Homeಮುಖಪುಟಮುಸ್ಲಿಮರು, ತಮಿಳರಿಗೆ ದ್ರೋಹ ಮಾಡಿ ವಿಭಜನೆಯ ಬೀಜ ಬಿತ್ತಿದ ಬಿಜೆಪಿ : ಸಿಎಎ ಜಾರಿ ಬಗ್ಗೆ...

ಮುಸ್ಲಿಮರು, ತಮಿಳರಿಗೆ ದ್ರೋಹ ಮಾಡಿ ವಿಭಜನೆಯ ಬೀಜ ಬಿತ್ತಿದ ಬಿಜೆಪಿ : ಸಿಎಎ ಜಾರಿ ಬಗ್ಗೆ ತಮಿಳುನಾಡು ಸಿಎಂ ಆಕ್ರೋಶ

- Advertisement -
- Advertisement -

ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸಲ್ಪಟ್ಟ 4 ವರ್ಷಗಳ ನಂತರ ಕೇಂದ್ರ ಸರ್ಕಾರವು ನಿನ್ನೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ತಂದಿದೆ. ಭಾರತೀಯ ಚುನಾವಣಾ ಆಯೋಗವು ಲೋಕಸಭೆ ಚುನಾವಣೆಗೆ ದಿನಾಂಕಗಳನ್ನು ಪ್ರಕಟಿಸುವ ಮುನ್ನವೇ ಅಧಿಸೂಚನೆ ಹೊರಬಿದ್ದಿದೆ. ಪ್ರತಿಪಕ್ಷಗಳು ಇದು ಬಿಜೆಪಿಯ ಬಿಜೆಪಿಯ ವಿಭಜನಾ ರಾಜಕೀಯದ ಭಾಗ ಎಂದು ಕಿಡಿಕಾರಿದ್ದು, ದೇಶದಾದ್ಯಂತ ಸಿಎಎ ಜಾರಿಗೆ ವಿರೋಧ ವ್ಯಕ್ತವಾಗುತ್ತಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್‌, ಕೇಂದ್ರ ಬಿಜೆಪಿ ಸರ್ಕಾರದ ವಿಭಜಕ ಕಾರ್ಯಸೂಚಿಯು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಸ್ತ್ರಗೊಳಿಸಿದೆ, CAA ಜಾರಿಗೊಳಿಸುವ ಮೂಲಕ ಧರ್ಮ ಮತ್ತು ಜನಾಂಗದ ಆಧಾರದ ಮೇಲೆ ತಾರತಮ್ಯದ ಸಾಧನವಾಗಿ ಪರಿವರ್ತಿಸಿದೆ. ಮುಸ್ಲಿಮರು ಮತ್ತು ಶ್ರೀಲಂಕಾ ತಮಿಳರಿಗೆ ದ್ರೋಹ ಮಾಡುವ ಮೂಲಕ ಅವರು ವಿಭಜನೆಯ ಬೀಜಗಳನ್ನು ಬಿತ್ತಿದ್ದಾರೆ ಎಂದು ಹೇಳಿದ್ದಾರೆ.

ಡಿಎಂಕೆಯಂತಹ ಪ್ರಜಾಸತ್ತಾತ್ಮಕ ಶಕ್ತಿಗಳ ತೀವ್ರ ವಿರೋಧದ ಹೊರತಾಗಿಯೂ, ಸಿಎಎನ್ನು ಬಿಜೆಪಿಯು  ಎಡಿಎಂಕೆಯಂತಹ ಪಕ್ಷಗಳ ಬೆಂಬಲದೊಂದಿಗೆ ಅಂಗೀಕರಿಸಿತ್ತು. ಆದರೆ ಜನರ ತೀವ್ರ ವಿರೋಧಕ್ಕೆ ಹೆದರಿ ಬಿಜೆಪಿ ಈ ಕಾಯ್ದೆಯನ್ನು ಕೋಲ್ಡ್ ಸ್ಟೋರೇಜ್‌ನಲ್ಲಿಟ್ಟಿತ್ತು.

