Homeಮುಖಪುಟಉತ್ತರಾಖಂಡ ವಿಧಾನಸಭೆಯಲ್ಲಿ ಸಮಾನ ನಾಗರಿಕ ಸಂಹಿತೆ ಮಸೂದೆ ಮಂಡನೆ

ಉತ್ತರಾಖಂಡ ವಿಧಾನಸಭೆಯಲ್ಲಿ ಸಮಾನ ನಾಗರಿಕ ಸಂಹಿತೆ ಮಸೂದೆ ಮಂಡನೆ

- Advertisement -
- Advertisement -

ಉತ್ತರಾಖಂಡ ವಿಧಾನಸಭೆಯಲ್ಲಿ ಇಂದು (ಫೆ.6) ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆ ಮಂಡಿಸಲಾಗಿದೆ. ನಿನ್ನೆ ಮಸೂದೆ ಕುರಿತು ಮಾತನಾಡಿದ್ದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ “ಯುಸಿಸಿಯು ರಾಜ್ಯದ ಎಲ್ಲಾ ವರ್ಗಗಳ ಒಳಿತಿಗಾಗಿ ಮಾತ್ರವಲ್ಲದೆ ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಮತ್ತು ‘ಏಕ್ ಭಾರತ್, ಶ್ರೇಷ್ಠ ಭಾರತ್’ ದೃಷ್ಟಿಗೆ ಹೊಂದಿಕೆಯಾಗಲಿದೆ ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಯುಸಿಸಿ ಅನುಷ್ಠಾನ ಸಂಬಂಧ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದಲ್ಲಿ ಸರ್ಕಾರ ನೇಮಿಸಿದ್ದ ಸಮಿತಿಯು ನಾಲ್ಕು ಸಂಪುಟಗಳ 749 ಪುಟಗಳ ವರದಿಯನ್ನು ಸಲ್ಲಿಸಿತ್ತು. ಇದಕ್ಕೂ ಮುನ್ನ ಸಮಿತಿಯು ಆನ್‌ಲೈನ್‌ನಲ್ಲಿ 2.33 ಲಕ್ಷ ಲಿಖಿತ ಅಭಿಪ್ರಾಯಗಳನ್ನು ಸಂಗ್ರಹಿಸಿದೆ ಮತ್ತು 70ಕ್ಕೂ ಹೆಚ್ಚು ಸಾರ್ವಜನಿಕ ವೇದಿಕೆಗಳ ಮೂಲಕ ಜನರ ಪ್ರತಿಕ್ರಿಯೆ ಪಡೆದಿದೆ. ಕರಡು ಮಸೂದೆ ಸಿದ್ದಪಡಿಸಲು ಸಮಿತಿ ಸದಸ್ಯರು ಸರಿಸುಮಾರು 60,000 ಜನರ ಸಹಾಯ ಪಡೆದುಕೊಂಡಿದ್ದಾರೆ.

ಯುಸಿಸಿ ಮಸೂದೆಯಲ್ಲಿ ಬಹುಪತ್ನಿತ್ವ ಮತ್ತು ಬಾಲ್ಯ ವಿವಾಹದ ಸಂಪೂರ್ಣ ನಿಷೇಧ, ಎಲ್ಲಾ ಜಾತಿ, ಧರ್ಮಗಳ ಹುಡುಗಿಯರಿಗೆ ಪ್ರಮಾಣಿತ ವಿವಾಹದ ವಯಸ್ಸು ಮತ್ತು ವಿಚ್ಛೇದನಕ್ಕೆ ಏಕರೂಪದ ಪ್ರಕ್ರಿಯೆ. ಲಿಂಗ ಸಮಾನತೆ ಮತ್ತು ಸಾಮಾಜಿಕ ಒಗ್ಗಟ್ಟು ಪ್ರತಿಪಾದಿಸಲಾಗಿದೆ. ನಿನ್ನೆ ಆರಂಭವಾದ ನಾಲ್ಕು ದಿನಗಳ ವಿಶೇಷ ವಿಧಾನಸಭೆ ಅಧಿವೇಶನದಲ್ಲಿ ಈ ವಿಚಾರಗಳು ಚರ್ಚೆಯಾಗಲಿದೆ ಎಂದು ವರದಿಗಳು ತಿಳಿಸಿವೆ.

ಯುಸಿಸಿ ಕರಡು ಮಸೂದೆ ನಾಗರಿಕ ಜೀವನದ ವಿವಿಧ ಅಂಶಗಳನ್ನು ಒಳಗೊಂಡಿದೆ. ಉತ್ತರಾಧಿಕಾರ ಹಕ್ಕುಗಳು, ಕಡ್ಡಾಯ ವಿವಾಹ ನೋಂದಣಿ, ಮತ್ತು ಮದುವೆಯ ಮೊದಲು ಅವರ ಶಿಕ್ಷಣದ ಅನ್ವೇಷಣೆಗೆ ಅನುಕೂಲವಾಗುವಂತೆ ಹುಡುಗಿಯರಿಗೆ ಮದುವೆಯ ವಯಸ್ಸನ್ನು ಹೆಚ್ಚಿಸುವ ಶಿಫಾರಸು. ತಮ್ಮ ವಿವಾಹಗಳನ್ನು ನೋಂದಾಯಿಸಲು ವಿಫಲರಾದ ದಂಪತಿಗಳಿಗೆ ಸರ್ಕಾರಿ ಸೌಲಭ್ಯಗಳ ನಿರಾಕರಣೆ ಇತ್ಯಾದಿ ಮಸೂದೆಯಲ್ಲಿ ಸೇರಿವೆ ಎಂದು ತಿಳಿದು ಬಂದಿದೆ.

ಯುಸಿಸಿ ಕರಡು ಮಸೂದೆ ಸಾರ್ಜವಜನಿಕರಿಗೆ ಲಭ್ಯವಾಗದಿದ್ದರೂ, ಇದು ಧಾರ್ಮಿಕ ಸಂಬಂಧಗಳ ಹೊರತಾಗಿಯೂ ಮದುವೆ, ವಿಚ್ಛೇದನ,ಆಸ್ತಿ ಮತ್ತು ಪಿತ್ರಾರ್ಜಿತ ವಿಷಯಗಳನ್ನು ಒಳಗೊಂಡಿರುವ ಕಾನೂನು ಚೌಕಟ್ಟನ್ನು ಸ್ಥಾಪಿಸಲಿದೆ. ಇದನ್ನು ಜಾರಿಗೊಳಿಸಿದರೆ, ಉತ್ತರಾಖಂಡವು ಪೋರ್ಚುಗೀಸ್ ಆಳ್ವಿಕೆಯ ದಿನಗಳಿಂದಲೂ ಕಾರ್ಯನಿರ್ವಹಿಸುತ್ತಿರುವ ಗೋವಾದ ಹೆಜ್ಜೆಗಳನ್ನು ಅನುಸರಿಸಿ, ಯುಸಿಸಿಯನ್ನು ಅಳವಡಿಸಿಕೊಂಡ ಸ್ವಾತಂತ್ರ್ಯೋತ್ತರ ಭಾರತದ ಮೊದಲ ರಾಜ್ಯ ಎನಿಸಿಕೊಳ್ಳಲಿದೆ ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ : ಭಾರತ್ ಜೋಡೋ ನ್ಯಾಯ ಯಾತ್ರೆ: ಜಾತಿವಾರು ಜನಸಂಖ್ಯೆ, ತೆರಿಗೆ ಪಾವತಿ ಬಗ್ಗೆ ಬಹಿರಂಗಪಡಿಸಬೇಕು; ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...