Homeಮುಖಪುಟಉತ್ತರಾಖಂಡ ವಿಧಾನಸಭೆಯಲ್ಲಿ ಸಮಾನ ನಾಗರಿಕ ಸಂಹಿತೆ ಮಸೂದೆ ಮಂಡನೆ

ಉತ್ತರಾಖಂಡ ವಿಧಾನಸಭೆಯಲ್ಲಿ ಸಮಾನ ನಾಗರಿಕ ಸಂಹಿತೆ ಮಸೂದೆ ಮಂಡನೆ

- Advertisement -
- Advertisement -

ಉತ್ತರಾಖಂಡ ವಿಧಾನಸಭೆಯಲ್ಲಿ ಇಂದು (ಫೆ.6) ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆ ಮಂಡಿಸಲಾಗಿದೆ. ನಿನ್ನೆ ಮಸೂದೆ ಕುರಿತು ಮಾತನಾಡಿದ್ದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ “ಯುಸಿಸಿಯು ರಾಜ್ಯದ ಎಲ್ಲಾ ವರ್ಗಗಳ ಒಳಿತಿಗಾಗಿ ಮಾತ್ರವಲ್ಲದೆ ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಮತ್ತು ‘ಏಕ್ ಭಾರತ್, ಶ್ರೇಷ್ಠ ಭಾರತ್’ ದೃಷ್ಟಿಗೆ ಹೊಂದಿಕೆಯಾಗಲಿದೆ ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಯುಸಿಸಿ ಅನುಷ್ಠಾನ ಸಂಬಂಧ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದಲ್ಲಿ ಸರ್ಕಾರ ನೇಮಿಸಿದ್ದ ಸಮಿತಿಯು ನಾಲ್ಕು ಸಂಪುಟಗಳ 749 ಪುಟಗಳ ವರದಿಯನ್ನು ಸಲ್ಲಿಸಿತ್ತು. ಇದಕ್ಕೂ ಮುನ್ನ ಸಮಿತಿಯು ಆನ್‌ಲೈನ್‌ನಲ್ಲಿ 2.33 ಲಕ್ಷ ಲಿಖಿತ ಅಭಿಪ್ರಾಯಗಳನ್ನು ಸಂಗ್ರಹಿಸಿದೆ ಮತ್ತು 70ಕ್ಕೂ ಹೆಚ್ಚು ಸಾರ್ವಜನಿಕ ವೇದಿಕೆಗಳ ಮೂಲಕ ಜನರ ಪ್ರತಿಕ್ರಿಯೆ ಪಡೆದಿದೆ. ಕರಡು ಮಸೂದೆ ಸಿದ್ದಪಡಿಸಲು ಸಮಿತಿ ಸದಸ್ಯರು ಸರಿಸುಮಾರು 60,000 ಜನರ ಸಹಾಯ ಪಡೆದುಕೊಂಡಿದ್ದಾರೆ.

ಯುಸಿಸಿ ಮಸೂದೆಯಲ್ಲಿ ಬಹುಪತ್ನಿತ್ವ ಮತ್ತು ಬಾಲ್ಯ ವಿವಾಹದ ಸಂಪೂರ್ಣ ನಿಷೇಧ, ಎಲ್ಲಾ ಜಾತಿ, ಧರ್ಮಗಳ ಹುಡುಗಿಯರಿಗೆ ಪ್ರಮಾಣಿತ ವಿವಾಹದ ವಯಸ್ಸು ಮತ್ತು ವಿಚ್ಛೇದನಕ್ಕೆ ಏಕರೂಪದ ಪ್ರಕ್ರಿಯೆ. ಲಿಂಗ ಸಮಾನತೆ ಮತ್ತು ಸಾಮಾಜಿಕ ಒಗ್ಗಟ್ಟು ಪ್ರತಿಪಾದಿಸಲಾಗಿದೆ. ನಿನ್ನೆ ಆರಂಭವಾದ ನಾಲ್ಕು ದಿನಗಳ ವಿಶೇಷ ವಿಧಾನಸಭೆ ಅಧಿವೇಶನದಲ್ಲಿ ಈ ವಿಚಾರಗಳು ಚರ್ಚೆಯಾಗಲಿದೆ ಎಂದು ವರದಿಗಳು ತಿಳಿಸಿವೆ.

ಯುಸಿಸಿ ಕರಡು ಮಸೂದೆ ನಾಗರಿಕ ಜೀವನದ ವಿವಿಧ ಅಂಶಗಳನ್ನು ಒಳಗೊಂಡಿದೆ. ಉತ್ತರಾಧಿಕಾರ ಹಕ್ಕುಗಳು, ಕಡ್ಡಾಯ ವಿವಾಹ ನೋಂದಣಿ, ಮತ್ತು ಮದುವೆಯ ಮೊದಲು ಅವರ ಶಿಕ್ಷಣದ ಅನ್ವೇಷಣೆಗೆ ಅನುಕೂಲವಾಗುವಂತೆ ಹುಡುಗಿಯರಿಗೆ ಮದುವೆಯ ವಯಸ್ಸನ್ನು ಹೆಚ್ಚಿಸುವ ಶಿಫಾರಸು. ತಮ್ಮ ವಿವಾಹಗಳನ್ನು ನೋಂದಾಯಿಸಲು ವಿಫಲರಾದ ದಂಪತಿಗಳಿಗೆ ಸರ್ಕಾರಿ ಸೌಲಭ್ಯಗಳ ನಿರಾಕರಣೆ ಇತ್ಯಾದಿ ಮಸೂದೆಯಲ್ಲಿ ಸೇರಿವೆ ಎಂದು ತಿಳಿದು ಬಂದಿದೆ.

ಯುಸಿಸಿ ಕರಡು ಮಸೂದೆ ಸಾರ್ಜವಜನಿಕರಿಗೆ ಲಭ್ಯವಾಗದಿದ್ದರೂ, ಇದು ಧಾರ್ಮಿಕ ಸಂಬಂಧಗಳ ಹೊರತಾಗಿಯೂ ಮದುವೆ, ವಿಚ್ಛೇದನ,ಆಸ್ತಿ ಮತ್ತು ಪಿತ್ರಾರ್ಜಿತ ವಿಷಯಗಳನ್ನು ಒಳಗೊಂಡಿರುವ ಕಾನೂನು ಚೌಕಟ್ಟನ್ನು ಸ್ಥಾಪಿಸಲಿದೆ. ಇದನ್ನು ಜಾರಿಗೊಳಿಸಿದರೆ, ಉತ್ತರಾಖಂಡವು ಪೋರ್ಚುಗೀಸ್ ಆಳ್ವಿಕೆಯ ದಿನಗಳಿಂದಲೂ ಕಾರ್ಯನಿರ್ವಹಿಸುತ್ತಿರುವ ಗೋವಾದ ಹೆಜ್ಜೆಗಳನ್ನು ಅನುಸರಿಸಿ, ಯುಸಿಸಿಯನ್ನು ಅಳವಡಿಸಿಕೊಂಡ ಸ್ವಾತಂತ್ರ್ಯೋತ್ತರ ಭಾರತದ ಮೊದಲ ರಾಜ್ಯ ಎನಿಸಿಕೊಳ್ಳಲಿದೆ ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ : ಭಾರತ್ ಜೋಡೋ ನ್ಯಾಯ ಯಾತ್ರೆ: ಜಾತಿವಾರು ಜನಸಂಖ್ಯೆ, ತೆರಿಗೆ ಪಾವತಿ ಬಗ್ಗೆ ಬಹಿರಂಗಪಡಿಸಬೇಕು; ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....