Homeಮುಖಪುಟಏಕರೂಪ ನಾಗರಿಕ ಸಂಹಿತೆ ಭಾರತದ ಕಲ್ಪನೆಗೆ ವಿರುದ್ಧವಾಗಿದೆ: ಬಿಜೆಪಿ ಮಿತ್ರ ಪಕ್ಷದಿಂದಲೂ ವಿರೋಧ

ಏಕರೂಪ ನಾಗರಿಕ ಸಂಹಿತೆ ಭಾರತದ ಕಲ್ಪನೆಗೆ ವಿರುದ್ಧವಾಗಿದೆ: ಬಿಜೆಪಿ ಮಿತ್ರ ಪಕ್ಷದಿಂದಲೂ ವಿರೋಧ

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಬಳಿಕ ವಿರೋಧ ಪಕ್ಷಗಳಲ್ಲಿ ಮಾತ್ರವಲ್ಲದೆ ಬಿಜೆಪಿಯ ಮಿತ್ರಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗಮಾ ಅವರು, ಏಕರೂಪ ನಾಗರಿಕ ಸಂಹಿತೆಯು ಭಾರತದ ಕಲ್ಪನೆಗೆ ವಿರುದ್ಧವಾಗಿ ಎಂದು ಹೇಳಿದ್ದಾರೆ.

ನ್ಯಾಷನಲ್ ಪೀಪಲ್ಸ್ ಪಾರ್ಟಿ ಸುಪ್ರಿಮೊ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ, ”ವೈವಿಧ್ಯತೆಯು ಭಾರತದ ಶಕ್ತಿಯಾಗಿದೆ ಮತ್ತು UCC ತನ್ನ ಪ್ರಸ್ತುತ ರೂಪದಲ್ಲಿ ಈ ಕಲ್ಪನೆಗೆ ವಿರುದ್ಧವಾಗಿ ಹೋಗುತ್ತದೆ” ಎಂದು ಹೇಳಿತು.

ಏಕರೂಪ ನಾಗರಿಕ ಸಂಹಿತೆಯು ಎಲ್ಲಾ ನಾಗರಿಕರ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಪಡೆಯುವುದು ಮುಂತಾದ ವೈಯಕ್ತಿಕ ವಿಷಯಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನುಗಳನ್ನು ಸೂಚಿಸುತ್ತದೆ.

ಈಶಾನ್ಯ ರಾಜ್ಯಗಳು ವಿಶಿಷ್ಟ ಸಂಸ್ಕೃತಿಯನ್ನು ಹೊಂದಿದೆ ಮತ್ತು ಅಸನ್ನು ಉಳಿಸಿಕೊಳ್ಳಲು ಬಯಸುತ್ತದೆ ಎಂದು ಸಂಗ್ಮಾ ಹೇಳಿದರು.

”ಮೇಘಾಲಯದಲ್ಲಿ ವಿಭಿನ್ನ ಸಂಸ್ಕೃತಿಗಳಿವೆ ಇವುಗಳನ್ನು ಬದಲಾಯಿಸಲಾಗುವುದಿಲ್ಲ. ಭಾರತವು ವೈವಿಧ್ಯಮಯ ರಾಷ್ಟ್ರ ಎಂಬ ಕಲ್ಪನೆಗೆ ವಿರುದ್ಧವಾಗಿ ಯುಸಿಸಿ ಹೋಗುತ್ತದೆ ಎಂದು ಎನ್‌ಪಿಪಿ ಭಾವಿಸುತ್ತದೆ, ವೈವಿಧ್ಯತೆಯು ನಮ್ಮ ಶಕ್ತಿ ಮತ್ತು ಗುರುತಾಗಿದೆ” ಎಂದು ಅವರು ಹೇಳಿದರು.

ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ಪ್ರಧಾನ ಮಂತ್ರಿಯವರ ಹೇಳಿಕೆಗೆ ಭೋಪಾಲ್‌ನಲ್ಲಿ ನಡೆದ ರ್ಯಾಲಿಯಲ್ಲಿ ವಿರೋಧ ಮತ್ತು ಟೀಕೆಗಳು ವ್ಯಕ್ತವಾದವು. ಇದು “ಧ್ರುವೀಕರಣ”ದ ತಂತ್ರ ಎಂದು ಟೀಕಿಸಲಾಯಿತು.

ಇದನ್ನೂ ಓದಿ: ಯುಸಿಸಿ ಜಾರಿ ಮುನ್ನ ಮರುಚಿಂತಿಸದಿದ್ರೆ ಪ್ರತಿರೋಧ ಎದುರಿಸಬೇಕಾಗುತ್ತದೆ: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

ವಿರೋಧ ಪಕ್ಷಗಳಿಂದಲೂ ಟೀಕೆ: 

”ಏಕರೂಪ ನಾಗರಿಕ ಸಂಹಿತೆಯಂತಹ ಕಾನೂನು ಜಾರಿಗೆ ಬಂದರೆ ಬುಡಕಟ್ಟು ಜನಾಂಗದವರ ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೆ ಹೊಡೆತ ಬೀಳುತ್ತದೆ” ಎಂದು ಕಾಂಗ್ರೆಸ್ ನಾಯಕ ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.

