ಪ್ರಾಣ ಕಳೆದುಕೊಳ್ಳುವ ಮುನ್ನ ಕಾಪಾಡಿ ಎಂದು ವಿಶ್ವ ಸಂಸ್ಥೆಯ ನಿರಾಶ್ರಿತರ ಹೈ ಕಮಿಷನರ್ ಕೋರಿದೆ.

ಯುಎನ್‌ಹೆಚ್‌ಸಿಆರ್‌ ಪ್ರಕಾರ, 2022ರಲ್ಲಿ 2,000 ಕ್ಕೂ ಹೆಚ್ಚು ರೋಹಿಂಗ್ಯಾಗಳು ಆಗ್ನೇಯ ಏಷ್ಯಾದ ದೇಶಗಳಿಗೆ ಅಪಾಯಕಾರಿ ಪ್ರಯಾಣ ಮಾಡುವ ಪ್ರಯತ್ನ ನಡೆಸಿದ್ದಾರೆ. ಈ ಪೈಕಿ ಎಷ್ಟೋ ಜನರು ಸಮುದ್ರ ದಾರಿಯಲ್ಲಿ ಜಲ ಸಮಾಧಿಯಾಗಿದ್ದಾರೆ. ಎಷ್ಟು ಜನರು ಸಾವನ್ನಪ್ಪಿದ್ದಾರೆ ಎಂಬುವುದು ಬಗ್ಗೆ ನಿಖರವಾದ ಮಾಹಿತಿಯಿಲ್ಲ. ಏಕೆಂದರೆ, ಇವರ ಬಗ್ಗೆ ಕಾಳಜಿ ವಹಿಸುವವರೇ ಇಲ್ಲ.

ತಂಬ್‌ನೈಲ್‌ ಚಿತ್ರ ಸಾಂಧರ್ಬಿಕ 

ಇದನ್ನೂ ಓದಿ : ಡ್ರೋನ್‌ ದಾಳಿ: ಅಮೆರಿಕದ ಆರೋಪವನ್ನು ‘ಆಧಾರ ರಹಿತ’ ಎಂದ ಇರಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...