Homeಮುಖಪುಟನಾಳೆಯಿಂದ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ

ನಾಳೆಯಿಂದ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ

- Advertisement -
- Advertisement -

ಉತ್ತರಾಖಂಡದಲ್ಲಿ ಜನವರಿ 27ರಿಂದ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶನಿವಾರ (ಜ.25) ತಿಳಿಸಿದ್ದಾರೆ.

ಸೋಮವಾರ (ನಾಳೆ) ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿಗಳು ಸಚಿವಾಲಯದಲ್ಲಿ ಏಕರೂಪ ನಾಗರಿಕ ಸಂಹಿತೆ ಪೋರ್ಟಲ್ ಅನ್ನು ಉದ್ಘಾಟಿಸಲಿದ್ದಾರೆ ಮತ್ತು ಕಾನೂನಿನಡಿಯಲ್ಲಿ ನಿಯಮಗಳನ್ನು ಅದೇ ದಿನ ಗೆಜೆಟ್‌ನಲ್ಲಿ ತಿಳಿಸಲಾಗುವುದು ಎಂದು ಗೃಹ ಕಾರ್ಯದರ್ಶಿ ಶೈಲೇಶ್ ಬಗೌಲಿ ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಏಕರೂಪ ನಾಗರಿಕ ಸಂಹಿತೆಯು ಎಲ್ಲಾ ನಾಗರಿಕರ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರವನ್ನು ನಿಯಂತ್ರಿಸುವ ಕಾನೂನುಗಳ ಸಾಮಾನ್ಯ ಗುಂಪಾಗಿದೆ.
ಪ್ರಸ್ತುತ, ವಿವಿಧ ಧಾರ್ಮಿಕ ಮತ್ತು ಬುಡಕಟ್ಟು ಗುಂಪುಗಳ ಅವರವರ ವೈಯಕ್ತಿಕ, ಸಮುದಾಯದ ನಿರ್ದಿಷ್ಟ ಕಾನೂನುಗಳನ್ನು ಆಧರಿಸಿವೆ. ಹೆಚ್ಚಾಗಿ ಧಾರ್ಮಿಕ ಗ್ರಂಥಗಳನ್ನು ಅನುಸರಿಸಲಾಗಿದೆ.

ಏಕರೂಪ ನಾಗರಿಕ ಸಂಹಿತೆ ಒಮ್ಮೆ ಜಾರಿಗೆ ಬಂದರೆ, ಉತ್ತರಾಖಂಡ ಸ್ವಾತಂತ್ರ್ಯದ ನಂತರ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಿದ ಮೊದಲ ಭಾರತೀಯ ರಾಜ್ಯವಾಗಲಿದೆ. 1867ರಲ್ಲಿ ಪೋರ್ಚುಗೀಸ್ ನಾಗರಿಕ ಸಂಹಿತೆಯನ್ನು ಅಳವಡಿಸಿಕೊಂಡಾಗಿನಿಂದ ಗೋವಾದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಲ್ಲಿದೆ.

“ಏಕರೂಪ ನಾಗರಿಕ ಸಂಹಿತೆ ಸಮಾಜದಲ್ಲಿ ಏಕರೂಪತೆಯನ್ನು ತರುತ್ತದೆ. ಎಲ್ಲಾ ನಾಗರಿಕರಿಗೆ ಸಮಾನ ಹಕ್ಕುಗಳು ಮತ್ತು ಜವಾಬ್ದಾರಿಗಳನ್ನು ಖಚಿತಪಡಿಸುತ್ತದೆ” ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

“ಏಕರೂಪ ನಾಗರಿಕ ಸಂಹಿತೆಯಡಿಯಲ್ಲಿ, ಜಾತಿ, ಧರ್ಮ, ಪ್ರದೇಶ ಮತ್ತು ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡುವ ವೈಯಕ್ತಿಕ ನಾಗರಿಕ ವಿಷಯಗಳಿಗೆ ಸಂಬಂಧಿಸಿದ ಎಲ್ಲಾ ಕಾನೂನುಗಳಲ್ಲಿ ಏಕರೂಪತೆಯನ್ನು ತರಲು ಪ್ರಯತ್ನಿಸಲಾಗಿದೆ” ಎಂದಿದೆ.

