Homeಮುಖಪುಟಸಮವಸ್ತ್ರ: ಕೋರ್ಟ್‌‌ನಲ್ಲಿ ಪ್ರಕರಣವಿರುವಾಗ ಸರ್ಕಾರದ ಆದೇಶ ಖಂಡನೀಯ- ಎಐಡಿಎಸ್ಓ

ಸಮವಸ್ತ್ರ: ಕೋರ್ಟ್‌‌ನಲ್ಲಿ ಪ್ರಕರಣವಿರುವಾಗ ಸರ್ಕಾರದ ಆದೇಶ ಖಂಡನೀಯ- ಎಐಡಿಎಸ್ಓ

- Advertisement -
- Advertisement -

ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ನೀತಿ ಸಂಹಿತೆ ಜಾರಿಗೊಳಿಸುವ ವಿಚಾರ ಸದ್ಯಕ್ಕೆ ನ್ಯಾಯಾಂಗದ ಅಂಗಳದಲ್ಲಿದ್ದು, ಅದರ ತೀರ್ಪು ಇನ್ನೇನು ಹೊರಬೀಳಬೇಕು ಎನ್ನುವಾಗಲೇ, ಕರ್ನಾಟಕದ ಬಿಜೆಪಿ ರಾಜ್ಯ ಸರ್ಕಾರವು ನ್ಯಾಯಾಲಯದ ತೀರ್ಪಿಗೆ ಕಾಯದೇ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿರುವುದು ಖಂಡನೀಯ ಎಂದು ಆಲ್‌ ಇಂಡಿಯಾ ಡೆಮಕ್ರಟಿಕ್‌ ಸ್ಟುಡೆಂಟ್‌‌ ಆರ್ಗನೈಷನ್‌ (ಎಐಡಿಎಸ್ಓ) ರಾಜ್ಯ ಘಟಕ ತಿಳಿಸಿದೆ.

ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಪತ್ರಿಕಾ ಹೇಳಿಕೆ ನೀಡಿದ್ದು, “ಧರ್ಮವನ್ನು ಶಿಕ್ಷಣದಿಂದ ದೂರವಿಡಬೇಕೆಂಬುದು ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಮಹಾನ್ ಹೋರಾಟಗಾರರಾದ ನೇತಾಜಿ, ಭಗತ್ ಸಿಂಗ್ ಮತ್ತಿತರರ ಆಶಯವಾಗಿತ್ತು. ಧರ್ಮ ಕೇವಲ ವ್ಯಕ್ತಿಯೊಬ್ಬನ ವೈಯಕ್ತಿಕ ನಂಬಿಕೆಯಾಗಿ ಉಳಿಯಬೇಕು ಎಂಬುದು ಅವರ ಚಿಂತನೆಯಾಗಿತ್ತು. ಆದರೆ ಸ್ವಾತಂತ್ರ್ಯಾ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಆದಿಯಾಗಿ ಯಾವ ಸರ್ಕಾರವೂ ಶಿಕ್ಷಣವನ್ನು ಧರ್ಮದಿಂದ ದೂರ ಇರಿಸಿಲ್ಲ, ಬದಲಿಗೆ ಹೆಚ್ಚೆಚ್ಚು ಬೆರೆಸಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಪ್ರಶ್ನೆ ಬರೀ ಹಿಜಾಬ್‌‌ದಲ್ಲ, ಶಾಲಾ ಕಾಲೇಜುಗಳಲ್ಲಿ ಜರುಗುವ ಧಾರ್ಮಿಕ ಆಚರಣೆಗಳಿಗೆ ಎಣೆಯೇ ಇಲ್ಲ. ಧರ್ಮನಿರಪೇಕ್ಷ , ಪ್ರಜಾತಾಂತ್ರಿಕ ಶಿಕ್ಷಣಕ್ಕಾಗಿ ಹೋರಾಡಿದ ಎಲ್ಲಾ ಹೋರಾಟಗಾರರ ಆಶಯಗಳಿಗೆ ದ್ರೋಹ ಬಗೆಯಲಾಗಿದೆ. ಈ ಸಮಸ್ಯೆಗೆ ಮಹಾನ್ ನೇತಾಜಿ ರವರು ಹೇಳಿದಂತೆ, “ಧಾರ್ಮಿಕ ಮತಾಂಧತೆಯ ವಿರುದ್ಧದ ಹೋರಾಟದಲ್ಲಿ ವೈಜ್ಞಾನಿಕ ಧರ್ಮನಿರಪೇಕ್ಷ ಶಿಕ್ಷಣವೇ ಪರಿಹಾರ”. ವೈಜ್ಞಾನಿಕ, ಧರ್ಮನಿರಪೇಕ್ಷ ಶಿಕ್ಷಣ ಇಂದಿನ ಅವಶ್ಯಕತೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಶಿಕ್ಷಣದ ಮೇಲೆ ಸರ್ಕಾರಗಳ ದಾಳಿಗಳು ಅವ್ಯಾಹತವಾಗಿ ಜರುಗುತ್ತಿರುವಾಗ ವಿದ್ಯಾರ್ಥಿಗಳ ಐಕ್ಯತೆ ಹಿಂದೆಂದಿಗಿಂತಲೂ ಹೆಚ್ಚು ಅವಶ್ಯಕವಾಗಿರುವಾಗ ಜಾತಿ, ಧರ್ಮಗಳಂತಹ ಕೋಮುವಾದಿ ಗುಂಪುಗಳಾಗಿ ನಮ್ಮಲ್ಲೇ ಒಡಕುಗಳು ಉಂಟಾದರೆ ಲಾಭ ಯಾರಿಗೆ ಹಾಗೂ ನಷ್ಟ ಯಾರಿಗೆ ಎಂಬುದನ್ನು ವಿದ್ಯಾರ್ಥಿ ಸಮುದಾಯ ತಿಳಿಯಬೇಕಿದೆ ಎಂದು ಆಶಿಸಿದ್ದಾರೆ.

ಶಿಕ್ಷಣದ ವ್ಯಾಪಾರೀಕರಣದಂತಹ ಸಮಸ್ಯೆಗಳು ವಿದ್ಯಾರ್ಥಿಗಳನ್ನು ಕಾಡುತ್ತಿರುವಾಗ, ನಮ್ಮ ಒಗ್ಗಟ್ಟಿನ ಹೋರಾಟವನ್ನು ಮುರಿಯಲು ಇಂತಹ ವಿಭಜಕ ಶಕ್ತಿಗಳಿಗೆ ಸರ್ಕಾರಗಳೇ ಕುಮ್ಮಕ್ಕು ನೀಡುತ್ತವೆ ಎಂಬುದನ್ನು ಅರಿತು ಎಲ್ಲಾ ವಿಭಜಕ ಶಕ್ತಿಗಳನ್ನು ದೂರವಿಡಬೇಕು ಎಂದು ಅವರು ಮನವಿ ಮಾಡಿದ್ದಾರೆ.


ಇದನ್ನೂ ಓದಿರಿ: ‘ಪಿಯು ಹಂತದಲ್ಲಿ ಸಮವಸ್ತ್ರ ಕಾನೂನುಬಾಹಿರ’ ಎಂದಿದ್ದ ಪಿಯು ನಿರ್ದೇಶಕಿ ಸ್ನೇಹಲ್‌ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...