Homeಮುಖಪುಟನಾಳೆಯಿಂದ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ

ನಾಳೆಯಿಂದ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ

- Advertisement -
- Advertisement -

ಉತ್ತರಾಖಂಡದಲ್ಲಿ ಜನವರಿ 27ರಿಂದ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶನಿವಾರ (ಜ.25) ತಿಳಿಸಿದ್ದಾರೆ.

ಸೋಮವಾರ (ನಾಳೆ) ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿಗಳು ಸಚಿವಾಲಯದಲ್ಲಿ ಏಕರೂಪ ನಾಗರಿಕ ಸಂಹಿತೆ ಪೋರ್ಟಲ್ ಅನ್ನು ಉದ್ಘಾಟಿಸಲಿದ್ದಾರೆ ಮತ್ತು ಕಾನೂನಿನಡಿಯಲ್ಲಿ ನಿಯಮಗಳನ್ನು ಅದೇ ದಿನ ಗೆಜೆಟ್‌ನಲ್ಲಿ ತಿಳಿಸಲಾಗುವುದು ಎಂದು ಗೃಹ ಕಾರ್ಯದರ್ಶಿ ಶೈಲೇಶ್ ಬಗೌಲಿ ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಏಕರೂಪ ನಾಗರಿಕ ಸಂಹಿತೆಯು ಎಲ್ಲಾ ನಾಗರಿಕರ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರವನ್ನು ನಿಯಂತ್ರಿಸುವ ಕಾನೂನುಗಳ ಸಾಮಾನ್ಯ ಗುಂಪಾಗಿದೆ.
ಪ್ರಸ್ತುತ, ವಿವಿಧ ಧಾರ್ಮಿಕ ಮತ್ತು ಬುಡಕಟ್ಟು ಗುಂಪುಗಳ ಅವರವರ ವೈಯಕ್ತಿಕ, ಸಮುದಾಯದ ನಿರ್ದಿಷ್ಟ ಕಾನೂನುಗಳನ್ನು ಆಧರಿಸಿವೆ. ಹೆಚ್ಚಾಗಿ ಧಾರ್ಮಿಕ ಗ್ರಂಥಗಳನ್ನು ಅನುಸರಿಸಲಾಗಿದೆ.

ಏಕರೂಪ ನಾಗರಿಕ ಸಂಹಿತೆ ಒಮ್ಮೆ ಜಾರಿಗೆ ಬಂದರೆ, ಉತ್ತರಾಖಂಡ ಸ್ವಾತಂತ್ರ್ಯದ ನಂತರ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಿದ ಮೊದಲ ಭಾರತೀಯ ರಾಜ್ಯವಾಗಲಿದೆ. 1867ರಲ್ಲಿ ಪೋರ್ಚುಗೀಸ್ ನಾಗರಿಕ ಸಂಹಿತೆಯನ್ನು ಅಳವಡಿಸಿಕೊಂಡಾಗಿನಿಂದ ಗೋವಾದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಲ್ಲಿದೆ.

“ಏಕರೂಪ ನಾಗರಿಕ ಸಂಹಿತೆ ಸಮಾಜದಲ್ಲಿ ಏಕರೂಪತೆಯನ್ನು ತರುತ್ತದೆ. ಎಲ್ಲಾ ನಾಗರಿಕರಿಗೆ ಸಮಾನ ಹಕ್ಕುಗಳು ಮತ್ತು ಜವಾಬ್ದಾರಿಗಳನ್ನು ಖಚಿತಪಡಿಸುತ್ತದೆ” ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

“ಏಕರೂಪ ನಾಗರಿಕ ಸಂಹಿತೆಯಡಿಯಲ್ಲಿ, ಜಾತಿ, ಧರ್ಮ, ಪ್ರದೇಶ ಮತ್ತು ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡುವ ವೈಯಕ್ತಿಕ ನಾಗರಿಕ ವಿಷಯಗಳಿಗೆ ಸಂಬಂಧಿಸಿದ ಎಲ್ಲಾ ಕಾನೂನುಗಳಲ್ಲಿ ಏಕರೂಪತೆಯನ್ನು ತರಲು ಪ್ರಯತ್ನಿಸಲಾಗಿದೆ” ಎಂದಿದೆ.