ಫೆಬ್ರವರಿ 5, 2024 ರಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉತ್ತರಾಖಂಡ ಸಚಿವ ಸಂಪುಟವು ಏಕರೂಪ ನಾಗರಿಕ ಸಂಹಿತೆಯ ಕರಡು ವರದಿಯನ್ನು ಅನುಮೋದಿಸಿತು.

ನಂತರ ಎರಡು ದಿನಗಳ ಕಾಲ ಚರ್ಚೆ ನಡೆಸಿ ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ಮಸೂದೆಗೆ ಅಂಗೀಕಾರ ಪಡೆಯಲಾಗಿತ್ತು. ರಾಜ್ಯದ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಅವರು ಕಳೆದ ವರ್ಷ ಫೆಬ್ರವರಿ 28ರಂದು ಮಸೂದೆಗೆ ಅಂಕಿತ ಹಾಕಿದ್ದರು.

ನಂತರ, ರಾಜ್ಯ ಸರ್ಕಾರವು ನಿಯಮಗಳ ರಚನೆ ಮತ್ತು ಅನುಷ್ಠಾನ ಸಮಿತಿಯನ್ನು ರಚಿಸಿತ್ತು. ಮಾರ್ಚ್ 14ರಂದು, ರಾಷ್ಟ್ರಪತಿ ದ್ರೌಪದಿ ಮುರ್ಮು ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಅನುಮೋದಿಸಿದ್ದಾರೆ ಎಂದು ಸಿಎಂ ಧಾಮಿ ಘೋಷಿಸಿದ್ದರು.

2025ರ ಜನವರಿ 20ರಂದು ರಾಜ್ಯ ಸಚಿವ ಸಂಪುಟವು ಏಕರೂಪ ನಾಗರಿಕ ಸಂಹಿತೆಯ ನಿಯಮಗಳ ಕೈಪಿಡಿಯನ್ನು ಅನುಮೋದಿಸಿತ್ತು.

ಪಿತೃಪ್ರಧಾನ ವೈಯಕ್ತಿಕ ಕಾನೂನುಗಳ ಅಡಿಯಲ್ಲಿ ತಮ್ಮ ಹಕ್ಕುಗಳಿಂದ ವಂಚಿತರಾಗಿರುವ ಮಹಿಳೆಯರಿಗೆ ಸಮಾನತೆ ಮತ್ತು ನ್ಯಾಯವನ್ನು ಒದಗಿಸುವುದು ಏಕರೂಪ ನಾಗರಿಕ ಸಂಹಿತೆಯ ಉದ್ದೇಶವಾಗಿದೆ ಎಂದು ಉತ್ತರಾಖಂಡದ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಹೇಳಿಕೊಂಡಿದೆ.

ಸಾಮಾನ್ಯ ವೈಯಕ್ತಿಕ ಕಾನೂನನ್ನು ಪರಿಚಯಿಸುವುದು ಬಹಳ ಹಿಂದಿನಿಂದಲೂ ಬಿಜೆಪಿಯ ಕಾರ್ಯಸೂಚಿಯಲ್ಲಿದೆ ಮತ್ತು ಪಕ್ಷದ ಆಳ್ವಿಕೆಯಲ್ಲಿರುವ ಹಲವಾರು ರಾಜ್ಯಗಳು ಅದನ್ನು ಜಾರಿಗೆ ತರುವತ್ತ ಹೆಜ್ಜೆ ಹಾಕುತ್ತಿವೆ. ಉತ್ತರಾಖಂಡದಲ್ಲಿ ನಿಯಮಗಳ ಅನುಷ್ಠಾನವು ಬಿಜೆಪಿ ಆಡಳಿತವಿರುವ ಇತರ ರಾಜ್ಯಗಳು ಇದನ್ನು ಅನುಸರಿಸಲು ಒಂದು ಪೂರ್ವನಿದರ್ಶನವಾಗಬಹುದು.

