Homeಮುಖಪುಟಸಮವಸ್ತ್ರ: ಕೋರ್ಟ್‌‌ನಲ್ಲಿ ಪ್ರಕರಣವಿರುವಾಗ ಸರ್ಕಾರದ ಆದೇಶ ಖಂಡನೀಯ- ಎಐಡಿಎಸ್ಓ

ಸಮವಸ್ತ್ರ: ಕೋರ್ಟ್‌‌ನಲ್ಲಿ ಪ್ರಕರಣವಿರುವಾಗ ಸರ್ಕಾರದ ಆದೇಶ ಖಂಡನೀಯ- ಎಐಡಿಎಸ್ಓ

- Advertisement -
- Advertisement -

ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ನೀತಿ ಸಂಹಿತೆ ಜಾರಿಗೊಳಿಸುವ ವಿಚಾರ ಸದ್ಯಕ್ಕೆ ನ್ಯಾಯಾಂಗದ ಅಂಗಳದಲ್ಲಿದ್ದು, ಅದರ ತೀರ್ಪು ಇನ್ನೇನು ಹೊರಬೀಳಬೇಕು ಎನ್ನುವಾಗಲೇ, ಕರ್ನಾಟಕದ ಬಿಜೆಪಿ ರಾಜ್ಯ ಸರ್ಕಾರವು ನ್ಯಾಯಾಲಯದ ತೀರ್ಪಿಗೆ ಕಾಯದೇ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿರುವುದು ಖಂಡನೀಯ ಎಂದು ಆಲ್‌ ಇಂಡಿಯಾ ಡೆಮಕ್ರಟಿಕ್‌ ಸ್ಟುಡೆಂಟ್‌‌ ಆರ್ಗನೈಷನ್‌ (ಎಐಡಿಎಸ್ಓ) ರಾಜ್ಯ ಘಟಕ ತಿಳಿಸಿದೆ.

ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಪತ್ರಿಕಾ ಹೇಳಿಕೆ ನೀಡಿದ್ದು, “ಧರ್ಮವನ್ನು ಶಿಕ್ಷಣದಿಂದ ದೂರವಿಡಬೇಕೆಂಬುದು ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಮಹಾನ್ ಹೋರಾಟಗಾರರಾದ ನೇತಾಜಿ, ಭಗತ್ ಸಿಂಗ್ ಮತ್ತಿತರರ ಆಶಯವಾಗಿತ್ತು. ಧರ್ಮ ಕೇವಲ ವ್ಯಕ್ತಿಯೊಬ್ಬನ ವೈಯಕ್ತಿಕ ನಂಬಿಕೆಯಾಗಿ ಉಳಿಯಬೇಕು ಎಂಬುದು ಅವರ ಚಿಂತನೆಯಾಗಿತ್ತು. ಆದರೆ ಸ್ವಾತಂತ್ರ್ಯಾ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಆದಿಯಾಗಿ ಯಾವ ಸರ್ಕಾರವೂ ಶಿಕ್ಷಣವನ್ನು ಧರ್ಮದಿಂದ ದೂರ ಇರಿಸಿಲ್ಲ, ಬದಲಿಗೆ ಹೆಚ್ಚೆಚ್ಚು ಬೆರೆಸಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಪ್ರಶ್ನೆ ಬರೀ ಹಿಜಾಬ್‌‌ದಲ್ಲ, ಶಾಲಾ ಕಾಲೇಜುಗಳಲ್ಲಿ ಜರುಗುವ ಧಾರ್ಮಿಕ ಆಚರಣೆಗಳಿಗೆ ಎಣೆಯೇ ಇಲ್ಲ. ಧರ್ಮನಿರಪೇಕ್ಷ , ಪ್ರಜಾತಾಂತ್ರಿಕ ಶಿಕ್ಷಣಕ್ಕಾಗಿ ಹೋರಾಡಿದ ಎಲ್ಲಾ ಹೋರಾಟಗಾರರ ಆಶಯಗಳಿಗೆ ದ್ರೋಹ ಬಗೆಯಲಾಗಿದೆ. ಈ ಸಮಸ್ಯೆಗೆ ಮಹಾನ್ ನೇತಾಜಿ ರವರು ಹೇಳಿದಂತೆ, “ಧಾರ್ಮಿಕ ಮತಾಂಧತೆಯ ವಿರುದ್ಧದ ಹೋರಾಟದಲ್ಲಿ ವೈಜ್ಞಾನಿಕ ಧರ್ಮನಿರಪೇಕ್ಷ ಶಿಕ್ಷಣವೇ ಪರಿಹಾರ”. ವೈಜ್ಞಾನಿಕ, ಧರ್ಮನಿರಪೇಕ್ಷ ಶಿಕ್ಷಣ ಇಂದಿನ ಅವಶ್ಯಕತೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಶಿಕ್ಷಣದ ಮೇಲೆ ಸರ್ಕಾರಗಳ ದಾಳಿಗಳು ಅವ್ಯಾಹತವಾಗಿ ಜರುಗುತ್ತಿರುವಾಗ ವಿದ್ಯಾರ್ಥಿಗಳ ಐಕ್ಯತೆ ಹಿಂದೆಂದಿಗಿಂತಲೂ ಹೆಚ್ಚು ಅವಶ್ಯಕವಾಗಿರುವಾಗ ಜಾತಿ, ಧರ್ಮಗಳಂತಹ ಕೋಮುವಾದಿ ಗುಂಪುಗಳಾಗಿ ನಮ್ಮಲ್ಲೇ ಒಡಕುಗಳು ಉಂಟಾದರೆ ಲಾಭ ಯಾರಿಗೆ ಹಾಗೂ ನಷ್ಟ ಯಾರಿಗೆ ಎಂಬುದನ್ನು ವಿದ್ಯಾರ್ಥಿ ಸಮುದಾಯ ತಿಳಿಯಬೇಕಿದೆ ಎಂದು ಆಶಿಸಿದ್ದಾರೆ.

ಶಿಕ್ಷಣದ ವ್ಯಾಪಾರೀಕರಣದಂತಹ ಸಮಸ್ಯೆಗಳು ವಿದ್ಯಾರ್ಥಿಗಳನ್ನು ಕಾಡುತ್ತಿರುವಾಗ, ನಮ್ಮ ಒಗ್ಗಟ್ಟಿನ ಹೋರಾಟವನ್ನು ಮುರಿಯಲು ಇಂತಹ ವಿಭಜಕ ಶಕ್ತಿಗಳಿಗೆ ಸರ್ಕಾರಗಳೇ ಕುಮ್ಮಕ್ಕು ನೀಡುತ್ತವೆ ಎಂಬುದನ್ನು ಅರಿತು ಎಲ್ಲಾ ವಿಭಜಕ ಶಕ್ತಿಗಳನ್ನು ದೂರವಿಡಬೇಕು ಎಂದು ಅವರು ಮನವಿ ಮಾಡಿದ್ದಾರೆ.


ಇದನ್ನೂ ಓದಿರಿ: ‘ಪಿಯು ಹಂತದಲ್ಲಿ ಸಮವಸ್ತ್ರ ಕಾನೂನುಬಾಹಿರ’ ಎಂದಿದ್ದ ಪಿಯು ನಿರ್ದೇಶಕಿ ಸ್ನೇಹಲ್‌ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...