Homeಮುಖಪುಟಪಂಜಾಬ್ ಮುಖ್ಯಮಂತ್ರಿಗಳನ್ನೆ 'ಮದ್ಯ ಪರೀಕ್ಷೆ'ಗೆ ಒಳಪಡಿಸಬೇಕು ಎಂದು ಟೀಕಿಸಿದ ಕೇಂದ್ರ ಬಿಜೆಪಿ ಸಚಿವ

ಪಂಜಾಬ್ ಮುಖ್ಯಮಂತ್ರಿಗಳನ್ನೆ ‘ಮದ್ಯ ಪರೀಕ್ಷೆ’ಗೆ ಒಳಪಡಿಸಬೇಕು ಎಂದು ಟೀಕಿಸಿದ ಕೇಂದ್ರ ಬಿಜೆಪಿ ಸಚಿವ

- Advertisement -
- Advertisement -

ಅಕ್ರಮ ಭಾರತೀಯ ವಲಸಿಗರನ್ನು ಅಮೆರಿಕದಿಂದ ಕರೆತಂದ ವಿಮಾನಗಳು ಅಮೃತಸರದಲ್ಲಿ ಇಳಿಯಲು ಅವಕಾಶ ನೀಡುವ ಕೇಂದ್ರದ ನಿರ್ಧಾರವನ್ನು ಟೀಕಿಸಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಖಂಡಿಸಿದ್ದಾರೆ. “ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಳಪೆಯಾಗಿದೆ, ಮುಖ್ಯಮಂತ್ರಿಯನ್ನೇ ಮದ್ಯ ಪರೀಕ್ಷೆಗೆ ಒಳಪಡಿಸಬೇಕು” ಎಂದು ಬಿಟ್ಟು ಟೀಕಿಸಿದ್ದಾರೆ.

“ವಲಸೆ ವಿಮಾನಗಳ ಲ್ಯಾಂಡಿಂಗ್ ಸೈಟ್ ಆಗಿ ಅಮೃತಸರವನ್ನು ಕೇಂದ್ರ ಆಯ್ಕೆ ಮಾಡಿರುವುದು ಪಂಜಾಬ್ ಅನ್ನು ದೂಷಿಸಲು ಉದ್ದೇಶಪೂರ್ವಕ ಪ್ರಯತ್ನವಾಗಿದೆ. ಎರಡು ದಿನಗಳ ಅಮೆರಿಕ ಭೇಟಿಯನ್ನು ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಉಡುಗೊರೆಯೇ” ಎಂದು ಮಾನ್ ಪ್ರಶ್ನಿಸಿದ್ದಾರೆ.

116 ಅಕ್ರಮ ಭಾರತೀಯ ವಲಸಿಗರ ಎರಡನೇ ಬ್ಯಾಚ್ ಅನ್ನು ಹೊತ್ತ ಯುಎಸ್ ಮಿಲಿಟರಿ ವಿಮಾನವು ಶನಿವಾರ ರಾತ್ರಿ ಪಂಜಾಬ್ ನಗರದಲ್ಲಿ ಇಳಿಯುವ ಕೆಲವೇ ಗಂಟೆಗಳ ಮೊದಲು ಮುಖ್ಯಮಂತ್ರಿಯವರ ಹೇಳಿಕೆಗಳು ಬಂದಿವೆ.

ಫೆಬ್ರವರಿ 5 ರಂದು ಅಮೃತಸರದಲ್ಲಿ ಬಂದಿಳಿದ ಮೊದಲ ಗಡೀಪಾರು ವಿಮಾನವನ್ನು ಅಹಮದಾಬಾದ್‌ಗೆ ಏಕೆ ನಿರ್ದೇಶಿಸಲಿಲ್ಲ ಎಂದು ಅವರು ಪ್ರಶ್ನಿಸಿದರು. ಏಕೆಂದರೆ, ಹೆಚ್ಚಿನ ಗಡೀಪಾರುದಾರರು ಗುಜರಾತ್‌ನವರಾಗಿದ್ದರೆ.

ಮಾನ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು, “ಇನ್ನೂ ಸಾವಿರಾರು ಜನರನ್ನು ಗಡೀಪಾರು ಮಾಡಲಾಗುತ್ತದೆ. ಪಂಜಾಬ್‌ನಲ್ಲಿ ವಿಮಾನ ಇಳಿದರೆ, ಅದು ನಮ್ಮ ರಾಜ್ಯವನ್ನು ಹೇಗೆ ದೂಷಿಸುತ್ತದೆ” ಎಂದು ಅವರು ಪ್ರಶ್ನಿಸಿದ್ದಾರೆ.