ಏಕರೂಪ ನಾಗರಿಕ ಸಂಹಿತೆಯ ವಿಷಯದಲ್ಲಿ ಬಿಜೆಪಿ ಮುಖ್ಯವಾಗಿ ಮುಸ್ಲಿಂ ವೈಯಕ್ತಿಕ ಕಾನೂನನ್ನು ಗುರಿಯಾಗಿಸಿಕೊಂಡಿದೆ. ಮುಸ್ಲಿಂ ಪುರುಷರು ಬಹುಪತ್ನಿತ್ವವನ್ನು ಅನುಸರಿಸಲು, ಹೆಚ್ಚಿನ ಆಸ್ತಿಯನ್ನು ಆನುವಂಶಿಕವಾಗಿ ಪಡೆಯಲು, ವಿಚ್ಛೇದನ ನೀಡಲು ಮತ್ತು ಜೀವನಾಂಶ ನಿರಾಕರಿಸಲು ಅವಕಾಶ ನೀಡುವ ಮೂಲಕ ವೈಯಕ್ತಿಕ ಕಾನೂನು ಮಹಿಳೆಯರ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ಬಿಜೆಪಿ ವಾದಿಸಿದೆ.

ಆದಾಗ್ಯೂ, ಕಾನೂನು ತಜ್ಞರು ಈ ಮಸೂದೆಯನ್ನು ಪ್ರಾಥಮಿಕವಾಗಿ ಹಿಂದೂ ವೈಯಕ್ತಿಕ ಕಾನೂನಿನಿಂದ ಪಡೆಯಲಾಗಿದ್ದು, ಅಲ್ಪಸಂಖ್ಯಾತ ಸಮುದಾಯಗಳ ವೈಯಕ್ತಿಕ ಕಾನೂನು ಪದ್ಧತಿಗಳನ್ನು ಅಳಿಸಿಹಾಕಲು ಕಾರಣವಾಗಬಹುದು ಎಂದು ಹೇಳಿದ್ದಾರೆ.

ಮಹಿಳಾ ಗುಂಪುಗಳ ಸಮೂಹವಾದ ಉತ್ತರಾಖಂಡ ಮಹಿಳಾ ಮೋರ್ಚಾ, ಈ ಮಸೂದೆಯು “ಹಿಂದೂ ಕಾನೂನು ಮಾದರಿಯನ್ನು ಅನುಸರಿಸುತ್ತಿದೆ” ಎಂದು ಟೀಕಿಸಿತ್ತು. ಸಾರ್ವಜನಿಕ ಹೇಳಿಕೆಯಲ್ಲಿ, ಮಸೂದೆಯು “ಕ್ರಿಶ್ಚಿಯನ್ ಕುಟುಂಬ ಕಾನೂನು ಮತ್ತು ಪಾರ್ಸಿ ಕುಟುಂಬ ಕಾನೂನಿನ ಅನ್ವಯದ ಬಗ್ಗೆ ಸಂಪೂರ್ಣವಾಗಿ ಮೌನವಾಗಿದೆ”. ಇದು ಕಾನೂನುಬದ್ಧವಾಗಿ ಸಮರ್ಥನೀಯವಲ್ಲ ಎಂದಿದೆ.

ಲೈಂಗಿಕ ಕಿರುಕುಳ ಆರೋಪಿ ಬ್ರಿಜ್ ಭೂಷಣ್ ಮನೆಯಲ್ಲೇ ಕುಸ್ತಿ ಒಕ್ಕೂಟದ ಕಚೇರಿ : ವಿವಾದದ ಬಳಿಕ ಸ್ಥಳಾಂತರಕ್ಕೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...