Homeಮುಖಪುಟಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

- Advertisement -
- Advertisement -

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ದೆಹಲಿಯ ರಫಿ ಮಾರ್ಗದಲ್ಲಿರುವ ಪ್ರಮುಖ ಆಸ್ತಿ ವಿವಾದದಲ್ಲಿ ಕೇಂದ್ರ ಸರ್ಕಾರದ ಪರವಾಗಿ ತೀರ್ಪು ನೀಡಿದ ದೆಹಲಿ ಹೈಕೋರ್ಟ್ ಆದೇಶದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಮತ್ತು ಕೇಂದ್ರ ಪಡೆಗಳು, ಪತ್ರಕರ್ತರೊಂದಿಗೆ ನೂಕಾಟ-ತಳ್ಳಾಟದ ನಡುವೆಯೇ ಮಾಧ್ಯಮ ಕಚೇರಿಗೆ ಬೀಗ ಜಡಿದು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.

ಭದ್ರತಾ ಸಿಬ್ಬಂದಿಯ ವರ್ತನೆಯನ್ನು ಖಂಡಿಸಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, “ಹೈಕೋರ್ಟ್ ಆದೇಶವನ್ನು ಜಾರಿಗೆ ತರುವ ಅಗತ್ಯವನ್ನು ಗಿಲ್ಡ್ ಪ್ರಶ್ನಿಸುವುದಿಲ್ಲ, ಆದರೆ, ಸರಿಯಾದ ಪ್ರಕ್ರಿಯೆಯ ಕೊರತೆ ಮತ್ತು ನ್ಯಾಯಾಲಯದ ನಿರ್ದೇಶನಗಳನ್ನು ಜಾರಿಗೊಳಿಸುವಲ್ಲಿ ಅಧಿಕಾರಿಗಳು ಪ್ರದರ್ಶಿಸಿದ ಅತಿಯಾದ ಬಲಪ್ರಯೋಗ ಇಲ್ಲಿ ಆತಂಕಕಾರಿ ವಿಷಯ” ಎಂದಿದೆ.

“ಹೈಕೋರ್ಟ್ ಆದೇಶವು ಅದರ ವೆಬ್‌ಸೈಟ್‌ನಲ್ಲಿ ಪ್ರಕಟಗೊಳ್ಳುವ ಮೊದಲೇ, ನೂರಾರು ಪೊಲೀಸರು ಮತ್ತು ಅರೆಸೇನಾ ಪಡೆಗಳ ಸಿಬ್ಬಂದಿ ಯುಎನ್‌ಐ ಆವರಣಕ್ಕೆ ಆಗಮಿಸಿದ್ದರು. ಮಹಿಳಾ ಸಿಬ್ಬಂದಿ ಸೇರಿದಂತೆ ಪತ್ರಕರ್ತರು ತಮ್ಮ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಅವರನ್ನು ಬಲವಂತವಾಗಿ ಹೊರಹಾಕಿದ್ದಾರೆ” ಎಂದು ಎಡಿಟರ್ಸ್ ಗಿಲ್ಡ್ ಹೇಳಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಕೂಡ ಭದ್ರತಾ ಸಿಬ್ಬಂದಿಯ ದಮನಕಾರಿ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿದೆ.

ಶನಿವಾರ ಸಿಪಿಎಂ ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿ, “ಇಂತಹ ದಬ್ಬಾಳಿಕೆ, ಮುನ್ಸೂಚನೆಯ ನಿರಾಕರಣೆ, ವೈಯಕ್ತಿಕ ವಸ್ತುಗಳನ್ನು ಸಂಗ್ರಹಿಸಿಕೊಳ್ಳಲು ಸಮಯ ನೀಡದಿರುವುದು ಮತ್ತು ಮಹಿಳಾ ಸಿಬ್ಬಂದಿ ಸೇರಿದಂತೆ ಎಲ್ಲರನ್ನೂ ನಡೆಸಿಕೊಂಡ ರೀತಿ ವರದಿಯಾಗಿರುವುದು ಪ್ರಜಾಪ್ರಭುತ್ವದಲ್ಲಿ ಸ್ವೀಕಾರಾರ್ಹವಲ್ಲ. ನ್ಯಾಯಾಲಯದ ಆದೇಶದ ನೆಪದಲ್ಲಿ ಇದನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಬೆದರಿಕೆಯ ನೆರಳಿನಲ್ಲಿ ಮುಕ್ತ ಪತ್ರಿಕೋದ್ಯಮ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ” ಎಂದಿದ್ದಾರೆ.

ಪತ್ರಕರ್ತರ ಮೇಲೆ ದಬ್ಬಾಳಿಕೆ ನಡೆಸಿರುವ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಪ್ರೆಸ್ ಕ್ಲಬ್ ಆಫ್ ಇಂಡಿಯಾ, ಇಂತಹ ದುರ್ನಡತೆಗೆ ಕಾರಣರಾದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಿದೆ. ಇದು “ಪತ್ರಿಕಾರಂಗದ ಕೆಲಸ ಮಾಡುವ ಹಕ್ಕು ಪ್ರಜಾಪ್ರಭುತ್ವದ ಪ್ರಮುಖ ಭಾಗವಾಗಿದೆ ಎಂಬ ವಿಶ್ವಾಸವನ್ನು ಪತ್ರಕರ್ತರ ಸಮುದಾಯದಲ್ಲಿ ಮೂಡಿಸಲು ಸಹಾಯ ಮಾಡುತ್ತದೆ” ಎಂದು ಅದು ಹೇಳಿದೆ.

ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಇತ್ತೀಚಿನ ವರ್ಷಗಳಲ್ಲಿ ಮಾಧ್ಯಮಗಳ ಮೇಲೆ ನಡೆದ ದಮನಕಾರಿ ಕ್ರಮಗಳ ಹಲವಾರು ನಿದರ್ಶನಗಳನ್ನು ಪಟ್ಟಿ ಮಾಡಿದ್ದಾರೆ. ಇದರಲ್ಲಿ ಎನ್‌ಡಿಟಿವಿ ಮತ್ತು ಬಿಬಿಸಿ ವಿರುದ್ಧದ ಪ್ರಕರಣಗಳು ಹಾಗೂ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ 2022ರಲ್ಲಿ ಜಾರ್ಖಂಡ್‌ನಲ್ಲಿ ಪತ್ರಕರ್ತ ರೂಪೇಶ್ ಸಿಂಗ್ ಅವರ ಬಂಧನವನ್ನೂ ಅವರು ಉಲ್ಲೇಖಿಸಿದ್ದಾರೆ.

ರಣದೀಪ್ ಸುರ್ಜೇವಾಲಾ ಅವರು ತಮ್ಮ ಎಕ್ಸ್ ಪೋಸ್ಟ್‌ನಲ್ಲಿ “ಯುಎನ್‌ಐ (ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ) ಆವರಣದಲ್ಲಿ ಪತ್ರಕರ್ತರೊಂದಿಗೆ ಪೊಲೀಸರು ಮತ್ತು ಅರೆಸೇನಾ ಪಡೆಗಳು ವರ್ತಿಸಿದ ರೀತಿ ಒಂದು ವಿಷಯವನ್ನು ಸ್ಪಷ್ಟಪಡಿಸುತ್ತದೆ: ಇದು ಬಿಜೆಪಿ ಸರ್ಕಾರದ ಹಿಟ್ಲರ್ ಮಾದರಿಯ ಸರ್ವಾಧಿಕಾರಿ ಆದೇಶ. ನೀವು ಅತಿಯಾಗಿ ಮಾತನಾಡಿದರೆ ನಿಮ್ಮನ್ನು ಹತ್ತಿಕ್ಕಲಾಗುತ್ತದೆ, ನಿಮ್ಮನ್ನು ಹೊಸುಕಿ ಹಾಕಲಾಗುತ್ತದೆ…. ಇದು ಕೇವಲ ಒಂದು ಬಾರಿ ನಡೆದ ಘಟನೆಯಲ್ಲ, ಇದೊಂದು ಕ್ರಮಬದ್ಧ ವಿಧಾನ. ಶರಣಾಗಿ, ಸಾಷ್ಟಾಂಗ ನಮಸ್ಕಾರ ಮಾಡಿ, ಇಲ್ಲದಿದ್ದರೆ ಅಧಿಕಾರದ ದಂಡವು ನಿಮ್ಮ ಮೇಲೆ ಪ್ರಹಾರ ಮಾಡುತ್ತದೆ” ಎಂದು ಬರೆದುಕೊಂಡಿದ್ದಾರೆ.

2025ರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 180 ದೇಶಗಳ ಪೈಕಿ ಭಾರತವು 151ನೇ ಸ್ಥಾನದಲ್ಲಿದೆ ಮತ್ತು 2024ರಲ್ಲಿ 159ನೇ ಸ್ಥಾನದಲ್ಲಿತ್ತು ಎಂದು ಅವರು ಹೇಳಿದ್ದಾರೆ. ಮುಂದುವರಿದು, “ಭಾರತದಲ್ಲಿ ನಿಷ್ಪಕ್ಷಪಾತ ಮಾಧ್ಯಮಗಳಿಗೆ ಅವಕಾಶವೇ ಇಲ್ಲ ಎಂದು ಇಡೀ ಜಗತ್ತು ಏಕಕಂಠದಿಂದ ಹೇಳುತ್ತಿದೆ” ಎಂದಿದ್ದಾರೆ.

ಪ್ರೆಸ್ ಕ್ಲಬ್ ಆಫ್ ಇಂಡಿಯಾ ಮತ್ತು ಇತರ ಮಾಧ್ಯಮ ಸಂಸ್ಥೆಗಳು ಸಹ ಈ ದಮನಕಾರಿ ಕ್ರಮವನ್ನು ತೀವ್ರವಾಗಿ ಖಂಡಿಸಿವೆ.