ಫೆಬ್ರವರಿ 5, 2024 ರಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉತ್ತರಾಖಂಡ ಸಚಿವ ಸಂಪುಟವು ಏಕರೂಪ ನಾಗರಿಕ ಸಂಹಿತೆಯ ಕರಡು ವರದಿಯನ್ನು ಅನುಮೋದಿಸಿತು.

ನಂತರ ಎರಡು ದಿನಗಳ ಕಾಲ ಚರ್ಚೆ ನಡೆಸಿ ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ಮಸೂದೆಗೆ ಅಂಗೀಕಾರ ಪಡೆಯಲಾಗಿತ್ತು. ರಾಜ್ಯದ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಅವರು ಕಳೆದ ವರ್ಷ ಫೆಬ್ರವರಿ 28ರಂದು ಮಸೂದೆಗೆ ಅಂಕಿತ ಹಾಕಿದ್ದರು.

ನಂತರ, ರಾಜ್ಯ ಸರ್ಕಾರವು ನಿಯಮಗಳ ರಚನೆ ಮತ್ತು ಅನುಷ್ಠಾನ ಸಮಿತಿಯನ್ನು ರಚಿಸಿತ್ತು. ಮಾರ್ಚ್ 14ರಂದು, ರಾಷ್ಟ್ರಪತಿ ದ್ರೌಪದಿ ಮುರ್ಮು ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಅನುಮೋದಿಸಿದ್ದಾರೆ ಎಂದು ಸಿಎಂ ಧಾಮಿ ಘೋಷಿಸಿದ್ದರು.

2025ರ ಜನವರಿ 20ರಂದು ರಾಜ್ಯ ಸಚಿವ ಸಂಪುಟವು ಏಕರೂಪ ನಾಗರಿಕ ಸಂಹಿತೆಯ ನಿಯಮಗಳ ಕೈಪಿಡಿಯನ್ನು ಅನುಮೋದಿಸಿತ್ತು.

ಪಿತೃಪ್ರಧಾನ ವೈಯಕ್ತಿಕ ಕಾನೂನುಗಳ ಅಡಿಯಲ್ಲಿ ತಮ್ಮ ಹಕ್ಕುಗಳಿಂದ ವಂಚಿತರಾಗಿರುವ ಮಹಿಳೆಯರಿಗೆ ಸಮಾನತೆ ಮತ್ತು ನ್ಯಾಯವನ್ನು ಒದಗಿಸುವುದು ಏಕರೂಪ ನಾಗರಿಕ ಸಂಹಿತೆಯ ಉದ್ದೇಶವಾಗಿದೆ ಎಂದು ಉತ್ತರಾಖಂಡದ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಹೇಳಿಕೊಂಡಿದೆ.

ಸಾಮಾನ್ಯ ವೈಯಕ್ತಿಕ ಕಾನೂನನ್ನು ಪರಿಚಯಿಸುವುದು ಬಹಳ ಹಿಂದಿನಿಂದಲೂ ಬಿಜೆಪಿಯ ಕಾರ್ಯಸೂಚಿಯಲ್ಲಿದೆ ಮತ್ತು ಪಕ್ಷದ ಆಳ್ವಿಕೆಯಲ್ಲಿರುವ ಹಲವಾರು ರಾಜ್ಯಗಳು ಅದನ್ನು ಜಾರಿಗೆ ತರುವತ್ತ ಹೆಜ್ಜೆ ಹಾಕುತ್ತಿವೆ. ಉತ್ತರಾಖಂಡದಲ್ಲಿ ನಿಯಮಗಳ ಅನುಷ್ಠಾನವು ಬಿಜೆಪಿ ಆಡಳಿತವಿರುವ ಇತರ ರಾಜ್ಯಗಳು ಇದನ್ನು ಅನುಸರಿಸಲು ಒಂದು ಪೂರ್ವನಿದರ್ಶನವಾಗಬಹುದು.

ಏಕರೂಪ ನಾಗರಿಕ ಸಂಹಿತೆಯ ವಿಷಯದಲ್ಲಿ ಬಿಜೆಪಿ ಮುಖ್ಯವಾಗಿ ಮುಸ್ಲಿಂ ವೈಯಕ್ತಿಕ ಕಾನೂನನ್ನು ಗುರಿಯಾಗಿಸಿಕೊಂಡಿದೆ. ಮುಸ್ಲಿಂ ಪುರುಷರು ಬಹುಪತ್ನಿತ್ವವನ್ನು ಅನುಸರಿಸಲು, ಹೆಚ್ಚಿನ ಆಸ್ತಿಯನ್ನು ಆನುವಂಶಿಕವಾಗಿ ಪಡೆಯಲು, ವಿಚ್ಛೇದನ ನೀಡಲು ಮತ್ತು ಜೀವನಾಂಶ ನಿರಾಕರಿಸಲು ಅವಕಾಶ ನೀಡುವ ಮೂಲಕ ವೈಯಕ್ತಿಕ ಕಾನೂನು ಮಹಿಳೆಯರ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ಬಿಜೆಪಿ ವಾದಿಸಿದೆ.

ಆದಾಗ್ಯೂ, ಕಾನೂನು ತಜ್ಞರು ಈ ಮಸೂದೆಯನ್ನು ಪ್ರಾಥಮಿಕವಾಗಿ ಹಿಂದೂ ವೈಯಕ್ತಿಕ ಕಾನೂನಿನಿಂದ ಪಡೆಯಲಾಗಿದ್ದು, ಅಲ್ಪಸಂಖ್ಯಾತ ಸಮುದಾಯಗಳ ವೈಯಕ್ತಿಕ ಕಾನೂನು ಪದ್ಧತಿಗಳನ್ನು ಅಳಿಸಿಹಾಕಲು ಕಾರಣವಾಗಬಹುದು ಎಂದು ಹೇಳಿದ್ದಾರೆ.

ಮಹಿಳಾ ಗುಂಪುಗಳ ಸಮೂಹವಾದ ಉತ್ತರಾಖಂಡ ಮಹಿಳಾ ಮೋರ್ಚಾ, ಈ ಮಸೂದೆಯು “ಹಿಂದೂ ಕಾನೂನು ಮಾದರಿಯನ್ನು ಅನುಸರಿಸುತ್ತಿದೆ” ಎಂದು ಟೀಕಿಸಿತ್ತು. ಸಾರ್ವಜನಿಕ ಹೇಳಿಕೆಯಲ್ಲಿ, ಮಸೂದೆಯು “ಕ್ರಿಶ್ಚಿಯನ್ ಕುಟುಂಬ ಕಾನೂನು ಮತ್ತು ಪಾರ್ಸಿ ಕುಟುಂಬ ಕಾನೂನಿನ ಅನ್ವಯದ ಬಗ್ಗೆ ಸಂಪೂರ್ಣವಾಗಿ ಮೌನವಾಗಿದೆ”. ಇದು ಕಾನೂನುಬದ್ಧವಾಗಿ ಸಮರ್ಥನೀಯವಲ್ಲ ಎಂದಿದೆ.

ಲೈಂಗಿಕ ಕಿರುಕುಳ ಆರೋಪಿ ಬ್ರಿಜ್ ಭೂಷಣ್ ಮನೆಯಲ್ಲೇ ಕುಸ್ತಿ ಒಕ್ಕೂಟದ ಕಚೇರಿ : ವಿವಾದದ ಬಳಿಕ ಸ್ಥಳಾಂತರಕ್ಕೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...