Homeಮುಖಪುಟಏಕರೂಪ ನಾಗರಿಕ ಸಂಹಿತೆ ಭಾರತದ ಕಲ್ಪನೆಗೆ ವಿರುದ್ಧವಾಗಿದೆ: ಬಿಜೆಪಿ ಮಿತ್ರ ಪಕ್ಷದಿಂದಲೂ ವಿರೋಧ

ಏಕರೂಪ ನಾಗರಿಕ ಸಂಹಿತೆ ಭಾರತದ ಕಲ್ಪನೆಗೆ ವಿರುದ್ಧವಾಗಿದೆ: ಬಿಜೆಪಿ ಮಿತ್ರ ಪಕ್ಷದಿಂದಲೂ ವಿರೋಧ

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಬಳಿಕ ವಿರೋಧ ಪಕ್ಷಗಳಲ್ಲಿ ಮಾತ್ರವಲ್ಲದೆ ಬಿಜೆಪಿಯ ಮಿತ್ರಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗಮಾ ಅವರು, ಏಕರೂಪ ನಾಗರಿಕ ಸಂಹಿತೆಯು ಭಾರತದ ಕಲ್ಪನೆಗೆ ವಿರುದ್ಧವಾಗಿ ಎಂದು ಹೇಳಿದ್ದಾರೆ.

ನ್ಯಾಷನಲ್ ಪೀಪಲ್ಸ್ ಪಾರ್ಟಿ ಸುಪ್ರಿಮೊ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ, ”ವೈವಿಧ್ಯತೆಯು ಭಾರತದ ಶಕ್ತಿಯಾಗಿದೆ ಮತ್ತು UCC ತನ್ನ ಪ್ರಸ್ತುತ ರೂಪದಲ್ಲಿ ಈ ಕಲ್ಪನೆಗೆ ವಿರುದ್ಧವಾಗಿ ಹೋಗುತ್ತದೆ” ಎಂದು ಹೇಳಿತು.

ಏಕರೂಪ ನಾಗರಿಕ ಸಂಹಿತೆಯು ಎಲ್ಲಾ ನಾಗರಿಕರ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಪಡೆಯುವುದು ಮುಂತಾದ ವೈಯಕ್ತಿಕ ವಿಷಯಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನುಗಳನ್ನು ಸೂಚಿಸುತ್ತದೆ.

ಈಶಾನ್ಯ ರಾಜ್ಯಗಳು ವಿಶಿಷ್ಟ ಸಂಸ್ಕೃತಿಯನ್ನು ಹೊಂದಿದೆ ಮತ್ತು ಅಸನ್ನು ಉಳಿಸಿಕೊಳ್ಳಲು ಬಯಸುತ್ತದೆ ಎಂದು ಸಂಗ್ಮಾ ಹೇಳಿದರು.

”ಮೇಘಾಲಯದಲ್ಲಿ ವಿಭಿನ್ನ ಸಂಸ್ಕೃತಿಗಳಿವೆ ಇವುಗಳನ್ನು ಬದಲಾಯಿಸಲಾಗುವುದಿಲ್ಲ. ಭಾರತವು ವೈವಿಧ್ಯಮಯ ರಾಷ್ಟ್ರ ಎಂಬ ಕಲ್ಪನೆಗೆ ವಿರುದ್ಧವಾಗಿ ಯುಸಿಸಿ ಹೋಗುತ್ತದೆ ಎಂದು ಎನ್‌ಪಿಪಿ ಭಾವಿಸುತ್ತದೆ, ವೈವಿಧ್ಯತೆಯು ನಮ್ಮ ಶಕ್ತಿ ಮತ್ತು ಗುರುತಾಗಿದೆ” ಎಂದು ಅವರು ಹೇಳಿದರು.

ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ಪ್ರಧಾನ ಮಂತ್ರಿಯವರ ಹೇಳಿಕೆಗೆ ಭೋಪಾಲ್‌ನಲ್ಲಿ ನಡೆದ ರ್ಯಾಲಿಯಲ್ಲಿ ವಿರೋಧ ಮತ್ತು ಟೀಕೆಗಳು ವ್ಯಕ್ತವಾದವು. ಇದು “ಧ್ರುವೀಕರಣ”ದ ತಂತ್ರ ಎಂದು ಟೀಕಿಸಲಾಯಿತು.

ಇದನ್ನೂ ಓದಿ: ಯುಸಿಸಿ ಜಾರಿ ಮುನ್ನ ಮರುಚಿಂತಿಸದಿದ್ರೆ ಪ್ರತಿರೋಧ ಎದುರಿಸಬೇಕಾಗುತ್ತದೆ: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

ವಿರೋಧ ಪಕ್ಷಗಳಿಂದಲೂ ಟೀಕೆ: 

”ಏಕರೂಪ ನಾಗರಿಕ ಸಂಹಿತೆಯಂತಹ ಕಾನೂನು ಜಾರಿಗೆ ಬಂದರೆ ಬುಡಕಟ್ಟು ಜನಾಂಗದವರ ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೆ ಹೊಡೆತ ಬೀಳುತ್ತದೆ” ಎಂದು ಕಾಂಗ್ರೆಸ್ ನಾಯಕ ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.