2021ರಲ್ಲಿ ಡಿಎಂಕೆ ಅಧಿಕಾರಕ್ಕೆ ಬಂದ ನಂತರ, ನಮ್ಮ ರಾಷ್ಟ್ರದ ಏಕತೆಯನ್ನು ಕಾಪಾಡಲು, ಸಾಮಾಜಿಕ ಸಾಮರಸ್ಯವನ್ನು ಎತ್ತಿಹಿಡಿಯಲು ಮತ್ತು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಜಾತ್ಯತೀತತೆಯ ಆದರ್ಶವನ್ನು ರಕ್ಷಿಸಲು ಸಿಎಎನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ನಾವು ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಿದ್ದೇವೆ. ಈಗ, ಚುನಾವಣೆಗಳು ಸಮೀಪಿಸುತ್ತಿರುವಂತೆ, ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಿನಿಕತನದಿಂದ ಪುನರುತ್ಥಾನಗೊಳಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಮುಳುಗುತ್ತಿರುವ ಹಡಗನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ.

ಆದರೆ ಈ ವಿಭಜಕ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಬಿಚ್ಚಿಟ್ಟ ಬಿಜೆಪಿಯನ್ನು ಮತ್ತು ಅದನ್ನು ನಾಚಿಕೆಯಿಲ್ಲದೆ ಬೆಂಬಲಿಸಿದ ಅವರ ಬೆನ್ನುಮೂಳೆಯಿಲ್ಲದ ಎಡಿಎಂಕೆಯನ್ನು ಭಾರತದ ಜನರು ಎಂದಿಗೂ ಕ್ಷಮಿಸುವುದಿಲ್ಲ. ಜನ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಏನಿದು ಸಿಎಎ:

ಮೋದಿ ಸರ್ಕಾರವು ಅಂಗೀಕರಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಕಾಯ್ದೆಯು ಡಿಸೆಂಬರ್ 31, 2014ರೊಳಗೆ ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ. CAA ಡಿಸೆಂಬರ್ 2019ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟಿದ್ದು, ಆ ಬಳಿಕ  ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದಿದೆ. ಧರ್ಮದ ಆಧಾರದಲ್ಲಿ ಪೌರತ್ವ ನೀಡುವುದಕ್ಕೆ ಭಾರತದ ಸಂವಿಧಾನದಲ್ಲಿ ಅವಕಾಶ ಇಲ್ಲ, ಆದ್ದರಿಂದ ಈ ಅಸಂವಿಧಾನಿಕ ಕಾಯ್ದೆ ದೇಶದ ವಿವಿಧ ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು.

ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ಸರ್ಕಾರ ನಿನ್ನೆ ಅಧಿಸೂಚನೆ ಹೊರಡಿಸಿದೆ. ಪೌರತ್ವ ಕಾಯ್ದೆಯು ಧರ್ಮ ಆಧಾರದಲ್ಲಿ ಪೌರತ್ವ ನೀಡುತ್ತದೆ ಎಂದು ದೇಶದಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳ ನಡೆದಿತ್ತು. ಗೊಂದಲಗಳ ನಡುವೆ ಡಿಸೆಂಬರ್ 2019ರಲ್ಲಿ ಸಂಸತ್ತಿನಲ್ಲಿ ಇದನ್ನು ಅಂಗೀಕರಿಸಲಾಗಿತ್ತು. ದೇಶದಾದ್ಯಂತ ನಡೆದ ಗಲಭೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ದೇಶದ ವಿರೋಧ ಪಕ್ಷಗಳು ಮತ್ತು ಬಿಜೆಪಿಯೇತರ ರಾಜ್ಯಗಳಲ್ಲಿ ತೀವ್ರ ಪ್ರತಿರೋಧ ವ್ಯಕ್ತವಾಗಿತ್ತು.

ಇದನ್ನು ಓದಿ: ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ಪರಿಶೀಲನೆಗೆ ಸುಪ್ರೀಂಕೋರ್ಟ್‌ ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...