Homeಮುಖಪುಟಉತ್ತರಾಖಂಡ ವಿಧಾನಸಭೆಯಲ್ಲಿ ಸಮಾನ ನಾಗರಿಕ ಸಂಹಿತೆ ಮಸೂದೆ ಮಂಡನೆ

ಉತ್ತರಾಖಂಡ ವಿಧಾನಸಭೆಯಲ್ಲಿ ಸಮಾನ ನಾಗರಿಕ ಸಂಹಿತೆ ಮಸೂದೆ ಮಂಡನೆ

- Advertisement -
- Advertisement -

ಉತ್ತರಾಖಂಡ ವಿಧಾನಸಭೆಯಲ್ಲಿ ಇಂದು (ಫೆ.6) ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆ ಮಂಡಿಸಲಾಗಿದೆ. ನಿನ್ನೆ ಮಸೂದೆ ಕುರಿತು ಮಾತನಾಡಿದ್ದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ “ಯುಸಿಸಿಯು ರಾಜ್ಯದ ಎಲ್ಲಾ ವರ್ಗಗಳ ಒಳಿತಿಗಾಗಿ ಮಾತ್ರವಲ್ಲದೆ ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಮತ್ತು ‘ಏಕ್ ಭಾರತ್, ಶ್ರೇಷ್ಠ ಭಾರತ್’ ದೃಷ್ಟಿಗೆ ಹೊಂದಿಕೆಯಾಗಲಿದೆ ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಯುಸಿಸಿ ಅನುಷ್ಠಾನ ಸಂಬಂಧ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದಲ್ಲಿ ಸರ್ಕಾರ ನೇಮಿಸಿದ್ದ ಸಮಿತಿಯು ನಾಲ್ಕು ಸಂಪುಟಗಳ 749 ಪುಟಗಳ ವರದಿಯನ್ನು ಸಲ್ಲಿಸಿತ್ತು. ಇದಕ್ಕೂ ಮುನ್ನ ಸಮಿತಿಯು ಆನ್‌ಲೈನ್‌ನಲ್ಲಿ 2.33 ಲಕ್ಷ ಲಿಖಿತ ಅಭಿಪ್ರಾಯಗಳನ್ನು ಸಂಗ್ರಹಿಸಿದೆ ಮತ್ತು 70ಕ್ಕೂ ಹೆಚ್ಚು ಸಾರ್ವಜನಿಕ ವೇದಿಕೆಗಳ ಮೂಲಕ ಜನರ ಪ್ರತಿಕ್ರಿಯೆ ಪಡೆದಿದೆ. ಕರಡು ಮಸೂದೆ ಸಿದ್ದಪಡಿಸಲು ಸಮಿತಿ ಸದಸ್ಯರು ಸರಿಸುಮಾರು 60,000 ಜನರ ಸಹಾಯ ಪಡೆದುಕೊಂಡಿದ್ದಾರೆ.

ಯುಸಿಸಿ ಮಸೂದೆಯಲ್ಲಿ ಬಹುಪತ್ನಿತ್ವ ಮತ್ತು ಬಾಲ್ಯ ವಿವಾಹದ ಸಂಪೂರ್ಣ ನಿಷೇಧ, ಎಲ್ಲಾ ಜಾತಿ, ಧರ್ಮಗಳ ಹುಡುಗಿಯರಿಗೆ ಪ್ರಮಾಣಿತ ವಿವಾಹದ ವಯಸ್ಸು ಮತ್ತು ವಿಚ್ಛೇದನಕ್ಕೆ ಏಕರೂಪದ ಪ್ರಕ್ರಿಯೆ. ಲಿಂಗ ಸಮಾನತೆ ಮತ್ತು ಸಾಮಾಜಿಕ ಒಗ್ಗಟ್ಟು ಪ್ರತಿಪಾದಿಸಲಾಗಿದೆ. ನಿನ್ನೆ ಆರಂಭವಾದ ನಾಲ್ಕು ದಿನಗಳ ವಿಶೇಷ ವಿಧಾನಸಭೆ ಅಧಿವೇಶನದಲ್ಲಿ ಈ ವಿಚಾರಗಳು ಚರ್ಚೆಯಾಗಲಿದೆ ಎಂದು ವರದಿಗಳು ತಿಳಿಸಿವೆ.

ಯುಸಿಸಿ ಕರಡು ಮಸೂದೆ ನಾಗರಿಕ ಜೀವನದ ವಿವಿಧ ಅಂಶಗಳನ್ನು ಒಳಗೊಂಡಿದೆ. ಉತ್ತರಾಧಿಕಾರ ಹಕ್ಕುಗಳು, ಕಡ್ಡಾಯ ವಿವಾಹ ನೋಂದಣಿ, ಮತ್ತು ಮದುವೆಯ ಮೊದಲು ಅವರ ಶಿಕ್ಷಣದ ಅನ್ವೇಷಣೆಗೆ ಅನುಕೂಲವಾಗುವಂತೆ ಹುಡುಗಿಯರಿಗೆ ಮದುವೆಯ ವಯಸ್ಸನ್ನು ಹೆಚ್ಚಿಸುವ ಶಿಫಾರಸು. ತಮ್ಮ ವಿವಾಹಗಳನ್ನು ನೋಂದಾಯಿಸಲು ವಿಫಲರಾದ ದಂಪತಿಗಳಿಗೆ ಸರ್ಕಾರಿ ಸೌಲಭ್ಯಗಳ ನಿರಾಕರಣೆ ಇತ್ಯಾದಿ ಮಸೂದೆಯಲ್ಲಿ ಸೇರಿವೆ ಎಂದು ತಿಳಿದು ಬಂದಿದೆ.

ಯುಸಿಸಿ ಕರಡು ಮಸೂದೆ ಸಾರ್ಜವಜನಿಕರಿಗೆ ಲಭ್ಯವಾಗದಿದ್ದರೂ, ಇದು ಧಾರ್ಮಿಕ ಸಂಬಂಧಗಳ ಹೊರತಾಗಿಯೂ ಮದುವೆ, ವಿಚ್ಛೇದನ,ಆಸ್ತಿ ಮತ್ತು ಪಿತ್ರಾರ್ಜಿತ ವಿಷಯಗಳನ್ನು ಒಳಗೊಂಡಿರುವ ಕಾನೂನು ಚೌಕಟ್ಟನ್ನು ಸ್ಥಾಪಿಸಲಿದೆ. ಇದನ್ನು ಜಾರಿಗೊಳಿಸಿದರೆ, ಉತ್ತರಾಖಂಡವು ಪೋರ್ಚುಗೀಸ್ ಆಳ್ವಿಕೆಯ ದಿನಗಳಿಂದಲೂ ಕಾರ್ಯನಿರ್ವಹಿಸುತ್ತಿರುವ ಗೋವಾದ ಹೆಜ್ಜೆಗಳನ್ನು ಅನುಸರಿಸಿ, ಯುಸಿಸಿಯನ್ನು ಅಳವಡಿಸಿಕೊಂಡ ಸ್ವಾತಂತ್ರ್ಯೋತ್ತರ ಭಾರತದ ಮೊದಲ ರಾಜ್ಯ ಎನಿಸಿಕೊಳ್ಳಲಿದೆ ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ : ಭಾರತ್ ಜೋಡೋ ನ್ಯಾಯ ಯಾತ್ರೆ: ಜಾತಿವಾರು ಜನಸಂಖ್ಯೆ, ತೆರಿಗೆ ಪಾವತಿ ಬಗ್ಗೆ ಬಹಿರಂಗಪಡಿಸಬೇಕು; ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...