”ನೀವು [ಬಿಜೆಪಿ] ಯಾವಾಗಲೂ ಹಿಂದೂ-ಮುಸ್ಲಿಂ ದೃಷ್ಟಿಕೋನದಿಂದ ಏಕೆ ಯೋಚಿಸುತ್ತೀರಿ?” ಎಂದು ಬಾಘೆಲ್ ಕೇಳಿದ್ದಾರೆ. ”ಛತ್ತೀಸ್‌ಗಢದಲ್ಲಿ ನಮ್ಮಲ್ಲಿ ಬುಡಕಟ್ಟು ಜನರಿದ್ದಾರೆ. ಅವರು ನಂಬಿಕೆಗಳು ಮತ್ತು ಸಾಂಪ್ರದಾಯಿಕ ನಿಯಮಗಳಿಗೆ ತೊಂದರೆಯಾಗುವುದಿಲ್ಲವೇ? ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದರೆ ಅವರ ಸಂಪ್ರದಾಯಕ್ಕೆ ಏನಾಗುಬಹುದು? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ ಸಂಸದ ಮನೋಜ್ ಝಾ ಅವರು, ”ಮಾತನಾಡುವ ಮೊದಲು, ಪ್ರಧಾನ ಮಂತ್ರಿಯವರು 21 ನೇ ಕಾನೂನು ಆಯೋಗವು ಏನು ಹೇಳಿದೆ ಎಂಬುದನ್ನು ಪರಿಶೀಲಿಸಬೇಕು ಮತ್ತುಸಂವಿಧಾನ ಸಭೆಯ ಚರ್ಚೆಗಳನ್ನು ಆಳವಾಗಿ ವಿಶ್ಲೇಷಿಸಬೇಕು. ಏಕೆಂದರೆ ನಿಮಗೆ ಸಹಾಯ ಮಾಡಲು ಹೊರಟವರು ನಿಮಗೆ ಹಾನಿಯನ್ನುಂಟುಮಾಡುತ್ತಾರೆ” ಎಂದು ಎಚ್ಚರಿಸಿದರು.

21ನೇ ಕಾನೂನು ಆಯೋಗವು ಆಗಸ್ಟ್ 31, 2018ರಂದು ಸಮಾಲೋಚನಾ ಪತ್ರವನ್ನು ಬಿಡುಗಡೆ ಮಾಡಿತು, “ಈ ಹಂತದಲ್ಲಿ ಏಕರೂಪ ನಾಗರಿಕ ಸಂಹಿತೆ ಅಗತ್ಯವೂ ಅಲ್ಲ ಅಥವಾ ಅಪೇಕ್ಷಣೀಯವೂ ಅಲ್ಲ” ಎಂದು ಹೇಳಿದೆ. ತಾರತಮ್ಯ ತಡೆಯಲು ವಿವಿಧ ಧರ್ಮಗಳ ವೈಯಕ್ತಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ ಕ್ರೋಡೀಕರಿಸಬೇಕು ಎಂದು ಶಿಫಾರಸು ಮಾಡಿತ್ತು.

ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಟಿಕೆಎಸ್ ಇಳಂಗೋವನ್ ಅವರು ಮಾತನಾಡಿ, ”ಹಿಂದೂಗಳಿಗೆ ಈ ಏಕರೂಪ ನಾಗರಿಕ ಸಂಹಿತೆಯನ್ನು ಅನ್ವಯಿಸಬೇಕು. ಆಗ ”ಎಲ್ಲಾ ಜಾತಿಯ ಜನರಿಗೂ ದೇವಾಲಯಗಳಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಸಿಗುತ್ತದೆ” ಎಂದು ಹೇಳಿದ್ದಾರೆ.

”ದೇಶದ ಎಲ್ಲಾ ದೇವಸ್ಥಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿದಂತೆ ಪ್ರತಿಯೊಬ್ಬರಿಗೂ ಪೂಜೆ ಮಾಡಲು ಅವಕಾಶ ನೀಡಬೇಕು ಹಾಗಾಗಿ ಹಿಂದೂ ಧರ್ಮದಲ್ಲಿ ಮೊದಲು ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬೇಕು. ನಮಗೆ ಏಕರೂಪ ನಾಗರಿಕ ಸಂಹಿತೆ ಬೇಡ ಏಕೆಂದರೆ ಸಂವಿಧಾನವು ಪ್ರತಿಯೊಂದು ಧರ್ಮಕ್ಕೂ ರಕ್ಷಣೆ ನೀಡಿದೆ” ಎಂದರು.

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು, ”ದೇಶದ ಬಹುತ್ವ ಮತ್ತು ವೈವಿಧ್ಯತೆಯನ್ನು “ಕಿತ್ತುಕೊಳ್ಳುತ್ತಾರೆಯೇ?” ಎಂದು ಕೇಳುವ ಮೂಲಕ ಮೋದಿಯವರ ಹೇಳಿಕೆಯನ್ನು ಟೀಕಿಸಿದ್ದಾರೆ.

”ಮೋದಿ ಜಿ ಪಾಕಿಸ್ತಾನದ ಕಾನೂನಿನಿಂದ ಏಕೆ ಸ್ಫೂರ್ತಿ ಪಡೆಯುತ್ತಿದ್ದಾರೆ?” ಎಂದು ಓವೈಸಿ ಕೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ”ಅವರು [ಮೋದಿ] ಇಲ್ಲಿ ತ್ರಿವಳಿ ತಲಾಖ್ ವಿರುದ್ಧ ಕಾನೂನನ್ನು ಸಹ ಮಾಡಿದರು, ಆದರೆ ನೆಲದ ಮಟ್ಟದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡಲಿಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...