Homeಮುಖಪುಟಏಕರೂಪ ನಾಗರಿಕ ಸಂಹಿತೆ ಭಾರತದ ಕಲ್ಪನೆಗೆ ವಿರುದ್ಧವಾಗಿದೆ: ಬಿಜೆಪಿ ಮಿತ್ರ ಪಕ್ಷದಿಂದಲೂ ವಿರೋಧ

ಏಕರೂಪ ನಾಗರಿಕ ಸಂಹಿತೆ ಭಾರತದ ಕಲ್ಪನೆಗೆ ವಿರುದ್ಧವಾಗಿದೆ: ಬಿಜೆಪಿ ಮಿತ್ರ ಪಕ್ಷದಿಂದಲೂ ವಿರೋಧ

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಬಳಿಕ ವಿರೋಧ ಪಕ್ಷಗಳಲ್ಲಿ ಮಾತ್ರವಲ್ಲದೆ ಬಿಜೆಪಿಯ ಮಿತ್ರಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗಮಾ ಅವರು, ಏಕರೂಪ ನಾಗರಿಕ ಸಂಹಿತೆಯು ಭಾರತದ ಕಲ್ಪನೆಗೆ ವಿರುದ್ಧವಾಗಿ ಎಂದು ಹೇಳಿದ್ದಾರೆ.

ನ್ಯಾಷನಲ್ ಪೀಪಲ್ಸ್ ಪಾರ್ಟಿ ಸುಪ್ರಿಮೊ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ, ”ವೈವಿಧ್ಯತೆಯು ಭಾರತದ ಶಕ್ತಿಯಾಗಿದೆ ಮತ್ತು UCC ತನ್ನ ಪ್ರಸ್ತುತ ರೂಪದಲ್ಲಿ ಈ ಕಲ್ಪನೆಗೆ ವಿರುದ್ಧವಾಗಿ ಹೋಗುತ್ತದೆ” ಎಂದು ಹೇಳಿತು.

ಏಕರೂಪ ನಾಗರಿಕ ಸಂಹಿತೆಯು ಎಲ್ಲಾ ನಾಗರಿಕರ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಪಡೆಯುವುದು ಮುಂತಾದ ವೈಯಕ್ತಿಕ ವಿಷಯಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನುಗಳನ್ನು ಸೂಚಿಸುತ್ತದೆ.

ಈಶಾನ್ಯ ರಾಜ್ಯಗಳು ವಿಶಿಷ್ಟ ಸಂಸ್ಕೃತಿಯನ್ನು ಹೊಂದಿದೆ ಮತ್ತು ಅಸನ್ನು ಉಳಿಸಿಕೊಳ್ಳಲು ಬಯಸುತ್ತದೆ ಎಂದು ಸಂಗ್ಮಾ ಹೇಳಿದರು.

”ಮೇಘಾಲಯದಲ್ಲಿ ವಿಭಿನ್ನ ಸಂಸ್ಕೃತಿಗಳಿವೆ ಇವುಗಳನ್ನು ಬದಲಾಯಿಸಲಾಗುವುದಿಲ್ಲ. ಭಾರತವು ವೈವಿಧ್ಯಮಯ ರಾಷ್ಟ್ರ ಎಂಬ ಕಲ್ಪನೆಗೆ ವಿರುದ್ಧವಾಗಿ ಯುಸಿಸಿ ಹೋಗುತ್ತದೆ ಎಂದು ಎನ್‌ಪಿಪಿ ಭಾವಿಸುತ್ತದೆ, ವೈವಿಧ್ಯತೆಯು ನಮ್ಮ ಶಕ್ತಿ ಮತ್ತು ಗುರುತಾಗಿದೆ” ಎಂದು ಅವರು ಹೇಳಿದರು.

ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ಪ್ರಧಾನ ಮಂತ್ರಿಯವರ ಹೇಳಿಕೆಗೆ ಭೋಪಾಲ್‌ನಲ್ಲಿ ನಡೆದ ರ್ಯಾಲಿಯಲ್ಲಿ ವಿರೋಧ ಮತ್ತು ಟೀಕೆಗಳು ವ್ಯಕ್ತವಾದವು. ಇದು “ಧ್ರುವೀಕರಣ”ದ ತಂತ್ರ ಎಂದು ಟೀಕಿಸಲಾಯಿತು.

ಇದನ್ನೂ ಓದಿ: ಯುಸಿಸಿ ಜಾರಿ ಮುನ್ನ ಮರುಚಿಂತಿಸದಿದ್ರೆ ಪ್ರತಿರೋಧ ಎದುರಿಸಬೇಕಾಗುತ್ತದೆ: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

ವಿರೋಧ ಪಕ್ಷಗಳಿಂದಲೂ ಟೀಕೆ: 

”ಏಕರೂಪ ನಾಗರಿಕ ಸಂಹಿತೆಯಂತಹ ಕಾನೂನು ಜಾರಿಗೆ ಬಂದರೆ ಬುಡಕಟ್ಟು ಜನಾಂಗದವರ ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೆ ಹೊಡೆತ ಬೀಳುತ್ತದೆ” ಎಂದು ಕಾಂಗ್ರೆಸ್ ನಾಯಕ ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.

