Homeಅಂತರಾಷ್ಟ್ರೀಯಭಾರತದಲ್ಲಿ ಆಶ್ರಯ ಪಡೆಯಲು ಕೋರಿ 736 ಅಫ್ಘಾನಿಸ್ತಾನಿಯರಿಂದ ಹೊಸ ಅರ್ಜಿ

ಭಾರತದಲ್ಲಿ ಆಶ್ರಯ ಪಡೆಯಲು ಕೋರಿ 736 ಅಫ್ಘಾನಿಸ್ತಾನಿಯರಿಂದ ಹೊಸ ಅರ್ಜಿ

- Advertisement -
- Advertisement -

ಭಾರತದಲ್ಲಿ ಆಶ್ರಯ ಪಡೆಯಲು ಕೋರಿ ಆಗಸ್ಟ್ 1 ರಿಂದ ಸೆಪ್ಟೆಂಬರ್ 11 ರವರೆಗೆ ಒಟ್ಟು 736 ಅಫ್ಘಾನಿಸ್ತಾನಿಯರು ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ವಿಶ್ವಸಂಸ್ಥೆಯ ಅಂಗಸಂಸ್ಥೆ ಯುಎನ್‌ಎಚ್‌ಸಿಆರ್ (UNHCR) ಮಾಹಿತಿ ನೀಡಿದೆ.

ಭಾರತದಲ್ಲಿ ಆಶ್ರಯ ಕೋರಿ ಅಫ್ಘಾನಿಸ್ತಾನಿಯರಿಂದ ಅರ್ಜಿಗಳು ಹೆಚ್ಚಾಗುವ ಸಾಧ್ಯತೆಯಿದ್ದು, ಆಶ್ರಯದ ಅರ್ಜಿ ನೋಂದಣಿ ಮತ್ತು ನೆರವಿನ ಮನವಿಗಳನ್ನು ಪೂರೈಸಲು ತನ್ನ ಸಾಮರ್ಥ್ಯವನ್ನು ಹೆಚ್ಚಿಸುಕೊಳ್ಳುವುದಾಗಿ ಯುಎನ್‌ಎಚ್‌ಸಿಆರ್ ತಿಳಿಸಿದೆ.

ಅಫ್ಘಾನಿಸ್ತಾನದ ಪ್ರಜೆಗಳಿಗೆ, ವೀಸಾ ಪೂರೈಕೆ ಮತ್ತು ವೀಸಾ ಅವಧಿಯ ವಿಸ್ತರಣೆಗೆ ನೆರವಾಗುವುದು ಸೇರಿದಂತೆ ಹಲವು ಪರಿಹಾರ ಕಾರ್ಯಗಳ ಕುರಿತು ಭಾರತ ಸರ್ಕಾರದೊಂದಿಗೆ ನಿರಂತರವಾಗಿ ಮಾತುಕತೆ ನಡೆಸುತ್ತಿದ್ದೇವೆ ಎಂದು ವಿಶ್ವಸಂಸ್ಥೆಯ ಯುಎನ್‌ಎಚ್‌ಸಿಆರ್‌ ತಿಳಿಸಿದೆ.

ಇದನ್ನೂ ಓದಿ: ಅಫ್ಘಾನ್: ಮಹಿಳೆಯರನ್ನು ಕ್ರಿಕೆಟ್ ಸೇರಿ ಹಲವು ಕ್ರೀಡೆಗಳಿಂದ ಹೊರಗಿಟ್ಟ ತಾಲಿಬಾನ್‌ ಸರ್ಕಾರ

ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ UNHCR ಮೂಲಕ ದೇಶದಲ್ಲಿ ಒಟ್ಟು 43,157 ಮಂದಿ ಆಶ್ರಯ ಪಡೆದಿದ್ದಾರೆ. ಅವರಲ್ಲಿ, 15,559 ನಿರಾಶ್ರಿತರು ಮತ್ತು ಆಶ್ರಯ ಪಡೆದವರು ಅಫ್ಘಾನಿಸ್ತಾನದವರು ಎಂದು ವರದಿಯಾಗಿದೆ.

“ಆಗಸ್ಟ್ 1 ರಿಂದ ಸೆಪ್ಟೆಂಬರ್ 11 ರವರೆಗೆ, 736 ಅಫ್ಘಾನಿಸ್ತಾನಿಯರನ್ನು ಯುಎನ್‌ಎಚ್‌ಸಿಆರ್ ಹೊಸ ನೋಂದಣಿಗಾಗಿ ದಾಖಲಿಸಿದೆ” ಎಂದು ವಿಶ್ವಸಂಸ್ಥೆ ಹೇಳಿದೆ.

“ಆಹಾರ, ನಗದು ಆಧಾರಿತ ನೆರವು, ಮೂಲಭೂತ ಸಹಾಯವನ್ನು ಅಫ್ಘಾನಿಸ್ತಾನದಿಂದ ಹೊಸದಾಗಿ ಆಗಮಿಸುವವರಿಗೆ ಮತ್ತು ಈಗಾಗಲೇ ಭಾರತದಲ್ಲಿರುವವರಿಗೆ ಒದಗಿಸಲಾಗುತ್ತಿದೆ “ಎಂದು ಯುಎನ್ ಸಂಸ್ಥೆ ಮಾಹಿತಿ ನೀಡಿದೆ.

ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳು ಹೊಸ ಸರ್ಕಾರವನ್ನು ರಚನೆ ಮಾಡಿದ್ದು, ನೂತನ ಪ್ರಧಾನಿಯಾಗಿ ಮುಲ್ಲಾ ಮೊಹಮ್ಮದ್​ ಹಸನ್​ ಅಕುಂದ್ ಅಧಿಕಾರಕ್ಕೆ ಏರಲಿದ್ದಾರೆ. ಇದೇ ವೇಳೆ ಅಫ್ಘಾನ್ ಮಹಿಳೆಯರಿಗೆ ಕ್ರಿಕೆಟ್ ಸೇರಿದಂತೆ ಹಲವು ಕ್ರೀಡೆಗಳಿಂದ ಬ್ಯಾನ್ ಮಾಡಲಾಗಿದೆ.


ಇದನ್ನೂ ಓದಿ: ಅಫ್ಘಾನ್ ಮಹಿಳೆಯರ ಪ್ರತಿಭಟನೆ ವರದಿ ಮಾಡಿದ ಪತ್ರಕರ್ತರ ಮೇಲೆ ತಾಲಿಬಾನ್‌ನಿಂದ ಹಲ್ಲೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ಸರ್ಕಾರ 5ಜಿ ಮೆಗಾ ಹಗರಣವನ್ನು ರೂಪಿಸುತ್ತಿದೆ: ಎಎಪಿ ಮುಖಂಡ ಸಂಜಯ್ ಸಿಂಗ್

0
2ಜಿ ಸ್ಪೆಕ್ಟ್ರಮ್ ಪ್ರಕರಣದಲ್ಲಿ 2012ರ ತೀರ್ಪನ್ನು ಮಾರ್ಪಾಡು ಮಾಡುವಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರು ಪ್ರಧಾನಿ ನರೇಂದ್ರ...