Homeಮುಖಪುಟಸಮವಸ್ತ್ರ: ಕೋರ್ಟ್‌‌ನಲ್ಲಿ ಪ್ರಕರಣವಿರುವಾಗ ಸರ್ಕಾರದ ಆದೇಶ ಖಂಡನೀಯ- ಎಐಡಿಎಸ್ಓ

ಸಮವಸ್ತ್ರ: ಕೋರ್ಟ್‌‌ನಲ್ಲಿ ಪ್ರಕರಣವಿರುವಾಗ ಸರ್ಕಾರದ ಆದೇಶ ಖಂಡನೀಯ- ಎಐಡಿಎಸ್ಓ

- Advertisement -
- Advertisement -

ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ನೀತಿ ಸಂಹಿತೆ ಜಾರಿಗೊಳಿಸುವ ವಿಚಾರ ಸದ್ಯಕ್ಕೆ ನ್ಯಾಯಾಂಗದ ಅಂಗಳದಲ್ಲಿದ್ದು, ಅದರ ತೀರ್ಪು ಇನ್ನೇನು ಹೊರಬೀಳಬೇಕು ಎನ್ನುವಾಗಲೇ, ಕರ್ನಾಟಕದ ಬಿಜೆಪಿ ರಾಜ್ಯ ಸರ್ಕಾರವು ನ್ಯಾಯಾಲಯದ ತೀರ್ಪಿಗೆ ಕಾಯದೇ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿರುವುದು ಖಂಡನೀಯ ಎಂದು ಆಲ್‌ ಇಂಡಿಯಾ ಡೆಮಕ್ರಟಿಕ್‌ ಸ್ಟುಡೆಂಟ್‌‌ ಆರ್ಗನೈಷನ್‌ (ಎಐಡಿಎಸ್ಓ) ರಾಜ್ಯ ಘಟಕ ತಿಳಿಸಿದೆ.

ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಪತ್ರಿಕಾ ಹೇಳಿಕೆ ನೀಡಿದ್ದು, “ಧರ್ಮವನ್ನು ಶಿಕ್ಷಣದಿಂದ ದೂರವಿಡಬೇಕೆಂಬುದು ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಮಹಾನ್ ಹೋರಾಟಗಾರರಾದ ನೇತಾಜಿ, ಭಗತ್ ಸಿಂಗ್ ಮತ್ತಿತರರ ಆಶಯವಾಗಿತ್ತು. ಧರ್ಮ ಕೇವಲ ವ್ಯಕ್ತಿಯೊಬ್ಬನ ವೈಯಕ್ತಿಕ ನಂಬಿಕೆಯಾಗಿ ಉಳಿಯಬೇಕು ಎಂಬುದು ಅವರ ಚಿಂತನೆಯಾಗಿತ್ತು. ಆದರೆ ಸ್ವಾತಂತ್ರ್ಯಾ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಆದಿಯಾಗಿ ಯಾವ ಸರ್ಕಾರವೂ ಶಿಕ್ಷಣವನ್ನು ಧರ್ಮದಿಂದ ದೂರ ಇರಿಸಿಲ್ಲ, ಬದಲಿಗೆ ಹೆಚ್ಚೆಚ್ಚು ಬೆರೆಸಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಪ್ರಶ್ನೆ ಬರೀ ಹಿಜಾಬ್‌‌ದಲ್ಲ, ಶಾಲಾ ಕಾಲೇಜುಗಳಲ್ಲಿ ಜರುಗುವ ಧಾರ್ಮಿಕ ಆಚರಣೆಗಳಿಗೆ ಎಣೆಯೇ ಇಲ್ಲ. ಧರ್ಮನಿರಪೇಕ್ಷ , ಪ್ರಜಾತಾಂತ್ರಿಕ ಶಿಕ್ಷಣಕ್ಕಾಗಿ ಹೋರಾಡಿದ ಎಲ್ಲಾ ಹೋರಾಟಗಾರರ ಆಶಯಗಳಿಗೆ ದ್ರೋಹ ಬಗೆಯಲಾಗಿದೆ. ಈ ಸಮಸ್ಯೆಗೆ ಮಹಾನ್ ನೇತಾಜಿ ರವರು ಹೇಳಿದಂತೆ, “ಧಾರ್ಮಿಕ ಮತಾಂಧತೆಯ ವಿರುದ್ಧದ ಹೋರಾಟದಲ್ಲಿ ವೈಜ್ಞಾನಿಕ ಧರ್ಮನಿರಪೇಕ್ಷ ಶಿಕ್ಷಣವೇ ಪರಿಹಾರ”. ವೈಜ್ಞಾನಿಕ, ಧರ್ಮನಿರಪೇಕ್ಷ ಶಿಕ್ಷಣ ಇಂದಿನ ಅವಶ್ಯಕತೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಶಿಕ್ಷಣದ ಮೇಲೆ ಸರ್ಕಾರಗಳ ದಾಳಿಗಳು ಅವ್ಯಾಹತವಾಗಿ ಜರುಗುತ್ತಿರುವಾಗ ವಿದ್ಯಾರ್ಥಿಗಳ ಐಕ್ಯತೆ ಹಿಂದೆಂದಿಗಿಂತಲೂ ಹೆಚ್ಚು ಅವಶ್ಯಕವಾಗಿರುವಾಗ ಜಾತಿ, ಧರ್ಮಗಳಂತಹ ಕೋಮುವಾದಿ ಗುಂಪುಗಳಾಗಿ ನಮ್ಮಲ್ಲೇ ಒಡಕುಗಳು ಉಂಟಾದರೆ ಲಾಭ ಯಾರಿಗೆ ಹಾಗೂ ನಷ್ಟ ಯಾರಿಗೆ ಎಂಬುದನ್ನು ವಿದ್ಯಾರ್ಥಿ ಸಮುದಾಯ ತಿಳಿಯಬೇಕಿದೆ ಎಂದು ಆಶಿಸಿದ್ದಾರೆ.

ಶಿಕ್ಷಣದ ವ್ಯಾಪಾರೀಕರಣದಂತಹ ಸಮಸ್ಯೆಗಳು ವಿದ್ಯಾರ್ಥಿಗಳನ್ನು ಕಾಡುತ್ತಿರುವಾಗ, ನಮ್ಮ ಒಗ್ಗಟ್ಟಿನ ಹೋರಾಟವನ್ನು ಮುರಿಯಲು ಇಂತಹ ವಿಭಜಕ ಶಕ್ತಿಗಳಿಗೆ ಸರ್ಕಾರಗಳೇ ಕುಮ್ಮಕ್ಕು ನೀಡುತ್ತವೆ ಎಂಬುದನ್ನು ಅರಿತು ಎಲ್ಲಾ ವಿಭಜಕ ಶಕ್ತಿಗಳನ್ನು ದೂರವಿಡಬೇಕು ಎಂದು ಅವರು ಮನವಿ ಮಾಡಿದ್ದಾರೆ.


ಇದನ್ನೂ ಓದಿರಿ: ‘ಪಿಯು ಹಂತದಲ್ಲಿ ಸಮವಸ್ತ್ರ ಕಾನೂನುಬಾಹಿರ’ ಎಂದಿದ್ದ ಪಿಯು ನಿರ್ದೇಶಕಿ ಸ್ನೇಹಲ್‌ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...