Homeಅಂತರಾಷ್ಟ್ರೀಯಭಾರತದಲ್ಲಿ ಆಶ್ರಯ ಪಡೆಯಲು ಕೋರಿ 736 ಅಫ್ಘಾನಿಸ್ತಾನಿಯರಿಂದ ಹೊಸ ಅರ್ಜಿ

ಭಾರತದಲ್ಲಿ ಆಶ್ರಯ ಪಡೆಯಲು ಕೋರಿ 736 ಅಫ್ಘಾನಿಸ್ತಾನಿಯರಿಂದ ಹೊಸ ಅರ್ಜಿ

- Advertisement -
- Advertisement -

ಭಾರತದಲ್ಲಿ ಆಶ್ರಯ ಪಡೆಯಲು ಕೋರಿ ಆಗಸ್ಟ್ 1 ರಿಂದ ಸೆಪ್ಟೆಂಬರ್ 11 ರವರೆಗೆ ಒಟ್ಟು 736 ಅಫ್ಘಾನಿಸ್ತಾನಿಯರು ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ವಿಶ್ವಸಂಸ್ಥೆಯ ಅಂಗಸಂಸ್ಥೆ ಯುಎನ್‌ಎಚ್‌ಸಿಆರ್ (UNHCR) ಮಾಹಿತಿ ನೀಡಿದೆ.

ಭಾರತದಲ್ಲಿ ಆಶ್ರಯ ಕೋರಿ ಅಫ್ಘಾನಿಸ್ತಾನಿಯರಿಂದ ಅರ್ಜಿಗಳು ಹೆಚ್ಚಾಗುವ ಸಾಧ್ಯತೆಯಿದ್ದು, ಆಶ್ರಯದ ಅರ್ಜಿ ನೋಂದಣಿ ಮತ್ತು ನೆರವಿನ ಮನವಿಗಳನ್ನು ಪೂರೈಸಲು ತನ್ನ ಸಾಮರ್ಥ್ಯವನ್ನು ಹೆಚ್ಚಿಸುಕೊಳ್ಳುವುದಾಗಿ ಯುಎನ್‌ಎಚ್‌ಸಿಆರ್ ತಿಳಿಸಿದೆ.

ಅಫ್ಘಾನಿಸ್ತಾನದ ಪ್ರಜೆಗಳಿಗೆ, ವೀಸಾ ಪೂರೈಕೆ ಮತ್ತು ವೀಸಾ ಅವಧಿಯ ವಿಸ್ತರಣೆಗೆ ನೆರವಾಗುವುದು ಸೇರಿದಂತೆ ಹಲವು ಪರಿಹಾರ ಕಾರ್ಯಗಳ ಕುರಿತು ಭಾರತ ಸರ್ಕಾರದೊಂದಿಗೆ ನಿರಂತರವಾಗಿ ಮಾತುಕತೆ ನಡೆಸುತ್ತಿದ್ದೇವೆ ಎಂದು ವಿಶ್ವಸಂಸ್ಥೆಯ ಯುಎನ್‌ಎಚ್‌ಸಿಆರ್‌ ತಿಳಿಸಿದೆ.

ಇದನ್ನೂ ಓದಿ: ಅಫ್ಘಾನ್: ಮಹಿಳೆಯರನ್ನು ಕ್ರಿಕೆಟ್ ಸೇರಿ ಹಲವು ಕ್ರೀಡೆಗಳಿಂದ ಹೊರಗಿಟ್ಟ ತಾಲಿಬಾನ್‌ ಸರ್ಕಾರ

ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ UNHCR ಮೂಲಕ ದೇಶದಲ್ಲಿ ಒಟ್ಟು 43,157 ಮಂದಿ ಆಶ್ರಯ ಪಡೆದಿದ್ದಾರೆ. ಅವರಲ್ಲಿ, 15,559 ನಿರಾಶ್ರಿತರು ಮತ್ತು ಆಶ್ರಯ ಪಡೆದವರು ಅಫ್ಘಾನಿಸ್ತಾನದವರು ಎಂದು ವರದಿಯಾಗಿದೆ.

“ಆಗಸ್ಟ್ 1 ರಿಂದ ಸೆಪ್ಟೆಂಬರ್ 11 ರವರೆಗೆ, 736 ಅಫ್ಘಾನಿಸ್ತಾನಿಯರನ್ನು ಯುಎನ್‌ಎಚ್‌ಸಿಆರ್ ಹೊಸ ನೋಂದಣಿಗಾಗಿ ದಾಖಲಿಸಿದೆ” ಎಂದು ವಿಶ್ವಸಂಸ್ಥೆ ಹೇಳಿದೆ.

“ಆಹಾರ, ನಗದು ಆಧಾರಿತ ನೆರವು, ಮೂಲಭೂತ ಸಹಾಯವನ್ನು ಅಫ್ಘಾನಿಸ್ತಾನದಿಂದ ಹೊಸದಾಗಿ ಆಗಮಿಸುವವರಿಗೆ ಮತ್ತು ಈಗಾಗಲೇ ಭಾರತದಲ್ಲಿರುವವರಿಗೆ ಒದಗಿಸಲಾಗುತ್ತಿದೆ “ಎಂದು ಯುಎನ್ ಸಂಸ್ಥೆ ಮಾಹಿತಿ ನೀಡಿದೆ.

ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳು ಹೊಸ ಸರ್ಕಾರವನ್ನು ರಚನೆ ಮಾಡಿದ್ದು, ನೂತನ ಪ್ರಧಾನಿಯಾಗಿ ಮುಲ್ಲಾ ಮೊಹಮ್ಮದ್​ ಹಸನ್​ ಅಕುಂದ್ ಅಧಿಕಾರಕ್ಕೆ ಏರಲಿದ್ದಾರೆ. ಇದೇ ವೇಳೆ ಅಫ್ಘಾನ್ ಮಹಿಳೆಯರಿಗೆ ಕ್ರಿಕೆಟ್ ಸೇರಿದಂತೆ ಹಲವು ಕ್ರೀಡೆಗಳಿಂದ ಬ್ಯಾನ್ ಮಾಡಲಾಗಿದೆ.


ಇದನ್ನೂ ಓದಿ: ಅಫ್ಘಾನ್ ಮಹಿಳೆಯರ ಪ್ರತಿಭಟನೆ ವರದಿ ಮಾಡಿದ ಪತ್ರಕರ್ತರ ಮೇಲೆ ತಾಲಿಬಾನ್‌ನಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...