“ಮಾನ್ ಇಂದು ಅಕ್ರಮ ವಲಸಿಗರನ್ನು (ಗಡೀಪಾರು ಮಾಡಿದವರನ್ನು) ಸ್ವೀಕರಿಸಲು ಬರುವುದಿಲ್ಲ. ಅವರು ಇಲ್ಲಿದೆ ಬಂದರೆ ಮದ್ಯದ ಪರೀಕ್ಷೆಗೆ ಒಳಪಡಿಸಬೇಕು” ಎಂದು ಬಿಟ್ಟು ಹೇಳಿದ್ದಾರೆ.

ಪಂಜಾಬ್‌ನಲ್ಲಿ ಟ್ರಾವೆಲ್ ಏಜೆಂಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ಆಮ್ ಆದ್ಮಿ ಪಕ್ಷದ ನಾಯಕ ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದರು. ಏಜೆಂಟ್‌ಗಳು ತಿಂಗಳುಗಟ್ಟಲೆ ವ್ಯಕ್ತಿಗಳನ್ನು ವಂಚಿಸಿ ಅಕ್ರಮ “ಡಂಕಿ ಮಾರ್ಗಗಳ” ಮೂಲಕ ಅಮೆರಿಕಕ್ಕೆ ಕರೆದೊಯ್ದಿದ್ದಾರೆ.

ಗಡೀಪಾರು ಮಾಡಿದವರಿಗೆ ಸರ್ಕಾರಿ ಉದ್ಯೋಗಗಳನ್ನು ಒದಗಿಸಬೇಕು, ಅವರನ್ನು ಅಮೆರಿಕಕ್ಕೆ ಕರೆದೊಯ್ಯಲು ಟ್ರಾವೆಲ್ ಏಜೆಂಟ್‌ಗಳಿಗೆ ನೀಡಿದ ಬೃಹತ್ ಮೊತ್ತದ ಹಣವನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸಚಿವ ಬಿಟ್ಟು ಅವರು ಮಾನ್ ಅವರನ್ನು ಒತ್ತಾಯಿಸಿದರು.

ಈ ಮಧ್ಯೆ, ಕೇಂದ್ರವು ಪಿತೂರಿಯ ಭಾಗವಾಗಿ ಪಂಜಾಬ್‌ ಅನ್ನು ದೂಷಿಸಲು ಪ್ರಯತ್ನಿಸುತ್ತಿದೆ ಎಂಬ ಮಾನ್ ಅವರ ಆರೋಪಗಳನ್ನು ಕೇಂದ್ರ ಸಚಿವರು ತಳ್ಳಿಹಾಕಿದರು.

“ಅರವಿಂದ್ ಕೇಜ್ರಿವಾಲ್ ಅವರ ಆದೇಶದ ಮೇರೆಗೆ ಮಾನ್ ಪ್ರಧಾನಿಯವರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನನ್ನ ಬಳಿ ದೃಢವಾದ ಮಾಹಿತಿ ಇದೆ” ಎಂದು ಅವರು ಯಾವುದೇ ವಿವರಗಳನ್ನು ನೀಡದೆ ಹೇಳಿದರು.

ಮಾನ್ ಅವರ ಹೇಳಿಕೆಗಳನ್ನು ಟೀಕಿಸಿದ ಕಾಂಗ್ರೆಸ್ ಶಾಸಕ ಪ್ರತಾಪ್ ಸಿಂಗ್ ಬಜ್ವಾ, ಮುಖ್ಯಮಂತ್ರಿ ಮತ್ತು ಅವರ ಎಎಪಿ ನೇತೃತ್ವದ ಸರ್ಕಾರವು ಕಳೆದ ಮೂರು ವರ್ಷಗಳಿಂದ ಮಾನವ ಕಳ್ಳಸಾಗಣೆಯನ್ನು ಪರಿಹರಿಸಲು ವಿಫಲವಾಗಿದೆ ಎಂದು ಆರೋಪಿಸಿದರು.

157 ಗಡೀಪಾರುಗೊಂಡವರನ್ನು ಹೊತ್ತ ಮೂರನೇ ವಿಮಾನವು ಭಾನುವಾರ ಅಮೃತಸರದಲ್ಲಿ ಇಳಿಯುವ ನಿರೀಕ್ಷೆಯಿದೆ. ಆದರೆ, ಆಗಮನದ ಸಮಯದ ಬಗ್ಗೆ ತಕ್ಷಣದ ಮಾಹಿತಿ ಇಲ್ಲ.

ಇದನ್ನೂ ಓದಿ; ಪ್ರಧಾನಿ ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ ವೆಬ್‌ಸೈಟ್ ನಿರ್ಬಂಧ; ಕೇಂದ್ರ ಸರ್ಕಾರದ ನಡೆ ಖಂಡಿಸಿದ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...