”ನೀವು [ಬಿಜೆಪಿ] ಯಾವಾಗಲೂ ಹಿಂದೂ-ಮುಸ್ಲಿಂ ದೃಷ್ಟಿಕೋನದಿಂದ ಏಕೆ ಯೋಚಿಸುತ್ತೀರಿ?” ಎಂದು ಬಾಘೆಲ್ ಕೇಳಿದ್ದಾರೆ. ”ಛತ್ತೀಸ್‌ಗಢದಲ್ಲಿ ನಮ್ಮಲ್ಲಿ ಬುಡಕಟ್ಟು ಜನರಿದ್ದಾರೆ. ಅವರು ನಂಬಿಕೆಗಳು ಮತ್ತು ಸಾಂಪ್ರದಾಯಿಕ ನಿಯಮಗಳಿಗೆ ತೊಂದರೆಯಾಗುವುದಿಲ್ಲವೇ? ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದರೆ ಅವರ ಸಂಪ್ರದಾಯಕ್ಕೆ ಏನಾಗುಬಹುದು? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ ಸಂಸದ ಮನೋಜ್ ಝಾ ಅವರು, ”ಮಾತನಾಡುವ ಮೊದಲು, ಪ್ರಧಾನ ಮಂತ್ರಿಯವರು 21 ನೇ ಕಾನೂನು ಆಯೋಗವು ಏನು ಹೇಳಿದೆ ಎಂಬುದನ್ನು ಪರಿಶೀಲಿಸಬೇಕು ಮತ್ತುಸಂವಿಧಾನ ಸಭೆಯ ಚರ್ಚೆಗಳನ್ನು ಆಳವಾಗಿ ವಿಶ್ಲೇಷಿಸಬೇಕು. ಏಕೆಂದರೆ ನಿಮಗೆ ಸಹಾಯ ಮಾಡಲು ಹೊರಟವರು ನಿಮಗೆ ಹಾನಿಯನ್ನುಂಟುಮಾಡುತ್ತಾರೆ” ಎಂದು ಎಚ್ಚರಿಸಿದರು.

21ನೇ ಕಾನೂನು ಆಯೋಗವು ಆಗಸ್ಟ್ 31, 2018ರಂದು ಸಮಾಲೋಚನಾ ಪತ್ರವನ್ನು ಬಿಡುಗಡೆ ಮಾಡಿತು, “ಈ ಹಂತದಲ್ಲಿ ಏಕರೂಪ ನಾಗರಿಕ ಸಂಹಿತೆ ಅಗತ್ಯವೂ ಅಲ್ಲ ಅಥವಾ ಅಪೇಕ್ಷಣೀಯವೂ ಅಲ್ಲ” ಎಂದು ಹೇಳಿದೆ. ತಾರತಮ್ಯ ತಡೆಯಲು ವಿವಿಧ ಧರ್ಮಗಳ ವೈಯಕ್ತಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ ಕ್ರೋಡೀಕರಿಸಬೇಕು ಎಂದು ಶಿಫಾರಸು ಮಾಡಿತ್ತು.

ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಟಿಕೆಎಸ್ ಇಳಂಗೋವನ್ ಅವರು ಮಾತನಾಡಿ, ”ಹಿಂದೂಗಳಿಗೆ ಈ ಏಕರೂಪ ನಾಗರಿಕ ಸಂಹಿತೆಯನ್ನು ಅನ್ವಯಿಸಬೇಕು. ಆಗ ”ಎಲ್ಲಾ ಜಾತಿಯ ಜನರಿಗೂ ದೇವಾಲಯಗಳಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಸಿಗುತ್ತದೆ” ಎಂದು ಹೇಳಿದ್ದಾರೆ.

”ದೇಶದ ಎಲ್ಲಾ ದೇವಸ್ಥಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿದಂತೆ ಪ್ರತಿಯೊಬ್ಬರಿಗೂ ಪೂಜೆ ಮಾಡಲು ಅವಕಾಶ ನೀಡಬೇಕು ಹಾಗಾಗಿ ಹಿಂದೂ ಧರ್ಮದಲ್ಲಿ ಮೊದಲು ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬೇಕು. ನಮಗೆ ಏಕರೂಪ ನಾಗರಿಕ ಸಂಹಿತೆ ಬೇಡ ಏಕೆಂದರೆ ಸಂವಿಧಾನವು ಪ್ರತಿಯೊಂದು ಧರ್ಮಕ್ಕೂ ರಕ್ಷಣೆ ನೀಡಿದೆ” ಎಂದರು.

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು, ”ದೇಶದ ಬಹುತ್ವ ಮತ್ತು ವೈವಿಧ್ಯತೆಯನ್ನು “ಕಿತ್ತುಕೊಳ್ಳುತ್ತಾರೆಯೇ?” ಎಂದು ಕೇಳುವ ಮೂಲಕ ಮೋದಿಯವರ ಹೇಳಿಕೆಯನ್ನು ಟೀಕಿಸಿದ್ದಾರೆ.

”ಮೋದಿ ಜಿ ಪಾಕಿಸ್ತಾನದ ಕಾನೂನಿನಿಂದ ಏಕೆ ಸ್ಫೂರ್ತಿ ಪಡೆಯುತ್ತಿದ್ದಾರೆ?” ಎಂದು ಓವೈಸಿ ಕೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ”ಅವರು [ಮೋದಿ] ಇಲ್ಲಿ ತ್ರಿವಳಿ ತಲಾಖ್ ವಿರುದ್ಧ ಕಾನೂನನ್ನು ಸಹ ಮಾಡಿದರು, ಆದರೆ ನೆಲದ ಮಟ್ಟದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡಲಿಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...