ಇಂಡಿಯನ್ ವುಮೆನ್ಸ್ ಪ್ರೆಸ್ ಕಾರ್ಪ್ಸ್ ತನ್ನ ಹೇಳಿಕೆಯಲ್ಲಿ, “ಈ ಪ್ರಕರಣದ ಕಾನೂನು ಅಂಶಗಳು ಮತ್ತು ಹೈಕೋರ್ಟ್‌ನ ತೀರ್ಪು ಸಾರ್ವಜನಿಕ ವಲಯದಲ್ಲಿ ಲಭ್ಯವಿದೆ ಮತ್ತು ಅದು ತನ್ನದೇ ಆದ ಹಾದಿಯನ್ನು ಅನುಸರಿಸುತ್ತದೆ ಎಂಬುದು ಅರ್ಥವಾಗುವಂತಹ ವಿಷಯ. ಆದರೆ, ರಾಷ್ಟ್ರ ರಾಜಧಾನಿಯ ಅತ್ಯಂತ ಹಳೆಯ ಮತ್ತು ಅತ್ಯಂತ ಗೌರವಾನ್ವಿತ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಯುಎನ್‌ಐನ ಸುದ್ದಿಮನೆಯು ಇಂತಹ ದೃಶ್ಯಗಳಿಗೆ ಸಾಕ್ಷಿಯಾಗುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ” ಎಂದು ಹೇಳಿದೆ.

“ಇವುಗಳು ಸಂಸ್ಥೆಯ ಘನತೆಯನ್ನು ಕುಂದಿಸುತ್ತವೆ, ಪತ್ರಿಕಾ ಸ್ವಾತಂತ್ರ್ಯವನ್ನು ಅಪಾಯಕ್ಕೆ ಸಿಲುಕಿಸುತ್ತವೆ ಮತ್ತು ಇದನ್ನು ಒಂದು ಗಂಭೀರ ಲೋಪ ಎಂದು ಪರಿಗಣಿಸಬಹುದು, ಅದರಲ್ಲೂ ವಿಶೇಷವಾಗಿ ಈ ವೃತ್ತಿಯಲ್ಲಿರುವ ಮಹಿಳೆಯರ ಸುರಕ್ಷತೆ ಮತ್ತು ಗೌರವದ ವಿಷಯದಲ್ಲಿ ಇದು ದೊಡ್ಡ ಹಿನ್ನಡೆಯಾಗಿದೆ” ಎಂದಿದೆ.

ದೆಹಲಿ ಪತ್ರಕರ್ತರ ಸಂಘವು ಸಹ ಪೊಲೀಸರ ದಬ್ಬಾಳಿಕೆಯನ್ನು ತೀವ್ರವಾಗಿ ಖಂಡಿಸಿದೆ.

“ದೆಹಲಿಯ ಹೃದಯಭಾಗದಲ್ಲಿರುವ ಯುಎನ್‌ಐನ ಗುತ್ತಿಗೆ ಭೂಮಿ ಮತ್ತು ಕಚೇರಿಯು ದೀರ್ಘಕಾಲದಿಂದಲೂ ಪ್ರಮುಖ ಗುರಿಯಾಗಿದೆ, ವಿವಿಧ ಮಾಧ್ಯಮ ಸಂಸ್ಥೆಗಳು ಅದರ ನಿಯಂತ್ರಣ ಮತ್ತು ಮಾಲೀಕತ್ವಕ್ಕಾಗಿ ಪೈಪೋಟಿ ನಡೆಸುತ್ತಿವೆ. ಕೇಂದ್ರ ಸರ್ಕಾರವು ಗುತ್ತಿಗೆಯನ್ನು ರದ್ದುಗೊಳಿಸುವ ಮೂಲಕ ಈ ಸುದ್ದಿ ಸಂಸ್ಥೆಗೆ ಮರಣಾಂತಿಕ ಹೊಡೆತ ನೀಡಿದೆ….” ಎಂದು ಹೇಳಿದೆ.

“ಪ್ರಸ್ತುತ ಹೊಸ ಸವಾಲನ್ನು ಎದುರಿಸುತ್ತಿರುವ ಯುಎನ್‌ಐ ಉದ್ಯೋಗಿಗಳ ಬಗ್ಗೆ ನಮಗೆ ಅಪಾರ ಅನುಕಂಪವಿದೆ. ಈ ಸುದ್ದಿ ಸಂಸ್ಥೆಯನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿಯನ್ನು ಹೊರಲು, ಹಾಗೂ ಪತ್ರಕರ್ತರಿಗೆ ಮತ್ತು ಇತರ ಉದ್ಯೋಗಿಗಳಿಗೆ ಬರಬೇಕಾದ ಸಂಪೂರ್ಣ ಬಾಕಿ ಹಣವನ್ನು ಪಾವತಿಸಲು ನಾವು ‘ದಿ ಸ್ಟೇಟ್ಸ್‌ಮನ್’ ಆಡಳಿತ ಮಂಡಳಿಗೆ ಕರೆ ನೀಡುತ್ತೇವೆ” ಎಂದು ಅದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...