”ನೀವು [ಬಿಜೆಪಿ] ಯಾವಾಗಲೂ ಹಿಂದೂ-ಮುಸ್ಲಿಂ ದೃಷ್ಟಿಕೋನದಿಂದ ಏಕೆ ಯೋಚಿಸುತ್ತೀರಿ?” ಎಂದು ಬಾಘೆಲ್ ಕೇಳಿದ್ದಾರೆ. ”ಛತ್ತೀಸ್‌ಗಢದಲ್ಲಿ ನಮ್ಮಲ್ಲಿ ಬುಡಕಟ್ಟು ಜನರಿದ್ದಾರೆ. ಅವರು ನಂಬಿಕೆಗಳು ಮತ್ತು ಸಾಂಪ್ರದಾಯಿಕ ನಿಯಮಗಳಿಗೆ ತೊಂದರೆಯಾಗುವುದಿಲ್ಲವೇ? ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದರೆ ಅವರ ಸಂಪ್ರದಾಯಕ್ಕೆ ಏನಾಗುಬಹುದು? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ ಸಂಸದ ಮನೋಜ್ ಝಾ ಅವರು, ”ಮಾತನಾಡುವ ಮೊದಲು, ಪ್ರಧಾನ ಮಂತ್ರಿಯವರು 21 ನೇ ಕಾನೂನು ಆಯೋಗವು ಏನು ಹೇಳಿದೆ ಎಂಬುದನ್ನು ಪರಿಶೀಲಿಸಬೇಕು ಮತ್ತುಸಂವಿಧಾನ ಸಭೆಯ ಚರ್ಚೆಗಳನ್ನು ಆಳವಾಗಿ ವಿಶ್ಲೇಷಿಸಬೇಕು. ಏಕೆಂದರೆ ನಿಮಗೆ ಸಹಾಯ ಮಾಡಲು ಹೊರಟವರು ನಿಮಗೆ ಹಾನಿಯನ್ನುಂಟುಮಾಡುತ್ತಾರೆ” ಎಂದು ಎಚ್ಚರಿಸಿದರು.

21ನೇ ಕಾನೂನು ಆಯೋಗವು ಆಗಸ್ಟ್ 31, 2018ರಂದು ಸಮಾಲೋಚನಾ ಪತ್ರವನ್ನು ಬಿಡುಗಡೆ ಮಾಡಿತು, “ಈ ಹಂತದಲ್ಲಿ ಏಕರೂಪ ನಾಗರಿಕ ಸಂಹಿತೆ ಅಗತ್ಯವೂ ಅಲ್ಲ ಅಥವಾ ಅಪೇಕ್ಷಣೀಯವೂ ಅಲ್ಲ” ಎಂದು ಹೇಳಿದೆ. ತಾರತಮ್ಯ ತಡೆಯಲು ವಿವಿಧ ಧರ್ಮಗಳ ವೈಯಕ್ತಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ ಕ್ರೋಡೀಕರಿಸಬೇಕು ಎಂದು ಶಿಫಾರಸು ಮಾಡಿತ್ತು.

ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಟಿಕೆಎಸ್ ಇಳಂಗೋವನ್ ಅವರು ಮಾತನಾಡಿ, ”ಹಿಂದೂಗಳಿಗೆ ಈ ಏಕರೂಪ ನಾಗರಿಕ ಸಂಹಿತೆಯನ್ನು ಅನ್ವಯಿಸಬೇಕು. ಆಗ ”ಎಲ್ಲಾ ಜಾತಿಯ ಜನರಿಗೂ ದೇವಾಲಯಗಳಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಸಿಗುತ್ತದೆ” ಎಂದು ಹೇಳಿದ್ದಾರೆ.

”ದೇಶದ ಎಲ್ಲಾ ದೇವಸ್ಥಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿದಂತೆ ಪ್ರತಿಯೊಬ್ಬರಿಗೂ ಪೂಜೆ ಮಾಡಲು ಅವಕಾಶ ನೀಡಬೇಕು ಹಾಗಾಗಿ ಹಿಂದೂ ಧರ್ಮದಲ್ಲಿ ಮೊದಲು ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬೇಕು. ನಮಗೆ ಏಕರೂಪ ನಾಗರಿಕ ಸಂಹಿತೆ ಬೇಡ ಏಕೆಂದರೆ ಸಂವಿಧಾನವು ಪ್ರತಿಯೊಂದು ಧರ್ಮಕ್ಕೂ ರಕ್ಷಣೆ ನೀಡಿದೆ” ಎಂದರು.

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು, ”ದೇಶದ ಬಹುತ್ವ ಮತ್ತು ವೈವಿಧ್ಯತೆಯನ್ನು “ಕಿತ್ತುಕೊಳ್ಳುತ್ತಾರೆಯೇ?” ಎಂದು ಕೇಳುವ ಮೂಲಕ ಮೋದಿಯವರ ಹೇಳಿಕೆಯನ್ನು ಟೀಕಿಸಿದ್ದಾರೆ.

”ಮೋದಿ ಜಿ ಪಾಕಿಸ್ತಾನದ ಕಾನೂನಿನಿಂದ ಏಕೆ ಸ್ಫೂರ್ತಿ ಪಡೆಯುತ್ತಿದ್ದಾರೆ?” ಎಂದು ಓವೈಸಿ ಕೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ”ಅವರು [ಮೋದಿ] ಇಲ್ಲಿ ತ್ರಿವಳಿ ತಲಾಖ್ ವಿರುದ್ಧ ಕಾನೂನನ್ನು ಸಹ ಮಾಡಿದರು, ಆದರೆ ನೆಲದ ಮಟ್ಟದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡಲಿಲ್ಲ” ಎಂದು ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ, ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

0
'ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್ ಹರಿಸಲಿದೆ' ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗ...