Homeಮುಖಪುಟನಾಳೆಯಿಂದ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ

ನಾಳೆಯಿಂದ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ

- Advertisement -
- Advertisement -

ಉತ್ತರಾಖಂಡದಲ್ಲಿ ಜನವರಿ 27ರಿಂದ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶನಿವಾರ (ಜ.25) ತಿಳಿಸಿದ್ದಾರೆ.

ಸೋಮವಾರ (ನಾಳೆ) ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿಗಳು ಸಚಿವಾಲಯದಲ್ಲಿ ಏಕರೂಪ ನಾಗರಿಕ ಸಂಹಿತೆ ಪೋರ್ಟಲ್ ಅನ್ನು ಉದ್ಘಾಟಿಸಲಿದ್ದಾರೆ ಮತ್ತು ಕಾನೂನಿನಡಿಯಲ್ಲಿ ನಿಯಮಗಳನ್ನು ಅದೇ ದಿನ ಗೆಜೆಟ್‌ನಲ್ಲಿ ತಿಳಿಸಲಾಗುವುದು ಎಂದು ಗೃಹ ಕಾರ್ಯದರ್ಶಿ ಶೈಲೇಶ್ ಬಗೌಲಿ ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಏಕರೂಪ ನಾಗರಿಕ ಸಂಹಿತೆಯು ಎಲ್ಲಾ ನಾಗರಿಕರ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರವನ್ನು ನಿಯಂತ್ರಿಸುವ ಕಾನೂನುಗಳ ಸಾಮಾನ್ಯ ಗುಂಪಾಗಿದೆ.
ಪ್ರಸ್ತುತ, ವಿವಿಧ ಧಾರ್ಮಿಕ ಮತ್ತು ಬುಡಕಟ್ಟು ಗುಂಪುಗಳ ಅವರವರ ವೈಯಕ್ತಿಕ, ಸಮುದಾಯದ ನಿರ್ದಿಷ್ಟ ಕಾನೂನುಗಳನ್ನು ಆಧರಿಸಿವೆ. ಹೆಚ್ಚಾಗಿ ಧಾರ್ಮಿಕ ಗ್ರಂಥಗಳನ್ನು ಅನುಸರಿಸಲಾಗಿದೆ.

ಏಕರೂಪ ನಾಗರಿಕ ಸಂಹಿತೆ ಒಮ್ಮೆ ಜಾರಿಗೆ ಬಂದರೆ, ಉತ್ತರಾಖಂಡ ಸ್ವಾತಂತ್ರ್ಯದ ನಂತರ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಿದ ಮೊದಲ ಭಾರತೀಯ ರಾಜ್ಯವಾಗಲಿದೆ. 1867ರಲ್ಲಿ ಪೋರ್ಚುಗೀಸ್ ನಾಗರಿಕ ಸಂಹಿತೆಯನ್ನು ಅಳವಡಿಸಿಕೊಂಡಾಗಿನಿಂದ ಗೋವಾದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಲ್ಲಿದೆ.

“ಏಕರೂಪ ನಾಗರಿಕ ಸಂಹಿತೆ ಸಮಾಜದಲ್ಲಿ ಏಕರೂಪತೆಯನ್ನು ತರುತ್ತದೆ. ಎಲ್ಲಾ ನಾಗರಿಕರಿಗೆ ಸಮಾನ ಹಕ್ಕುಗಳು ಮತ್ತು ಜವಾಬ್ದಾರಿಗಳನ್ನು ಖಚಿತಪಡಿಸುತ್ತದೆ” ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

“ಏಕರೂಪ ನಾಗರಿಕ ಸಂಹಿತೆಯಡಿಯಲ್ಲಿ, ಜಾತಿ, ಧರ್ಮ, ಪ್ರದೇಶ ಮತ್ತು ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡುವ ವೈಯಕ್ತಿಕ ನಾಗರಿಕ ವಿಷಯಗಳಿಗೆ ಸಂಬಂಧಿಸಿದ ಎಲ್ಲಾ ಕಾನೂನುಗಳಲ್ಲಿ ಏಕರೂಪತೆಯನ್ನು ತರಲು ಪ್ರಯತ್ನಿಸಲಾಗಿದೆ” ಎಂದಿದೆ.

ಫೆಬ್ರವರಿ 5, 2024 ರಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉತ್ತರಾಖಂಡ ಸಚಿವ ಸಂಪುಟವು ಏಕರೂಪ ನಾಗರಿಕ ಸಂಹಿತೆಯ ಕರಡು ವರದಿಯನ್ನು ಅನುಮೋದಿಸಿತು.

ನಂತರ ಎರಡು ದಿನಗಳ ಕಾಲ ಚರ್ಚೆ ನಡೆಸಿ ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ಮಸೂದೆಗೆ ಅಂಗೀಕಾರ ಪಡೆಯಲಾಗಿತ್ತು. ರಾಜ್ಯದ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಅವರು ಕಳೆದ ವರ್ಷ ಫೆಬ್ರವರಿ 28ರಂದು ಮಸೂದೆಗೆ ಅಂಕಿತ ಹಾಕಿದ್ದರು.

ನಂತರ, ರಾಜ್ಯ ಸರ್ಕಾರವು ನಿಯಮಗಳ ರಚನೆ ಮತ್ತು ಅನುಷ್ಠಾನ ಸಮಿತಿಯನ್ನು ರಚಿಸಿತ್ತು. ಮಾರ್ಚ್ 14ರಂದು, ರಾಷ್ಟ್ರಪತಿ ದ್ರೌಪದಿ ಮುರ್ಮು ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಅನುಮೋದಿಸಿದ್ದಾರೆ ಎಂದು ಸಿಎಂ ಧಾಮಿ ಘೋಷಿಸಿದ್ದರು.

2025ರ ಜನವರಿ 20ರಂದು ರಾಜ್ಯ ಸಚಿವ ಸಂಪುಟವು ಏಕರೂಪ ನಾಗರಿಕ ಸಂಹಿತೆಯ ನಿಯಮಗಳ ಕೈಪಿಡಿಯನ್ನು ಅನುಮೋದಿಸಿತ್ತು.

ಪಿತೃಪ್ರಧಾನ ವೈಯಕ್ತಿಕ ಕಾನೂನುಗಳ ಅಡಿಯಲ್ಲಿ ತಮ್ಮ ಹಕ್ಕುಗಳಿಂದ ವಂಚಿತರಾಗಿರುವ ಮಹಿಳೆಯರಿಗೆ ಸಮಾನತೆ ಮತ್ತು ನ್ಯಾಯವನ್ನು ಒದಗಿಸುವುದು ಏಕರೂಪ ನಾಗರಿಕ ಸಂಹಿತೆಯ ಉದ್ದೇಶವಾಗಿದೆ ಎಂದು ಉತ್ತರಾಖಂಡದ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಹೇಳಿಕೊಂಡಿದೆ.

ಸಾಮಾನ್ಯ ವೈಯಕ್ತಿಕ ಕಾನೂನನ್ನು ಪರಿಚಯಿಸುವುದು ಬಹಳ ಹಿಂದಿನಿಂದಲೂ ಬಿಜೆಪಿಯ ಕಾರ್ಯಸೂಚಿಯಲ್ಲಿದೆ ಮತ್ತು ಪಕ್ಷದ ಆಳ್ವಿಕೆಯಲ್ಲಿರುವ ಹಲವಾರು ರಾಜ್ಯಗಳು ಅದನ್ನು ಜಾರಿಗೆ ತರುವತ್ತ ಹೆಜ್ಜೆ ಹಾಕುತ್ತಿವೆ. ಉತ್ತರಾಖಂಡದಲ್ಲಿ ನಿಯಮಗಳ ಅನುಷ್ಠಾನವು ಬಿಜೆಪಿ ಆಡಳಿತವಿರುವ ಇತರ ರಾಜ್ಯಗಳು ಇದನ್ನು ಅನುಸರಿಸಲು ಒಂದು ಪೂರ್ವನಿದರ್ಶನವಾಗಬಹುದು.

ಏಕರೂಪ ನಾಗರಿಕ ಸಂಹಿತೆಯ ವಿಷಯದಲ್ಲಿ ಬಿಜೆಪಿ ಮುಖ್ಯವಾಗಿ ಮುಸ್ಲಿಂ ವೈಯಕ್ತಿಕ ಕಾನೂನನ್ನು ಗುರಿಯಾಗಿಸಿಕೊಂಡಿದೆ. ಮುಸ್ಲಿಂ ಪುರುಷರು ಬಹುಪತ್ನಿತ್ವವನ್ನು ಅನುಸರಿಸಲು, ಹೆಚ್ಚಿನ ಆಸ್ತಿಯನ್ನು ಆನುವಂಶಿಕವಾಗಿ ಪಡೆಯಲು, ವಿಚ್ಛೇದನ ನೀಡಲು ಮತ್ತು ಜೀವನಾಂಶ ನಿರಾಕರಿಸಲು ಅವಕಾಶ ನೀಡುವ ಮೂಲಕ ವೈಯಕ್ತಿಕ ಕಾನೂನು ಮಹಿಳೆಯರ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ಬಿಜೆಪಿ ವಾದಿಸಿದೆ.

ಆದಾಗ್ಯೂ, ಕಾನೂನು ತಜ್ಞರು ಈ ಮಸೂದೆಯನ್ನು ಪ್ರಾಥಮಿಕವಾಗಿ ಹಿಂದೂ ವೈಯಕ್ತಿಕ ಕಾನೂನಿನಿಂದ ಪಡೆಯಲಾಗಿದ್ದು, ಅಲ್ಪಸಂಖ್ಯಾತ ಸಮುದಾಯಗಳ ವೈಯಕ್ತಿಕ ಕಾನೂನು ಪದ್ಧತಿಗಳನ್ನು ಅಳಿಸಿಹಾಕಲು ಕಾರಣವಾಗಬಹುದು ಎಂದು ಹೇಳಿದ್ದಾರೆ.

ಮಹಿಳಾ ಗುಂಪುಗಳ ಸಮೂಹವಾದ ಉತ್ತರಾಖಂಡ ಮಹಿಳಾ ಮೋರ್ಚಾ, ಈ ಮಸೂದೆಯು “ಹಿಂದೂ ಕಾನೂನು ಮಾದರಿಯನ್ನು ಅನುಸರಿಸುತ್ತಿದೆ” ಎಂದು ಟೀಕಿಸಿತ್ತು. ಸಾರ್ವಜನಿಕ ಹೇಳಿಕೆಯಲ್ಲಿ, ಮಸೂದೆಯು “ಕ್ರಿಶ್ಚಿಯನ್ ಕುಟುಂಬ ಕಾನೂನು ಮತ್ತು ಪಾರ್ಸಿ ಕುಟುಂಬ ಕಾನೂನಿನ ಅನ್ವಯದ ಬಗ್ಗೆ ಸಂಪೂರ್ಣವಾಗಿ ಮೌನವಾಗಿದೆ”. ಇದು ಕಾನೂನುಬದ್ಧವಾಗಿ ಸಮರ್ಥನೀಯವಲ್ಲ ಎಂದಿದೆ.

ಲೈಂಗಿಕ ಕಿರುಕುಳ ಆರೋಪಿ ಬ್ರಿಜ್ ಭೂಷಣ್ ಮನೆಯಲ್ಲೇ ಕುಸ್ತಿ ಒಕ್ಕೂಟದ ಕಚೇರಿ : ವಿವಾದದ ಬಳಿಕ ಸ್ಥಳಾಂತರಕ್ಕೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...